Homeಕರ್ನಾಟಕಹಿಜಾಬ್ ಧರಿಸಿದ ಪುಟಾಣಿಯನ್ನು ಓಡಿಸಿಕೊಂಡು ಹೋಗುತ್ತಿರುವ ವಿಡಿಯೊ ವೈರಲ್‌

ಹಿಜಾಬ್ ಧರಿಸಿದ ಪುಟಾಣಿಯನ್ನು ಓಡಿಸಿಕೊಂಡು ಹೋಗುತ್ತಿರುವ ವಿಡಿಯೊ ವೈರಲ್‌

- Advertisement -
- Advertisement -

ಶಾಂತವಾಗಿದ್ದ ಶಾಲಾ ಅಂಗಳವನ್ನು ಕೋಮು ಕೇಂದ್ರಗಳನ್ನಾಗಿ ಮಾಡುವತ್ತ ಕನ್ನಡ ಮಾಧ್ಯಮಗಳು ಯತ್ನಿಸುತ್ತಿವೆಯೇ? ಮಕ್ಕಳ ಮೇಲಾಗುವ ದುಷ್ಪರಿಣಾಮಗಳನ್ನು ಮಾಧ್ಯಮಗಳು ಯೋಚಿಸುತ್ತಿಲ್ಲವೇ? ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸುತ್ತಿದ್ದರೂ ಮಕ್ಕಳ ಹಕ್ಕುಗಳ ಆಯೋಗ ಏನು ಮಾಡುತ್ತಿದೆ ಎಂಬ ಪ್ರಶ್ನೆಗಳು ಮೂಡಿವೆ.

ಹಿಜಾಬ್‌ ಧರಿಸಿಲ್ಲವೆಂದು ತೋರಿಸುತ್ತಾ, ಮಕ್ಕಳನ್ನು ಭೀತಿಗೆ ತಳ್ಳಲಾಗುತ್ತಿರುವ ಬೆಳವಣಿಗೆಗಳ ನಡುವೆ ವರದಿಗಾರನೊಬ್ಬನ ದುಷ್ಕೃತ್ಯ ಮನಸಾಕ್ಷಿ ಇದ್ದವರನ್ನೆಲ್ಲ ಡಿಸ್‌ಡರ್ಬ್ ಮಾಡಿದೆ. ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೊ ವೈರಲ್‌ ಆಗಿದ್ದು, ಇಂತಹ ವರ್ತನೆಗಳ ವಿರುದ್ಧ ಕ್ರಮ ಜರುಗಿಸಬೇಕೆಂಬ ಕೂಗು ಕೇಳಿಬಂದಿದೆ.

ಮತ್ತೊಂದೆಡೆ ಹೈಕೋರ್ಟ್‌ನ ಮಧ್ಯಂತರ ಆದೇಶವನ್ನು ತಿರುಚಿ ಅಥವಾ ತಪ್ಪಾಗಿ ಅರ್ಥ ಮಾಡಿಕೊಂಡು ಮಕ್ಕಳನ್ನು ತಪಾಸಣೆ ಮಾಡಲಾಗುತ್ತಿದೆ. ಶಿಕ್ಷಣ ತಜ್ಞರಾದ ಡಾ.ವಿ.ಪಿ.ನಿರಂಜನಾರಾಧ್ಯ ಹಾಗೂ ಹೈಕೋರ್ಟ್ ಹಿರಿಯ ವಕೀಲರಾದ ಎಸ್.ಬಾಲನ್‌ ಇದರ ವಿರುದ್ಧ ಧ್ವನಿ ಎತ್ತಿದ್ದಾರೆ. “ಹೈಕೋರ್ಟ್ ಆದೇಶ, ವಿವಾದಿತ ಕಾಲೇಜುಗಳಿಗೆ ಮಾತ್ರ ಸಂಬಂಧಿಸಿದ್ದು, ಆದರೆ ಇಡೀ ಶಾಲಾ ಕಾಲೇಜುಗಳಿಗೆಲ್ಲ ಅನ್ವಯಿಸುತ್ತದೆ ಎಂಬಂತೆ ಮಾಧ್ಯಮಗಳಲ್ಲಿ ಬಿಂಬಿಸಲಾಗುತ್ತಿದೆ” ಎಂದು ವಿ.ಪಿ.ನಿರಂಜನಾರಾಧ್ಯ ಹಾಗೂ ಎಸ್.ಬಾಲನ್‌ ಹೇಳಿದ್ದಾರೆ.

