Homeಕವನ'ಬಾ ಇಲ್ಲಿ ‌ಸಂಭವಿಸು'ವ ಹೊಸ‌ ಅವತಾರದಲ್ಲೇ : ನಟರಾಜ್ ಹೊನ್ನವಳ್ಳಿಯವರ ಪದ್ಯ

‘ಬಾ ಇಲ್ಲಿ ‌ಸಂಭವಿಸು’ವ ಹೊಸ‌ ಅವತಾರದಲ್ಲೇ : ನಟರಾಜ್ ಹೊನ್ನವಳ್ಳಿಯವರ ಪದ್ಯ

- Advertisement -
- Advertisement -

ಒಂದು ಪದ್ಯ

ಹೊರಗೆ ಮಳೆಹನಿಗಳ ಶಬ್ಧ
ರಂಗಮಂದಿರ
ನಿಶ್ಯಬ್ದ
ಏಕತಾರಿಯ ಮೇಲೆ ಧೂಳು
ಹಾರ್ಮೋನಿಯಂನ
ಮೇಲೆ
ಹಾಕಿದ‌ ಕವರ್ ತೆಗೆದಿಲ್ಲ
ಕರೀ ಮೂರು, ಬಿಳಿ ನಾಲ್ಕರ ಮನೆಗಳ ಮೇಲೆ ಬೆರಳಿಲ್ಲ
ಡೈರೆಕ್ಟರ್‌ನ ಟೇಬಲ್‌ ಮೇಲೆ ಜಿರಳೆಗಳು.

ಎಲ್ಲಿ ಹೋದಿರಿ
ಮೋಹಕ
ನಟ-ನಟಿಯರೇ?
ಬಣ್ಣ ಹಚ್ಚುತ್ತಿದ್ದ
ಕೈಗಳೇ
ಖಾಲಿಬಿದ್ದ
ಬಣ್ಣ ಬಿಳುಚಿದ
ಖಾಲಿ
ಕಂಕಾಲ ಮುಖಗಳೇ.

ಎಂದು ಬಂದೀರಿ
ಪಾತ್ರವಾಗಿ
ಏನ ತಂದೀರಿ ಹೃದಯಕ್ಕೆ ಆಪ್ತವಾಗಿ
ಬನ್ನಿ
ಈಗಾಗಲೇ ತಡವಾಗಿದೆ
ಮೂರನೇ ಬೆಲ್
ಹೊಡೆದಾಗಿದೆ.

ಲಿಪ್ ಸ್ಟಿಕ್‌ಗೆ ತುಟಿಗಳಿಲ್ಲ
ವಾರ್ಡ್ರೋಬ್‌ನಲ್ಲಿನ
ಉಡುಪು
ಪ್ಯಾನ್ ಕೇಕ್, ಮಾಸ್ಕರಾ
ನಿಮ್ಮ ದೇಹ
ಮುಖ
ಕಣ್ಣುಗಳನ್ನೇ ಕಾಯುತ್ತಿವೆ
ಎಂದು
ಬಂದೀರಿ‌ ಎಂದು
ಮತ್ತೆ
ಹಳೆಯ ಲಯಕ್ಕೆ
ಹೇಗೆ
ಮರಳುವಿರಿ‌ ಎಂದು.

ಲೈಟಿಂಗ್ ರೂಂನಲ್ಲಿ
ಯಾರಿಲ್ಲ
ರಂಗಕ್ಕೆ ಬೆಳಕಿಲ್ಲ
ಡಿಮ್ಮರ್‌ಗಳು ರೆಸ್ಟಿನಲ್ಲಿವೆ.
ವಿದ್ಯುತ್ ಬಿಲ್
ಜಾಸ್ತಿಯಾಗಿದೆ.

ಹೊರಗೆ
ಬೀದಿಯಲ್ಲಿ ಲಕ್ಷಾಂತರ ಹೆಜ್ಜೆ ಸಪ್ಪಳ
ನಿಟ್ಟುಸಿರು
ರೈಲುಗಾಡಿಯ ಸಿಳ್ಳು
ಸಾವಿನ ವಾಸನೆ
ಬೀದಿಯಲ್ಲಿ ಚಲ್ಲಿದ ಹಾಲು
ಟೊಮ್ಯಾಟೊ
ಹಾಸಿಗೆ, ಪೆಟ್ಟಿಗೆ ಟ್ರಂಕ್ ಹೊತ್ತು
ಮಂದಿ
ಪುಟ್ಟ ಮಕ್ಕಳು
ಎಲ್ಲೆಲ್ಲೂ ಶಂಖ
ಜಾಗಟೆಯ
ತಟ್ಟೆ ಬಡಿತದ ಕೇಕೆ

