Homeಕರ್ನಾಟಕ'ಒಂದು ಕಡೆ ಸಫಾರಿ! ಇನ್ನೊಂದು ಕಡೆ ಸುಪಾರಿ!': ಮೋದಿ ನಡೆಸಿದ ಸಫಾರಿ ಕುರಿತು ಎಚ್‌ಡಿಕೆ ಟೀಕೆ

‘ಒಂದು ಕಡೆ ಸಫಾರಿ! ಇನ್ನೊಂದು ಕಡೆ ಸುಪಾರಿ!’: ಮೋದಿ ನಡೆಸಿದ ಸಫಾರಿ ಕುರಿತು ಎಚ್‌ಡಿಕೆ ಟೀಕೆ

- Advertisement -
- Advertisement -

”ಸ್ವಯಂ ಘೋಷಿತ ದೇಶೋದ್ಧಾರಕ ಪಕ್ಷವಾದ ಬಿಜೆಪಿಯ ರಾಜಕಾರಣವೇ ಅನುಮಾನಾಸ್ಪದ. ಒಂದೆಡೆ ಉದ್ಧರಿಸುವ ಮಾತು, ಇನ್ನೊಂದೆಡೆ ಕತ್ತರಿಸುವ ಕೆಲಸ. ಮಾತು ಒಂದು, ಕೃತಿ ಇನ್ನೊಂದು, ಇದು ಬಿಜೆಪಿಯ (ಭರ)ವರಸೆ” ಎಂದು ಬಿಜೆಪಿ ವಿರುದ್ಧ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಟೀಕೆ ಮಾಡಿದ್ದಾರೆ.

ಬಂಡೀಪುರದಲ್ಲಿ ಪ್ರಧಾನಿ ಮೋದಿ ನಡೆಸಿದ ಸಫಾರಿ ಹಾಗೂ ನಂದಿನಿ ಹಾಲಿನ ವಿಚಾರವಾಗಿ ಕುಮಾರಸ್ವಾಮಿ ಅವರು ಸರಣಿ ಟ್ವೀಟ್ ಮಾಡಿದ್ದಾರೆ. ”ಒಂದು ಕಡೆ ಸಫಾರಿ! ಇನ್ನೊಂದು ಕಡೆ ಸುಪಾರಿ!! ಇದು ಬಿಜೆಪಿಯು ಆದಿಯಿಂದ ನಡೆದುಕೊಂಡು ಬಂದ ದಾರಿ. ಕೆಎಂಎಫ್ ಮತ್ತು ನಂದಿನಿ ವಿಷಯದಲ್ಲೂ ಆ ಪಕ್ಷದ್ದು ಅದೇ ವರಸೆ. ಸ್ಲೋಗನ್ ನಲ್ಲಿ ಮಾತ್ರ ‘ಬಿಜೆಪಿಯೇ ಭರವಸೆ’, ಇದೇ ನೋಡಿ ಅದರ ಅಸಲಿ ವರಸೆ!” ಎಂದು ಟೀಕಿಸಿದ್ದಾರೆ.

”ಪ್ರಧಾನಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿ ಅವರು ಚುನಾವಣೆ ಹೊತ್ತಿನಲ್ಲಿ ತಮ್ಮೆಲ್ಲ ಅಗಾಧ ಕಾರ್ಯಭಾರ ಬದಿಗಿಟ್ಟು ಸಫಾರಿ ಮಾಡಿಹೋಗಿದ್ದಾರೆ. ಸ್ಥಳಕ್ಕೊಂದು ಪೋಷಾಕು ಧರಿಸುವ ಅವರ ಬಗ್ಗೆ ಮಾತಾಡಿದರೆ, ನನಗೆ ಅವರ ಧಿರಿಸಿನ ಬಗ್ಗೆ ಗೊತ್ತೇ ಇಲ್ಲ ಎಂದು ಸಚಿವ ಶ್ರೀ ಅಶ್ವತ್ಥ್ ನಾರಾಯಣ್ ಅವರ ಕುಹಕದ ಮಾತುಗಳನ್ನಾಡುತ್ತಾರೆ” ಎಂದು ಮೋದಿ ಅವರ ಕ್ಷಣಕ್ಕೊಮ್ಮೆ ಬದಲಾಯಿಸುವ ಅವರ ಬಟ್ಟೆಯ ಬಗ್ಗೆ ಹೆಚ್‌ಡಿಕೆ ಟೀಕಿಸಿದ್ದಾರೆ.

