Homeಕವನ'ಬಾ ಇಲ್ಲಿ ‌ಸಂಭವಿಸು'ವ ಹೊಸ‌ ಅವತಾರದಲ್ಲೇ : ನಟರಾಜ್ ಹೊನ್ನವಳ್ಳಿಯವರ ಪದ್ಯ

‘ಬಾ ಇಲ್ಲಿ ‌ಸಂಭವಿಸು’ವ ಹೊಸ‌ ಅವತಾರದಲ್ಲೇ : ನಟರಾಜ್ ಹೊನ್ನವಳ್ಳಿಯವರ ಪದ್ಯ

- Advertisement -
- Advertisement -

ಒಂದು ಪದ್ಯ

ಹೊರಗೆ ಮಳೆಹನಿಗಳ ಶಬ್ಧ
ರಂಗಮಂದಿರ
ನಿಶ್ಯಬ್ದ
ಏಕತಾರಿಯ ಮೇಲೆ ಧೂಳು
ಹಾರ್ಮೋನಿಯಂನ
ಮೇಲೆ
ಹಾಕಿದ‌ ಕವರ್ ತೆಗೆದಿಲ್ಲ
ಕರೀ ಮೂರು, ಬಿಳಿ ನಾಲ್ಕರ ಮನೆಗಳ ಮೇಲೆ ಬೆರಳಿಲ್ಲ
ಡೈರೆಕ್ಟರ್‌ನ ಟೇಬಲ್‌ ಮೇಲೆ ಜಿರಳೆಗಳು.

ಎಲ್ಲಿ ಹೋದಿರಿ
ಮೋಹಕ
ನಟ-ನಟಿಯರೇ?
ಬಣ್ಣ ಹಚ್ಚುತ್ತಿದ್ದ
ಕೈಗಳೇ
ಖಾಲಿಬಿದ್ದ
ಬಣ್ಣ ಬಿಳುಚಿದ
ಖಾಲಿ
ಕಂಕಾಲ ಮುಖಗಳೇ.

ಎಂದು ಬಂದೀರಿ
ಪಾತ್ರವಾಗಿ
ಏನ ತಂದೀರಿ ಹೃದಯಕ್ಕೆ ಆಪ್ತವಾಗಿ
ಬನ್ನಿ
ಈಗಾಗಲೇ ತಡವಾಗಿದೆ
ಮೂರನೇ ಬೆಲ್
ಹೊಡೆದಾಗಿದೆ.

ಲಿಪ್ ಸ್ಟಿಕ್‌ಗೆ ತುಟಿಗಳಿಲ್ಲ
ವಾರ್ಡ್ರೋಬ್‌ನಲ್ಲಿನ
ಉಡುಪು
ಪ್ಯಾನ್ ಕೇಕ್, ಮಾಸ್ಕರಾ
ನಿಮ್ಮ ದೇಹ
ಮುಖ
ಕಣ್ಣುಗಳನ್ನೇ ಕಾಯುತ್ತಿವೆ
ಎಂದು
ಬಂದೀರಿ‌ ಎಂದು
ಮತ್ತೆ
ಹಳೆಯ ಲಯಕ್ಕೆ
ಹೇಗೆ
ಮರಳುವಿರಿ‌ ಎಂದು.

ಲೈಟಿಂಗ್ ರೂಂನಲ್ಲಿ
ಯಾರಿಲ್ಲ
ರಂಗಕ್ಕೆ ಬೆಳಕಿಲ್ಲ
ಡಿಮ್ಮರ್‌ಗಳು ರೆಸ್ಟಿನಲ್ಲಿವೆ.
ವಿದ್ಯುತ್ ಬಿಲ್
ಜಾಸ್ತಿಯಾಗಿದೆ.

ಹೊರಗೆ
ಬೀದಿಯಲ್ಲಿ ಲಕ್ಷಾಂತರ ಹೆಜ್ಜೆ ಸಪ್ಪಳ
ನಿಟ್ಟುಸಿರು
ರೈಲುಗಾಡಿಯ ಸಿಳ್ಳು
ಸಾವಿನ ವಾಸನೆ
ಬೀದಿಯಲ್ಲಿ ಚಲ್ಲಿದ ಹಾಲು
ಟೊಮ್ಯಾಟೊ
ಹಾಸಿಗೆ, ಪೆಟ್ಟಿಗೆ ಟ್ರಂಕ್ ಹೊತ್ತು
ಮಂದಿ
ಪುಟ್ಟ ಮಕ್ಕಳು
ಎಲ್ಲೆಲ್ಲೂ ಶಂಖ
ಜಾಗಟೆಯ
ತಟ್ಟೆ ಬಡಿತದ ಕೇಕೆ