ಛಕ್ಕನೆ ಬೆಳಕಾರಿ
ಮತ್ತೊಂದು
ದೃಶ್ಯ
ಕಾಣಿಸುತ್ತಿದ್ದ ನೀವೆಲ್ಲ ಎಲ್ಲಿ?
ಯಾವ
ನಾಟಕಗಳಲ್ಲಿ ‌ಅಡಗಿದ್ದೀರಿ
ವೇಷ
ಮರೆಸಿದ್ದೀರಿ
ಎಲ್ಲಿ‌ ನಡೆಸಿದ್ದೀರಿ ತಾಲೀಮು
ಬೀದಿಯಲ್ಲೇ
ಲಾಕ್ ಡೌನಾದ
ಮನೆಗಳಲ್ಲೇ
‘ಬಾ ಇಲ್ಲಿ‌ಸಂಭವಿಸು’ವ
ಹೊಸ‌
ಅವತಾರದಲ್ಲೇ.

ನಟರಾಜ್ ಹೊನ್ನವಳ್ಳಿ
೨೦-೦೫-೨೦೨೦, ಬುಧವಾರ


ಇದನ್ನೂ ಓದಿ: ತೀರ ಸೇರದ ಬದುಕು: ಮಿಸ್ರಿಯಾ.ಐ.ಪಜೀರ್‌ರವರ ಕವನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ರಂಗ ಮಂದಿರದ ಈಗಿನ ಒಳ ನೋಟವನ್ನು
    ಮರೆ ಮಾಚಿದ ತೆರೆಮರೆಯ ಕಲಾವಿದನ
    ಅಂತರಂಗದ ಬಣ್ಣಮಾಸಿದ ಬದುಕಿನ ಭಾವನೆಗಳನ್ನು
    ರಂಗಮಂದಿರ ನಡುವೆ ನಿಂತ ಕಲಾಜೀವಿ
    ಲಯ ಬದ್ದ ವಾದ್ಯಗಳ ಸಂಗೀತವಿಲ್ಲದೆ ಅನಾಥವಾಗಿ
    ನುಡಿಸುವ ನಾಡಿಯ ನಾವಿಕನಿಲ್ಲದೆ
    ದೂಳು ತುಂಬಿ ಪಾಳುಬಿದ್ದ ಮನೆಯ ರೀತಿ ಗೋಚರಿಸುತ್ತಿದೆ. ಪಾತ್ರಗಳಿಗೆ ಜೀವ ತುಂಬಿ ಬಣ್ಣದ ಬದುಕ ನಂಬಿ, ಕಲಾಭಿಮಾನಿಗಳ ಕಣ್ಣುಗಳಿಗೆ ರಂಗು ತುಂಬುತ್ತಿದ್ದ ಪಾತ್ರಧಾರಿಗಳೇ ಎಲ್ಲಿ ಕಳೆದು ಹೊದಿರಿ ಬಣ್ಣವಿಲ್ಲದ ಮುಖವಾಡ ಧರಿಸಿ….
    ಕೋವಿಡ್19 ಸ್ವಾಗತಿಸಿದ ಭ್ರಷ್ಟ ಸರ್ಕಾರಗಳೇ ಚಪ್ಪಾಳೆ ಜಾಗಟೆ ಭಾರಿಸುತ್ತ ಆನಂದದಿ ರಜೆ ಉಂಡ ಅಜ್ಞಾನಿಗಳೇ ನಿಮಗೆ ಹಸಿವಿನಿಂದ ನೊಂದು ಬೆಂದು ಬೆಂಡಾಗಿ ಜೀವ ಬಿಟ್ಟ ಸಾಮಾನ್ಯ ಪ್ರಜೆಯ ಕೂಗು ಕೇಳದೇ?! ಇಂತಹ ಪರಿಸ್ಥಿತಿಯ ಅಬ್ಬರಕ್ಕೆ ಕೊಚ್ಚಿಹೋಗದೆ ಮಂಕು ಕವಿದ ಮನೆಯ ಚಿಲಕ ಹೊಡೆದು ಹೊರ ಬನ್ನಿ ಹೊಸ ಅವತಾರದಲ್ಲಿ ರಂಗಿನ ರಂಗ ಮಂದಿರಕ್ಕೆ ನಟ ನಟಿಯರೇ ಎಂದು ಕಲಾವಿದನ ಬದುಕನ್ನು ಪದ್ಯದ ಪದಗಳಲ್ಲಿ ತೋರಿದ ಕನ್ನಡನಾಡಿನ ಹೆಮ್ಮೆಯ ರಂಗಭೂಮಿ ನಿರ್ದೇಶಕರು,ಸಾಹಿತಿಗಳು,ಪ್ರಗತಿಪರ ಚಿಂತಕರು, ಆದ ಗುರುಗಳು ಆದ ಶ್ರೀಯುತ ನಟರಾಜು ಹೊನ್ನವಳ್ಳಿಯವರಿಗೆ ಅನಂತಧನ್ಯವಾದಗಳು

LEAVE A REPLY

Please enter your comment!
Please enter your name here

- Advertisment -

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...