Homeಮುಖಪುಟಉತ್ತರ ಪ್ರದೇಶ: ಪ್ರಧಾನಿ ಮೋದಿ ಕ್ಷೇತ್ರದಲ್ಲಿ ಮ್ಯಾನ್‌ಹೋಲ್‌ಗೆ ಇಳಿದಿದ್ದ ಕಾರ್ಮಿಕ ಸಾವು

ಉತ್ತರ ಪ್ರದೇಶ: ಪ್ರಧಾನಿ ಮೋದಿ ಕ್ಷೇತ್ರದಲ್ಲಿ ಮ್ಯಾನ್‌ಹೋಲ್‌ಗೆ ಇಳಿದಿದ್ದ ಕಾರ್ಮಿಕ ಸಾವು

ಈ ಹಿಂದೆ ಪ್ರಧಾನಿ ಮೋದಿ ಸ್ವಚ್ಚತಾ ಕಾರ್ಮಿಕರ ಪಾದ ತೊಳೆದು ಸುದ್ದಿಯಾಗಿದ್ದ ಅದೇ ಜಾಗದಲ್ಲಿ ದುರ್ಘಟನೆ ನಡೆದಿದೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರ ತವರು ಕ್ಷೇತ್ರ ವಾರಣಾಸಿಯಲ್ಲಿ ದಲಿತ ಕಾರ್ಮಿಕರೊಬ್ಬರು ಮ್ಯಾನ್‌ ಹೋಲ್‌ ಸ್ವಚ್ಚಗೊಳಿಸುವಾಗ ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ವರದಿಗಳು ತಿಳಿಸಿವೆ.

ಈ ಹಿಂದೆ ಪ್ರಧಾನಿ ಮೋದಿ ಸ್ವಚ್ಚತಾ ಕಾರ್ಮಿಕರ ಪಾದ ತೊಳೆದು ಸುದ್ದಿಯಾಗಿದ್ದ ಅದೇ ಜಾಗದಲ್ಲಿ ದುರ್ಘಟನೆ ನಡೆದಿದೆ ಎಂದು ದಿ ಮೂಕನಾಯಕ ವರದಿ ಮಾಡಿದೆ.

ಆಘಾತಕಾರಿ ಸಂಗತಿಯೆಂದರೆ, ಉತ್ತರ ಪ್ರದೇಶದಲ್ಲಿ ಕಳೆದ ಐದು ವರ್ಷಗಳಲ್ಲಿ ಬರೋಬ್ಬರಿ 400 ನೈರ್ಮಲ್ಯ ಕಾರ್ಮಿಕರು ಮ್ಯಾನ್‌ಹೋಲ್, ಚರಂಡಿಗಳನ್ನು ಸ್ವಚ್ಚಗೊಳಿಸುವಾಗ ಪ್ರಾಣ ಕಳೆದುಕೊಂಡಿದ್ದಾರೆ. ಇದು ಉತ್ತರ ಪ್ರದೇಶದಲ್ಲಿ ಮುಂದುವರಿದಿರುವ ಭೀಕರ ಪರಿಸ್ಥಿತಿಯನ್ನು ಎತ್ತಿ ತೋರಿಸುತ್ತದೆ. ಅಂತಹ ಸಾವು ನೋವುಗಳಲ್ಲಿ ರಾಜ್ಯವು ಎರಡನೇ ಸ್ಥಾನದಲ್ಲಿದೆ ಎಂದು ವರದಿ ಹೇಳಿದೆ.

ವಾರಣಾಸಿಯ ಆದಂಪುರ ಪ್ರದೇಶದ ಭೈಸಾಪುರ ಘಾಟ್‌ನಲ್ಲಿ ಕಾರ್ಮಿಕ ಮೃತಪಟ್ಟಿದ್ದಾರೆ. ಇಬ್ಬರು ಕಾರ್ಮಿಕರು ಮ್ಯಾನ್‌ಹೋಲ್‌ಗೆ ಇಳಿದು ಸ್ವಚ್ಚಗೊಳಿಸುತ್ತಿದ್ದಾಗ ವಿಷಕಾರಿ ಅನಿಲದಿಂದ ಉಸಿರುಗಟ್ಟಿದೆ. ಇದರಿಂದ ಒಬ್ಬ ಕಾರ್ಮಿಕ ಮ್ಯಾನ್‌ಹೋಲ್ ಒಳಗಿನ ಕೊಳಚೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಮತೋರ್ವನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಆತ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ.

