Homeಕರ್ನಾಟಕಹಿಜಾಬ್ ಧರಿಸಿದ ಪುಟಾಣಿಯನ್ನು ಓಡಿಸಿಕೊಂಡು ಹೋಗುತ್ತಿರುವ ವಿಡಿಯೊ ವೈರಲ್‌

ಹಿಜಾಬ್ ಧರಿಸಿದ ಪುಟಾಣಿಯನ್ನು ಓಡಿಸಿಕೊಂಡು ಹೋಗುತ್ತಿರುವ ವಿಡಿಯೊ ವೈರಲ್‌

- Advertisement -
- Advertisement -

ಶಾಂತವಾಗಿದ್ದ ಶಾಲಾ ಅಂಗಳವನ್ನು ಕೋಮು ಕೇಂದ್ರಗಳನ್ನಾಗಿ ಮಾಡುವತ್ತ ಕನ್ನಡ ಮಾಧ್ಯಮಗಳು ಯತ್ನಿಸುತ್ತಿವೆಯೇ? ಮಕ್ಕಳ ಮೇಲಾಗುವ ದುಷ್ಪರಿಣಾಮಗಳನ್ನು ಮಾಧ್ಯಮಗಳು ಯೋಚಿಸುತ್ತಿಲ್ಲವೇ? ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸುತ್ತಿದ್ದರೂ ಮಕ್ಕಳ ಹಕ್ಕುಗಳ ಆಯೋಗ ಏನು ಮಾಡುತ್ತಿದೆ ಎಂಬ ಪ್ರಶ್ನೆಗಳು ಮೂಡಿವೆ.

ಹಿಜಾಬ್‌ ಧರಿಸಿಲ್ಲವೆಂದು ತೋರಿಸುತ್ತಾ, ಮಕ್ಕಳನ್ನು ಭೀತಿಗೆ ತಳ್ಳಲಾಗುತ್ತಿರುವ ಬೆಳವಣಿಗೆಗಳ ನಡುವೆ ವರದಿಗಾರನೊಬ್ಬನ ದುಷ್ಕೃತ್ಯ ಮನಸಾಕ್ಷಿ ಇದ್ದವರನ್ನೆಲ್ಲ ಡಿಸ್‌ಡರ್ಬ್ ಮಾಡಿದೆ. ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೊ ವೈರಲ್‌ ಆಗಿದ್ದು, ಇಂತಹ ವರ್ತನೆಗಳ ವಿರುದ್ಧ ಕ್ರಮ ಜರುಗಿಸಬೇಕೆಂಬ ಕೂಗು ಕೇಳಿಬಂದಿದೆ.

ಮತ್ತೊಂದೆಡೆ ಹೈಕೋರ್ಟ್‌ನ ಮಧ್ಯಂತರ ಆದೇಶವನ್ನು ತಿರುಚಿ ಅಥವಾ ತಪ್ಪಾಗಿ ಅರ್ಥ ಮಾಡಿಕೊಂಡು ಮಕ್ಕಳನ್ನು ತಪಾಸಣೆ ಮಾಡಲಾಗುತ್ತಿದೆ. ಶಿಕ್ಷಣ ತಜ್ಞರಾದ ಡಾ.ವಿ.ಪಿ.ನಿರಂಜನಾರಾಧ್ಯ ಹಾಗೂ ಹೈಕೋರ್ಟ್ ಹಿರಿಯ ವಕೀಲರಾದ ಎಸ್.ಬಾಲನ್‌ ಇದರ ವಿರುದ್ಧ ಧ್ವನಿ ಎತ್ತಿದ್ದಾರೆ. “ಹೈಕೋರ್ಟ್ ಆದೇಶ, ವಿವಾದಿತ ಕಾಲೇಜುಗಳಿಗೆ ಮಾತ್ರ ಸಂಬಂಧಿಸಿದ್ದು, ಆದರೆ ಇಡೀ ಶಾಲಾ ಕಾಲೇಜುಗಳಿಗೆಲ್ಲ ಅನ್ವಯಿಸುತ್ತದೆ ಎಂಬಂತೆ ಮಾಧ್ಯಮಗಳಲ್ಲಿ ಬಿಂಬಿಸಲಾಗುತ್ತಿದೆ” ಎಂದು ವಿ.ಪಿ.ನಿರಂಜನಾರಾಧ್ಯ ಹಾಗೂ ಎಸ್.ಬಾಲನ್‌ ಹೇಳಿದ್ದಾರೆ.

