Homeಚಳವಳಿಕನಿಷ್ಠ ಕಾಮನ್ ಸೆನ್ಸ್ ಇಲ್ಲದ ಪ್ರಧಾನಿ ಮೋದಿ - ರೈತ ಹೋರಾಟಗಾರ ಬಡಗಲಪುರ ನಾಗೇಂದ್ರ ಆಕ್ರೋಶ

ಕನಿಷ್ಠ ಕಾಮನ್ ಸೆನ್ಸ್ ಇಲ್ಲದ ಪ್ರಧಾನಿ ಮೋದಿ – ರೈತ ಹೋರಾಟಗಾರ ಬಡಗಲಪುರ ನಾಗೇಂದ್ರ ಆಕ್ರೋಶ

ರೈತ ಸಂಘದ ಹತ್ತು ಜನ ಸಾಮಾನ್ಯ ಕಾರ್ಯಕರ್ತರನ್ನು ಮಾತುಕತೆಗೆ ಕಳಿಸುತ್ತೇವೆ. ತಾಕತ್ತು ಇದ್ದರೆ ಪ್ರಧಾನಿ ಮುಖಾಮುಖಿ ಆಗಲಿ ಎಂದು ಅವರು ಸವಾಲು ಹಾಕಿದ್ದಾರೆ

- Advertisement -
- Advertisement -

ಪ್ರಧಾನಿ ಮೋದಿಗೆ ಕನಿಷ್ಠ ಕಾಮನ್ ಸೆನ್ಸ್ ಇಲ್ಲ ಎನ್ನುವುದು ಅವರು ತೆಗೆದುಕೊಳ್ಳುತ್ತಿರುವ ನಿರ್ಧಾರಗಳಿಂದ ಸಾಬೀತಾಗಿದೆ. ಸತತ ಸುಳ್ಳುಗಳಿಂದ ಜನರನ್ನು ಹಾದಿ ತಪ್ಪಿಸುವುದು ಅವರಿಗೆ ರೂಡಿಯಾಗಿದೆ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಅವರು ಶುಕ್ರವಾರ ದೆಹಲಿಯಲ್ಲಿ ಆರೋಪಿಸಿದ್ದಾರೆ.

ದೆಹಲಿ ಕರ್ನಾಟಕ ಸಂಘದ ಆವರಣದಲ್ಲಿ ರೈತ ಹೋರಾಟಕ್ಕೆ ಬೆಂಬಲ ಸೂಚಿಸಲು ಆಗಮಿಸಿದ ನಿಯೋಗ ಏರ್ಪಡಿಸಿದ್ದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, “ಕೊರೊನಾ ಎಂದು ಮನೆಯಲ್ಲಿ ಕೂಡಿ ಹಾಕಿ ರೈತರ ಕತ್ತು ಹಿಸುಕುವ ಮೂರು ಕಾನೂನನ್ನು ಜಾರಿಗೆ ತಂದ್ದಿದ್ದಾರೆ. ಈ ಮೂಲಕ ಪ್ರಜಾಪ್ರಭುತ್ವವನ್ನು ಅವಮಾನಿಸಿ ಕೆಲವರ ಹಿತಾಸಕ್ತಿಗಾಗಿ ಕೆಲಸ ಮಾಡುತ್ತಿರುವುದು ನಿಚ್ಚಳವಾಗಿದೆ” ಎಂದು ಅವರು ಕಿಡಿಕಾರಿದ್ದಾರೆ.

ಇದನ್ನೂ ಓದಿ: ರೈತ ಹೋರಾಟದಲ್ಲಿ ಖಲೀಸ್ತಾನಿ ಕರಪತ್ರ‌ ಹಂಚಿಕೆ: RSS‌ ಕಾರ್ಯಕರ್ತ ಬಂಧನ!

“ರೈತರ ಹೋರಾಟದ ನೈತಿಕ ಶಕ್ತಿಯನ್ನು ಎದುರಿಸಲಾಗದೆ ಅಪಪ್ರಚಾರ ಮಾಡುತ್ತಿದ್ದಾರೆ. ರೈತರ ಬಗ್ಗೆ ಕಾಳಜಿಯಿದ್ದದ್ದೆ ಆದಲ್ಲಿ ರೈತ ಸಂಘದ ಹತ್ತು ಜನ ಸಾಮಾನ್ಯ ಕಾರ್ಯಕರ್ತರನ್ನು ಮಾತುಕತೆಗೆ ಕಳಿಸುತ್ತೇವೆ. ತಾಕತ್ತು ಇದ್ದರೆ ಪ್ರಧಾನಿ ಮುಖಾಮುಖಿ ಆಗಲಿ” ಎಂದು ನಾಗೇಂದ್ರ ಅವರು ಸವಾಲು ಹಾಕಿದ್ದಾರೆ.

