Homeಕರ್ನಾಟಕ'ಒಂದು ಕಡೆ ಸಫಾರಿ! ಇನ್ನೊಂದು ಕಡೆ ಸುಪಾರಿ!': ಮೋದಿ ನಡೆಸಿದ ಸಫಾರಿ ಕುರಿತು ಎಚ್‌ಡಿಕೆ ಟೀಕೆ

‘ಒಂದು ಕಡೆ ಸಫಾರಿ! ಇನ್ನೊಂದು ಕಡೆ ಸುಪಾರಿ!’: ಮೋದಿ ನಡೆಸಿದ ಸಫಾರಿ ಕುರಿತು ಎಚ್‌ಡಿಕೆ ಟೀಕೆ

- Advertisement -
- Advertisement -

”ಸ್ವಯಂ ಘೋಷಿತ ದೇಶೋದ್ಧಾರಕ ಪಕ್ಷವಾದ ಬಿಜೆಪಿಯ ರಾಜಕಾರಣವೇ ಅನುಮಾನಾಸ್ಪದ. ಒಂದೆಡೆ ಉದ್ಧರಿಸುವ ಮಾತು, ಇನ್ನೊಂದೆಡೆ ಕತ್ತರಿಸುವ ಕೆಲಸ. ಮಾತು ಒಂದು, ಕೃತಿ ಇನ್ನೊಂದು, ಇದು ಬಿಜೆಪಿಯ (ಭರ)ವರಸೆ” ಎಂದು ಬಿಜೆಪಿ ವಿರುದ್ಧ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಟೀಕೆ ಮಾಡಿದ್ದಾರೆ.

ಬಂಡೀಪುರದಲ್ಲಿ ಪ್ರಧಾನಿ ಮೋದಿ ನಡೆಸಿದ ಸಫಾರಿ ಹಾಗೂ ನಂದಿನಿ ಹಾಲಿನ ವಿಚಾರವಾಗಿ ಕುಮಾರಸ್ವಾಮಿ ಅವರು ಸರಣಿ ಟ್ವೀಟ್ ಮಾಡಿದ್ದಾರೆ. ”ಒಂದು ಕಡೆ ಸಫಾರಿ! ಇನ್ನೊಂದು ಕಡೆ ಸುಪಾರಿ!! ಇದು ಬಿಜೆಪಿಯು ಆದಿಯಿಂದ ನಡೆದುಕೊಂಡು ಬಂದ ದಾರಿ. ಕೆಎಂಎಫ್ ಮತ್ತು ನಂದಿನಿ ವಿಷಯದಲ್ಲೂ ಆ ಪಕ್ಷದ್ದು ಅದೇ ವರಸೆ. ಸ್ಲೋಗನ್ ನಲ್ಲಿ ಮಾತ್ರ ‘ಬಿಜೆಪಿಯೇ ಭರವಸೆ’, ಇದೇ ನೋಡಿ ಅದರ ಅಸಲಿ ವರಸೆ!” ಎಂದು ಟೀಕಿಸಿದ್ದಾರೆ.

”ಪ್ರಧಾನಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿ ಅವರು ಚುನಾವಣೆ ಹೊತ್ತಿನಲ್ಲಿ ತಮ್ಮೆಲ್ಲ ಅಗಾಧ ಕಾರ್ಯಭಾರ ಬದಿಗಿಟ್ಟು ಸಫಾರಿ ಮಾಡಿಹೋಗಿದ್ದಾರೆ. ಸ್ಥಳಕ್ಕೊಂದು ಪೋಷಾಕು ಧರಿಸುವ ಅವರ ಬಗ್ಗೆ ಮಾತಾಡಿದರೆ, ನನಗೆ ಅವರ ಧಿರಿಸಿನ ಬಗ್ಗೆ ಗೊತ್ತೇ ಇಲ್ಲ ಎಂದು ಸಚಿವ ಶ್ರೀ ಅಶ್ವತ್ಥ್ ನಾರಾಯಣ್ ಅವರ ಕುಹಕದ ಮಾತುಗಳನ್ನಾಡುತ್ತಾರೆ” ಎಂದು ಮೋದಿ ಅವರ ಕ್ಷಣಕ್ಕೊಮ್ಮೆ ಬದಲಾಯಿಸುವ ಅವರ ಬಟ್ಟೆಯ ಬಗ್ಗೆ ಹೆಚ್‌ಡಿಕೆ ಟೀಕಿಸಿದ್ದಾರೆ.

