Homeಮುಖಪುಟದುರಹಂಕಾರಿ ರಾಜ ಜನರ ದನಿಯನ್ನು ಬೀದಿಬೀದಿಯಲ್ಲಿ ಹತ್ತಿಕ್ಕುವನು: ಕುಸ್ತಿಪಟುಗಳ ಮೇಲಿನ ಕ್ರಮಕ್ಕೆ ಪ್ರತಿಪಕ್ಷಗಳ ಪ್ರತಿಕ್ರಿಯೆ

ದುರಹಂಕಾರಿ ರಾಜ ಜನರ ದನಿಯನ್ನು ಬೀದಿಬೀದಿಯಲ್ಲಿ ಹತ್ತಿಕ್ಕುವನು: ಕುಸ್ತಿಪಟುಗಳ ಮೇಲಿನ ಕ್ರಮಕ್ಕೆ ಪ್ರತಿಪಕ್ಷಗಳ ಪ್ರತಿಕ್ರಿಯೆ

- Advertisement -
- Advertisement -

ದೆಹಲಿಯ ಜಂತರ್‌ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಖ್ಯಾತ ಕುಸ್ತಿಪಟುಗಳ ಮೇಲೆ ದೆಹಲಿ ಪೊಲೀಸರು ಜರುಗಿಸಿರುವ ಕ್ರಮದ ವಿರುದ್ಧ ಪ್ರತಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ.

“ದುರಹಂಕಾರಿ ರಾಜ ಬೀದಿಗಳಲ್ಲಿ ಸಾರ್ವಜನಿಕರ ಧ್ವನಿಯನ್ನು ಹತ್ತಿಕ್ಕುವನು” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಒಂದೆಡೆ ನೂತನ ಸಂಸತ್ ಭವನದ ಉದ್ಘಾಟನೆಯಲ್ಲಿ ಕೇಂದ್ರ ಸರ್ಕಾರ ಮುಳುಗಿದ್ದರೆ, ಸಂಸತ್ ಭವನದಿಂದ ಸುಮಾರು ಎರಡು ಕಿಮೀ ದೂರದಲ್ಲಿ ಪ್ರತಿಭಟಿಸುತ್ತಿದ್ದ ಕುಸ್ತಿಪಟುಗಳನ್ನು ಬಲವಂತವಾಗಿ ಪೊಲೀಸರು ಬಂಧಿಸಿರುವುದು ಆಕ್ರೋಶಕ್ಕೆ ಗುರಿಯಾಗಿದೆ.

ಕುಸ್ತಿಪಟುಗಳಾದ ವಿನೇಶ್ ಫೋಗಟ್, ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಲೈಂಗಿಕ ಕಿರುಕುಳದ ಆರೋಪ ಹೊತ್ತಿರುವ ಭಾರತೀಯ ಕುಸ್ತಿ ಫೆಡರೇಷನ್‌ ಮುಖ್ಯಸ್ಥ ಬ್ರಿಜ್‌ಭೂಷಣ್ ಶರಣ್ ಸಿಂಗ್ ಬಂಧಿಸುವಂತೆ ಆಗ್ರಹಿಸಿ ನೂತನ ಸಂಸತ್ ಭವನದ ಮುಂದೆ ಪ್ರತಿಭಟಿಸಲು ಕುಸ್ತಿಪಟುಗಳು ಮುಂದಾಗಿದ್ದರು.

ದೆಹಲಿ ಪೊಲೀಸರ ಕ್ರಮವು ರಾಜಕೀಯ ವಲಯದಲ್ಲಿ ತೀವ್ರ ಖಂಡನೆಗೆ ಒಳಗಾಗಿದೆ. “ಬಿಜೆಪಿ ಸರ್ಕಾರವು ಅನ್ಯಾಯ ಎಸಗುತ್ತಿದೆ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಹತ್ತಿಕ್ಕುತ್ತಿದೆ” ಎಂದು ಪ್ರತಿಪಕ್ಷದ ನಾಯಕರು ಆರೋಪಿಸಿದ್ದಾರೆ.

ಇದನ್ನೂ ಓದಿರಿ: ಪ್ರತಿಭಟನಾನಿರತ ಕುಸ್ತಿಪಟುಗಳ ಮೇಲೆ ಪೊಲೀಸ್ ದರ್ಪ; ಭುಗಿಲೆದ್ದ ಜನಾಕ್ರೋಶ

ಪೊಲೀಸರ ವರ್ತನೆಯನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಖಂಡಿಸಿದ್ದಾರೆ. “ಭಾರತದ ಹೆಸರನ್ನು ಎತ್ತರಕ್ಕೆ ಕೊಂಡೊಯ್ಯುವ ನಮ್ಮ ಕ್ರೀಡಾಪಟುಗಳೊಂದಿಗೆ ಇಂತಹ ವರ್ತನೆಯು ತುಂಬಾ ತಪ್ಪು ಮತ್ತು ಖಂಡನೀಯ” ಎಂದು ಅವರು ಟ್ವೀಟ್ ಮಾಡಿದ್ದಾರೆ.

