Homeಕರ್ನಾಟಕಪರೇಶ್‌ ಮೇಸ್ತಾ ಹೆಸರಲ್ಲಿ ಗಲಭೆ; 112 ಜನರ ಮೇಲಿದ್ದ ಪ್ರಕರಣ ವಾಪಸ್‌ ಪಡೆದ ಸರ್ಕಾರ

ಪರೇಶ್‌ ಮೇಸ್ತಾ ಹೆಸರಲ್ಲಿ ಗಲಭೆ; 112 ಜನರ ಮೇಲಿದ್ದ ಪ್ರಕರಣ ವಾಪಸ್‌ ಪಡೆದ ಸರ್ಕಾರ

- Advertisement -
- Advertisement -

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಪರೇಶ್ ಮೇಸ್ತಾ ಅವರ ಸಾವಿನ ಸಂದರ್ಭದಲ್ಲಿ ಕೋಮು ಉದ್ವಿಗ್ನತೆ ಉಂಟಾಗಿ ದಾಖಲಾಗಿದ್ದ ಪ್ರಕರಣಗಳನ್ನು ಬಿಜೆಪಿ ಸರ್ಕಾರ ವಾಪಸ್ ಪಡೆದಿದೆ. ಪ್ರಕರಣ ಘಟಿಸಿ ಆರು ವರ್ಷಗಳ ನಂತರ ಸರ್ಕಾರ ಈ ತೀರ್ಮಾನಕ್ಕೆ ಬಂದಿದೆ.

ಗಲಭೆಯಲ್ಲಿ 112 ಜನರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹಿಂಪಡೆಯಲು ಸರ್ಕಾರ ಆದೇಶ ಹೊರಡಿಸಿದೆ. ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಕೋಮುಗಲಭೆಗೆ ಸಂಬಂಧಿಸಿದಂತೆ 112 ಮಂದಿ ವಿರುದ್ಧ ದಾಖಲಾಗಿರುವ ಮೂರು ಪ್ರಕರಣಗಳನ್ನು ಹಿಂಪಡೆಯುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ.

2017ರಲ್ಲಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಮೇಸ್ತಾ (19) ಎಂಬ ಯುವಕ ಶವವಾಗಿ ಪತ್ತೆಯಾಗಿದ್ದನು. ಡಿಸೆಂಬರ್ 8 ರಂದು ಹೊನ್ನಾವರದ ಶೆಟ್ಟಿಕೆರೆಯ ಕೆರೆಯಲ್ಲಿ ಅವರ ಮೃತದೇಹ ಕಂಡುಬಂದಿತ್ತು. ಇದಕ್ಕೆ ಕೋಮು ಬಣ್ಣ ಕಟ್ಟಿದ್ದರಿಂದ ರಾಜ್ಯದಲ್ಲಿ ಉದ್ವಿಗ್ನತೆ ಉಂಟಾಗಿತ್ತು.

ಇದೊಂದು ಕೊಲೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು, ಬಜರಂಗದಳ ಹಾಗೂ ಸ್ಥಳೀಯ ಶಾಸಕರು ಸೇರಿದಂತೆ ಬಲಪಂಥೀಯ ಸಂಘಟನೆಗಳು ಮೇಸ್ತಾ ಸಾವಿನ ವಿರುದ್ಧ ಪ್ರತಿಭಟನೆ ನಡೆಸಿದ್ದವು.

ಶಾಸಕ ಹಾಗೂ ಹಾಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಬಿಜೆಪಿ ಕಾರ್ಯಕರ್ತರು, ಬಜರಂಗದಳ ಕಾರ್ಯಕರ್ತರು ಹಾಗೂ ಇತರರ ವಿರುದ್ಧವೂ ಪ್ರಕರಣ ದಾಖಲಾಗಿತ್ತು.

ಇದೀಗ, ಗಲಭೆಗೆ ಸಂಬಂಧಿಸಿದ ಎಲ್ಲಾ 112 ಜನರ ಮೇಲಿನ ಪ್ರಕರಣಗಳನ್ನು ಹಿಂಪಡೆಯಲು ಸರ್ಕಾರ ಆದೇಶಿಸಿದೆ.

ಮೆಸ್ತಾ ಸಾವಿನ ಪ್ರಕರಣ

ಕಳೆದ ವರ್ಷ, ಕೇಂದ್ರೀಯ ತನಿಖಾ ದಳ (ಸಿಬಿಐ) ಮೆಸ್ತಾ ಪ್ರಕರಣದ ಕುರಿತು ‘ಬಿ’ ರಿಪೋರ್ಟ್ ಸಲ್ಲಿಸಿತು. ಮೇಸ್ತಾ ಸಾವು ಆಕಸ್ಮಿಕ ಎಂದು ಘೋಷಿಸಿದೆ.

ಮೆಸ್ತಾ ಅವರ ದೇಹದಲ್ಲಿ ಯಾವುದೇ ಬಾಹ್ಯ ಗಾಯಗಳು ಅಥವಾ ಹಲ್ಲೆಯ ಗುರುತುಗಳಿಲ್ಲ ಎಂದು ಸಿಬಿಐ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಅವರನ್ನು ಚಿತ್ರಹಿಂಸೆ ನೀಡಿ ಕೊಲ್ಲಲಾಗಿದೆ ಎಂಬುದು ಸುಳ್ಳು ಎಂದಿತ್ತು ಸಿಬಿಐ.

ಪ್ರಕರಣಕ್ಕೆ ಸಂಬಂಧಿಸಿದಂತೆ ಜಮಾಲ್ ಆಜಾದ್, ಆಶಿಫ್ ರಫೀಕ್, ಫೈಝಲ್, ಸಲೀಂ ಮತ್ತು ಇಮ್ತಿಯಾಜ್ ಸೇರಿದಂತೆ ಐವರನ್ನು ಬಂಧಿಸಲಾಗಿತ್ತು.

