Homeಕರ್ನಾಟಕ'ಒಂದು ಕಡೆ ಸಫಾರಿ! ಇನ್ನೊಂದು ಕಡೆ ಸುಪಾರಿ!': ಮೋದಿ ನಡೆಸಿದ ಸಫಾರಿ ಕುರಿತು ಎಚ್‌ಡಿಕೆ ಟೀಕೆ

‘ಒಂದು ಕಡೆ ಸಫಾರಿ! ಇನ್ನೊಂದು ಕಡೆ ಸುಪಾರಿ!’: ಮೋದಿ ನಡೆಸಿದ ಸಫಾರಿ ಕುರಿತು ಎಚ್‌ಡಿಕೆ ಟೀಕೆ

- Advertisement -
- Advertisement -

”ಸ್ವಯಂ ಘೋಷಿತ ದೇಶೋದ್ಧಾರಕ ಪಕ್ಷವಾದ ಬಿಜೆಪಿಯ ರಾಜಕಾರಣವೇ ಅನುಮಾನಾಸ್ಪದ. ಒಂದೆಡೆ ಉದ್ಧರಿಸುವ ಮಾತು, ಇನ್ನೊಂದೆಡೆ ಕತ್ತರಿಸುವ ಕೆಲಸ. ಮಾತು ಒಂದು, ಕೃತಿ ಇನ್ನೊಂದು, ಇದು ಬಿಜೆಪಿಯ (ಭರ)ವರಸೆ” ಎಂದು ಬಿಜೆಪಿ ವಿರುದ್ಧ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಟೀಕೆ ಮಾಡಿದ್ದಾರೆ.

ಬಂಡೀಪುರದಲ್ಲಿ ಪ್ರಧಾನಿ ಮೋದಿ ನಡೆಸಿದ ಸಫಾರಿ ಹಾಗೂ ನಂದಿನಿ ಹಾಲಿನ ವಿಚಾರವಾಗಿ ಕುಮಾರಸ್ವಾಮಿ ಅವರು ಸರಣಿ ಟ್ವೀಟ್ ಮಾಡಿದ್ದಾರೆ. ”ಒಂದು ಕಡೆ ಸಫಾರಿ! ಇನ್ನೊಂದು ಕಡೆ ಸುಪಾರಿ!! ಇದು ಬಿಜೆಪಿಯು ಆದಿಯಿಂದ ನಡೆದುಕೊಂಡು ಬಂದ ದಾರಿ. ಕೆಎಂಎಫ್ ಮತ್ತು ನಂದಿನಿ ವಿಷಯದಲ್ಲೂ ಆ ಪಕ್ಷದ್ದು ಅದೇ ವರಸೆ. ಸ್ಲೋಗನ್ ನಲ್ಲಿ ಮಾತ್ರ ‘ಬಿಜೆಪಿಯೇ ಭರವಸೆ’, ಇದೇ ನೋಡಿ ಅದರ ಅಸಲಿ ವರಸೆ!” ಎಂದು ಟೀಕಿಸಿದ್ದಾರೆ.

”ಪ್ರಧಾನಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿ ಅವರು ಚುನಾವಣೆ ಹೊತ್ತಿನಲ್ಲಿ ತಮ್ಮೆಲ್ಲ ಅಗಾಧ ಕಾರ್ಯಭಾರ ಬದಿಗಿಟ್ಟು ಸಫಾರಿ ಮಾಡಿಹೋಗಿದ್ದಾರೆ. ಸ್ಥಳಕ್ಕೊಂದು ಪೋಷಾಕು ಧರಿಸುವ ಅವರ ಬಗ್ಗೆ ಮಾತಾಡಿದರೆ, ನನಗೆ ಅವರ ಧಿರಿಸಿನ ಬಗ್ಗೆ ಗೊತ್ತೇ ಇಲ್ಲ ಎಂದು ಸಚಿವ ಶ್ರೀ ಅಶ್ವತ್ಥ್ ನಾರಾಯಣ್ ಅವರ ಕುಹಕದ ಮಾತುಗಳನ್ನಾಡುತ್ತಾರೆ” ಎಂದು ಮೋದಿ ಅವರ ಕ್ಷಣಕ್ಕೊಮ್ಮೆ ಬದಲಾಯಿಸುವ ಅವರ ಬಟ್ಟೆಯ ಬಗ್ಗೆ ಹೆಚ್‌ಡಿಕೆ ಟೀಕಿಸಿದ್ದಾರೆ.