”ಇನ್ನೊಬ್ಬರು, ಸಿಟಿ ರವಿ ಎನ್ನುವ ಮಹಾಶಯರು, ಮೋದಿ ಅವರ ಬಗ್ಗೆ ಟೀಕೆ ಮಾಡಿದರೆ ಅವರ ಎತರಕ್ಕೆ ಏರಲು ಸಾಧ್ಯವಿಲ್ಲ ಎಂದು ಆಣಿಮುತ್ತು ಉದುರಿಸಿದ್ದಾರೆ. ನಾವು ಅವರ ಮಟ್ಟಕ್ಕೆ ಏರುವುದೂ ಇಲ್ಲ, ಸಿ.ಟಿ.ರವಿ ಅವರ ಮಟ್ಟಕ್ಕೆ ಇಳಿಯುವುದೂ ಇಲ್ಲ. ಆದರೆ, ಕರ್ನಾಟಕವನ್ನು ಗುಜರಾತಿಗಳಿಗೆ ಒತ್ತೆ ಇಡುವ ಪಾಪದ ಕೆಲಸವನ್ನಂತು ನಾವು ಮಾಡುತ್ತಿಲ್ಲ” ಎಂದು ಸಿಟಿ ರವಿ ಅವರಿಗೆ ತಿರುಗೇಟು ನೀಡಿದ್ದಾರೆ.

”ಅಸಲಿ ವಿಷಯ ಅದಲ್ಲ! ಈಗಲ್ಲ, ನರೇಂದ್ರ ಮೋದಿ ಅವರು ಗುಜರಾತ್ ಮುಖ್ಯಮಂತ್ರಿ ಆಗಿದ್ದಾಗಲೇ ಕೆಎಂಎಫ್ ಅನ್ನು ಮುಗಿಸಲು ಸುಪಾರಿ ಕೊಡಲಾಗಿತ್ತು!! ಅಂದರೆ 2008ರಲ್ಲೇ ಕನ್ನಡಿಗರ ಮೇಲೆ ಅಮುಲ್ ಅನ್ನು ಹೇರಿ, ನಂದಿನಿಯ ಕತ್ತು ಹಿಸುಕುವ ಕರಾಳ ಪ್ರಯತ್ನ ನಡೆದಿತ್ತು” ಎಂದು ಕುಮಾರಸ್ವಾಮಿ ಅವರು ಹೊಸ ಬಾಂಬ್ ಸಿಡಿಸಿದ್ದಾರೆ.

ಇದನ್ನೂ ಓದಿ: ಮೋದಿಯವರ ಶೈಕ್ಷಣಿಕ ಕೊರತೆ ಭಾರತಕ್ಕೆ ಅಪಾಯಕಾರಿ: ಸಿಸೋಡಿಯಾ ಬಹಿರಂಗ ಪತ್ರ

”ಆಗ ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿ ಅಮುಲ್ ಮಾರಾಟ ಘಟಕ ಸ್ಥಾಪಿಸಲು ಹೊರಟಿತ್ತು ಅಂದಿನ ರಾಜ್ಯ ಬಿಜೆಪಿ ಸರಕಾರ. ಅಂದರೆ, 15 ವರ್ಷಗಳ ಹಿಂದೆಯೇ ಅಮುಲ್ಅನ್ನು ಉದ್ಧರಿಸಲು, ನಂದಿನಿಯ ಕತ್ತು ಕತ್ತರಿಸಲು ಬಿಜೆಪಿ ಹೊರಟಿತ್ತು” ಎಂದು ಕಿಡಿಕಾರಿದ್ದಾರೆ.

”ಅಂದು ಅಮುಲ್‌ ಘಟಕದ ಬಗ್ಗೆ ಜೆಡಿಎಸ್ ಪಕ್ಷವು ಭಾರೀ ವಿರೋಧ ವ್ಯಕ್ತಪಡಿಸಿತ್ತು, ಕೆಎಂಎಫ್ʼನ ಅಂದಿನ ಅಧ್ಯಕ್ಷರಾಗಿದ್ದ ಎಚ್‌ಡಿ ರೇವಣ್ಣ ಅವರು, “ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಅಮುಲ್ ಹಾಲು ಮಾರಾಟಕ್ಕೆ ಅವಕಾಶ ಕೊಡುವುದಿಲ್ಲ” ಎಂದು ಕಡ್ಡಿತುಂಡು ಮಾಡಿದಂತೆ ಹೇಳಿದ್ದರು” ಎಂಬುದಾಗಿ ತಿಳಿಸಿದ್ದಾರೆ.