ಉರಿವ ಬೆಂಕಿಗೆ ತುಪ್ಪ ಸುರಿಯುವ, ಆಗಿರುವ ಗಾಯಕ್ಕೆ ಉಪ್ಪು ಸವರುವ ಕೆಲಸವನ್ನು ಮಾಧ್ಯಮಗಳು ಮಾಡುತ್ತಿರುವುದು ಸುಳ್ಳಲ್ಲ. ಈಗ ಸದ್ಯಕ್ಕೆ ‘ಈ ಟಿ.ವಿ. ಭಾರತ್‌ ಕನ್ನಡ ಮಾಧ್ಯಮ’ದ ಶಿವಮೊಗ್ಗ ವರದಿಗಾರರೊಬ್ಬರು ಮಾಡಿರುವ ಯಡವಟ್ಟು ಗಂಭೀರವಾಗಿ ಚರ್ಚೆಯಾಗುತ್ತಿದೆ.

“ಶಿವಮೊಗ್ಗದ ​ಶಾಲೆಯಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಲಿಲ್ಲ ಎಂಬ ಕಾರಣಕ್ಕೆ ಇಬ್ಬರು ವಿದ್ಯಾರ್ಥಿನಿಯರು ಮನೆಗೆ ವಾಪಸ್​ ಆದ ಘಟನೆ ಇಂದು ನಡೆದಿದೆ. ಬಿ.ಹೆಚ್.ರಸ್ತೆಯ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ 9ನೇ ತರಗತಿಯ ವಿದ್ಯಾರ್ಥಿನಿಯರು ಮನೆಗೆ ವಾಪಸ್ ಆಗಿದ್ದಾರೆ” ಎಂದು ವರದಿ ಮಾಡಿರುವ ಈ.ಟಿ.ವಿ. ಭಾರತ್‌, ಒಂದು ಹೆಣ್ಣು ಮಗುವನ್ನು ಹಿಂಬಾಲಿಸಿ ಮಾಡಿರುವ ವಿಡಿಯೊವನ್ನೂ ಸುದ್ದಿಯಲ್ಲಿ ಲಗತ್ತಿದೆ. ಇದಕ್ಕಿಂತ ಮುಖ್ಯವಾಗಿ ಆ ಪುಟಾಣಿಯನ್ನು ಓಡಿಸಿಕೊಂಡು ಹೋಗುತ್ತಾ, ಈ ಟಿ.ವಿ.ಭಾರತ್‌ ವರದಿಗಾರ ಫೋಟೋ ತೆಗೆದುಕೊಳ್ಳುವುದು ಮತ್ತೊಂದು ಮಾಧ್ಯಮದ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಇದನ್ನೂ ಓದಿರಿ: ಆದೇಶ ಅರಿಯದೆ ಮಕ್ಕಳ ಮೇಲೆ ಮಾಧ್ಯಮಗಳ ಸವಾರಿ: ಅಧಿಕಾರಿಗಳ ಬೇಸರ

ಹಿಜಾಬ್‌ ಧರಿಸಿ ಹೋಗುತ್ತಿರುವ ಮಗುವನ್ನು ಹಿಂಬಾಲಿಸಿ ಮಾಡಿರುವ ವಿಡಿಯೊವನ್ನು ವರದಿಯಲ್ಲಿ ಕಾಣಬಹುದು. ಜೊತೆಗೆ ಶಾಲೆಯ ಒಳಗೆ ಇನ್ನಿಬ್ಬರು ಆ ಮಗುವಿನ ಫೋಟೋಗಳನ್ನು ಕ್ಲಿಕ್ಕಿಸುವುದೂ ಈ.ಟಿ.ವಿ. ಭಾರತ್ ವಿಡಿಯೊದಲ್ಲಿ ದಾಖಲಾಗಿದೆ.