”ಇನ್ನೊಬ್ಬರು, ಸಿಟಿ ರವಿ ಎನ್ನುವ ಮಹಾಶಯರು, ಮೋದಿ ಅವರ ಬಗ್ಗೆ ಟೀಕೆ ಮಾಡಿದರೆ ಅವರ ಎತರಕ್ಕೆ ಏರಲು ಸಾಧ್ಯವಿಲ್ಲ ಎಂದು ಆಣಿಮುತ್ತು ಉದುರಿಸಿದ್ದಾರೆ. ನಾವು ಅವರ ಮಟ್ಟಕ್ಕೆ ಏರುವುದೂ ಇಲ್ಲ, ಸಿ.ಟಿ.ರವಿ ಅವರ ಮಟ್ಟಕ್ಕೆ ಇಳಿಯುವುದೂ ಇಲ್ಲ. ಆದರೆ, ಕರ್ನಾಟಕವನ್ನು ಗುಜರಾತಿಗಳಿಗೆ ಒತ್ತೆ ಇಡುವ ಪಾಪದ ಕೆಲಸವನ್ನಂತು ನಾವು ಮಾಡುತ್ತಿಲ್ಲ” ಎಂದು ಸಿಟಿ ರವಿ ಅವರಿಗೆ ತಿರುಗೇಟು ನೀಡಿದ್ದಾರೆ.

”ಅಸಲಿ ವಿಷಯ ಅದಲ್ಲ! ಈಗಲ್ಲ, ನರೇಂದ್ರ ಮೋದಿ ಅವರು ಗುಜರಾತ್ ಮುಖ್ಯಮಂತ್ರಿ ಆಗಿದ್ದಾಗಲೇ ಕೆಎಂಎಫ್ ಅನ್ನು ಮುಗಿಸಲು ಸುಪಾರಿ ಕೊಡಲಾಗಿತ್ತು!! ಅಂದರೆ 2008ರಲ್ಲೇ ಕನ್ನಡಿಗರ ಮೇಲೆ ಅಮುಲ್ ಅನ್ನು ಹೇರಿ, ನಂದಿನಿಯ ಕತ್ತು ಹಿಸುಕುವ ಕರಾಳ ಪ್ರಯತ್ನ ನಡೆದಿತ್ತು” ಎಂದು ಕುಮಾರಸ್ವಾಮಿ ಅವರು ಹೊಸ ಬಾಂಬ್ ಸಿಡಿಸಿದ್ದಾರೆ.

ಇದನ್ನೂ ಓದಿ: ಮೋದಿಯವರ ಶೈಕ್ಷಣಿಕ ಕೊರತೆ ಭಾರತಕ್ಕೆ ಅಪಾಯಕಾರಿ: ಸಿಸೋಡಿಯಾ ಬಹಿರಂಗ ಪತ್ರ

”ಆಗ ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿ ಅಮುಲ್ ಮಾರಾಟ ಘಟಕ ಸ್ಥಾಪಿಸಲು ಹೊರಟಿತ್ತು ಅಂದಿನ ರಾಜ್ಯ ಬಿಜೆಪಿ ಸರಕಾರ. ಅಂದರೆ, 15 ವರ್ಷಗಳ ಹಿಂದೆಯೇ ಅಮುಲ್ಅನ್ನು ಉದ್ಧರಿಸಲು, ನಂದಿನಿಯ ಕತ್ತು ಕತ್ತರಿಸಲು ಬಿಜೆಪಿ ಹೊರಟಿತ್ತು” ಎಂದು ಕಿಡಿಕಾರಿದ್ದಾರೆ.

”ಅಂದು ಅಮುಲ್‌ ಘಟಕದ ಬಗ್ಗೆ ಜೆಡಿಎಸ್ ಪಕ್ಷವು ಭಾರೀ ವಿರೋಧ ವ್ಯಕ್ತಪಡಿಸಿತ್ತು, ಕೆಎಂಎಫ್ʼನ ಅಂದಿನ ಅಧ್ಯಕ್ಷರಾಗಿದ್ದ ಎಚ್‌ಡಿ ರೇವಣ್ಣ ಅವರು, “ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಅಮುಲ್ ಹಾಲು ಮಾರಾಟಕ್ಕೆ ಅವಕಾಶ ಕೊಡುವುದಿಲ್ಲ” ಎಂದು ಕಡ್ಡಿತುಂಡು ಮಾಡಿದಂತೆ ಹೇಳಿದ್ದರು” ಎಂಬುದಾಗಿ ತಿಳಿಸಿದ್ದಾರೆ.