ರಾಹುಲ್ ಗಾಂಧಿ ಪ್ರತಿಕ್ರಿಯಿಸಿ, “ಪ್ರಧಾನಿ ಮೋದಿಯವರು ನೂತನ ಸಂಸತ್ ಭವನದ ಉದ್ಘಾಟನೆಯನ್ನು ಪಟ್ಟಾಭಿಷೇಕದ ಸಮಾರಂಭವೆಂದು ಪರಿಗಣಿಸಿದ್ದಾರೆ. ಪಟ್ಟಾಭಿಷೇಕ ಮುಗಿದಿದೆ – ದುರಹಂಕಾರಿ ರಾಜ ಬೀದಿಬೀದಿಗಳಲ್ಲಿ ಸಾರ್ವಜನಿಕರ ಧ್ವನಿಯನ್ನು ಹತ್ತಿಕ್ಕುತ್ತಿದ್ದಾನೆ” ಎಂದು ಕಿಡಿಕಾರಿದ್ದಾರೆ.

ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, “ಬಿಜೆಪಿ ಸರ್ಕಾರದ ದುರಹಂಕಾರವು ಎಷ್ಟು ಹೆಚ್ಚಾಗಿದೆ ಎಂದರೆ- ಸರ್ಕಾರವು ನಮ್ಮ ಮಹಿಳಾ ಆಟಗಾರರ ಧ್ವನಿಯನ್ನು ನಿರ್ದಯವಾಗಿ ಬೂಟಿನ ಕೆಳಗೆ ಹಾಕಿ ತುಳಿಯುತ್ತಿದೆ” ಎಂದು ಟೀಕಿಸಿದ್ದಾರೆ.

“ಕ್ರೀಡಾಪಟುಗಳ ಎದೆಯ ಮೇಲಿರುವ ಪದಕಗಳು ನಮ್ಮ ದೇಶದ ಹೆಮ್ಮೆ” ಎಂದು ಅವರು ತಿಳಿಸಿದ್ದಾರೆ.

ಆಡಳಿತಾರೂಢ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, “ಪ್ರಜಾಪ್ರಭುತ್ವ ಎಂದರೆ ಕೇವಲ ಕಟ್ಟಡಗಳಲ್ಲ, ಸಾರ್ವಜನಿಕರ ಧ್ವನಿಯ ಮೂಲಕ ಪ್ರಜಾಪ್ರಭುತ್ವ ನಡೆಯುತ್ತದೆ” ಎಂದು ಸರ್ಕಾರಕ್ಕೆ ಕಿವಿಹಿಂಡಿದ್ದಾರೆ.

ಇದನ್ನೂ ಓದಿರಿ: ಮಹಿಳಾ ಕುಸ್ತಿಪಟುಗಳು ಭಾರತದ ’ಬೇಟಿ’ಗಳಲ್ಲವೇ?

“ಸರ್ವಾಧಿಕಾರಿ ಧೋರಣೆಯ ಮೂಲಕ ಮಹಿಳಾ ಆಟಗಾರ್ತಿಯರ ಮೇಲೆ ಬೀದಿಬೀದಿಯಲ್ಲಿ ಹಲ್ಲೆ ಮಾಡಲಾಗಿದೆ. ಬಿಜೆಪಿ-ಆರ್‌ಎಸ್‌ಎಸ್ ಆಡಳಿತಗಾರರ 3 ಸುಳ್ಳುಗಳು ಈಗ ದೇಶದ ಮುಂದೆ ಬಯಲಾಗಿವೆ 1. ಪ್ರಜಾಪ್ರಭುತ್ವ 2. ರಾಷ್ಟ್ರೀಯತೆ 3. ಬೇಟಿ ಬಜಾವೋ” ಎಂದು ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿದ್ದಾರೆ.

“ಮೋದಿ ಸರ್ಕಾರ ಇಂದು ಹೊಸ ಸಂಸತ್ ಭವನವನ್ನು ಉದ್ಘಾಟಿಸಿರಬಹುದು. ಆದರೆ ಸರ್ಕಾರ ಪ್ರಜಾಪ್ರಭುತ್ವದ ಬಗ್ಗೆ ನಿಜವಾಗಿಯೂ ಏನು ಯೋಚಿತ್ತಿದೆ ಎಂಬುದನ್ನು ದೆಹಲಿ ಪೊಲೀಸರು ಬೀದಿಯಲ್ಲಿ ತೋರಿಸಿದ್ದಾರೆ” ಎಂದು ಸಿಪಿಐ(ಎಂ) ಅಭಿಪ್ರಾಯಪಟ್ಟಿದೆ.

ತೃಣಮೂಲ ಕಾಂಗ್ರೆಸ್ ವರಿಷ್ಠೆ ಮತ್ತು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಪ್ರತಿಕ್ರಿಯಿಸಿ ಕುಸ್ತಿಪಟುಗಳ ವಿರುದ್ಧ ದೆಹಲಿ ಪೊಲೀಸರು ತೆಗೆದುಕೊಂಡಿರುವ ಕ್ರಮವನ್ನು ಖಂಡಿಸಿದ್ದಾರೆ. “ನಮ್ಮ ಚಾಂಪಿಯನ್‌ಗಳನ್ನು ಈ ರೀತಿ ನಡೆಸಿಕೊಳ್ಳುವುದು ನಾಚಿಕೆಗೇಡಿನ ಸಂಗತಿ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...