ಪರೇಶ್ ಮೇಸ್ತಾ ಅವರ ತಂದೆ ಕಮಲಾಕರ್ ಮೇಸ್ತಾ, ಬಲಪಂಥೀಯ ಸಂಘಟನೆಗಳಾದ ಶ್ರೀರಾಮ ಸೇನೆ, ಹಿಂದೂ ಜನಜಾಗೃತಿ ಸಮಿತಿಯು ಸಿಬಿಐ ವರದಿಯನ್ನು ಒಪ್ಪಿಕೊಂಡಿಲ್ಲ. ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಬೇಕು ಎಂದು ಒತ್ತಾಯಿಸಲಾಗಿದೆ.

ಮೇಸ್ತಾ ಸಾವು ರಾಜಕೀಯಕ್ಕೆ ಬಳಕೆ

2017ರ ಡಿಸೆಂಬರ್ 6ರಂದು ಹೊನ್ನಾವರದಲ್ಲಿ ನಡೆದ ಗಲಭೆಯಲ್ಲಿ ಮೀನುಗಾರ ಯುವಕ ಪರೇಶ್ ಮೇಸ್ತಾ ಕಾಣೆಯಾಗಿದ್ದ. ಎಂಟರಂದು ಹೊನ್ನಾವರ ನಗರದ ಶನಿದೇವಾಸ್ಥಾನದ ಹಿಂಭಾಗದ ಶೆಟ್ಟಿ ಕೆರೆಯಲ್ಲಿ ಮೇಸ್ತಾ ಶವವಾಗಿ ಪತ್ತೆಯಾಗಿದ್ದ. ಯುವಕನನ್ನು ಮುಸ್ಲಿಮರು ಹತ್ಯೆ ಮಾಡಿದ್ದಾರೆಂದು ಸಂಘಪರಿವಾರ ಹಾಗೂ ಬಿಜೆಪಿ ಆರೋಪಿಸಿತ್ತು. ಮೃತ ಮೇಸ್ತಾನನ್ನು ಹಿಂದೂ ಕಾರ್ಯಕರ್ತ ಎಂದು ಬಿಂಬಿಸಲಾಯಿತು. ಆಗಿನ ಆಡಳಿತರೂಢ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಹರಿಹಾಯ್ದಿತ್ತು.

ಪರೇಶ್ ಮೆಸ್ತಾ ಸಾವು ಮುಂದಿಟ್ಟು ಬಿಜೆಪಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಂಡಿತ್ತು. ಆಗಿನ ಗೃಹ ಮಂತ್ರಿ ರಾಮಲಿಂಗ ರೆಡ್ಡಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿ ವಿಸ್ತೃತ ವಿಚಾರಣೆಗೆ ಕೇಳಿತ್ತು. ಅದಾಗಿಯೂ 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಉತ್ತರ ಕನ್ನಡ, ಉಡುಪಿ, ದಕ, ಶಿವಮೊಗ್ಗ ಸೇರಿದಂತೆ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಬಿರುಸಿನ ಪ್ರಚಾರ ನಡೆಸಿತ್ತು.

 ಇದನ್ನೂ ಓದಿರಿ: FLASHBACK| ಪರೇಶ್ ಮೇಸ್ತಾ ಸಾವಾದಾಗ ಬಿಜೆಪಿ ನಾಯಕರು ವರ್ತಿಸಿದ್ದು‌ ಹೀಗೆ…

ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಶೋಭಾ ಕರಂದ್ಲಾಜೆ ತರಹೇವಾರಿ ಹೇಳಿಕೆಗಳನ್ನು ನೀಡಿದ್ದರು. “ಈಶ್ವರಪ್ಪನವರ ನೇತೃತ್ವದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿದ್ದೇವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ. ಜಿಹಾದಿಗಳ ಪರವಾಗಿ ಸರ್ಕಾರ ಹಾಗೂ ಪೊಲೀಸರೇ ನಿಂತು ಹಿಂದೂಗಳಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂಬುದನ್ನು ರಾಜ್ಯಪಾಲರಿಗೆ ನೀಡಿದ್ದೇವೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು ನಡೆಯುತ್ತಿರುವ ಘಟನೆಗಳಿಗೆ ರಾಜ್ಯ ಸರ್ಕಾರವೇ ಪ್ರಮುಖವಾದ ಕಾರಣ. ಪ್ರಕರಣವನ್ನು ಮುಚ್ಚಿಹಾಕುವ ಗುಮಾನಿ ಆ ಭಾಗದ ಜನರಿಗೆ ಬರುತ್ತಿದೆ” ಎಂದು ಖಾಸಗಿ ಮಾಧ್ಯಮವೊಂದಕ್ಕೆ ಹೇಳಿಕೆ ನೀಡಿದ್ದರು.

ಇಡೀ ದೇಶದ ಶೋಷಿತ ಹಾಗೂ ಅಲಕ್ಷಿತ ಸಮುದಾಯಗಳನ್ನು ರಕ್ಷಿಸುತ್ತಿರುವ ಸಂವಿಧಾನವನ್ನೇ ಬದಲಿಸುವುದಾಗಿ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದ ಸಂಸದ ಅನಂತಕುಮಾರ್‌ ಹೆಗಡೆ, “ಮೇಸ್ತಾನ ಪ್ರತಿ ಹನಿ ರಕ್ತಕ್ಕೂ ನ್ಯಾಯ ದೊರಕಿಸದೆ ಬಿಡುವುದಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...