”ಅಂದು ಬಿಜೆಪಿಗರು ಮೋದಿ ಅವರನ್ನು ಮೆಚ್ಚಿಸಲು ಅಮುಲ್ ಪರ ವಕಾಲತ್ತು ವಹಿಸಿ, ನಂದಿನಿಯನ್ನು ಮುಗಿಸಲು ಹೊರಟಿದ್ದರು. ಅಂದಿನ ಮುಖ್ಯಮಂತ್ರಿಗಳೂ ಸೇರಿ ಬಿಜೆಪಿ ಮುಂಚೂಣಿ ನಾಯಕರು ಅಮುಲ್ ಪರ ಬ್ಯಾಟ್ ಬೀಸಿದ್ದರು. ಈಗ ಪಾತ್ರಗಳು ಬದಲಾಗಿವೆ. ಸಿಟಿ ರವಿ, ಡಾ.ಸುಧಾಕರ್, ಡಾ. ಅಶ್ವತ್ಥ್ ನಾರಾಯಣ ಇತರರು ರಂಗದ ಮೇಲಿದ್ದಾರಷ್ಟೇ” ಎಂದು ಹೇಳಿದ್ದಾರೆ.

”ಕರ್ನಾಟಕವನ್ನು ಗುಜರಾತಿನ ವಸಾಹತು ಮಾಡುವ ಬಿಜೆಪಿಯ ಹುನ್ನಾರ ಇಂದು ನಿನ್ನೆಯದಲ್ಲ. ವೈಬ್ರೆಂಟ್ ಗುಜರಾತಿನ ಮಹತ್ವಾಕಾಂಕ್ಷೆಯ ಹಿಂದೆಯೇ ಕರ್ನಾಟಕವನ್ನು ಕೆಳಕ್ಕೆ ಕೆಡಹುವ ಬಿಜೆಪಿಯ ಧೂರ್ತ ಅಜೆಂಡಾ ಈ ಚುನಾವಣೆ ಹೊತ್ತಿನಲ್ಲಿ ಬಟಾ ಬಯಲಾಗಿದೆ. 15 ವರ್ಷಗಳ ಹಳೆಯ ಸಂಚಿಗೆ ಮತ್ತೆ ಜೀವ ನೀಡಲಾಗಿದೆ” ಎಂದು ಹೇಳಿದ್ದಾರೆ.

”ಕರ್ನಾಟಕದ ಬ್ಯಾಂಕುಗಳು ಹೋದವು, ಭದ್ರಾವತಿಯ ವಿಎಸ್ಎನ್ಎಲ್ ಇನ್ನೇನು ಯಾರೋ ಗುಜರಾತಿ ಉದ್ದಿಮೆದಾರನ ಪಾಲಾಗುವ ಹಂತದಲ್ಲಿದೆ. ಈಗ ನಂದಿನಿ… ಲಾಭದಾಯಕವಾಗಿರುವ ರಾಜ್ಯದ ಒಂದೊಂದೇ ಉದ್ಯಮವನ್ನು ಮುಗಿಸಲು ಕೇಂದ್ರ ಬಿಜೆಪಿ ಹೊಂಚು ಹಾಕಿರುವುದು ಸ್ಪಷ್ಟ” ಎಂದು ಟೀಕಿಸಿದ್ದಾರೆ.

”ಕೈಗಾರಿಕೆ, ಐಟಿಬಿಟಿ, ವಿಜ್ಞಾನ, ಆವಿಷ್ಕಾರ, ಉದ್ಯೋಗ ಸೃಷ್ಟಿ ಸೇರಿ ಜಿಎಸ್ ಟಿ ಕಟ್ಟುವುದರಲ್ಲಿಯೂ ಮುಂಚೂಣಿಯಲ್ಲಿರುವ ಕರ್ನಾಟಕವು, ಭಾರತವೇ ಹೆಮ್ಮೆಪಡುವ ರಾಜ್ಯ. ಇಂಥ ರಾಜ್ಯವನ್ನು ಆರ್ಥಿಕವಾಗಿ ದಿವಾಳಿಯೆಬ್ಬಿಸಿ ಶಾಶ್ವತವಾಗಿ ದಿಲ್ಲಿಯ ಮುಂದೆ ಭಿಕ್ಷಾಪಾತ್ರೆ ಹಿಡಿದು ನಿಲ್ಲುವಂತೆ ಮಾಡುವುದೇ  ಬಿಜೆಪಿಯ ಕುಟಿಲನೀತಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