ಕೃಷಿ ವಿಜ್ಞಾನಿ ಪ್ರಕಾಶ್ ಕಮ್ಮರಡಿ ಮಾತನಾಡಿ, “ಹಾಲಿ ಇರುವ ಸರ್ಕಾರ ರೈತ ವಿರೋಧಿಯಲ್ಲ. ರೈತ ದ್ರೋಹಿ ಸರ್ಕಾರ. ರೈತರು ಕೇಳದೆ ಇರುವಂತ ಭೂ ಸುಧಾರಣೆ ಮತ್ತು ಎಪಿಎಂಸಿ ಕಾಯ್ದೆಯನ್ನು ತಿದ್ದುಪಡಿ ಮಾಡಿದೆ. ಈ ಕಾನೂನು ತಿದ್ದುಪಡಿಯಿಂದ ಕೇವಲ ರೈತರಿಗೆ ಮಾತ್ರ ಅನ್ಯಾಯ ಆಗುವುದಲ್ಲ. ದಲಿತ, ಕಾರ್ಮಿಕ ಸೇರಿದಂತೆ ಗ್ರಾಹಕರಿಗೂ ಘೋರ ಅನ್ಯಾಯವಾಗಲಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ತೀವ್ರಗೊಂಡ ಹೋರಾಟ: ಟೋಲ್‌ ಪ್ಲಾಜಾಗಳನ್ನು ವಶಕ್ಕೆ ಪಡೆದ ರೈತರು

ಕರ್ನಾಟಕ ಜನ ಶಕ್ತಿಯ ರಾಜ್ಯಾಧ್ಯಕ್ಷ ನೂರ್ ಶ್ರೀಧರ್ ಮಾತನಾಡಿ, “ದಕ್ಷಿಣ ಭಾರತದ ರೈತರಿಗೆ ಈಗ ಸುಗ್ಗಿಯ ಕಾಲ. ಹೀಗಾಗಿ ಈ ಕಾಯ್ದೆಯ ವಿರುದ್ದದ ಹೋರಾಟ ಬಿರುಸುಗೊಂಡಿಲ್ಲ. ಸುಗ್ಗಿ ಮುಗಿದ ನಂತರ ಮಾಡುವ ಸುಗ್ಗಿ ಹಬ್ಬವನ್ನು ಹೋರಾಟದ ದಿನವನ್ನಾಗಿ ಆಚರಿಸಲಾಗುವುದು ಹಾಗೂ ಜನವರಿ 26 ದೇಶದ ರೈತರು, ದಲಿತರು, ಕಾರ್ಮಿಕರು ದೆಹಲಿ ಮುತ್ತಿಗೆ ಹಾಕುವ ಸಂದರ್ಭ ಬರುವುದು” ಎಂದು ಸರ್ಕಾರಕ್ಕೆ ಎಚ್ಚರಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಗುರುಪ್ರಸಾದ್ ಕೆರೆಗೋಡು, ಎಸ್. ಆರ್. ಹಿರೇಮಠ್, ಕಾಳಪ್ಪ, ಜಿ.ಜಿ ಹಳ್ಳಿ ನಾರಾಯಣಸ್ವಾಮಿ, ಬಿ.ಆರ್ ಪಾಟೀಲ್, ಅಪರ್ಣ, ನಾಗಮ್ಮ ಮತ್ತಿತರರು ಹಾಜರಿದ್ದರು. ಸುದ್ದಿಗೋಷ್ಠಿಯ ನಂತರ ನಿಯೋಗವು ಹರಿಯಾಣ ರಾಜಾಸ್ಥಾನ ದೆಹಲಿಯ ಗಡಿಯಾಗಿರುವ ಷಹಜಾನ್ ಪುರದಲ್ಲಿ ನಡೆಯುತ್ತಿರುವ ರೈತ ಹೋರಾಟದ ಸ್ಥಳಕ್ಕೆ ಬೇಟಿಯಿತ್ತು ಅಲ್ಲಿನ ಮುಖಂಡರೊಂದಿಗೆ ಚರ್ಚೆ ನಡೆಸಿತು. ಶನಿವಾರ ನಿಯೋಗವು ದೆಹಲಿ ಸಮೀಪದ ಟಿಕ್ರಿ ಗಡಿಯಲ್ಲಿ ನಡೆಯುತ್ತಿರುವ ಹೋರಾಟದ ಸ್ಥಳಕ್ಕೆ ಬೇಟಿಯಿತ್ತು ಹೊರಾಟದಲ್ಲಿ ಭಾಗಿಯಾಗಲಿದೆ.

ಇದನ್ನೂ ಓದಿ: ರೈತ ಹೋರಾಟದಲ್ಲಿ ಗಾಂಧಿ- ಅಂಬೇಡ್ಕರ್ ವಿಚಾರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...