”ಇನ್ನೊಬ್ಬರು, ಸಿಟಿ ರವಿ ಎನ್ನುವ ಮಹಾಶಯರು, ಮೋದಿ ಅವರ ಬಗ್ಗೆ ಟೀಕೆ ಮಾಡಿದರೆ ಅವರ ಎತರಕ್ಕೆ ಏರಲು ಸಾಧ್ಯವಿಲ್ಲ ಎಂದು ಆಣಿಮುತ್ತು ಉದುರಿಸಿದ್ದಾರೆ. ನಾವು ಅವರ ಮಟ್ಟಕ್ಕೆ ಏರುವುದೂ ಇಲ್ಲ, ಸಿ.ಟಿ.ರವಿ ಅವರ ಮಟ್ಟಕ್ಕೆ ಇಳಿಯುವುದೂ ಇಲ್ಲ. ಆದರೆ, ಕರ್ನಾಟಕವನ್ನು ಗುಜರಾತಿಗಳಿಗೆ ಒತ್ತೆ ಇಡುವ ಪಾಪದ ಕೆಲಸವನ್ನಂತು ನಾವು ಮಾಡುತ್ತಿಲ್ಲ” ಎಂದು ಸಿಟಿ ರವಿ ಅವರಿಗೆ ತಿರುಗೇಟು ನೀಡಿದ್ದಾರೆ.

”ಅಸಲಿ ವಿಷಯ ಅದಲ್ಲ! ಈಗಲ್ಲ, ನರೇಂದ್ರ ಮೋದಿ ಅವರು ಗುಜರಾತ್ ಮುಖ್ಯಮಂತ್ರಿ ಆಗಿದ್ದಾಗಲೇ ಕೆಎಂಎಫ್ ಅನ್ನು ಮುಗಿಸಲು ಸುಪಾರಿ ಕೊಡಲಾಗಿತ್ತು!! ಅಂದರೆ 2008ರಲ್ಲೇ ಕನ್ನಡಿಗರ ಮೇಲೆ ಅಮುಲ್ ಅನ್ನು ಹೇರಿ, ನಂದಿನಿಯ ಕತ್ತು ಹಿಸುಕುವ ಕರಾಳ ಪ್ರಯತ್ನ ನಡೆದಿತ್ತು” ಎಂದು ಕುಮಾರಸ್ವಾಮಿ ಅವರು ಹೊಸ ಬಾಂಬ್ ಸಿಡಿಸಿದ್ದಾರೆ.

ಇದನ್ನೂ ಓದಿ: ಮೋದಿಯವರ ಶೈಕ್ಷಣಿಕ ಕೊರತೆ ಭಾರತಕ್ಕೆ ಅಪಾಯಕಾರಿ: ಸಿಸೋಡಿಯಾ ಬಹಿರಂಗ ಪತ್ರ

”ಆಗ ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿ ಅಮುಲ್ ಮಾರಾಟ ಘಟಕ ಸ್ಥಾಪಿಸಲು ಹೊರಟಿತ್ತು ಅಂದಿನ ರಾಜ್ಯ ಬಿಜೆಪಿ ಸರಕಾರ. ಅಂದರೆ, 15 ವರ್ಷಗಳ ಹಿಂದೆಯೇ ಅಮುಲ್ಅನ್ನು ಉದ್ಧರಿಸಲು, ನಂದಿನಿಯ ಕತ್ತು ಕತ್ತರಿಸಲು ಬಿಜೆಪಿ ಹೊರಟಿತ್ತು” ಎಂದು ಕಿಡಿಕಾರಿದ್ದಾರೆ.

”ಅಂದು ಅಮುಲ್‌ ಘಟಕದ ಬಗ್ಗೆ ಜೆಡಿಎಸ್ ಪಕ್ಷವು ಭಾರೀ ವಿರೋಧ ವ್ಯಕ್ತಪಡಿಸಿತ್ತು, ಕೆಎಂಎಫ್ʼನ ಅಂದಿನ ಅಧ್ಯಕ್ಷರಾಗಿದ್ದ ಎಚ್‌ಡಿ ರೇವಣ್ಣ ಅವರು, “ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಅಮುಲ್ ಹಾಲು ಮಾರಾಟಕ್ಕೆ ಅವಕಾಶ ಕೊಡುವುದಿಲ್ಲ” ಎಂದು ಕಡ್ಡಿತುಂಡು ಮಾಡಿದಂತೆ ಹೇಳಿದ್ದರು” ಎಂಬುದಾಗಿ ತಿಳಿಸಿದ್ದಾರೆ.