ಪರಿಸ್ಥಿತಿಯ ಗಂಭೀರತೆಯನ್ನು ಅರಿತ ವಾರಣಾಸಿ ಜಿಲ್ಲಾ ಮ್ಯಾಜಿಸ್ಟ್ರೇಟ್, ಘಟನೆಯ ಹಿಂದಿನ ಕಾರಣ ತಿಳಿಯಲು ಮತ್ತು ಭವಿಷ್ಯದಲ್ಲಿ ಇಂತಹ ದುರಂತಗಳನ್ನು ನಡೆಯದಂತೆ ತಡೆಯಲು ತಕ್ಷಣದ ತನಿಖೆಗೆ ಆದೇಶಿಸಿದ್ದಾರೆ.

ಘಟನೆ ಕುರಿತು ಮೂಕನಾಯಕ ಜೊತೆ ಮಾತನಾಡಿರುವ ಸ್ವಚ್ಚತಾ ಕಾರ್ಮಿಕ ರಾಮ್‌ಬಾಬು, “ರಾಜ್‌ಘಾಟ್‌ನ ರವಿದಾಸ್ ದೇವಸ್ಥಾನದ ಮುಂಭಾಗದಲ್ಲಿ ಚರಂಡಿ ಬ್ಲಾಕ್‌ ಆಗಿದ್ದ ಬಗ್ಗೆ ನಮಗೆ ಮಾಹಿತಿ ಬಂದಿತ್ತು. ಈ ಮಾಹಿತಿ ಮೇರೆಗೆ ಗಂಗಾ ಮಾಲಿನ್ಯ ಇಲಾಖೆ ಮಚ್ಚೋದಾರಿ ಪ್ರದೇಶದ ಘುರೆಲಾಲ್ (40 ವರ್ಷ) ಮತ್ತು ಸುನೀಲ್ ಅವರನ್ನು ಸ್ವಚ್ಛತಾ ಕಾರ್ಯಕ್ಕಾಗಿ ಭೈಸಾಸೂರ್ ಘಾಟ್‌ಗೆ ಕರೆಸಿತ್ತು. ಜೊತೆಯಾಗಿ ಬಂದ ಘುರೆಲಾಲ್ ಮತ್ತು ಸುನಿಲ್ ಮ್ಯಾನ್‌ಹೋಲ್‌ಗೆ ಇಳಿದಿದ್ದಾರೆ. ಅವರ ಮೂವರು ಸಹೋದ್ಯೋಗಿಗಳು ಮೇಲ್ಗಡೆ ಹಗ್ಗ ಹಿಡಿದು ನಿಂತಿದ್ದರು” ಎಂದು ತಿಳಿಸಿದ್ದಾರೆ.

“ಸ್ವಲ್ಪ ಸಮಯದ ಬಳಿಕ ಮ್ಯಾನ್‌ಹೋಲ್‌ನಿಂದ ಹೊರಬಂದ ಸುನೀಲ್, ಘುರೆಲಾಲ್ ಮೌನವಾಗಿದ್ದಾರೆ ಮ್ಯಾನ್‌ಹೋಲ್‌ ಒಳಗಡೆ ವಿಷಕಾರಿ ಗ್ಯಾಸ್ ಇದೆ ಎಂದು ತಿಳಿಸಿದ್ದಾರೆ. ತಕ್ಷಣ ಮೇಲ್ಗಡೆ ಇದ್ದ ಕಾರ್ಮಿಕರು ತಮ್ಮ ಮೇಲ್ವಿಚಾರಕ ಬಾಬು ಯಾದವ್ ಅವರಿಗೆ ಮಾಹಿತಿ ನೀಡಿದ್ದಾರೆ. ಅಪಾಯದ ಕುರಿತು ಅರಿತ ಬಾಬು ಯಾದವ್, ತನ್ನ ಕಾರ್ಮಿಕರಿಗೆ ಸಹಾಯ ಮಾಡುವುದರ ಬದಲಾಗಿ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಈ ವೇಳೆ ಕಾರ್ಮಿಕರು ರಾಜ್‌ಘಾಟ್‌ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಎನ್‌ಆರ್‌ಎಫ್‌ ಸಿಬ್ಬಂದಿಯನ್ನು ಕರೆಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ ಎಂದು ರಾಮ್‌ ಬಾಬು ಮಾಹಿತಿ ನೀಡಿದ್ದಾರೆ.