”ಅಂದು ಬಿಜೆಪಿಗರು ಮೋದಿ ಅವರನ್ನು ಮೆಚ್ಚಿಸಲು ಅಮುಲ್ ಪರ ವಕಾಲತ್ತು ವಹಿಸಿ, ನಂದಿನಿಯನ್ನು ಮುಗಿಸಲು ಹೊರಟಿದ್ದರು. ಅಂದಿನ ಮುಖ್ಯಮಂತ್ರಿಗಳೂ ಸೇರಿ ಬಿಜೆಪಿ ಮುಂಚೂಣಿ ನಾಯಕರು ಅಮುಲ್ ಪರ ಬ್ಯಾಟ್ ಬೀಸಿದ್ದರು. ಈಗ ಪಾತ್ರಗಳು ಬದಲಾಗಿವೆ. ಸಿಟಿ ರವಿ, ಡಾ.ಸುಧಾಕರ್, ಡಾ. ಅಶ್ವತ್ಥ್ ನಾರಾಯಣ ಇತರರು ರಂಗದ ಮೇಲಿದ್ದಾರಷ್ಟೇ” ಎಂದು ಹೇಳಿದ್ದಾರೆ.

”ಕರ್ನಾಟಕವನ್ನು ಗುಜರಾತಿನ ವಸಾಹತು ಮಾಡುವ ಬಿಜೆಪಿಯ ಹುನ್ನಾರ ಇಂದು ನಿನ್ನೆಯದಲ್ಲ. ವೈಬ್ರೆಂಟ್ ಗುಜರಾತಿನ ಮಹತ್ವಾಕಾಂಕ್ಷೆಯ ಹಿಂದೆಯೇ ಕರ್ನಾಟಕವನ್ನು ಕೆಳಕ್ಕೆ ಕೆಡಹುವ ಬಿಜೆಪಿಯ ಧೂರ್ತ ಅಜೆಂಡಾ ಈ ಚುನಾವಣೆ ಹೊತ್ತಿನಲ್ಲಿ ಬಟಾ ಬಯಲಾಗಿದೆ. 15 ವರ್ಷಗಳ ಹಳೆಯ ಸಂಚಿಗೆ ಮತ್ತೆ ಜೀವ ನೀಡಲಾಗಿದೆ” ಎಂದು ಹೇಳಿದ್ದಾರೆ.

”ಕರ್ನಾಟಕದ ಬ್ಯಾಂಕುಗಳು ಹೋದವು, ಭದ್ರಾವತಿಯ ವಿಎಸ್ಎನ್ಎಲ್ ಇನ್ನೇನು ಯಾರೋ ಗುಜರಾತಿ ಉದ್ದಿಮೆದಾರನ ಪಾಲಾಗುವ ಹಂತದಲ್ಲಿದೆ. ಈಗ ನಂದಿನಿ… ಲಾಭದಾಯಕವಾಗಿರುವ ರಾಜ್ಯದ ಒಂದೊಂದೇ ಉದ್ಯಮವನ್ನು ಮುಗಿಸಲು ಕೇಂದ್ರ ಬಿಜೆಪಿ ಹೊಂಚು ಹಾಕಿರುವುದು ಸ್ಪಷ್ಟ” ಎಂದು ಟೀಕಿಸಿದ್ದಾರೆ.

”ಕೈಗಾರಿಕೆ, ಐಟಿಬಿಟಿ, ವಿಜ್ಞಾನ, ಆವಿಷ್ಕಾರ, ಉದ್ಯೋಗ ಸೃಷ್ಟಿ ಸೇರಿ ಜಿಎಸ್ ಟಿ ಕಟ್ಟುವುದರಲ್ಲಿಯೂ ಮುಂಚೂಣಿಯಲ್ಲಿರುವ ಕರ್ನಾಟಕವು, ಭಾರತವೇ ಹೆಮ್ಮೆಪಡುವ ರಾಜ್ಯ. ಇಂಥ ರಾಜ್ಯವನ್ನು ಆರ್ಥಿಕವಾಗಿ ದಿವಾಳಿಯೆಬ್ಬಿಸಿ ಶಾಶ್ವತವಾಗಿ ದಿಲ್ಲಿಯ ಮುಂದೆ ಭಿಕ್ಷಾಪಾತ್ರೆ ಹಿಡಿದು ನಿಲ್ಲುವಂತೆ ಮಾಡುವುದೇ  ಬಿಜೆಪಿಯ ಕುಟಿಲನೀತಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