”ಪ್ರತಿಯೊಂದನ್ನೂ ಪ್ರಶ್ನಿಸುವ, ನ್ಯಾಯ ಕೇಳುವ ಕನ್ನಡಿಗರನ್ನು ದುರ್ಬಲಗೊಳಿಸುವುದೂ ಎಂದರೆ, ಆರ್ಥಿಕವಾಗಿ ಕರ್ನಾಟಕದ ಬೆನ್ನುಮೂಳೆ ಮುರಿಯುವುದು. ಉತ್ತರಕ್ಕೆ ಬೆಣ್ಣೆ, ದಕ್ಷಿಣಕ್ಕೆ ಸುಣ್ಣ ಎಂಬ ನೀತಿ ಅನುಸರಿಸುವ ಬಿಜೆಪಿಯ ಡಬಲ್ ಎಂಜಿನ್ ಸರಕಾರವು, ದಕ್ಷಿಣದ ರಾಜ್ಯಗಳ ಜತೆ ಡಬಲ್ ಗೇಮ್ ಆಡುತ್ತಿದೆ.
ಇಂದು ಕರ್ನಾಟಕ; ನಾಳೆ ತಮಿಳುನಾಡು, ನಾಡಿದ್ದು ಆಂಧ್ರ ಪ್ರದೇಶ ಮತ್ತು ತೆಲಂಗಾಣ, ಆಚೆ ನಾಡಿದ್ದು ಕೇರಳ!! ಬಿಜೆಪಿಯ ಸುಪಾರಿ ಆಟ ಶುರುವಾಗಿದೆ!!!” ಎಂದು ಎಚ್ಚರಿಸಿದ್ದಾರೆ.

ಕುಮಾರಸ್ವಾಮಿ ಅವರು ಮುಂದುವರೆದು, ಸಿಆರ್‌ಪಿಎಫ್‌ ಪರೀಕ್ಷೆಯನ್ನು ಹಿಂದಿ ಹಾಗೂ ಇಂಗ್ಲೀಷ್‌ನಲ್ಲಿ ಮಾತ್ರ ಅವಕಾಶ ನೀಡಿರುವ ಬಗ್ಗೆಯೂ ಕಿಡಿಕಾರಿರುವ ಎಚ್‌ಡಿ ಕುಮಾರಸ್ವಾಮಿ ಅವರು ಸರಣಿ ಟ್ವೀಟ್ ಮಾಡಿದ್ದಾರೆ.

”9212 ಹುದ್ದೆಗಳಿಗೆ ಈ ಪರೀಕ್ಷೆ ನಡೆಸಲಾಗಿದ್ದು, ಅದರಲ್ಲಿ ಕರ್ನಾಟಕದ 466 ಹುದ್ದೆಗಳೂ ಸೇರಿವೆ. ದುರಂತವೆಂದರೆ, ಇಷ್ಟು ಹುದ್ದೆಗಳನ್ನು ಬಯಸುವ ಅಭ್ಯರ್ಥಿಗಳು ಹಿಂದಿ, ಇಂಗ್ಲಿಷ್ ನಲ್ಲಿ ಪರೀಕ್ಷೆ ಬರೆದಿದ್ದಾರೆ, ಬರೆಯುವ ಅನಿವಾರ್ಯ ಸೃಷ್ಟಿಸಲಾಗಿದೆ. ಮಾತೃಭಾಷೆಯಲ್ಲಿ ಬರೆಯುವುದನ್ನು ನಿರಾಕರಿಸುವುದು ಎಂದರೆ ಸಂವಿಧಾನಕ್ಕೆ ಎಸಗಿದ ಅಪಚಾರ” ಎಂದು ಕಿಡಿಕಾರಿದ್ದಾರೆ.

