Homeಮುಖಪುಟಉತ್ತರ ಪ್ರದೇಶ: ಪ್ರಧಾನಿ ಮೋದಿ ಕ್ಷೇತ್ರದಲ್ಲಿ ಮ್ಯಾನ್‌ಹೋಲ್‌ಗೆ ಇಳಿದಿದ್ದ ಕಾರ್ಮಿಕ ಸಾವು

ಉತ್ತರ ಪ್ರದೇಶ: ಪ್ರಧಾನಿ ಮೋದಿ ಕ್ಷೇತ್ರದಲ್ಲಿ ಮ್ಯಾನ್‌ಹೋಲ್‌ಗೆ ಇಳಿದಿದ್ದ ಕಾರ್ಮಿಕ ಸಾವು

ಈ ಹಿಂದೆ ಪ್ರಧಾನಿ ಮೋದಿ ಸ್ವಚ್ಚತಾ ಕಾರ್ಮಿಕರ ಪಾದ ತೊಳೆದು ಸುದ್ದಿಯಾಗಿದ್ದ ಅದೇ ಜಾಗದಲ್ಲಿ ದುರ್ಘಟನೆ ನಡೆದಿದೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರ ತವರು ಕ್ಷೇತ್ರ ವಾರಣಾಸಿಯಲ್ಲಿ ದಲಿತ ಕಾರ್ಮಿಕರೊಬ್ಬರು ಮ್ಯಾನ್‌ ಹೋಲ್‌ ಸ್ವಚ್ಚಗೊಳಿಸುವಾಗ ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ವರದಿಗಳು ತಿಳಿಸಿವೆ.

ಈ ಹಿಂದೆ ಪ್ರಧಾನಿ ಮೋದಿ ಸ್ವಚ್ಚತಾ ಕಾರ್ಮಿಕರ ಪಾದ ತೊಳೆದು ಸುದ್ದಿಯಾಗಿದ್ದ ಅದೇ ಜಾಗದಲ್ಲಿ ದುರ್ಘಟನೆ ನಡೆದಿದೆ ಎಂದು ದಿ ಮೂಕನಾಯಕ ವರದಿ ಮಾಡಿದೆ.

ಆಘಾತಕಾರಿ ಸಂಗತಿಯೆಂದರೆ, ಉತ್ತರ ಪ್ರದೇಶದಲ್ಲಿ ಕಳೆದ ಐದು ವರ್ಷಗಳಲ್ಲಿ ಬರೋಬ್ಬರಿ 400 ನೈರ್ಮಲ್ಯ ಕಾರ್ಮಿಕರು ಮ್ಯಾನ್‌ಹೋಲ್, ಚರಂಡಿಗಳನ್ನು ಸ್ವಚ್ಚಗೊಳಿಸುವಾಗ ಪ್ರಾಣ ಕಳೆದುಕೊಂಡಿದ್ದಾರೆ. ಇದು ಉತ್ತರ ಪ್ರದೇಶದಲ್ಲಿ ಮುಂದುವರಿದಿರುವ ಭೀಕರ ಪರಿಸ್ಥಿತಿಯನ್ನು ಎತ್ತಿ ತೋರಿಸುತ್ತದೆ. ಅಂತಹ ಸಾವು ನೋವುಗಳಲ್ಲಿ ರಾಜ್ಯವು ಎರಡನೇ ಸ್ಥಾನದಲ್ಲಿದೆ ಎಂದು ವರದಿ ಹೇಳಿದೆ.

ವಾರಣಾಸಿಯ ಆದಂಪುರ ಪ್ರದೇಶದ ಭೈಸಾಪುರ ಘಾಟ್‌ನಲ್ಲಿ ಕಾರ್ಮಿಕ ಮೃತಪಟ್ಟಿದ್ದಾರೆ. ಇಬ್ಬರು ಕಾರ್ಮಿಕರು ಮ್ಯಾನ್‌ಹೋಲ್‌ಗೆ ಇಳಿದು ಸ್ವಚ್ಚಗೊಳಿಸುತ್ತಿದ್ದಾಗ ವಿಷಕಾರಿ ಅನಿಲದಿಂದ ಉಸಿರುಗಟ್ಟಿದೆ. ಇದರಿಂದ ಒಬ್ಬ ಕಾರ್ಮಿಕ ಮ್ಯಾನ್‌ಹೋಲ್ ಒಳಗಿನ ಕೊಳಚೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಮತೋರ್ವನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಆತ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ.

ಪರಿಸ್ಥಿತಿಯ ಗಂಭೀರತೆಯನ್ನು ಅರಿತ ವಾರಣಾಸಿ ಜಿಲ್ಲಾ ಮ್ಯಾಜಿಸ್ಟ್ರೇಟ್, ಘಟನೆಯ ಹಿಂದಿನ ಕಾರಣ ತಿಳಿಯಲು ಮತ್ತು ಭವಿಷ್ಯದಲ್ಲಿ ಇಂತಹ ದುರಂತಗಳನ್ನು ನಡೆಯದಂತೆ ತಡೆಯಲು ತಕ್ಷಣದ ತನಿಖೆಗೆ ಆದೇಶಿಸಿದ್ದಾರೆ.