“ಈ ರೀತಿಯ ವರದಿಗಾರಿಕೆ ಮಾಡಬಾರದಲ್ಲವೇ?” ಎಂದು ‘ನಾನುಗೌರಿ.ಕಾಂ’ ತಂಡ ಈ.ಟಿ.ವಿ. ಭಾರತ್‌ ಕನ್ನಡ ವಿಭಾಗದ ಮುಖ್ಯಸ್ಥರಾಗಿರುವ ಸುದರ್ಶನ್‌ ದಾಮ್ಲೆ ಅವರಲ್ಲಿ ಕೇಳಿದಾಗ, “ಈ ವಿಡಿಯೊದ ಹಿಂದಿನ ಹಾಗೂ ಮುಂದಿನ ಬೆಳವಣಿಗೆಗಳು ಏನಾಗಿದ್ದವು ಎಂಬುದನ್ನು ಪರಿಶೀಲಿಸಲಾಗುವುದು. ಇದು ನಮ್ಮ ಗಮನಕ್ಕೆ ಬಂದಿದೆ. ನಾಳೆ ಮೀಟಿಂಗ್‌ನಲ್ಲಿ ಚರ್ಚಿಸಲಾಗುವುದು” ಎಂದಿದ್ದಾರೆ.

ಇಂತಹ ವರ್ತನೆಗಳಿಗೆ ಶಿಕ್ಷೆ ಇಲ್ಲವೆ? ಮಕ್ಕಳ ಹಕ್ಕುಗಳ ಆಯೋಗ ಏನು ಮಾಡುತ್ತಿದೆ?

ಹಿಜಾಬ್‌- ಕೇಸರಿ ಶಾಲು ವಿವಾದ ಬಂದ ಮೇಲೆ ಮಕ್ಕಳ ಹಕ್ಕುಗಳು ಪದೇ ಪದೇ ಉಲ್ಲಂಘನೆಯಾಗುತ್ತಲೇ ಇವೆ. ಆದರೆ ಇಲ್ಲಿಯವರೆಗೆ ಒಂದೇ ಒಂದು ಪ್ರಕರಣವನ್ನು ಈ ಸಂಬಂಧ ಮಕ್ಕಳ ಹಕ್ಕುಗಳ ಆಯೋಗ ದಾಖಲಿಸಿಲ್ಲ. ಹೋರಾಟನಿರತ ಬಾಲಕಿಯರ ಹೆಸರುಗಳನ್ನು ಪ್ರಕಟಿಸಿ ಬಿಜೆಪಿಯ ಅಧಿಕೃತ ಟ್ವಿಟರ್‌ ಖಾತೆ ವಿಕೃತಿ ಮೆರೆಯಲಾಗಿದೆ. ಇದೆಲ್ಲವನ್ನೂ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷರಾದ ಡಾ.ಜಯಶ್ರೀ ಅವರ ಗಮನಕ್ಕೂ ನಾನುಗೌರಿ.ಕಾಂ ತಂಡ ತಂದಿದೆ. ನಮ್ಮೊಂದಿಗೆ ಮಾತನಾಡಿದ ಅವರು, ಈ ಕುರಿತು ಕ್ರಮ ವಹಿಸುವುದಾಗಿ ತಿಳಿಸಿದ್ದಾರೆ.

ಶಿಕ್ಷಣ ತಜ್ಞರಾದ ವಿ.ಪಿ.ನಿರಂಜನಾರಾಧ್ಯ ಅವರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿ, “ಮಕ್ಕಳ ಮೇಲಾಗುತ್ತಿರುವ ದೌರ್ಜನ್ಯಗಳಿಗೆ ಸಂಬಂಧಿಸಿದಂತೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆ ಕ್ರಮ ವಹಿಸಿ ನ್ಯಾಯಾಂಗದ ಆದೇಶವನ್ನು ಇಲಾಖೆಯ ಅಧಿಕಾರಿಗಳಿಗೆ ತಿಳಿಸಿಕೊಡಬೇಕು” ಎಂದು ಆಗ್ರಹಿಸಿದ್ದಾರೆ.


ಇದನ್ನೂ ಓದಿರಿ: ಹಿಜಾಬ್‌ಗಾಗಿ ಹೋರಾಡುತ್ತಿರುವ ಹೆಣ್ಣುಮಕ್ಕಳ ವೈಯಕ್ತಿಕ ವಿವರ ಹಂಚಿಕೊಂಡು ವಿಕೃತಿ ಮೆರೆದ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಮಾದ್ಯಮದ ಕೆಲವರು ತಮ್ಮನ್ನು ತಾವೇ ಸರ್ವಶಕ್ತರೂ, ಸರ್ವಜ್ಞ ಮೂರ್ತಿಗಳು ಎಂದು ತಿಳಿದು, ಅಮಾನವೀಯವಾಗಿ, ಮನುವಾದಿಗಳ ಬಾಲಬಡುಕರಂತೆ ವರ್ತಿಸುತ್ತಿರುವುದು ಕಂಡನಾರ್ಹ.

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....