Homeಮುಖಪುಟಉತ್ತರ ಪ್ರದೇಶ: ಪ್ರಧಾನಿ ಮೋದಿ ಕ್ಷೇತ್ರದಲ್ಲಿ ಮ್ಯಾನ್‌ಹೋಲ್‌ಗೆ ಇಳಿದಿದ್ದ ಕಾರ್ಮಿಕ ಸಾವು

ಉತ್ತರ ಪ್ರದೇಶ: ಪ್ರಧಾನಿ ಮೋದಿ ಕ್ಷೇತ್ರದಲ್ಲಿ ಮ್ಯಾನ್‌ಹೋಲ್‌ಗೆ ಇಳಿದಿದ್ದ ಕಾರ್ಮಿಕ ಸಾವು

ಈ ಹಿಂದೆ ಪ್ರಧಾನಿ ಮೋದಿ ಸ್ವಚ್ಚತಾ ಕಾರ್ಮಿಕರ ಪಾದ ತೊಳೆದು ಸುದ್ದಿಯಾಗಿದ್ದ ಅದೇ ಜಾಗದಲ್ಲಿ ದುರ್ಘಟನೆ ನಡೆದಿದೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರ ತವರು ಕ್ಷೇತ್ರ ವಾರಣಾಸಿಯಲ್ಲಿ ದಲಿತ ಕಾರ್ಮಿಕರೊಬ್ಬರು ಮ್ಯಾನ್‌ ಹೋಲ್‌ ಸ್ವಚ್ಚಗೊಳಿಸುವಾಗ ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ವರದಿಗಳು ತಿಳಿಸಿವೆ.

ಈ ಹಿಂದೆ ಪ್ರಧಾನಿ ಮೋದಿ ಸ್ವಚ್ಚತಾ ಕಾರ್ಮಿಕರ ಪಾದ ತೊಳೆದು ಸುದ್ದಿಯಾಗಿದ್ದ ಅದೇ ಜಾಗದಲ್ಲಿ ದುರ್ಘಟನೆ ನಡೆದಿದೆ ಎಂದು ದಿ ಮೂಕನಾಯಕ ವರದಿ ಮಾಡಿದೆ.

ಆಘಾತಕಾರಿ ಸಂಗತಿಯೆಂದರೆ, ಉತ್ತರ ಪ್ರದೇಶದಲ್ಲಿ ಕಳೆದ ಐದು ವರ್ಷಗಳಲ್ಲಿ ಬರೋಬ್ಬರಿ 400 ನೈರ್ಮಲ್ಯ ಕಾರ್ಮಿಕರು ಮ್ಯಾನ್‌ಹೋಲ್, ಚರಂಡಿಗಳನ್ನು ಸ್ವಚ್ಚಗೊಳಿಸುವಾಗ ಪ್ರಾಣ ಕಳೆದುಕೊಂಡಿದ್ದಾರೆ. ಇದು ಉತ್ತರ ಪ್ರದೇಶದಲ್ಲಿ ಮುಂದುವರಿದಿರುವ ಭೀಕರ ಪರಿಸ್ಥಿತಿಯನ್ನು ಎತ್ತಿ ತೋರಿಸುತ್ತದೆ. ಅಂತಹ ಸಾವು ನೋವುಗಳಲ್ಲಿ ರಾಜ್ಯವು ಎರಡನೇ ಸ್ಥಾನದಲ್ಲಿದೆ ಎಂದು ವರದಿ ಹೇಳಿದೆ.

ವಾರಣಾಸಿಯ ಆದಂಪುರ ಪ್ರದೇಶದ ಭೈಸಾಪುರ ಘಾಟ್‌ನಲ್ಲಿ ಕಾರ್ಮಿಕ ಮೃತಪಟ್ಟಿದ್ದಾರೆ. ಇಬ್ಬರು ಕಾರ್ಮಿಕರು ಮ್ಯಾನ್‌ಹೋಲ್‌ಗೆ ಇಳಿದು ಸ್ವಚ್ಚಗೊಳಿಸುತ್ತಿದ್ದಾಗ ವಿಷಕಾರಿ ಅನಿಲದಿಂದ ಉಸಿರುಗಟ್ಟಿದೆ. ಇದರಿಂದ ಒಬ್ಬ ಕಾರ್ಮಿಕ ಮ್ಯಾನ್‌ಹೋಲ್ ಒಳಗಿನ ಕೊಳಚೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಮತೋರ್ವನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಆತ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ.

