Homeಚಳವಳಿವರವರ ರಾವ್ ಅವರ ಪುಸ್ತಕದಿಂದ, ‘ಹಿಂದುತ್ವ’, ‘ಸಂಘಪರಿವಾರ’ ಸೇರಿದಂತೆ ಹಲವು ಪದಗಳನ್ನು ಕೈಬಿಟ್ಟ ಪ್ರಕಾಶನ ಸಂಸ್ಥೆ!

ವರವರ ರಾವ್ ಅವರ ಪುಸ್ತಕದಿಂದ, ‘ಹಿಂದುತ್ವ’, ‘ಸಂಘಪರಿವಾರ’ ಸೇರಿದಂತೆ ಹಲವು ಪದಗಳನ್ನು ಕೈಬಿಟ್ಟ ಪ್ರಕಾಶನ ಸಂಸ್ಥೆ!

- Advertisement -
- Advertisement -

‘ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ’ದ ಕಾನೂನು ತಂಡವು ತೆಲುಗು ಕ್ರಾಂತಿಕಾರಿ ಕವಿ ವರವರ ರಾವ್ ಅವರ ಇತ್ತೀಚಿನ ಪುಸ್ತಕ, ‘ವರವರ ರಾವ್: ಎ ರೆವಲ್ಯೂಷನರಿ ಪೊಯೆಟ್‌’ನಿಂದ, ‘ಹಿಂದುತ್ವ’, ‘ಸಂಘ ಪರಿವಾರ’ ಮತ್ತು ‘ಕೇಸರಿಕರಣ’ ಮುಂತಾದ ಪದಗಳನ್ನು ತೆಗೆದುಹಾಕಿದೆ ಎಂದು ಕ್ವಿಂಟ್ ವರದಿ ಮಾಡಿದೆ. ಇನ್ನಷ್ಟೆ ಬಿಡುಗಡೆಯಾಗಬೇಕಿರುವ ಪುಸ್ತಕವು ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ 81 ವರ್ಷದ ವರವರ ರಾವ್ ಅವರ ಮೊದಲ ಇಂಗ್ಲಿಷ್ ಅನುವಾದಿತ ಕವನ ಸಂಕಲನವಾಗಲಿದೆ.

ವರವರ ರಾವ್ ಅವರು ಪ್ರಸ್ತುತ ವೈದ್ಯಕೀಯ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ. ಅವರ ಆರು ದಶಕಗಳ ಸಾಹಿತ್ಯಿಕ ವೃತ್ತಿಜೀವನದ ಪ್ರತಿನಿಧಿಯಾಗಿದೆ ಈ ಪುಸ್ತಕ. ವರವರ ರಾವ್‌ ಅವರು 1960 ರ ದಶಕದಿಂದಲೂ ಹಲವು ಜನಪರ ಚಳುವಳಿಗಳೊಂದಿಗೆ ಗುರುತಿಸಿಕೊಂಡಿದ್ದಾರೆ. ಅವರನ್ನು ಎಲ್ಗರ್ ಪರಿಷತ್-ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಭಾಗಿಯಾಗಿದ್ದಕ್ಕಾಗಿ ಆಗಸ್ಟ್ 2018 ರಲ್ಲಿ ಬಂಧಿಸಲಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

2014 ರಲ್ಲಿ, ಪೆಂಗ್ವಿನ್ ಪ್ರಕಾಶನವು ತನ್ನ ಸ್ವಂತ ಪುಸ್ತಕ, ವೆಂಡಿ ಡೋನಿಗರ್ ಬರೆದಿರುವ ‘ದಿ ಹಿಂದೂಸ್’ ಅನ್ನು ಹಿಂದಕ್ಕೆ ತೆಗೆದುಕೊಂಡಿತ್ತು. ಈ ಪುಸ್ತಕವು ಹಿಂದೂ ಧರ್ಮವನ್ನು ‘ಅವಹೇಳನ’ ಮಾಡುತ್ತದೆ ಎಂದು ಕೆಲವು ಗುಂಪುಗಳು ದೂರುಗಳನ್ನು ಸಲ್ಲಿಸಿತ್ತು.

ಇದನ್ನೂ ಓದಿ: ವರವರ ರಾವ್‌ ಕೃತಿ ಪ್ರಕಟಣೆ ವಿಳಂಬ: ಸರ್ಕಾರಕ್ಕೆ ಹೆದರಿತೇ ಪೆಂಗ್ವಿನ್‌ ಪ್ರಕಾಶನ ಸಂಸ್ಥೆ?

ಈ ವರ್ಷದ ಆರಂಭದಲ್ಲಿ, ಅಂಬೇಡ್ಕರ್ ಜಯಂತಿಯಂದು (ಏಪ್ರಿಲ್ 14), ಪೆಂಗ್ವಿನ್ ರಾಂಡಮ್ ಹೌಸ್, ‘ದಿ ದಲಿತ್‌ ಟ್ರುತ್‌’ ಪುಸ್ತಕವನ್ನು ಬಿಡುಗಡೆ ಮಾಡಿತ್ತು. ಅದು, ಪ್ರಸ್ತುತ ದಲಿತರ ಸ್ಥಿತಿಯನ್ನು, ಆರ್ಥಿಕವಾಗಿ, ಸಾಮಾಜಿಕವಾಗಿ ಮತ್ತು ರಾಜಕೀಯವಾಗಿ ಅಂಬೇಡ್ಕರ್ ಅವರ ಪ್ರಸ್ತುತತೆಯನ್ನು ವಿಶ್ಲೇಷಿಸಿ, ಸಬಲೀಕರಣದ ಹೊಸ ಮಾರ್ಗವನ್ನು ರೂಪಿಸುವ ಬಗ್ಗೆ ಮಾತನಾಡುತ್ತದೆ.

‘ದಿ ದಲಿತ್ ಟ್ರುತ್’ ಬಿಡುಗಡೆಯಾದ ಒಂದು ತಿಂಗಳೊಳಗೆ, ವರವರ ರಾವ್ ಅವರ ಇತ್ತೀಚಿನ ಕವನಗಳ ಸಂಗ್ರಹವು ಪೆಂಗ್ವಿನ್ ರಾಂಡಮ್ ಹೌಸ್‌ನ ಕಾನೂನು ತಂಡದ ಕೈಯಲ್ಲಿ ಸೆನ್ಸಾರ್‌ಶಿಪ್‌ಗೆ ಒಳಗಾಗಿದೆ ಎಂದು ದಿ ಕ್ವಿಂಟ್ ವರದಿ ಹೇಳಿದೆ. ವರವರ ರಾವ್ ಅವರ ಪುಸ್ತಕದ ಒಪ್ಪಂದಕ್ಕೆ 2020 ರಲ್ಲಿ ಸಹಿ ಹಾಕಲಾಯಿತು ಮತ್ತು ಪ್ರಕಾಶಕರು ಅದನ್ನು 2021 ರ ಮಧ್ಯದಲ್ಲಿ ಬಿಡುಗಡೆ ಮಾಡುವುದಾಗಿ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Because of group of ppl like you guys Mogals and British ruled us….why you ppl called Kesari Bayotpaadane….it’s not Bayotpaadane….first understand Bayotpaadane meaning then spread your divide and rule agenda

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...