Homeಕರ್ನಾಟಕಹಿಜಾಬ್ ಧರಿಸಿದ ಪುಟಾಣಿಯನ್ನು ಓಡಿಸಿಕೊಂಡು ಹೋಗುತ್ತಿರುವ ವಿಡಿಯೊ ವೈರಲ್‌

ಹಿಜಾಬ್ ಧರಿಸಿದ ಪುಟಾಣಿಯನ್ನು ಓಡಿಸಿಕೊಂಡು ಹೋಗುತ್ತಿರುವ ವಿಡಿಯೊ ವೈರಲ್‌

- Advertisement -
- Advertisement -

ಶಾಂತವಾಗಿದ್ದ ಶಾಲಾ ಅಂಗಳವನ್ನು ಕೋಮು ಕೇಂದ್ರಗಳನ್ನಾಗಿ ಮಾಡುವತ್ತ ಕನ್ನಡ ಮಾಧ್ಯಮಗಳು ಯತ್ನಿಸುತ್ತಿವೆಯೇ? ಮಕ್ಕಳ ಮೇಲಾಗುವ ದುಷ್ಪರಿಣಾಮಗಳನ್ನು ಮಾಧ್ಯಮಗಳು ಯೋಚಿಸುತ್ತಿಲ್ಲವೇ? ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸುತ್ತಿದ್ದರೂ ಮಕ್ಕಳ ಹಕ್ಕುಗಳ ಆಯೋಗ ಏನು ಮಾಡುತ್ತಿದೆ ಎಂಬ ಪ್ರಶ್ನೆಗಳು ಮೂಡಿವೆ.

ಹಿಜಾಬ್‌ ಧರಿಸಿಲ್ಲವೆಂದು ತೋರಿಸುತ್ತಾ, ಮಕ್ಕಳನ್ನು ಭೀತಿಗೆ ತಳ್ಳಲಾಗುತ್ತಿರುವ ಬೆಳವಣಿಗೆಗಳ ನಡುವೆ ವರದಿಗಾರನೊಬ್ಬನ ದುಷ್ಕೃತ್ಯ ಮನಸಾಕ್ಷಿ ಇದ್ದವರನ್ನೆಲ್ಲ ಡಿಸ್‌ಡರ್ಬ್ ಮಾಡಿದೆ. ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೊ ವೈರಲ್‌ ಆಗಿದ್ದು, ಇಂತಹ ವರ್ತನೆಗಳ ವಿರುದ್ಧ ಕ್ರಮ ಜರುಗಿಸಬೇಕೆಂಬ ಕೂಗು ಕೇಳಿಬಂದಿದೆ.

ಮತ್ತೊಂದೆಡೆ ಹೈಕೋರ್ಟ್‌ನ ಮಧ್ಯಂತರ ಆದೇಶವನ್ನು ತಿರುಚಿ ಅಥವಾ ತಪ್ಪಾಗಿ ಅರ್ಥ ಮಾಡಿಕೊಂಡು ಮಕ್ಕಳನ್ನು ತಪಾಸಣೆ ಮಾಡಲಾಗುತ್ತಿದೆ. ಶಿಕ್ಷಣ ತಜ್ಞರಾದ ಡಾ.ವಿ.ಪಿ.ನಿರಂಜನಾರಾಧ್ಯ ಹಾಗೂ ಹೈಕೋರ್ಟ್ ಹಿರಿಯ ವಕೀಲರಾದ ಎಸ್.ಬಾಲನ್‌ ಇದರ ವಿರುದ್ಧ ಧ್ವನಿ ಎತ್ತಿದ್ದಾರೆ. “ಹೈಕೋರ್ಟ್ ಆದೇಶ, ವಿವಾದಿತ ಕಾಲೇಜುಗಳಿಗೆ ಮಾತ್ರ ಸಂಬಂಧಿಸಿದ್ದು, ಆದರೆ ಇಡೀ ಶಾಲಾ ಕಾಲೇಜುಗಳಿಗೆಲ್ಲ ಅನ್ವಯಿಸುತ್ತದೆ ಎಂಬಂತೆ ಮಾಧ್ಯಮಗಳಲ್ಲಿ ಬಿಂಬಿಸಲಾಗುತ್ತಿದೆ” ಎಂದು ವಿ.ಪಿ.ನಿರಂಜನಾರಾಧ್ಯ ಹಾಗೂ ಎಸ್.ಬಾಲನ್‌ ಹೇಳಿದ್ದಾರೆ.

