Homeಮುಖಪುಟದೆಹಲಿ ಗಲಭೆ: ಐಬಿ ಉದ್ಯೋಗಿ ಅಂಕಿತ್‌ ಶರ್ಮಾನಿಗೆ ಇರಿದಿದ್ದು 400 ಬಾರಿ ಎಂಬುದು ಸುಳ್ಳು ಎಂದ...

ದೆಹಲಿ ಗಲಭೆ: ಐಬಿ ಉದ್ಯೋಗಿ ಅಂಕಿತ್‌ ಶರ್ಮಾನಿಗೆ ಇರಿದಿದ್ದು 400 ಬಾರಿ ಎಂಬುದು ಸುಳ್ಳು ಎಂದ ಮರಣೋತ್ತರ ಪರೀಕ್ಷೆ

- Advertisement -
- Advertisement -

ಈಶಾನ್ಯ ದೆಹಲಿ ಹಿಂಸಾಚಾರದ ಸಂದರ್ಭದಲ್ಲಿ ಗುಪ್ತಚರ ದಳದ 26 ವರ್ಷದ ಅಂಕಿತ್ ಶರ್ಮಾ ಅವರ ಶವ ಪತ್ತೆಯಾದ ಎರಡು ವಾರಗಳ ನಂತರ ಬಂದ ಮರಣೋತ್ತರ ವರದಿಯು ಶರ್ಮಾ ಅವರಿಗೆ “400 ಕ್ಕೂ ಹೆಚ್ಚು ಬಾರಿ ಇರಿದಿದೆ” ಎಂಬ ಹೇಳಿಕೆಯನ್ನು ತಳ್ಳಿಹಾಕಿದೆ.

ಫೆಬ್ರವರಿ 26 ರಂದು ಈಶಾನ್ಯ ದೆಹಲಿಯ ಚಾಂದ್ ಬಾಗ್ ಪ್ರದೇಶದ ಚರಂಡಿಯಲ್ಲಿ ಅವರ ಶವ ಪತ್ತೆಯಾಗಿತ್ತು. ಆರಂಭದಲ್ಲಿ ಬಲಪಂಥೀಯ ವೆಬ್‌ಸೈಟ್‌ಗಳು “400 ಕ್ಕೂ ಹೆಚ್ಚು ಬಾರಿ ಇರಿದಿದೆ” ಎಂದು ವರದಿ ಮಾಡಿದ ನಂತರ ಮಂತ್ರಿಗಳು, ಸಂಸದರು, ಸೋಷಿಯಲ್ ಮೀಡಿಯಾ ಪ್ರಭಾವಿಗಳು ಸಹ ಅದೇ ಮಾತುಗಳನ್ನಾಡಿದ್ದರು.

ಫೆಬ್ರವರಿ 24 ರಿಂದ 26 ರವರೆಗೆ ರಾಷ್ಟ್ರ ರಾಜಧಾನಿಯನ್ನು ಹಿಡಿತದಲ್ಲಿಟ್ಟುಕೊಂಡ ಕೋಮು ಹಿಂಸಾಚಾರದ ಸಂದರ್ಭದಲ್ಲಿ ದಾಳಿಯಲ್ಲಿ ಅಂಕಿತ್ ಶರ್ಮಾ ತೀವ್ರ ಮಾರಣಾಂತಿಕ ಗಾಯಗಳನ್ನು ಅನುಭವಿಸಿದ್ದು ನಿಜ. ಆದರೆ ಅವರಿಗೆ ಚಿತ್ರಹಿಂಸೆ ಕೊಟ್ಟು ಸಾಯಿಸಲಾಗಿದೆ ಎಂಬುದು ಉತ್ಪ್ರೇಕ್ಷೆಯಾಗಿದೆ ಪ್ರಸಾರ್ ಭಾರತಿ ಸಿಇಒ ಬಿಬಿಸಿಗೆ ಅಧಿಕೃತ ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ.

ಮರಣೋತ್ತರ ವರದಿಯ ಪ್ರಕಾರ, ಅಂಕಿತ್‌ ಶರ್ಮಾ ಅವರಿಗೆ 12 ಬಾರಿ ಇರಿತ ಮತ್ತು ಒಟ್ಟು 51 ಗಾಯಗಳಾಗಿವೆ.

ಮರಣೋತ್ತರ ವರದಿಯಲ್ಲೇನಿದೆ?

ಮರಣೋತ್ತರ ವರದಿಯಲ್ಲಿ ಉಲ್ಲೇಖಿಸಲಾದ ಸಾವಿಗೆ ಕಾರಣವೆಂದರೆ, “ಶ್ವಾಸಕೋಶ ಮತ್ತು ಮೆದುಳಿಗೆ ಗಾಯಗಳಿಂದಾಗಿ ರಕ್ತಸ್ರಾವವುಂಟಾಗಿ ಆಘಾತ ಉಂಟಾಗಿದೆ. ಚೂಪಾದ ಆಯುಧಗಳಿಂದ ಕೆಲವು ಗಾಯಗಳು ಸಂಭವಿಸಿವೆ”.