ಉರಿವ ಬೆಂಕಿಗೆ ತುಪ್ಪ ಸುರಿಯುವ, ಆಗಿರುವ ಗಾಯಕ್ಕೆ ಉಪ್ಪು ಸವರುವ ಕೆಲಸವನ್ನು ಮಾಧ್ಯಮಗಳು ಮಾಡುತ್ತಿರುವುದು ಸುಳ್ಳಲ್ಲ. ಈಗ ಸದ್ಯಕ್ಕೆ ‘ಈ ಟಿ.ವಿ. ಭಾರತ್‌ ಕನ್ನಡ ಮಾಧ್ಯಮ’ದ ಶಿವಮೊಗ್ಗ ವರದಿಗಾರರೊಬ್ಬರು ಮಾಡಿರುವ ಯಡವಟ್ಟು ಗಂಭೀರವಾಗಿ ಚರ್ಚೆಯಾಗುತ್ತಿದೆ.

“ಶಿವಮೊಗ್ಗದ ​ಶಾಲೆಯಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಲಿಲ್ಲ ಎಂಬ ಕಾರಣಕ್ಕೆ ಇಬ್ಬರು ವಿದ್ಯಾರ್ಥಿನಿಯರು ಮನೆಗೆ ವಾಪಸ್​ ಆದ ಘಟನೆ ಇಂದು ನಡೆದಿದೆ. ಬಿ.ಹೆಚ್.ರಸ್ತೆಯ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ 9ನೇ ತರಗತಿಯ ವಿದ್ಯಾರ್ಥಿನಿಯರು ಮನೆಗೆ ವಾಪಸ್ ಆಗಿದ್ದಾರೆ” ಎಂದು ವರದಿ ಮಾಡಿರುವ ಈ.ಟಿ.ವಿ. ಭಾರತ್‌, ಒಂದು ಹೆಣ್ಣು ಮಗುವನ್ನು ಹಿಂಬಾಲಿಸಿ ಮಾಡಿರುವ ವಿಡಿಯೊವನ್ನೂ ಸುದ್ದಿಯಲ್ಲಿ ಲಗತ್ತಿದೆ. ಇದಕ್ಕಿಂತ ಮುಖ್ಯವಾಗಿ ಆ ಪುಟಾಣಿಯನ್ನು ಓಡಿಸಿಕೊಂಡು ಹೋಗುತ್ತಾ, ಈ ಟಿ.ವಿ.ಭಾರತ್‌ ವರದಿಗಾರ ಫೋಟೋ ತೆಗೆದುಕೊಳ್ಳುವುದು ಮತ್ತೊಂದು ಮಾಧ್ಯಮದ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಇದನ್ನೂ ಓದಿರಿ: ಆದೇಶ ಅರಿಯದೆ ಮಕ್ಕಳ ಮೇಲೆ ಮಾಧ್ಯಮಗಳ ಸವಾರಿ: ಅಧಿಕಾರಿಗಳ ಬೇಸರ

ಹಿಜಾಬ್‌ ಧರಿಸಿ ಹೋಗುತ್ತಿರುವ ಮಗುವನ್ನು ಹಿಂಬಾಲಿಸಿ ಮಾಡಿರುವ ವಿಡಿಯೊವನ್ನು ವರದಿಯಲ್ಲಿ ಕಾಣಬಹುದು. ಜೊತೆಗೆ ಶಾಲೆಯ ಒಳಗೆ ಇನ್ನಿಬ್ಬರು ಆ ಮಗುವಿನ ಫೋಟೋಗಳನ್ನು ಕ್ಲಿಕ್ಕಿಸುವುದೂ ಈ.ಟಿ.ವಿ. ಭಾರತ್ ವಿಡಿಯೊದಲ್ಲಿ ದಾಖಲಾಗಿದೆ.

