Homeಚಳವಳಿಕನಿಷ್ಠ ಕಾಮನ್ ಸೆನ್ಸ್ ಇಲ್ಲದ ಪ್ರಧಾನಿ ಮೋದಿ - ರೈತ ಹೋರಾಟಗಾರ ಬಡಗಲಪುರ ನಾಗೇಂದ್ರ ಆಕ್ರೋಶ

ಕನಿಷ್ಠ ಕಾಮನ್ ಸೆನ್ಸ್ ಇಲ್ಲದ ಪ್ರಧಾನಿ ಮೋದಿ – ರೈತ ಹೋರಾಟಗಾರ ಬಡಗಲಪುರ ನಾಗೇಂದ್ರ ಆಕ್ರೋಶ

ರೈತ ಸಂಘದ ಹತ್ತು ಜನ ಸಾಮಾನ್ಯ ಕಾರ್ಯಕರ್ತರನ್ನು ಮಾತುಕತೆಗೆ ಕಳಿಸುತ್ತೇವೆ. ತಾಕತ್ತು ಇದ್ದರೆ ಪ್ರಧಾನಿ ಮುಖಾಮುಖಿ ಆಗಲಿ ಎಂದು ಅವರು ಸವಾಲು ಹಾಕಿದ್ದಾರೆ

- Advertisement -
- Advertisement -

ಪ್ರಧಾನಿ ಮೋದಿಗೆ ಕನಿಷ್ಠ ಕಾಮನ್ ಸೆನ್ಸ್ ಇಲ್ಲ ಎನ್ನುವುದು ಅವರು ತೆಗೆದುಕೊಳ್ಳುತ್ತಿರುವ ನಿರ್ಧಾರಗಳಿಂದ ಸಾಬೀತಾಗಿದೆ. ಸತತ ಸುಳ್ಳುಗಳಿಂದ ಜನರನ್ನು ಹಾದಿ ತಪ್ಪಿಸುವುದು ಅವರಿಗೆ ರೂಡಿಯಾಗಿದೆ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಅವರು ಶುಕ್ರವಾರ ದೆಹಲಿಯಲ್ಲಿ ಆರೋಪಿಸಿದ್ದಾರೆ.

ದೆಹಲಿ ಕರ್ನಾಟಕ ಸಂಘದ ಆವರಣದಲ್ಲಿ ರೈತ ಹೋರಾಟಕ್ಕೆ ಬೆಂಬಲ ಸೂಚಿಸಲು ಆಗಮಿಸಿದ ನಿಯೋಗ ಏರ್ಪಡಿಸಿದ್ದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, “ಕೊರೊನಾ ಎಂದು ಮನೆಯಲ್ಲಿ ಕೂಡಿ ಹಾಕಿ ರೈತರ ಕತ್ತು ಹಿಸುಕುವ ಮೂರು ಕಾನೂನನ್ನು ಜಾರಿಗೆ ತಂದ್ದಿದ್ದಾರೆ. ಈ ಮೂಲಕ ಪ್ರಜಾಪ್ರಭುತ್ವವನ್ನು ಅವಮಾನಿಸಿ ಕೆಲವರ ಹಿತಾಸಕ್ತಿಗಾಗಿ ಕೆಲಸ ಮಾಡುತ್ತಿರುವುದು ನಿಚ್ಚಳವಾಗಿದೆ” ಎಂದು ಅವರು ಕಿಡಿಕಾರಿದ್ದಾರೆ.

ಇದನ್ನೂ ಓದಿ: ರೈತ ಹೋರಾಟದಲ್ಲಿ ಖಲೀಸ್ತಾನಿ ಕರಪತ್ರ‌ ಹಂಚಿಕೆ: RSS‌ ಕಾರ್ಯಕರ್ತ ಬಂಧನ!

“ರೈತರ ಹೋರಾಟದ ನೈತಿಕ ಶಕ್ತಿಯನ್ನು ಎದುರಿಸಲಾಗದೆ ಅಪಪ್ರಚಾರ ಮಾಡುತ್ತಿದ್ದಾರೆ. ರೈತರ ಬಗ್ಗೆ ಕಾಳಜಿಯಿದ್ದದ್ದೆ ಆದಲ್ಲಿ ರೈತ ಸಂಘದ ಹತ್ತು ಜನ ಸಾಮಾನ್ಯ ಕಾರ್ಯಕರ್ತರನ್ನು ಮಾತುಕತೆಗೆ ಕಳಿಸುತ್ತೇವೆ. ತಾಕತ್ತು ಇದ್ದರೆ ಪ್ರಧಾನಿ ಮುಖಾಮುಖಿ ಆಗಲಿ” ಎಂದು ನಾಗೇಂದ್ರ ಅವರು ಸವಾಲು ಹಾಕಿದ್ದಾರೆ.

