Homeಮುಖಪುಟ‘ಭಾರತ ಮತ್ತು ಕಾಂಗ್ರೆಸ್ ನಡುವೆ ಬಿರುಕು ಮೂಡಿದೆ’: ಪಕ್ಷದ ಬಿಕ್ಕಟ್ಟಿನ ಕುರಿತು ಮನೀಶ್‌ ತಿವಾರಿ

‘ಭಾರತ ಮತ್ತು ಕಾಂಗ್ರೆಸ್ ನಡುವೆ ಬಿರುಕು ಮೂಡಿದೆ’: ಪಕ್ಷದ ಬಿಕ್ಕಟ್ಟಿನ ಕುರಿತು ಮನೀಶ್‌ ತಿವಾರಿ

- Advertisement -
- Advertisement -

ಹಿರಿಯ ನಾಯಕರ ರಾಜೀನಾಮೆಯಿಂದ ಕಾಂಗ್ರೆಸ್‌‌ ತತ್ತರಿಸಿರುವ ನಡುವೆಯೆ ಪಕ್ಷದ ಸಂಸದ ಮನೀಶ್ ತಿವಾರಿ ಅವರು ಪಕ್ಷಕ್ಕೆ ‘ಸ್ವಯಂ ಆತ್ಮಾವಲೋಕನ’ ಅಗತ್ಯವಿದ್ದು, ಭಾರತ ಮತ್ತು ಕಾಂಗ್ರೆಸ್ ನಡುವೆ ‘ಬಿರುಕು’ ಕಾಣಿಸಿಕೊಂಡಿದೆ ಎಂದು ಶನಿವಾರ ಹೇಳಿದ್ದಾರೆ.

ಸಾಂಸ್ಥಿಕ ಬದಲಾವಣೆಗಳನ್ನು ಕೋರಿ ಎರಡು ವರ್ಷಗಳ ಹಿಂದೆ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದ 23 ಪ್ರಮುಖ ಕಾಂಗ್ರೆಸ್ ನಾಯಕರಲ್ಲಿ ತಿವಾರಿ ಕೂಡ ಒಬ್ಬರಾಗಿದ್ದಾರೆ. ಜಿ-23 ಎಂದು ಕರೆಯಲ್ಪಡುವ ಬಂಡಾಯ ನಾಯಕರಲ್ಲಿ ಇಬ್ಬರು ಕಳೆದ ವಾರ ಪಕ್ಷದ ನಾಯಕತ್ವದ ವಿರುದ್ಧ ಮಾತನಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಿರಿಯ ನಾಯಕ ಗುಲಾಂ ನಬಿ ಆಜಾದ್ ಅವರು ರಾಹುಲ್ ಗಾಂಧಿಯ ಬಗ್ಗೆ ತೀವ್ರ ಟೀಕಾಪ್ರಹಾರ ನಡೆಸಿ ಪಕ್ಷವನ್ನು ತೊರೆದಿದ್ದು, ಮತ್ತೊಬ್ಬ ಹಿರಿಯ ಕಾಂಗ್ರೆಸ್ಸಿಗ ಆನಂದ್ ಶರ್ಮಾ ‘ಸ್ವಾಭಿಮಾನ’ವನ್ನು ಉಲ್ಲೇಖಿಸಿ ಪಕ್ಷದ ಸಮಿತಿಗೆ ರಾಜೀನಾಮೆ ನೀಡಿದ್ದಾರೆ.

ಸುದ್ದಿ ಸಂಸ್ಥೆ ANI ಯೊಂದಿಗೆ ಮಾತನಾಡಿದ ತಿವಾರಿ,“ಎರಡು ವರ್ಷಗಳ ಹಿಂದೆ, ನಮ್ಮಲ್ಲಿ 23 ಜನರು ಪಕ್ಷದ ಪರಿಸ್ಥಿತಿ ಚಿಂತಾಜನಕವಾಗಿದ್ದು, ಅದರನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದೇವೆ. ಆ ಪತ್ರದ ನಂತರ ಕಾಂಗ್ರೆಸ್ ಎಲ್ಲಾ ವಿಧಾನಸಭಾ ಚುನಾವಣೆಗಳಲ್ಲಿ ಸೋತಿದೆ. ಕಾಂಗ್ರೆಸ್ ಮತ್ತು ಭಾರತ ಒಂದೇ ರೀತಿ ಯೋಚಿಸುತ್ತಿಲ್ಲ, ವಿಭಿನ್ನವಾಗಿ ಯೋಚಿಸಲು ಪ್ರಾರಂಭಿಸಿದೆ ಎಂದು ತೋರುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ಹೊಸ ಪಕ್ಷ ಸ್ಥಾಪಿಸಲಿರುವ ಮಾಜಿ ಕಾಂಗ್ರೆಸ್ ನಾಯಕ ಗುಲಾಂ ನಬಿ ಅಜಾದ್

ಎರಡು ವರ್ಷಗಳ ಹಿಂದೆ ಕಾಂಗ್ರೆಸ್ ಹೈಕಮಾಂಡ್ ಸಭೆಯನ್ನು ಉಲ್ಲೇಖಿಸಿ ಮಾತನಾಡಿದ ತಿವಾರಿ ಅವರು,“1885 ರಿಂದ ಭಾರತ ಮತ್ತು ಕಾಂಗ್ರೆಸ್ ನಡುವಿನ ಸಮನ್ವಯದಲ್ಲಿ ಬಿರುಕು ಕಾಣಿಸಿಕೊಂಡಿದೆ. ಪಕಕ್ಕೆ ಆತ್ಮಾವಲೋಕನದ ಅಗತ್ಯವಿದೆ ಎಂದು ನಾನು ಭಾವಿಸುತ್ತೇನೆ. 2020ರ ಡಿಸೆಂಬರ್ 20 ರಂದು ಸೋನಿಯಾ ಗಾಂಧಿಯವರ ನಿವಾಸದಲ್ಲಿ ನಡೆದ ಸಭೆಯ ಒಮ್ಮತವನ್ನು ಕಾರ್ಯಗತಗೊಳಿಸಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ” ಎಂದು ಹೇಳಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. Do Gattbhandhan all together join hands against nationalists and jump in river Ganga and come back fresh living all party past Karmas u hv done to nation since u born..
    No God’s can save u now..
    Truth takes bit time to revolt…
    Better take America trip as relief

LEAVE A REPLY

Please enter your comment!
Please enter your name here

- Advertisment -

Must Read

‘ದೆಹಲಿ ಜನರು ನಮಗೆ 56% ಮತ ನೀಡಿದ್ದಾರೆ, ಅವರು ಪಾಕಿಸ್ತಾನಿಗಳೇ..?’; ಅಮಿತ್‌ ಶಾ ವಿರುದ್ಧ...

0
'ಅಮಿತ್ ಶಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಉತ್ತರಾಧಿಕಾರಿಯಾಗಿ ಆಯ್ಕೆಯಾದ ಕಾರಣ ಅವರು ಅಹಂಕಾರಿಯಾಗಿದ್ದಾರೆ' ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್...