ಛಕ್ಕನೆ ಬೆಳಕಾರಿ
ಮತ್ತೊಂದು
ದೃಶ್ಯ
ಕಾಣಿಸುತ್ತಿದ್ದ ನೀವೆಲ್ಲ ಎಲ್ಲಿ?
ಯಾವ
ನಾಟಕಗಳಲ್ಲಿ ‌ಅಡಗಿದ್ದೀರಿ
ವೇಷ
ಮರೆಸಿದ್ದೀರಿ
ಎಲ್ಲಿ‌ ನಡೆಸಿದ್ದೀರಿ ತಾಲೀಮು
ಬೀದಿಯಲ್ಲೇ
ಲಾಕ್ ಡೌನಾದ
ಮನೆಗಳಲ್ಲೇ
‘ಬಾ ಇಲ್ಲಿ‌ಸಂಭವಿಸು’ವ
ಹೊಸ‌
ಅವತಾರದಲ್ಲೇ.

ನಟರಾಜ್ ಹೊನ್ನವಳ್ಳಿ
೨೦-೦೫-೨೦೨೦, ಬುಧವಾರ


ಇದನ್ನೂ ಓದಿ: ತೀರ ಸೇರದ ಬದುಕು: ಮಿಸ್ರಿಯಾ.ಐ.ಪಜೀರ್‌ರವರ ಕವನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ರಂಗ ಮಂದಿರದ ಈಗಿನ ಒಳ ನೋಟವನ್ನು
    ಮರೆ ಮಾಚಿದ ತೆರೆಮರೆಯ ಕಲಾವಿದನ
    ಅಂತರಂಗದ ಬಣ್ಣಮಾಸಿದ ಬದುಕಿನ ಭಾವನೆಗಳನ್ನು
    ರಂಗಮಂದಿರ ನಡುವೆ ನಿಂತ ಕಲಾಜೀವಿ
    ಲಯ ಬದ್ದ ವಾದ್ಯಗಳ ಸಂಗೀತವಿಲ್ಲದೆ ಅನಾಥವಾಗಿ
    ನುಡಿಸುವ ನಾಡಿಯ ನಾವಿಕನಿಲ್ಲದೆ
    ದೂಳು ತುಂಬಿ ಪಾಳುಬಿದ್ದ ಮನೆಯ ರೀತಿ ಗೋಚರಿಸುತ್ತಿದೆ. ಪಾತ್ರಗಳಿಗೆ ಜೀವ ತುಂಬಿ ಬಣ್ಣದ ಬದುಕ ನಂಬಿ, ಕಲಾಭಿಮಾನಿಗಳ ಕಣ್ಣುಗಳಿಗೆ ರಂಗು ತುಂಬುತ್ತಿದ್ದ ಪಾತ್ರಧಾರಿಗಳೇ ಎಲ್ಲಿ ಕಳೆದು ಹೊದಿರಿ ಬಣ್ಣವಿಲ್ಲದ ಮುಖವಾಡ ಧರಿಸಿ….
    ಕೋವಿಡ್19 ಸ್ವಾಗತಿಸಿದ ಭ್ರಷ್ಟ ಸರ್ಕಾರಗಳೇ ಚಪ್ಪಾಳೆ ಜಾಗಟೆ ಭಾರಿಸುತ್ತ ಆನಂದದಿ ರಜೆ ಉಂಡ ಅಜ್ಞಾನಿಗಳೇ ನಿಮಗೆ ಹಸಿವಿನಿಂದ ನೊಂದು ಬೆಂದು ಬೆಂಡಾಗಿ ಜೀವ ಬಿಟ್ಟ ಸಾಮಾನ್ಯ ಪ್ರಜೆಯ ಕೂಗು ಕೇಳದೇ?! ಇಂತಹ ಪರಿಸ್ಥಿತಿಯ ಅಬ್ಬರಕ್ಕೆ ಕೊಚ್ಚಿಹೋಗದೆ ಮಂಕು ಕವಿದ ಮನೆಯ ಚಿಲಕ ಹೊಡೆದು ಹೊರ ಬನ್ನಿ ಹೊಸ ಅವತಾರದಲ್ಲಿ ರಂಗಿನ ರಂಗ ಮಂದಿರಕ್ಕೆ ನಟ ನಟಿಯರೇ ಎಂದು ಕಲಾವಿದನ ಬದುಕನ್ನು ಪದ್ಯದ ಪದಗಳಲ್ಲಿ ತೋರಿದ ಕನ್ನಡನಾಡಿನ ಹೆಮ್ಮೆಯ ರಂಗಭೂಮಿ ನಿರ್ದೇಶಕರು,ಸಾಹಿತಿಗಳು,ಪ್ರಗತಿಪರ ಚಿಂತಕರು, ಆದ ಗುರುಗಳು ಆದ ಶ್ರೀಯುತ ನಟರಾಜು ಹೊನ್ನವಳ್ಳಿಯವರಿಗೆ ಅನಂತಧನ್ಯವಾದಗಳು

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...