ಕೃಷಿ ವಿಜ್ಞಾನಿ ಪ್ರಕಾಶ್ ಕಮ್ಮರಡಿ ಮಾತನಾಡಿ, “ಹಾಲಿ ಇರುವ ಸರ್ಕಾರ ರೈತ ವಿರೋಧಿಯಲ್ಲ. ರೈತ ದ್ರೋಹಿ ಸರ್ಕಾರ. ರೈತರು ಕೇಳದೆ ಇರುವಂತ ಭೂ ಸುಧಾರಣೆ ಮತ್ತು ಎಪಿಎಂಸಿ ಕಾಯ್ದೆಯನ್ನು ತಿದ್ದುಪಡಿ ಮಾಡಿದೆ. ಈ ಕಾನೂನು ತಿದ್ದುಪಡಿಯಿಂದ ಕೇವಲ ರೈತರಿಗೆ ಮಾತ್ರ ಅನ್ಯಾಯ ಆಗುವುದಲ್ಲ. ದಲಿತ, ಕಾರ್ಮಿಕ ಸೇರಿದಂತೆ ಗ್ರಾಹಕರಿಗೂ ಘೋರ ಅನ್ಯಾಯವಾಗಲಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ತೀವ್ರಗೊಂಡ ಹೋರಾಟ: ಟೋಲ್‌ ಪ್ಲಾಜಾಗಳನ್ನು ವಶಕ್ಕೆ ಪಡೆದ ರೈತರು

ಕರ್ನಾಟಕ ಜನ ಶಕ್ತಿಯ ರಾಜ್ಯಾಧ್ಯಕ್ಷ ನೂರ್ ಶ್ರೀಧರ್ ಮಾತನಾಡಿ, “ದಕ್ಷಿಣ ಭಾರತದ ರೈತರಿಗೆ ಈಗ ಸುಗ್ಗಿಯ ಕಾಲ. ಹೀಗಾಗಿ ಈ ಕಾಯ್ದೆಯ ವಿರುದ್ದದ ಹೋರಾಟ ಬಿರುಸುಗೊಂಡಿಲ್ಲ. ಸುಗ್ಗಿ ಮುಗಿದ ನಂತರ ಮಾಡುವ ಸುಗ್ಗಿ ಹಬ್ಬವನ್ನು ಹೋರಾಟದ ದಿನವನ್ನಾಗಿ ಆಚರಿಸಲಾಗುವುದು ಹಾಗೂ ಜನವರಿ 26 ದೇಶದ ರೈತರು, ದಲಿತರು, ಕಾರ್ಮಿಕರು ದೆಹಲಿ ಮುತ್ತಿಗೆ ಹಾಕುವ ಸಂದರ್ಭ ಬರುವುದು” ಎಂದು ಸರ್ಕಾರಕ್ಕೆ ಎಚ್ಚರಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಗುರುಪ್ರಸಾದ್ ಕೆರೆಗೋಡು, ಎಸ್. ಆರ್. ಹಿರೇಮಠ್, ಕಾಳಪ್ಪ, ಜಿ.ಜಿ ಹಳ್ಳಿ ನಾರಾಯಣಸ್ವಾಮಿ, ಬಿ.ಆರ್ ಪಾಟೀಲ್, ಅಪರ್ಣ, ನಾಗಮ್ಮ ಮತ್ತಿತರರು ಹಾಜರಿದ್ದರು. ಸುದ್ದಿಗೋಷ್ಠಿಯ ನಂತರ ನಿಯೋಗವು ಹರಿಯಾಣ ರಾಜಾಸ್ಥಾನ ದೆಹಲಿಯ ಗಡಿಯಾಗಿರುವ ಷಹಜಾನ್ ಪುರದಲ್ಲಿ ನಡೆಯುತ್ತಿರುವ ರೈತ ಹೋರಾಟದ ಸ್ಥಳಕ್ಕೆ ಬೇಟಿಯಿತ್ತು ಅಲ್ಲಿನ ಮುಖಂಡರೊಂದಿಗೆ ಚರ್ಚೆ ನಡೆಸಿತು. ಶನಿವಾರ ನಿಯೋಗವು ದೆಹಲಿ ಸಮೀಪದ ಟಿಕ್ರಿ ಗಡಿಯಲ್ಲಿ ನಡೆಯುತ್ತಿರುವ ಹೋರಾಟದ ಸ್ಥಳಕ್ಕೆ ಬೇಟಿಯಿತ್ತು ಹೊರಾಟದಲ್ಲಿ ಭಾಗಿಯಾಗಲಿದೆ.

ಇದನ್ನೂ ಓದಿ: ರೈತ ಹೋರಾಟದಲ್ಲಿ ಗಾಂಧಿ- ಅಂಬೇಡ್ಕರ್ ವಿಚಾರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...