“ಈ ರೀತಿಯ ವರದಿಗಾರಿಕೆ ಮಾಡಬಾರದಲ್ಲವೇ?” ಎಂದು ‘ನಾನುಗೌರಿ.ಕಾಂ’ ತಂಡ ಈ.ಟಿ.ವಿ. ಭಾರತ್‌ ಕನ್ನಡ ವಿಭಾಗದ ಮುಖ್ಯಸ್ಥರಾಗಿರುವ ಸುದರ್ಶನ್‌ ದಾಮ್ಲೆ ಅವರಲ್ಲಿ ಕೇಳಿದಾಗ, “ಈ ವಿಡಿಯೊದ ಹಿಂದಿನ ಹಾಗೂ ಮುಂದಿನ ಬೆಳವಣಿಗೆಗಳು ಏನಾಗಿದ್ದವು ಎಂಬುದನ್ನು ಪರಿಶೀಲಿಸಲಾಗುವುದು. ಇದು ನಮ್ಮ ಗಮನಕ್ಕೆ ಬಂದಿದೆ. ನಾಳೆ ಮೀಟಿಂಗ್‌ನಲ್ಲಿ ಚರ್ಚಿಸಲಾಗುವುದು” ಎಂದಿದ್ದಾರೆ.

ಇಂತಹ ವರ್ತನೆಗಳಿಗೆ ಶಿಕ್ಷೆ ಇಲ್ಲವೆ? ಮಕ್ಕಳ ಹಕ್ಕುಗಳ ಆಯೋಗ ಏನು ಮಾಡುತ್ತಿದೆ?

ಹಿಜಾಬ್‌- ಕೇಸರಿ ಶಾಲು ವಿವಾದ ಬಂದ ಮೇಲೆ ಮಕ್ಕಳ ಹಕ್ಕುಗಳು ಪದೇ ಪದೇ ಉಲ್ಲಂಘನೆಯಾಗುತ್ತಲೇ ಇವೆ. ಆದರೆ ಇಲ್ಲಿಯವರೆಗೆ ಒಂದೇ ಒಂದು ಪ್ರಕರಣವನ್ನು ಈ ಸಂಬಂಧ ಮಕ್ಕಳ ಹಕ್ಕುಗಳ ಆಯೋಗ ದಾಖಲಿಸಿಲ್ಲ. ಹೋರಾಟನಿರತ ಬಾಲಕಿಯರ ಹೆಸರುಗಳನ್ನು ಪ್ರಕಟಿಸಿ ಬಿಜೆಪಿಯ ಅಧಿಕೃತ ಟ್ವಿಟರ್‌ ಖಾತೆ ವಿಕೃತಿ ಮೆರೆಯಲಾಗಿದೆ. ಇದೆಲ್ಲವನ್ನೂ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷರಾದ ಡಾ.ಜಯಶ್ರೀ ಅವರ ಗಮನಕ್ಕೂ ನಾನುಗೌರಿ.ಕಾಂ ತಂಡ ತಂದಿದೆ. ನಮ್ಮೊಂದಿಗೆ ಮಾತನಾಡಿದ ಅವರು, ಈ ಕುರಿತು ಕ್ರಮ ವಹಿಸುವುದಾಗಿ ತಿಳಿಸಿದ್ದಾರೆ.

ಶಿಕ್ಷಣ ತಜ್ಞರಾದ ವಿ.ಪಿ.ನಿರಂಜನಾರಾಧ್ಯ ಅವರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿ, “ಮಕ್ಕಳ ಮೇಲಾಗುತ್ತಿರುವ ದೌರ್ಜನ್ಯಗಳಿಗೆ ಸಂಬಂಧಿಸಿದಂತೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆ ಕ್ರಮ ವಹಿಸಿ ನ್ಯಾಯಾಂಗದ ಆದೇಶವನ್ನು ಇಲಾಖೆಯ ಅಧಿಕಾರಿಗಳಿಗೆ ತಿಳಿಸಿಕೊಡಬೇಕು” ಎಂದು ಆಗ್ರಹಿಸಿದ್ದಾರೆ.


ಇದನ್ನೂ ಓದಿರಿ: ಹಿಜಾಬ್‌ಗಾಗಿ ಹೋರಾಡುತ್ತಿರುವ ಹೆಣ್ಣುಮಕ್ಕಳ ವೈಯಕ್ತಿಕ ವಿವರ ಹಂಚಿಕೊಂಡು ವಿಕೃತಿ ಮೆರೆದ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಮಾದ್ಯಮದ ಕೆಲವರು ತಮ್ಮನ್ನು ತಾವೇ ಸರ್ವಶಕ್ತರೂ, ಸರ್ವಜ್ಞ ಮೂರ್ತಿಗಳು ಎಂದು ತಿಳಿದು, ಅಮಾನವೀಯವಾಗಿ, ಮನುವಾದಿಗಳ ಬಾಲಬಡುಕರಂತೆ ವರ್ತಿಸುತ್ತಿರುವುದು ಕಂಡನಾರ್ಹ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...