”ಕೇಂದ್ರ ಸರಕಾರ ತನ್ನ ಸುಪರ್ದಿಯಲ್ಲಿ ನಡೆಸುವ ಎಲ್ಲ ನೇಮಕಾತಿ ಪರೀಕ್ಷೆಗಳನ್ನು ಹಿಂದಿ, ಇಂಗ್ಲಿಷಿನಲ್ಲೇ ನಡೆಸುತ್ತಿದೆ. ಕೇವಲ ಹಿಂದಿ ಕೇಂದ್ರಿತ ನೇಮಕಾತಿ ಪ್ರಕ್ರಿಯೆ ಇತರೆ ಭಾಷಿಕರನ್ನು ಉದ್ಯೋಗ ವಂಚಿತರನ್ನಾಗಿಸುವುದು ಮಾತ್ರವಲ್ಲ, ಅನ್ಯಭಾಷೆಗಳನ್ನು ಹತ್ತಿಕ್ಕಿ ಹಿಂದಿ ಹೇರಿಕೆ ಮಾಡುವುದಷ್ಟೇ ದುರುದ್ದೇಶ. ಇದು ಸ್ಪಷ್ಟ” ಎಂದಿದ್ದಾರೆ.

”ಅಷ್ಟೇ ಅಲ್ಲ, ಈ ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳು ಹಿಂದಿ ಭಾಷೆಗೆ ಸಂಬಂಧಿಸಿದವು. ಅಲ್ಲಿಗೆ ಸ್ಪಷ್ಟ; ಹಿಂದಿಯೇತರ ಅಭ್ಯರ್ಥಿಗಳು ಈ ನೇಮಕಾತಿಯಲ್ಲಿ ಆಯ್ಕೆ ಆಗಲೇಬಾರದು ಹಾಗೂ ಉದ್ದೇಶಪೂರ್ವಕವಾಗಿಯೇ ಹೀಗೆ ಮಾಡಲಾಗಿದೆ. ಒಕ್ಕೂಟ ವ್ಯವಸ್ಥೆಗೆ ಇದು ಕೇಂದ್ರವೇ ಕೊಟ್ಟ ಮಾರಣಾಂತಿಕ ಪೆಟ್ಟು” ಎಂದು ಆಕ್ರೋಶ ಹೊರಹಾಕಿದ್ದಾರೆ.

”ತಮ್ಮ ರಾಜ್ಯಗಳಲ್ಲಿ ಉದ್ಯೋಗ ಪಡೆಯಲು ಅನ್ಯಭಾಷೆಯಲ್ಲಿ ಪರೀಕ್ಷೆ ಬರೆಯಬೇಕಾದ ಕರ್ಮ ದಕ್ಷಿಣ ಭಾರತ ರಾಜ್ಯಗಳ ಜನರದ್ದು. ಕನ್ನಡಿಗರೂ ಸೇರಿ ದಕ್ಷಿಣದ ಎಲ್ಲ ಭಾಷಿಕರು ಈ ಬಗ್ಗೆ ವಿರೋಧ ಮಾಡುತ್ತಲೇ ಇದ್ದರೂ ಕೇಂದ್ರ ಸರಕಾರ ಹಿಂದಿ ಹೇರಿಕೆಯನ್ನು ಮುಂದುವರಿಸಿದೆ” ಎಂದು ಹೇಳಿದ್ದಾರೆ.

”ಮುಲಾಜಿಲ್ಲದೆ ಸಿಆರ್‌ಪಿಎಫ್ ನೇಮಕಾತಿಯ ಮರು ಪರೀಕ್ಷೆ ನಡೆಸಬೇಕು ಹಾಗೂ ಕನ್ನಡ ಸೇರಿ ದೇಶದ ಎಲ್ಲ ಭಾಷೆಗಳಲ್ಲೂ ಬರೆಯಲು ಅಭ್ಯರ್ಥಿಗಳಿಗೆ ಅವಕಾಶ ನೀಡಬೇಕು. ಇಲ್ಲವಾದರೆ, ಈ ತಾರತಮ್ಯ ಹಾಗೂ ಹಿಂದಿ ಹೇರಿಕೆ ಇನ್ನೊಂದು ದೊಡ್ಡ ಹೋರಾಟಕ್ಕೆ ನಾಂದಿ ಆದೀತು” ಎಂದು ಕುಮಾರಸ್ವಾಮಿ ಅವರು ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...