ಎನ್‌ಡಿಆರ್‌ಎಫ್‌ ಸಿಬ್ಬಂದಿ ಘುರೆಲಾಲ್ ಅವರನ್ನು ಮೇಲೆತ್ತಿ ತಕ್ಷಣ ಶಿವಪ್ರಸಾದ್ ಗುಪ್ತಾ ವಿಭಾಗೀಯ ಆಸ್ಪತ್ರೆಗೆ ಸಾಗಿಸಿದ್ದಾರೆ. ಅಲ್ಲಿ ವೈದ್ಯರು ಘುರೆಲಾಲ್ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಸುಮಾರು 15 ವರ್ಷಗಳಿಂದ ಚರಂಡಿ ಸ್ವಚ್ಛತಾ ಕಾರ್ಯದಲ್ಲಿ ನಿರತರಾಗಿದ್ದ ಘುರೆಲಾಲ್ ಅವರು, ಗೋಲಾ ಘಾಟ್‌ನಲ್ಲಿರುವ ಒಳಚರಂಡಿ ಪಂಪಿಂಗ್ ಸ್ಟೇಷನ್‌ನಲ್ಲಿ ಗುತ್ತಿಗೆದಾರರೊಬ್ಬರ ಅಡಿಯಲ್ಲಿ ಕೆಲಸ ಮಾಡುತ್ತಿದ್ದರು. ಅವರ ಮಾಸಿಕ ವೇತನ 12 ಸಾವಿರ ರೂಪಾಯಿ ಆಗಿತ್ತು

ಮ್ಯಾನ್‌ಹೋಲ್‌ ಸ್ವಚ್ಚತೆ ಅಥವಾ ಅಸುರಕ್ಷಿತ ಚರಂಡಿ ಸ್ವಚ್ಛಗೊಳಿಸುವುದನ್ನು ಸುಪ್ರೀಂ ಕೋರ್ಟ್‌ ನಿಷೇಧಿಸಿದೆ.

ನೈರ್ಮಲ್ಯ ಕಾರ್ಮಿಕರ ಜೀವ ರಕ್ಷಿಸುವ ಉದ್ದೇಶದೊಂದಿಗೆ ಅಪಾಯಕಾರಿ ಚರಂಡಿ ಸ್ವಚ್ಛಗೊಳಿಸುವ ಕೆಲಸಗಳ ಮೇಲೆ ಸುಪ್ರೀಂ ಕೋರ್ಟ್ ನಿಷೇಧ ಹೇರಿದೆ. ಮ್ಯಾನುಯಲ್ ಸ್ಕ್ಯಾವೆಂಜಿಂಗ್ ಆಕ್ಟ್ 2013 ಮತ್ತು 20 ಅಕ್ಟೋಬರ್ 2023 ರ ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ, ಯಾವುದೇ ನೈರ್ಮಲ್ಯ ಕಾರ್ಮಿಕರು ಸರಿಯಾದ ಸುರಕ್ಷತಾ ಸಾಧನಗಳಿಲ್ಲದೆ ಒಳಚರಂಡಿ ಅಥವಾ ಸೆಪ್ಟಿಕ್ ಟ್ಯಾಂಕ್‌ಗೆ ಇಳಿಯುವುದು ಶಿಕ್ಷಾರ್ಹ ಅಪರಾಧವಾಗಿದೆ.

ಇದನ್ನೂ ಓದಿ : ಕೇರಳ: ವಲಸೆ ಕಾರ್ಮಿಕನನ್ನು ಥಳಿಸಿ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...