ಪರಿಸ್ಥಿತಿಯ ಗಂಭೀರತೆಯನ್ನು ಅರಿತ ವಾರಣಾಸಿ ಜಿಲ್ಲಾ ಮ್ಯಾಜಿಸ್ಟ್ರೇಟ್, ಘಟನೆಯ ಹಿಂದಿನ ಕಾರಣ ತಿಳಿಯಲು ಮತ್ತು ಭವಿಷ್ಯದಲ್ಲಿ ಇಂತಹ ದುರಂತಗಳನ್ನು ನಡೆಯದಂತೆ ತಡೆಯಲು ತಕ್ಷಣದ ತನಿಖೆಗೆ ಆದೇಶಿಸಿದ್ದಾರೆ.

ಘಟನೆ ಕುರಿತು ಮೂಕನಾಯಕ ಜೊತೆ ಮಾತನಾಡಿರುವ ಸ್ವಚ್ಚತಾ ಕಾರ್ಮಿಕ ರಾಮ್‌ಬಾಬು, “ರಾಜ್‌ಘಾಟ್‌ನ ರವಿದಾಸ್ ದೇವಸ್ಥಾನದ ಮುಂಭಾಗದಲ್ಲಿ ಚರಂಡಿ ಬ್ಲಾಕ್‌ ಆಗಿದ್ದ ಬಗ್ಗೆ ನಮಗೆ ಮಾಹಿತಿ ಬಂದಿತ್ತು. ಈ ಮಾಹಿತಿ ಮೇರೆಗೆ ಗಂಗಾ ಮಾಲಿನ್ಯ ಇಲಾಖೆ ಮಚ್ಚೋದಾರಿ ಪ್ರದೇಶದ ಘುರೆಲಾಲ್ (40 ವರ್ಷ) ಮತ್ತು ಸುನೀಲ್ ಅವರನ್ನು ಸ್ವಚ್ಛತಾ ಕಾರ್ಯಕ್ಕಾಗಿ ಭೈಸಾಸೂರ್ ಘಾಟ್‌ಗೆ ಕರೆಸಿತ್ತು. ಜೊತೆಯಾಗಿ ಬಂದ ಘುರೆಲಾಲ್ ಮತ್ತು ಸುನಿಲ್ ಮ್ಯಾನ್‌ಹೋಲ್‌ಗೆ ಇಳಿದಿದ್ದಾರೆ. ಅವರ ಮೂವರು ಸಹೋದ್ಯೋಗಿಗಳು ಮೇಲ್ಗಡೆ ಹಗ್ಗ ಹಿಡಿದು ನಿಂತಿದ್ದರು” ಎಂದು ತಿಳಿಸಿದ್ದಾರೆ.

“ಸ್ವಲ್ಪ ಸಮಯದ ಬಳಿಕ ಮ್ಯಾನ್‌ಹೋಲ್‌ನಿಂದ ಹೊರಬಂದ ಸುನೀಲ್, ಘುರೆಲಾಲ್ ಮೌನವಾಗಿದ್ದಾರೆ ಮ್ಯಾನ್‌ಹೋಲ್‌ ಒಳಗಡೆ ವಿಷಕಾರಿ ಗ್ಯಾಸ್ ಇದೆ ಎಂದು ತಿಳಿಸಿದ್ದಾರೆ. ತಕ್ಷಣ ಮೇಲ್ಗಡೆ ಇದ್ದ ಕಾರ್ಮಿಕರು ತಮ್ಮ ಮೇಲ್ವಿಚಾರಕ ಬಾಬು ಯಾದವ್ ಅವರಿಗೆ ಮಾಹಿತಿ ನೀಡಿದ್ದಾರೆ. ಅಪಾಯದ ಕುರಿತು ಅರಿತ ಬಾಬು ಯಾದವ್, ತನ್ನ ಕಾರ್ಮಿಕರಿಗೆ ಸಹಾಯ ಮಾಡುವುದರ ಬದಲಾಗಿ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಈ ವೇಳೆ ಕಾರ್ಮಿಕರು ರಾಜ್‌ಘಾಟ್‌ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಎನ್‌ಆರ್‌ಎಫ್‌ ಸಿಬ್ಬಂದಿಯನ್ನು ಕರೆಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ ಎಂದು ರಾಮ್‌ ಬಾಬು ಮಾಹಿತಿ ನೀಡಿದ್ದಾರೆ.