ಉರಿವ ಬೆಂಕಿಗೆ ತುಪ್ಪ ಸುರಿಯುವ, ಆಗಿರುವ ಗಾಯಕ್ಕೆ ಉಪ್ಪು ಸವರುವ ಕೆಲಸವನ್ನು ಮಾಧ್ಯಮಗಳು ಮಾಡುತ್ತಿರುವುದು ಸುಳ್ಳಲ್ಲ. ಈಗ ಸದ್ಯಕ್ಕೆ ‘ಈ ಟಿ.ವಿ. ಭಾರತ್‌ ಕನ್ನಡ ಮಾಧ್ಯಮ’ದ ಶಿವಮೊಗ್ಗ ವರದಿಗಾರರೊಬ್ಬರು ಮಾಡಿರುವ ಯಡವಟ್ಟು ಗಂಭೀರವಾಗಿ ಚರ್ಚೆಯಾಗುತ್ತಿದೆ.

“ಶಿವಮೊಗ್ಗದ ​ಶಾಲೆಯಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಲಿಲ್ಲ ಎಂಬ ಕಾರಣಕ್ಕೆ ಇಬ್ಬರು ವಿದ್ಯಾರ್ಥಿನಿಯರು ಮನೆಗೆ ವಾಪಸ್​ ಆದ ಘಟನೆ ಇಂದು ನಡೆದಿದೆ. ಬಿ.ಹೆಚ್.ರಸ್ತೆಯ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ 9ನೇ ತರಗತಿಯ ವಿದ್ಯಾರ್ಥಿನಿಯರು ಮನೆಗೆ ವಾಪಸ್ ಆಗಿದ್ದಾರೆ” ಎಂದು ವರದಿ ಮಾಡಿರುವ ಈ.ಟಿ.ವಿ. ಭಾರತ್‌, ಒಂದು ಹೆಣ್ಣು ಮಗುವನ್ನು ಹಿಂಬಾಲಿಸಿ ಮಾಡಿರುವ ವಿಡಿಯೊವನ್ನೂ ಸುದ್ದಿಯಲ್ಲಿ ಲಗತ್ತಿದೆ. ಇದಕ್ಕಿಂತ ಮುಖ್ಯವಾಗಿ ಆ ಪುಟಾಣಿಯನ್ನು ಓಡಿಸಿಕೊಂಡು ಹೋಗುತ್ತಾ, ಈ ಟಿ.ವಿ.ಭಾರತ್‌ ವರದಿಗಾರ ಫೋಟೋ ತೆಗೆದುಕೊಳ್ಳುವುದು ಮತ್ತೊಂದು ಮಾಧ್ಯಮದ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಇದನ್ನೂ ಓದಿರಿ: ಆದೇಶ ಅರಿಯದೆ ಮಕ್ಕಳ ಮೇಲೆ ಮಾಧ್ಯಮಗಳ ಸವಾರಿ: ಅಧಿಕಾರಿಗಳ ಬೇಸರ

ಹಿಜಾಬ್‌ ಧರಿಸಿ ಹೋಗುತ್ತಿರುವ ಮಗುವನ್ನು ಹಿಂಬಾಲಿಸಿ ಮಾಡಿರುವ ವಿಡಿಯೊವನ್ನು ವರದಿಯಲ್ಲಿ ಕಾಣಬಹುದು. ಜೊತೆಗೆ ಶಾಲೆಯ ಒಳಗೆ ಇನ್ನಿಬ್ಬರು ಆ ಮಗುವಿನ ಫೋಟೋಗಳನ್ನು ಕ್ಲಿಕ್ಕಿಸುವುದೂ ಈ.ಟಿ.ವಿ. ಭಾರತ್ ವಿಡಿಯೊದಲ್ಲಿ ದಾಖಲಾಗಿದೆ.