”ಪ್ರತಿಯೊಂದನ್ನೂ ಪ್ರಶ್ನಿಸುವ, ನ್ಯಾಯ ಕೇಳುವ ಕನ್ನಡಿಗರನ್ನು ದುರ್ಬಲಗೊಳಿಸುವುದೂ ಎಂದರೆ, ಆರ್ಥಿಕವಾಗಿ ಕರ್ನಾಟಕದ ಬೆನ್ನುಮೂಳೆ ಮುರಿಯುವುದು. ಉತ್ತರಕ್ಕೆ ಬೆಣ್ಣೆ, ದಕ್ಷಿಣಕ್ಕೆ ಸುಣ್ಣ ಎಂಬ ನೀತಿ ಅನುಸರಿಸುವ ಬಿಜೆಪಿಯ ಡಬಲ್ ಎಂಜಿನ್ ಸರಕಾರವು, ದಕ್ಷಿಣದ ರಾಜ್ಯಗಳ ಜತೆ ಡಬಲ್ ಗೇಮ್ ಆಡುತ್ತಿದೆ.
ಇಂದು ಕರ್ನಾಟಕ; ನಾಳೆ ತಮಿಳುನಾಡು, ನಾಡಿದ್ದು ಆಂಧ್ರ ಪ್ರದೇಶ ಮತ್ತು ತೆಲಂಗಾಣ, ಆಚೆ ನಾಡಿದ್ದು ಕೇರಳ!! ಬಿಜೆಪಿಯ ಸುಪಾರಿ ಆಟ ಶುರುವಾಗಿದೆ!!!” ಎಂದು ಎಚ್ಚರಿಸಿದ್ದಾರೆ.

ಕುಮಾರಸ್ವಾಮಿ ಅವರು ಮುಂದುವರೆದು, ಸಿಆರ್‌ಪಿಎಫ್‌ ಪರೀಕ್ಷೆಯನ್ನು ಹಿಂದಿ ಹಾಗೂ ಇಂಗ್ಲೀಷ್‌ನಲ್ಲಿ ಮಾತ್ರ ಅವಕಾಶ ನೀಡಿರುವ ಬಗ್ಗೆಯೂ ಕಿಡಿಕಾರಿರುವ ಎಚ್‌ಡಿ ಕುಮಾರಸ್ವಾಮಿ ಅವರು ಸರಣಿ ಟ್ವೀಟ್ ಮಾಡಿದ್ದಾರೆ.

”9212 ಹುದ್ದೆಗಳಿಗೆ ಈ ಪರೀಕ್ಷೆ ನಡೆಸಲಾಗಿದ್ದು, ಅದರಲ್ಲಿ ಕರ್ನಾಟಕದ 466 ಹುದ್ದೆಗಳೂ ಸೇರಿವೆ. ದುರಂತವೆಂದರೆ, ಇಷ್ಟು ಹುದ್ದೆಗಳನ್ನು ಬಯಸುವ ಅಭ್ಯರ್ಥಿಗಳು ಹಿಂದಿ, ಇಂಗ್ಲಿಷ್ ನಲ್ಲಿ ಪರೀಕ್ಷೆ ಬರೆದಿದ್ದಾರೆ, ಬರೆಯುವ ಅನಿವಾರ್ಯ ಸೃಷ್ಟಿಸಲಾಗಿದೆ. ಮಾತೃಭಾಷೆಯಲ್ಲಿ ಬರೆಯುವುದನ್ನು ನಿರಾಕರಿಸುವುದು ಎಂದರೆ ಸಂವಿಧಾನಕ್ಕೆ ಎಸಗಿದ ಅಪಚಾರ” ಎಂದು ಕಿಡಿಕಾರಿದ್ದಾರೆ.

