Homeಕವನ'ಬಾ ಇಲ್ಲಿ ‌ಸಂಭವಿಸು'ವ ಹೊಸ‌ ಅವತಾರದಲ್ಲೇ : ನಟರಾಜ್ ಹೊನ್ನವಳ್ಳಿಯವರ ಪದ್ಯ

‘ಬಾ ಇಲ್ಲಿ ‌ಸಂಭವಿಸು’ವ ಹೊಸ‌ ಅವತಾರದಲ್ಲೇ : ನಟರಾಜ್ ಹೊನ್ನವಳ್ಳಿಯವರ ಪದ್ಯ

- Advertisement -
- Advertisement -

ಒಂದು ಪದ್ಯ

ಹೊರಗೆ ಮಳೆಹನಿಗಳ ಶಬ್ಧ
ರಂಗಮಂದಿರ
ನಿಶ್ಯಬ್ದ
ಏಕತಾರಿಯ ಮೇಲೆ ಧೂಳು
ಹಾರ್ಮೋನಿಯಂನ
ಮೇಲೆ
ಹಾಕಿದ‌ ಕವರ್ ತೆಗೆದಿಲ್ಲ
ಕರೀ ಮೂರು, ಬಿಳಿ ನಾಲ್ಕರ ಮನೆಗಳ ಮೇಲೆ ಬೆರಳಿಲ್ಲ
ಡೈರೆಕ್ಟರ್‌ನ ಟೇಬಲ್‌ ಮೇಲೆ ಜಿರಳೆಗಳು.

ಎಲ್ಲಿ ಹೋದಿರಿ
ಮೋಹಕ
ನಟ-ನಟಿಯರೇ?
ಬಣ್ಣ ಹಚ್ಚುತ್ತಿದ್ದ
ಕೈಗಳೇ
ಖಾಲಿಬಿದ್ದ
ಬಣ್ಣ ಬಿಳುಚಿದ
ಖಾಲಿ
ಕಂಕಾಲ ಮುಖಗಳೇ.

ಎಂದು ಬಂದೀರಿ
ಪಾತ್ರವಾಗಿ
ಏನ ತಂದೀರಿ ಹೃದಯಕ್ಕೆ ಆಪ್ತವಾಗಿ
ಬನ್ನಿ
ಈಗಾಗಲೇ ತಡವಾಗಿದೆ
ಮೂರನೇ ಬೆಲ್
ಹೊಡೆದಾಗಿದೆ.

ಲಿಪ್ ಸ್ಟಿಕ್‌ಗೆ ತುಟಿಗಳಿಲ್ಲ
ವಾರ್ಡ್ರೋಬ್‌ನಲ್ಲಿನ
ಉಡುಪು
ಪ್ಯಾನ್ ಕೇಕ್, ಮಾಸ್ಕರಾ
ನಿಮ್ಮ ದೇಹ
ಮುಖ
ಕಣ್ಣುಗಳನ್ನೇ ಕಾಯುತ್ತಿವೆ
ಎಂದು
ಬಂದೀರಿ‌ ಎಂದು
ಮತ್ತೆ
ಹಳೆಯ ಲಯಕ್ಕೆ
ಹೇಗೆ
ಮರಳುವಿರಿ‌ ಎಂದು.

ಲೈಟಿಂಗ್ ರೂಂನಲ್ಲಿ
ಯಾರಿಲ್ಲ
ರಂಗಕ್ಕೆ ಬೆಳಕಿಲ್ಲ
ಡಿಮ್ಮರ್‌ಗಳು ರೆಸ್ಟಿನಲ್ಲಿವೆ.
ವಿದ್ಯುತ್ ಬಿಲ್
ಜಾಸ್ತಿಯಾಗಿದೆ.

ಹೊರಗೆ
ಬೀದಿಯಲ್ಲಿ ಲಕ್ಷಾಂತರ ಹೆಜ್ಜೆ ಸಪ್ಪಳ
ನಿಟ್ಟುಸಿರು
ರೈಲುಗಾಡಿಯ ಸಿಳ್ಳು
ಸಾವಿನ ವಾಸನೆ
ಬೀದಿಯಲ್ಲಿ ಚಲ್ಲಿದ ಹಾಲು
ಟೊಮ್ಯಾಟೊ
ಹಾಸಿಗೆ, ಪೆಟ್ಟಿಗೆ ಟ್ರಂಕ್ ಹೊತ್ತು
ಮಂದಿ
ಪುಟ್ಟ ಮಕ್ಕಳು
ಎಲ್ಲೆಲ್ಲೂ ಶಂಖ
ಜಾಗಟೆಯ
ತಟ್ಟೆ ಬಡಿತದ ಕೇಕೆ

