Homeಮುಖಪುಟದುರಹಂಕಾರಿ ರಾಜ ಜನರ ದನಿಯನ್ನು ಬೀದಿಬೀದಿಯಲ್ಲಿ ಹತ್ತಿಕ್ಕುವನು: ಕುಸ್ತಿಪಟುಗಳ ಮೇಲಿನ ಕ್ರಮಕ್ಕೆ ಪ್ರತಿಪಕ್ಷಗಳ ಪ್ರತಿಕ್ರಿಯೆ

ದುರಹಂಕಾರಿ ರಾಜ ಜನರ ದನಿಯನ್ನು ಬೀದಿಬೀದಿಯಲ್ಲಿ ಹತ್ತಿಕ್ಕುವನು: ಕುಸ್ತಿಪಟುಗಳ ಮೇಲಿನ ಕ್ರಮಕ್ಕೆ ಪ್ರತಿಪಕ್ಷಗಳ ಪ್ರತಿಕ್ರಿಯೆ

- Advertisement -
- Advertisement -

ದೆಹಲಿಯ ಜಂತರ್‌ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಖ್ಯಾತ ಕುಸ್ತಿಪಟುಗಳ ಮೇಲೆ ದೆಹಲಿ ಪೊಲೀಸರು ಜರುಗಿಸಿರುವ ಕ್ರಮದ ವಿರುದ್ಧ ಪ್ರತಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ.

“ದುರಹಂಕಾರಿ ರಾಜ ಬೀದಿಗಳಲ್ಲಿ ಸಾರ್ವಜನಿಕರ ಧ್ವನಿಯನ್ನು ಹತ್ತಿಕ್ಕುವನು” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಒಂದೆಡೆ ನೂತನ ಸಂಸತ್ ಭವನದ ಉದ್ಘಾಟನೆಯಲ್ಲಿ ಕೇಂದ್ರ ಸರ್ಕಾರ ಮುಳುಗಿದ್ದರೆ, ಸಂಸತ್ ಭವನದಿಂದ ಸುಮಾರು ಎರಡು ಕಿಮೀ ದೂರದಲ್ಲಿ ಪ್ರತಿಭಟಿಸುತ್ತಿದ್ದ ಕುಸ್ತಿಪಟುಗಳನ್ನು ಬಲವಂತವಾಗಿ ಪೊಲೀಸರು ಬಂಧಿಸಿರುವುದು ಆಕ್ರೋಶಕ್ಕೆ ಗುರಿಯಾಗಿದೆ.

ಕುಸ್ತಿಪಟುಗಳಾದ ವಿನೇಶ್ ಫೋಗಟ್, ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಲೈಂಗಿಕ ಕಿರುಕುಳದ ಆರೋಪ ಹೊತ್ತಿರುವ ಭಾರತೀಯ ಕುಸ್ತಿ ಫೆಡರೇಷನ್‌ ಮುಖ್ಯಸ್ಥ ಬ್ರಿಜ್‌ಭೂಷಣ್ ಶರಣ್ ಸಿಂಗ್ ಬಂಧಿಸುವಂತೆ ಆಗ್ರಹಿಸಿ ನೂತನ ಸಂಸತ್ ಭವನದ ಮುಂದೆ ಪ್ರತಿಭಟಿಸಲು ಕುಸ್ತಿಪಟುಗಳು ಮುಂದಾಗಿದ್ದರು.

ದೆಹಲಿ ಪೊಲೀಸರ ಕ್ರಮವು ರಾಜಕೀಯ ವಲಯದಲ್ಲಿ ತೀವ್ರ ಖಂಡನೆಗೆ ಒಳಗಾಗಿದೆ. “ಬಿಜೆಪಿ ಸರ್ಕಾರವು ಅನ್ಯಾಯ ಎಸಗುತ್ತಿದೆ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಹತ್ತಿಕ್ಕುತ್ತಿದೆ” ಎಂದು ಪ್ರತಿಪಕ್ಷದ ನಾಯಕರು ಆರೋಪಿಸಿದ್ದಾರೆ.

ಇದನ್ನೂ ಓದಿರಿ: ಪ್ರತಿಭಟನಾನಿರತ ಕುಸ್ತಿಪಟುಗಳ ಮೇಲೆ ಪೊಲೀಸ್ ದರ್ಪ; ಭುಗಿಲೆದ್ದ ಜನಾಕ್ರೋಶ

ಪೊಲೀಸರ ವರ್ತನೆಯನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಖಂಡಿಸಿದ್ದಾರೆ. “ಭಾರತದ ಹೆಸರನ್ನು ಎತ್ತರಕ್ಕೆ ಕೊಂಡೊಯ್ಯುವ ನಮ್ಮ ಕ್ರೀಡಾಪಟುಗಳೊಂದಿಗೆ ಇಂತಹ ವರ್ತನೆಯು ತುಂಬಾ ತಪ್ಪು ಮತ್ತು ಖಂಡನೀಯ” ಎಂದು ಅವರು ಟ್ವೀಟ್ ಮಾಡಿದ್ದಾರೆ.