”ಅಂದು ಬಿಜೆಪಿಗರು ಮೋದಿ ಅವರನ್ನು ಮೆಚ್ಚಿಸಲು ಅಮುಲ್ ಪರ ವಕಾಲತ್ತು ವಹಿಸಿ, ನಂದಿನಿಯನ್ನು ಮುಗಿಸಲು ಹೊರಟಿದ್ದರು. ಅಂದಿನ ಮುಖ್ಯಮಂತ್ರಿಗಳೂ ಸೇರಿ ಬಿಜೆಪಿ ಮುಂಚೂಣಿ ನಾಯಕರು ಅಮುಲ್ ಪರ ಬ್ಯಾಟ್ ಬೀಸಿದ್ದರು. ಈಗ ಪಾತ್ರಗಳು ಬದಲಾಗಿವೆ. ಸಿಟಿ ರವಿ, ಡಾ.ಸುಧಾಕರ್, ಡಾ. ಅಶ್ವತ್ಥ್ ನಾರಾಯಣ ಇತರರು ರಂಗದ ಮೇಲಿದ್ದಾರಷ್ಟೇ” ಎಂದು ಹೇಳಿದ್ದಾರೆ.

”ಕರ್ನಾಟಕವನ್ನು ಗುಜರಾತಿನ ವಸಾಹತು ಮಾಡುವ ಬಿಜೆಪಿಯ ಹುನ್ನಾರ ಇಂದು ನಿನ್ನೆಯದಲ್ಲ. ವೈಬ್ರೆಂಟ್ ಗುಜರಾತಿನ ಮಹತ್ವಾಕಾಂಕ್ಷೆಯ ಹಿಂದೆಯೇ ಕರ್ನಾಟಕವನ್ನು ಕೆಳಕ್ಕೆ ಕೆಡಹುವ ಬಿಜೆಪಿಯ ಧೂರ್ತ ಅಜೆಂಡಾ ಈ ಚುನಾವಣೆ ಹೊತ್ತಿನಲ್ಲಿ ಬಟಾ ಬಯಲಾಗಿದೆ. 15 ವರ್ಷಗಳ ಹಳೆಯ ಸಂಚಿಗೆ ಮತ್ತೆ ಜೀವ ನೀಡಲಾಗಿದೆ” ಎಂದು ಹೇಳಿದ್ದಾರೆ.

”ಕರ್ನಾಟಕದ ಬ್ಯಾಂಕುಗಳು ಹೋದವು, ಭದ್ರಾವತಿಯ ವಿಎಸ್ಎನ್ಎಲ್ ಇನ್ನೇನು ಯಾರೋ ಗುಜರಾತಿ ಉದ್ದಿಮೆದಾರನ ಪಾಲಾಗುವ ಹಂತದಲ್ಲಿದೆ. ಈಗ ನಂದಿನಿ… ಲಾಭದಾಯಕವಾಗಿರುವ ರಾಜ್ಯದ ಒಂದೊಂದೇ ಉದ್ಯಮವನ್ನು ಮುಗಿಸಲು ಕೇಂದ್ರ ಬಿಜೆಪಿ ಹೊಂಚು ಹಾಕಿರುವುದು ಸ್ಪಷ್ಟ” ಎಂದು ಟೀಕಿಸಿದ್ದಾರೆ.

”ಕೈಗಾರಿಕೆ, ಐಟಿಬಿಟಿ, ವಿಜ್ಞಾನ, ಆವಿಷ್ಕಾರ, ಉದ್ಯೋಗ ಸೃಷ್ಟಿ ಸೇರಿ ಜಿಎಸ್ ಟಿ ಕಟ್ಟುವುದರಲ್ಲಿಯೂ ಮುಂಚೂಣಿಯಲ್ಲಿರುವ ಕರ್ನಾಟಕವು, ಭಾರತವೇ ಹೆಮ್ಮೆಪಡುವ ರಾಜ್ಯ. ಇಂಥ ರಾಜ್ಯವನ್ನು ಆರ್ಥಿಕವಾಗಿ ದಿವಾಳಿಯೆಬ್ಬಿಸಿ ಶಾಶ್ವತವಾಗಿ ದಿಲ್ಲಿಯ ಮುಂದೆ ಭಿಕ್ಷಾಪಾತ್ರೆ ಹಿಡಿದು ನಿಲ್ಲುವಂತೆ ಮಾಡುವುದೇ  ಬಿಜೆಪಿಯ ಕುಟಿಲನೀತಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