ಶರ್ಮಾರವರು ದೇಹದಾದ್ಯಂತ ಇರಿತದ ಗಾಯಗಳನ್ನು ಅನುಭವಿಸಿದ್ದರು. ಹೆಚ್ಚಾಗಿ ಅವರ ಬೆನ್ನು ಮತ್ತು ಬೆನ್ನುಮೂಳೆಯ ಮೇಲೆ. ಮೊಂಡಾದ ವಸ್ತುವಿನಿಂದ ಹೊಡೆಯುವುದರಿಂದ ಅವರು 13 ಗಾಯಗಳನ್ನು ಸಹ ಅನುಭವಿಸಿದ್ದಾರೆ ಎಂದು ವರದಿ ಹೇಳುತ್ತದೆ.


ಇದನ್ನೂ ಓದಿ: Fact check: ವೈರಲ್ ಫೋಟೊದಲ್ಲಿನ ಮಗುವನ್ನು ಹಿಂದೂ ಎಂದು ಸುದ್ದಿ ಹರಡಿದ ನರೇಂದ್ರ ಮೋದಿ ಬೆಂಬಲಿಗರು!


ರಾಜಕಾರಣಿಗಳು, ಮಾಧ್ಯಮಗಳು ಮಾಡಿದ ಸುಳ್ಳು ಪ್ರಚಾರಗಳು

ಸಂಸತ್ತಿನಲ್ಲಿ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಸಂಸದೆ ಮೀನಾಕ್ಷಿ ಲೇಖಿ ಅವರು “400 ಬಾರಿ ಇರಿಯಲಾಗಿದೆ” ಎಂಬ ಅಂಕಿ ಅಂಶವನ್ನು ಉಲ್ಲೇಖಿಸಿದ್ದಾರೆ. ರಿಪಬ್ಲಿಕ್, ಟೈಮ್ಸ್ ನೌ, ದಿ ಫ್ರೀ ಪ್ರೆಸ್ ಜರ್ನಲ್ ಮತ್ತು ಬಲಪಂಥೀಯ ವೆಬ್‌ಸೈಟ್ ಒಪಿಂಡಿಯಾ ಸೇರಿದಂತೆ ಹಲವಾರು ಮಾಧ್ಯಮಗಳು ಐಬಿ ಉದ್ಯೋಗಿಯನ್ನು “400 ಕ್ಕೂ ಹೆಚ್ಚು ಬಾರಿ ಇರಿದಿದೆ” ಎಂದು ವರದಿಗಳನ್ನು ನೀಡಿವೆ.

ಬಿಜೆಪಿ ದೆಹಲಿ ಅಧ್ಯಕ್ಷ ಮನೋಜ್ ತಿವಾರಿ ಮತ್ತು ಬಿಜೆಪಿ ವಕ್ತಾರ ಸಂಬಿತ್ ಪತ್ರಾ ಕೂಡ ತಮ್ಮ ಸಾಮಾಜಿಕ ಮಾಧ್ಯಮಗಳ ಮೂಲಕ ಇದೇ ನಿರೂಪಣೆಯನ್ನು ಮುಂದಿಟ್ಟಿದ್ದರು.

ಈ ಬಗ್ಗೆ ಹೆಸರು ಹೇಳಲು ಇಚ್ಚಿಸದ ಈ ಪ್ರಕರಣದ ಪರಿಚಯವಿರುವ ವೈದ್ಯಕೀಯ ವಿಧಿವಿಜ್ಞಾನ ತಜ್ಞರು ದಿ ಕ್ವಿಂಟ್‌ನೊಂದಿಗೆ ಮಾತನಾಡಿ ಈ ವರದಿಗಳನ್ನು “ಪ್ರಚೋದಿತ ವರದಿಗಳು” ಎಂದಿದ್ದಾರೆ.

“ಅವನ ದೇಹದ ಮೇಲೆ ಕತ್ತರಿಸಿದ ಗುರುತುಗಳು ಇದ್ದವು. ಮೂಗೇಟುಗಳು, ಒರಟಾದ ಗಾಯಗಳು ಮತ್ತು ಅನೇಕ ಇರಿತದ ಗಾಯಗಳು ಇದ್ದವು, ಆದರೆ ಅವನನ್ನು 400 ಕ್ಕೂ ಹೆಚ್ಚು ಬಾರಿ ಇರಿದಿದ್ದಾನೆ ಎಂಬ ಹೇಳಿಕೆ 100% ಸುಳ್ಳು ಎಂದಿದ್ದಾರೆ”.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...