ರಾಹುಲ್ ಗಾಂಧಿ ಪ್ರತಿಕ್ರಿಯಿಸಿ, “ಪ್ರಧಾನಿ ಮೋದಿಯವರು ನೂತನ ಸಂಸತ್ ಭವನದ ಉದ್ಘಾಟನೆಯನ್ನು ಪಟ್ಟಾಭಿಷೇಕದ ಸಮಾರಂಭವೆಂದು ಪರಿಗಣಿಸಿದ್ದಾರೆ. ಪಟ್ಟಾಭಿಷೇಕ ಮುಗಿದಿದೆ – ದುರಹಂಕಾರಿ ರಾಜ ಬೀದಿಬೀದಿಗಳಲ್ಲಿ ಸಾರ್ವಜನಿಕರ ಧ್ವನಿಯನ್ನು ಹತ್ತಿಕ್ಕುತ್ತಿದ್ದಾನೆ” ಎಂದು ಕಿಡಿಕಾರಿದ್ದಾರೆ.

ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, “ಬಿಜೆಪಿ ಸರ್ಕಾರದ ದುರಹಂಕಾರವು ಎಷ್ಟು ಹೆಚ್ಚಾಗಿದೆ ಎಂದರೆ- ಸರ್ಕಾರವು ನಮ್ಮ ಮಹಿಳಾ ಆಟಗಾರರ ಧ್ವನಿಯನ್ನು ನಿರ್ದಯವಾಗಿ ಬೂಟಿನ ಕೆಳಗೆ ಹಾಕಿ ತುಳಿಯುತ್ತಿದೆ” ಎಂದು ಟೀಕಿಸಿದ್ದಾರೆ.

“ಕ್ರೀಡಾಪಟುಗಳ ಎದೆಯ ಮೇಲಿರುವ ಪದಕಗಳು ನಮ್ಮ ದೇಶದ ಹೆಮ್ಮೆ” ಎಂದು ಅವರು ತಿಳಿಸಿದ್ದಾರೆ.

ಆಡಳಿತಾರೂಢ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, “ಪ್ರಜಾಪ್ರಭುತ್ವ ಎಂದರೆ ಕೇವಲ ಕಟ್ಟಡಗಳಲ್ಲ, ಸಾರ್ವಜನಿಕರ ಧ್ವನಿಯ ಮೂಲಕ ಪ್ರಜಾಪ್ರಭುತ್ವ ನಡೆಯುತ್ತದೆ” ಎಂದು ಸರ್ಕಾರಕ್ಕೆ ಕಿವಿಹಿಂಡಿದ್ದಾರೆ.

ಇದನ್ನೂ ಓದಿರಿ: ಮಹಿಳಾ ಕುಸ್ತಿಪಟುಗಳು ಭಾರತದ ’ಬೇಟಿ’ಗಳಲ್ಲವೇ?

“ಸರ್ವಾಧಿಕಾರಿ ಧೋರಣೆಯ ಮೂಲಕ ಮಹಿಳಾ ಆಟಗಾರ್ತಿಯರ ಮೇಲೆ ಬೀದಿಬೀದಿಯಲ್ಲಿ ಹಲ್ಲೆ ಮಾಡಲಾಗಿದೆ. ಬಿಜೆಪಿ-ಆರ್‌ಎಸ್‌ಎಸ್ ಆಡಳಿತಗಾರರ 3 ಸುಳ್ಳುಗಳು ಈಗ ದೇಶದ ಮುಂದೆ ಬಯಲಾಗಿವೆ 1. ಪ್ರಜಾಪ್ರಭುತ್ವ 2. ರಾಷ್ಟ್ರೀಯತೆ 3. ಬೇಟಿ ಬಜಾವೋ” ಎಂದು ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿದ್ದಾರೆ.

“ಮೋದಿ ಸರ್ಕಾರ ಇಂದು ಹೊಸ ಸಂಸತ್ ಭವನವನ್ನು ಉದ್ಘಾಟಿಸಿರಬಹುದು. ಆದರೆ ಸರ್ಕಾರ ಪ್ರಜಾಪ್ರಭುತ್ವದ ಬಗ್ಗೆ ನಿಜವಾಗಿಯೂ ಏನು ಯೋಚಿತ್ತಿದೆ ಎಂಬುದನ್ನು ದೆಹಲಿ ಪೊಲೀಸರು ಬೀದಿಯಲ್ಲಿ ತೋರಿಸಿದ್ದಾರೆ” ಎಂದು ಸಿಪಿಐ(ಎಂ) ಅಭಿಪ್ರಾಯಪಟ್ಟಿದೆ.

ತೃಣಮೂಲ ಕಾಂಗ್ರೆಸ್ ವರಿಷ್ಠೆ ಮತ್ತು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಪ್ರತಿಕ್ರಿಯಿಸಿ ಕುಸ್ತಿಪಟುಗಳ ವಿರುದ್ಧ ದೆಹಲಿ ಪೊಲೀಸರು ತೆಗೆದುಕೊಂಡಿರುವ ಕ್ರಮವನ್ನು ಖಂಡಿಸಿದ್ದಾರೆ. “ನಮ್ಮ ಚಾಂಪಿಯನ್‌ಗಳನ್ನು ಈ ರೀತಿ ನಡೆಸಿಕೊಳ್ಳುವುದು ನಾಚಿಕೆಗೇಡಿನ ಸಂಗತಿ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...