”ಪ್ರತಿಯೊಂದನ್ನೂ ಪ್ರಶ್ನಿಸುವ, ನ್ಯಾಯ ಕೇಳುವ ಕನ್ನಡಿಗರನ್ನು ದುರ್ಬಲಗೊಳಿಸುವುದೂ ಎಂದರೆ, ಆರ್ಥಿಕವಾಗಿ ಕರ್ನಾಟಕದ ಬೆನ್ನುಮೂಳೆ ಮುರಿಯುವುದು. ಉತ್ತರಕ್ಕೆ ಬೆಣ್ಣೆ, ದಕ್ಷಿಣಕ್ಕೆ ಸುಣ್ಣ ಎಂಬ ನೀತಿ ಅನುಸರಿಸುವ ಬಿಜೆಪಿಯ ಡಬಲ್ ಎಂಜಿನ್ ಸರಕಾರವು, ದಕ್ಷಿಣದ ರಾಜ್ಯಗಳ ಜತೆ ಡಬಲ್ ಗೇಮ್ ಆಡುತ್ತಿದೆ.
ಇಂದು ಕರ್ನಾಟಕ; ನಾಳೆ ತಮಿಳುನಾಡು, ನಾಡಿದ್ದು ಆಂಧ್ರ ಪ್ರದೇಶ ಮತ್ತು ತೆಲಂಗಾಣ, ಆಚೆ ನಾಡಿದ್ದು ಕೇರಳ!! ಬಿಜೆಪಿಯ ಸುಪಾರಿ ಆಟ ಶುರುವಾಗಿದೆ!!!” ಎಂದು ಎಚ್ಚರಿಸಿದ್ದಾರೆ.

ಕುಮಾರಸ್ವಾಮಿ ಅವರು ಮುಂದುವರೆದು, ಸಿಆರ್‌ಪಿಎಫ್‌ ಪರೀಕ್ಷೆಯನ್ನು ಹಿಂದಿ ಹಾಗೂ ಇಂಗ್ಲೀಷ್‌ನಲ್ಲಿ ಮಾತ್ರ ಅವಕಾಶ ನೀಡಿರುವ ಬಗ್ಗೆಯೂ ಕಿಡಿಕಾರಿರುವ ಎಚ್‌ಡಿ ಕುಮಾರಸ್ವಾಮಿ ಅವರು ಸರಣಿ ಟ್ವೀಟ್ ಮಾಡಿದ್ದಾರೆ.

”9212 ಹುದ್ದೆಗಳಿಗೆ ಈ ಪರೀಕ್ಷೆ ನಡೆಸಲಾಗಿದ್ದು, ಅದರಲ್ಲಿ ಕರ್ನಾಟಕದ 466 ಹುದ್ದೆಗಳೂ ಸೇರಿವೆ. ದುರಂತವೆಂದರೆ, ಇಷ್ಟು ಹುದ್ದೆಗಳನ್ನು ಬಯಸುವ ಅಭ್ಯರ್ಥಿಗಳು ಹಿಂದಿ, ಇಂಗ್ಲಿಷ್ ನಲ್ಲಿ ಪರೀಕ್ಷೆ ಬರೆದಿದ್ದಾರೆ, ಬರೆಯುವ ಅನಿವಾರ್ಯ ಸೃಷ್ಟಿಸಲಾಗಿದೆ. ಮಾತೃಭಾಷೆಯಲ್ಲಿ ಬರೆಯುವುದನ್ನು ನಿರಾಕರಿಸುವುದು ಎಂದರೆ ಸಂವಿಧಾನಕ್ಕೆ ಎಸಗಿದ ಅಪಚಾರ” ಎಂದು ಕಿಡಿಕಾರಿದ್ದಾರೆ.