“ಈ ರೀತಿಯ ವರದಿಗಾರಿಕೆ ಮಾಡಬಾರದಲ್ಲವೇ?” ಎಂದು ‘ನಾನುಗೌರಿ.ಕಾಂ’ ತಂಡ ಈ.ಟಿ.ವಿ. ಭಾರತ್‌ ಕನ್ನಡ ವಿಭಾಗದ ಮುಖ್ಯಸ್ಥರಾಗಿರುವ ಸುದರ್ಶನ್‌ ದಾಮ್ಲೆ ಅವರಲ್ಲಿ ಕೇಳಿದಾಗ, “ಈ ವಿಡಿಯೊದ ಹಿಂದಿನ ಹಾಗೂ ಮುಂದಿನ ಬೆಳವಣಿಗೆಗಳು ಏನಾಗಿದ್ದವು ಎಂಬುದನ್ನು ಪರಿಶೀಲಿಸಲಾಗುವುದು. ಇದು ನಮ್ಮ ಗಮನಕ್ಕೆ ಬಂದಿದೆ. ನಾಳೆ ಮೀಟಿಂಗ್‌ನಲ್ಲಿ ಚರ್ಚಿಸಲಾಗುವುದು” ಎಂದಿದ್ದಾರೆ.

ಇಂತಹ ವರ್ತನೆಗಳಿಗೆ ಶಿಕ್ಷೆ ಇಲ್ಲವೆ? ಮಕ್ಕಳ ಹಕ್ಕುಗಳ ಆಯೋಗ ಏನು ಮಾಡುತ್ತಿದೆ?

ಹಿಜಾಬ್‌- ಕೇಸರಿ ಶಾಲು ವಿವಾದ ಬಂದ ಮೇಲೆ ಮಕ್ಕಳ ಹಕ್ಕುಗಳು ಪದೇ ಪದೇ ಉಲ್ಲಂಘನೆಯಾಗುತ್ತಲೇ ಇವೆ. ಆದರೆ ಇಲ್ಲಿಯವರೆಗೆ ಒಂದೇ ಒಂದು ಪ್ರಕರಣವನ್ನು ಈ ಸಂಬಂಧ ಮಕ್ಕಳ ಹಕ್ಕುಗಳ ಆಯೋಗ ದಾಖಲಿಸಿಲ್ಲ. ಹೋರಾಟನಿರತ ಬಾಲಕಿಯರ ಹೆಸರುಗಳನ್ನು ಪ್ರಕಟಿಸಿ ಬಿಜೆಪಿಯ ಅಧಿಕೃತ ಟ್ವಿಟರ್‌ ಖಾತೆ ವಿಕೃತಿ ಮೆರೆಯಲಾಗಿದೆ. ಇದೆಲ್ಲವನ್ನೂ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷರಾದ ಡಾ.ಜಯಶ್ರೀ ಅವರ ಗಮನಕ್ಕೂ ನಾನುಗೌರಿ.ಕಾಂ ತಂಡ ತಂದಿದೆ. ನಮ್ಮೊಂದಿಗೆ ಮಾತನಾಡಿದ ಅವರು, ಈ ಕುರಿತು ಕ್ರಮ ವಹಿಸುವುದಾಗಿ ತಿಳಿಸಿದ್ದಾರೆ.

ಶಿಕ್ಷಣ ತಜ್ಞರಾದ ವಿ.ಪಿ.ನಿರಂಜನಾರಾಧ್ಯ ಅವರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿ, “ಮಕ್ಕಳ ಮೇಲಾಗುತ್ತಿರುವ ದೌರ್ಜನ್ಯಗಳಿಗೆ ಸಂಬಂಧಿಸಿದಂತೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆ ಕ್ರಮ ವಹಿಸಿ ನ್ಯಾಯಾಂಗದ ಆದೇಶವನ್ನು ಇಲಾಖೆಯ ಅಧಿಕಾರಿಗಳಿಗೆ ತಿಳಿಸಿಕೊಡಬೇಕು” ಎಂದು ಆಗ್ರಹಿಸಿದ್ದಾರೆ.


ಇದನ್ನೂ ಓದಿರಿ: ಹಿಜಾಬ್‌ಗಾಗಿ ಹೋರಾಡುತ್ತಿರುವ ಹೆಣ್ಣುಮಕ್ಕಳ ವೈಯಕ್ತಿಕ ವಿವರ ಹಂಚಿಕೊಂಡು ವಿಕೃತಿ ಮೆರೆದ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಮಾದ್ಯಮದ ಕೆಲವರು ತಮ್ಮನ್ನು ತಾವೇ ಸರ್ವಶಕ್ತರೂ, ಸರ್ವಜ್ಞ ಮೂರ್ತಿಗಳು ಎಂದು ತಿಳಿದು, ಅಮಾನವೀಯವಾಗಿ, ಮನುವಾದಿಗಳ ಬಾಲಬಡುಕರಂತೆ ವರ್ತಿಸುತ್ತಿರುವುದು ಕಂಡನಾರ್ಹ.

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...