”ಕೇಂದ್ರ ಸರಕಾರ ತನ್ನ ಸುಪರ್ದಿಯಲ್ಲಿ ನಡೆಸುವ ಎಲ್ಲ ನೇಮಕಾತಿ ಪರೀಕ್ಷೆಗಳನ್ನು ಹಿಂದಿ, ಇಂಗ್ಲಿಷಿನಲ್ಲೇ ನಡೆಸುತ್ತಿದೆ. ಕೇವಲ ಹಿಂದಿ ಕೇಂದ್ರಿತ ನೇಮಕಾತಿ ಪ್ರಕ್ರಿಯೆ ಇತರೆ ಭಾಷಿಕರನ್ನು ಉದ್ಯೋಗ ವಂಚಿತರನ್ನಾಗಿಸುವುದು ಮಾತ್ರವಲ್ಲ, ಅನ್ಯಭಾಷೆಗಳನ್ನು ಹತ್ತಿಕ್ಕಿ ಹಿಂದಿ ಹೇರಿಕೆ ಮಾಡುವುದಷ್ಟೇ ದುರುದ್ದೇಶ. ಇದು ಸ್ಪಷ್ಟ” ಎಂದಿದ್ದಾರೆ.

”ಅಷ್ಟೇ ಅಲ್ಲ, ಈ ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳು ಹಿಂದಿ ಭಾಷೆಗೆ ಸಂಬಂಧಿಸಿದವು. ಅಲ್ಲಿಗೆ ಸ್ಪಷ್ಟ; ಹಿಂದಿಯೇತರ ಅಭ್ಯರ್ಥಿಗಳು ಈ ನೇಮಕಾತಿಯಲ್ಲಿ ಆಯ್ಕೆ ಆಗಲೇಬಾರದು ಹಾಗೂ ಉದ್ದೇಶಪೂರ್ವಕವಾಗಿಯೇ ಹೀಗೆ ಮಾಡಲಾಗಿದೆ. ಒಕ್ಕೂಟ ವ್ಯವಸ್ಥೆಗೆ ಇದು ಕೇಂದ್ರವೇ ಕೊಟ್ಟ ಮಾರಣಾಂತಿಕ ಪೆಟ್ಟು” ಎಂದು ಆಕ್ರೋಶ ಹೊರಹಾಕಿದ್ದಾರೆ.

”ತಮ್ಮ ರಾಜ್ಯಗಳಲ್ಲಿ ಉದ್ಯೋಗ ಪಡೆಯಲು ಅನ್ಯಭಾಷೆಯಲ್ಲಿ ಪರೀಕ್ಷೆ ಬರೆಯಬೇಕಾದ ಕರ್ಮ ದಕ್ಷಿಣ ಭಾರತ ರಾಜ್ಯಗಳ ಜನರದ್ದು. ಕನ್ನಡಿಗರೂ ಸೇರಿ ದಕ್ಷಿಣದ ಎಲ್ಲ ಭಾಷಿಕರು ಈ ಬಗ್ಗೆ ವಿರೋಧ ಮಾಡುತ್ತಲೇ ಇದ್ದರೂ ಕೇಂದ್ರ ಸರಕಾರ ಹಿಂದಿ ಹೇರಿಕೆಯನ್ನು ಮುಂದುವರಿಸಿದೆ” ಎಂದು ಹೇಳಿದ್ದಾರೆ.

”ಮುಲಾಜಿಲ್ಲದೆ ಸಿಆರ್‌ಪಿಎಫ್ ನೇಮಕಾತಿಯ ಮರು ಪರೀಕ್ಷೆ ನಡೆಸಬೇಕು ಹಾಗೂ ಕನ್ನಡ ಸೇರಿ ದೇಶದ ಎಲ್ಲ ಭಾಷೆಗಳಲ್ಲೂ ಬರೆಯಲು ಅಭ್ಯರ್ಥಿಗಳಿಗೆ ಅವಕಾಶ ನೀಡಬೇಕು. ಇಲ್ಲವಾದರೆ, ಈ ತಾರತಮ್ಯ ಹಾಗೂ ಹಿಂದಿ ಹೇರಿಕೆ ಇನ್ನೊಂದು ದೊಡ್ಡ ಹೋರಾಟಕ್ಕೆ ನಾಂದಿ ಆದೀತು” ಎಂದು ಕುಮಾರಸ್ವಾಮಿ ಅವರು ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...