”ಕೇಂದ್ರ ಸರಕಾರ ತನ್ನ ಸುಪರ್ದಿಯಲ್ಲಿ ನಡೆಸುವ ಎಲ್ಲ ನೇಮಕಾತಿ ಪರೀಕ್ಷೆಗಳನ್ನು ಹಿಂದಿ, ಇಂಗ್ಲಿಷಿನಲ್ಲೇ ನಡೆಸುತ್ತಿದೆ. ಕೇವಲ ಹಿಂದಿ ಕೇಂದ್ರಿತ ನೇಮಕಾತಿ ಪ್ರಕ್ರಿಯೆ ಇತರೆ ಭಾಷಿಕರನ್ನು ಉದ್ಯೋಗ ವಂಚಿತರನ್ನಾಗಿಸುವುದು ಮಾತ್ರವಲ್ಲ, ಅನ್ಯಭಾಷೆಗಳನ್ನು ಹತ್ತಿಕ್ಕಿ ಹಿಂದಿ ಹೇರಿಕೆ ಮಾಡುವುದಷ್ಟೇ ದುರುದ್ದೇಶ. ಇದು ಸ್ಪಷ್ಟ” ಎಂದಿದ್ದಾರೆ.

”ಅಷ್ಟೇ ಅಲ್ಲ, ಈ ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳು ಹಿಂದಿ ಭಾಷೆಗೆ ಸಂಬಂಧಿಸಿದವು. ಅಲ್ಲಿಗೆ ಸ್ಪಷ್ಟ; ಹಿಂದಿಯೇತರ ಅಭ್ಯರ್ಥಿಗಳು ಈ ನೇಮಕಾತಿಯಲ್ಲಿ ಆಯ್ಕೆ ಆಗಲೇಬಾರದು ಹಾಗೂ ಉದ್ದೇಶಪೂರ್ವಕವಾಗಿಯೇ ಹೀಗೆ ಮಾಡಲಾಗಿದೆ. ಒಕ್ಕೂಟ ವ್ಯವಸ್ಥೆಗೆ ಇದು ಕೇಂದ್ರವೇ ಕೊಟ್ಟ ಮಾರಣಾಂತಿಕ ಪೆಟ್ಟು” ಎಂದು ಆಕ್ರೋಶ ಹೊರಹಾಕಿದ್ದಾರೆ.

”ತಮ್ಮ ರಾಜ್ಯಗಳಲ್ಲಿ ಉದ್ಯೋಗ ಪಡೆಯಲು ಅನ್ಯಭಾಷೆಯಲ್ಲಿ ಪರೀಕ್ಷೆ ಬರೆಯಬೇಕಾದ ಕರ್ಮ ದಕ್ಷಿಣ ಭಾರತ ರಾಜ್ಯಗಳ ಜನರದ್ದು. ಕನ್ನಡಿಗರೂ ಸೇರಿ ದಕ್ಷಿಣದ ಎಲ್ಲ ಭಾಷಿಕರು ಈ ಬಗ್ಗೆ ವಿರೋಧ ಮಾಡುತ್ತಲೇ ಇದ್ದರೂ ಕೇಂದ್ರ ಸರಕಾರ ಹಿಂದಿ ಹೇರಿಕೆಯನ್ನು ಮುಂದುವರಿಸಿದೆ” ಎಂದು ಹೇಳಿದ್ದಾರೆ.

”ಮುಲಾಜಿಲ್ಲದೆ ಸಿಆರ್‌ಪಿಎಫ್ ನೇಮಕಾತಿಯ ಮರು ಪರೀಕ್ಷೆ ನಡೆಸಬೇಕು ಹಾಗೂ ಕನ್ನಡ ಸೇರಿ ದೇಶದ ಎಲ್ಲ ಭಾಷೆಗಳಲ್ಲೂ ಬರೆಯಲು ಅಭ್ಯರ್ಥಿಗಳಿಗೆ ಅವಕಾಶ ನೀಡಬೇಕು. ಇಲ್ಲವಾದರೆ, ಈ ತಾರತಮ್ಯ ಹಾಗೂ ಹಿಂದಿ ಹೇರಿಕೆ ಇನ್ನೊಂದು ದೊಡ್ಡ ಹೋರಾಟಕ್ಕೆ ನಾಂದಿ ಆದೀತು” ಎಂದು ಕುಮಾರಸ್ವಾಮಿ ಅವರು ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...