ಛಕ್ಕನೆ ಬೆಳಕಾರಿ
ಮತ್ತೊಂದು
ದೃಶ್ಯ
ಕಾಣಿಸುತ್ತಿದ್ದ ನೀವೆಲ್ಲ ಎಲ್ಲಿ?
ಯಾವ
ನಾಟಕಗಳಲ್ಲಿ ‌ಅಡಗಿದ್ದೀರಿ
ವೇಷ
ಮರೆಸಿದ್ದೀರಿ
ಎಲ್ಲಿ‌ ನಡೆಸಿದ್ದೀರಿ ತಾಲೀಮು
ಬೀದಿಯಲ್ಲೇ
ಲಾಕ್ ಡೌನಾದ
ಮನೆಗಳಲ್ಲೇ
‘ಬಾ ಇಲ್ಲಿ‌ಸಂಭವಿಸು’ವ
ಹೊಸ‌
ಅವತಾರದಲ್ಲೇ.

ನಟರಾಜ್ ಹೊನ್ನವಳ್ಳಿ
೨೦-೦೫-೨೦೨೦, ಬುಧವಾರ


ಇದನ್ನೂ ಓದಿ: ತೀರ ಸೇರದ ಬದುಕು: ಮಿಸ್ರಿಯಾ.ಐ.ಪಜೀರ್‌ರವರ ಕವನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ರಂಗ ಮಂದಿರದ ಈಗಿನ ಒಳ ನೋಟವನ್ನು
    ಮರೆ ಮಾಚಿದ ತೆರೆಮರೆಯ ಕಲಾವಿದನ
    ಅಂತರಂಗದ ಬಣ್ಣಮಾಸಿದ ಬದುಕಿನ ಭಾವನೆಗಳನ್ನು
    ರಂಗಮಂದಿರ ನಡುವೆ ನಿಂತ ಕಲಾಜೀವಿ
    ಲಯ ಬದ್ದ ವಾದ್ಯಗಳ ಸಂಗೀತವಿಲ್ಲದೆ ಅನಾಥವಾಗಿ
    ನುಡಿಸುವ ನಾಡಿಯ ನಾವಿಕನಿಲ್ಲದೆ
    ದೂಳು ತುಂಬಿ ಪಾಳುಬಿದ್ದ ಮನೆಯ ರೀತಿ ಗೋಚರಿಸುತ್ತಿದೆ. ಪಾತ್ರಗಳಿಗೆ ಜೀವ ತುಂಬಿ ಬಣ್ಣದ ಬದುಕ ನಂಬಿ, ಕಲಾಭಿಮಾನಿಗಳ ಕಣ್ಣುಗಳಿಗೆ ರಂಗು ತುಂಬುತ್ತಿದ್ದ ಪಾತ್ರಧಾರಿಗಳೇ ಎಲ್ಲಿ ಕಳೆದು ಹೊದಿರಿ ಬಣ್ಣವಿಲ್ಲದ ಮುಖವಾಡ ಧರಿಸಿ….
    ಕೋವಿಡ್19 ಸ್ವಾಗತಿಸಿದ ಭ್ರಷ್ಟ ಸರ್ಕಾರಗಳೇ ಚಪ್ಪಾಳೆ ಜಾಗಟೆ ಭಾರಿಸುತ್ತ ಆನಂದದಿ ರಜೆ ಉಂಡ ಅಜ್ಞಾನಿಗಳೇ ನಿಮಗೆ ಹಸಿವಿನಿಂದ ನೊಂದು ಬೆಂದು ಬೆಂಡಾಗಿ ಜೀವ ಬಿಟ್ಟ ಸಾಮಾನ್ಯ ಪ್ರಜೆಯ ಕೂಗು ಕೇಳದೇ?! ಇಂತಹ ಪರಿಸ್ಥಿತಿಯ ಅಬ್ಬರಕ್ಕೆ ಕೊಚ್ಚಿಹೋಗದೆ ಮಂಕು ಕವಿದ ಮನೆಯ ಚಿಲಕ ಹೊಡೆದು ಹೊರ ಬನ್ನಿ ಹೊಸ ಅವತಾರದಲ್ಲಿ ರಂಗಿನ ರಂಗ ಮಂದಿರಕ್ಕೆ ನಟ ನಟಿಯರೇ ಎಂದು ಕಲಾವಿದನ ಬದುಕನ್ನು ಪದ್ಯದ ಪದಗಳಲ್ಲಿ ತೋರಿದ ಕನ್ನಡನಾಡಿನ ಹೆಮ್ಮೆಯ ರಂಗಭೂಮಿ ನಿರ್ದೇಶಕರು,ಸಾಹಿತಿಗಳು,ಪ್ರಗತಿಪರ ಚಿಂತಕರು, ಆದ ಗುರುಗಳು ಆದ ಶ್ರೀಯುತ ನಟರಾಜು ಹೊನ್ನವಳ್ಳಿಯವರಿಗೆ ಅನಂತಧನ್ಯವಾದಗಳು

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...