ಎನ್‌ಡಿಆರ್‌ಎಫ್‌ ಸಿಬ್ಬಂದಿ ಘುರೆಲಾಲ್ ಅವರನ್ನು ಮೇಲೆತ್ತಿ ತಕ್ಷಣ ಶಿವಪ್ರಸಾದ್ ಗುಪ್ತಾ ವಿಭಾಗೀಯ ಆಸ್ಪತ್ರೆಗೆ ಸಾಗಿಸಿದ್ದಾರೆ. ಅಲ್ಲಿ ವೈದ್ಯರು ಘುರೆಲಾಲ್ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಸುಮಾರು 15 ವರ್ಷಗಳಿಂದ ಚರಂಡಿ ಸ್ವಚ್ಛತಾ ಕಾರ್ಯದಲ್ಲಿ ನಿರತರಾಗಿದ್ದ ಘುರೆಲಾಲ್ ಅವರು, ಗೋಲಾ ಘಾಟ್‌ನಲ್ಲಿರುವ ಒಳಚರಂಡಿ ಪಂಪಿಂಗ್ ಸ್ಟೇಷನ್‌ನಲ್ಲಿ ಗುತ್ತಿಗೆದಾರರೊಬ್ಬರ ಅಡಿಯಲ್ಲಿ ಕೆಲಸ ಮಾಡುತ್ತಿದ್ದರು. ಅವರ ಮಾಸಿಕ ವೇತನ 12 ಸಾವಿರ ರೂಪಾಯಿ ಆಗಿತ್ತು

ಮ್ಯಾನ್‌ಹೋಲ್‌ ಸ್ವಚ್ಚತೆ ಅಥವಾ ಅಸುರಕ್ಷಿತ ಚರಂಡಿ ಸ್ವಚ್ಛಗೊಳಿಸುವುದನ್ನು ಸುಪ್ರೀಂ ಕೋರ್ಟ್‌ ನಿಷೇಧಿಸಿದೆ.

ನೈರ್ಮಲ್ಯ ಕಾರ್ಮಿಕರ ಜೀವ ರಕ್ಷಿಸುವ ಉದ್ದೇಶದೊಂದಿಗೆ ಅಪಾಯಕಾರಿ ಚರಂಡಿ ಸ್ವಚ್ಛಗೊಳಿಸುವ ಕೆಲಸಗಳ ಮೇಲೆ ಸುಪ್ರೀಂ ಕೋರ್ಟ್ ನಿಷೇಧ ಹೇರಿದೆ. ಮ್ಯಾನುಯಲ್ ಸ್ಕ್ಯಾವೆಂಜಿಂಗ್ ಆಕ್ಟ್ 2013 ಮತ್ತು 20 ಅಕ್ಟೋಬರ್ 2023 ರ ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ, ಯಾವುದೇ ನೈರ್ಮಲ್ಯ ಕಾರ್ಮಿಕರು ಸರಿಯಾದ ಸುರಕ್ಷತಾ ಸಾಧನಗಳಿಲ್ಲದೆ ಒಳಚರಂಡಿ ಅಥವಾ ಸೆಪ್ಟಿಕ್ ಟ್ಯಾಂಕ್‌ಗೆ ಇಳಿಯುವುದು ಶಿಕ್ಷಾರ್ಹ ಅಪರಾಧವಾಗಿದೆ.

ಇದನ್ನೂ ಓದಿ : ಕೇರಳ: ವಲಸೆ ಕಾರ್ಮಿಕನನ್ನು ಥಳಿಸಿ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...