ಘಟನೆ ಕುರಿತು ಮೂಕನಾಯಕ ಜೊತೆ ಮಾತನಾಡಿರುವ ಸ್ವಚ್ಚತಾ ಕಾರ್ಮಿಕ ರಾಮ್‌ಬಾಬು, “ರಾಜ್‌ಘಾಟ್‌ನ ರವಿದಾಸ್ ದೇವಸ್ಥಾನದ ಮುಂಭಾಗದಲ್ಲಿ ಚರಂಡಿ ಬ್ಲಾಕ್‌ ಆಗಿದ್ದ ಬಗ್ಗೆ ನಮಗೆ ಮಾಹಿತಿ ಬಂದಿತ್ತು. ಈ ಮಾಹಿತಿ ಮೇರೆಗೆ ಗಂಗಾ ಮಾಲಿನ್ಯ ಇಲಾಖೆ ಮಚ್ಚೋದಾರಿ ಪ್ರದೇಶದ ಘುರೆಲಾಲ್ (40 ವರ್ಷ) ಮತ್ತು ಸುನೀಲ್ ಅವರನ್ನು ಸ್ವಚ್ಛತಾ ಕಾರ್ಯಕ್ಕಾಗಿ ಭೈಸಾಸೂರ್ ಘಾಟ್‌ಗೆ ಕರೆಸಿತ್ತು. ಜೊತೆಯಾಗಿ ಬಂದ ಘುರೆಲಾಲ್ ಮತ್ತು ಸುನಿಲ್ ಮ್ಯಾನ್‌ಹೋಲ್‌ಗೆ ಇಳಿದಿದ್ದಾರೆ. ಅವರ ಮೂವರು ಸಹೋದ್ಯೋಗಿಗಳು ಮೇಲ್ಗಡೆ ಹಗ್ಗ ಹಿಡಿದು ನಿಂತಿದ್ದರು” ಎಂದು ತಿಳಿಸಿದ್ದಾರೆ.

“ಸ್ವಲ್ಪ ಸಮಯದ ಬಳಿಕ ಮ್ಯಾನ್‌ಹೋಲ್‌ನಿಂದ ಹೊರಬಂದ ಸುನೀಲ್, ಘುರೆಲಾಲ್ ಮೌನವಾಗಿದ್ದಾರೆ ಮ್ಯಾನ್‌ಹೋಲ್‌ ಒಳಗಡೆ ವಿಷಕಾರಿ ಗ್ಯಾಸ್ ಇದೆ ಎಂದು ತಿಳಿಸಿದ್ದಾರೆ. ತಕ್ಷಣ ಮೇಲ್ಗಡೆ ಇದ್ದ ಕಾರ್ಮಿಕರು ತಮ್ಮ ಮೇಲ್ವಿಚಾರಕ ಬಾಬು ಯಾದವ್ ಅವರಿಗೆ ಮಾಹಿತಿ ನೀಡಿದ್ದಾರೆ. ಅಪಾಯದ ಕುರಿತು ಅರಿತ ಬಾಬು ಯಾದವ್, ತನ್ನ ಕಾರ್ಮಿಕರಿಗೆ ಸಹಾಯ ಮಾಡುವುದರ ಬದಲಾಗಿ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಈ ವೇಳೆ ಕಾರ್ಮಿಕರು ರಾಜ್‌ಘಾಟ್‌ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಎನ್‌ಆರ್‌ಎಫ್‌ ಸಿಬ್ಬಂದಿಯನ್ನು ಕರೆಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ ಎಂದು ರಾಮ್‌ ಬಾಬು ಮಾಹಿತಿ ನೀಡಿದ್ದಾರೆ.

ಎನ್‌ಡಿಆರ್‌ಎಫ್‌ ಸಿಬ್ಬಂದಿ ಘುರೆಲಾಲ್ ಅವರನ್ನು ಮೇಲೆತ್ತಿ ತಕ್ಷಣ ಶಿವಪ್ರಸಾದ್ ಗುಪ್ತಾ ವಿಭಾಗೀಯ ಆಸ್ಪತ್ರೆಗೆ ಸಾಗಿಸಿದ್ದಾರೆ. ಅಲ್ಲಿ ವೈದ್ಯರು ಘುರೆಲಾಲ್ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಸುಮಾರು 15 ವರ್ಷಗಳಿಂದ ಚರಂಡಿ ಸ್ವಚ್ಛತಾ ಕಾರ್ಯದಲ್ಲಿ ನಿರತರಾಗಿದ್ದ ಘುರೆಲಾಲ್ ಅವರು, ಗೋಲಾ ಘಾಟ್‌ನಲ್ಲಿರುವ ಒಳಚರಂಡಿ ಪಂಪಿಂಗ್ ಸ್ಟೇಷನ್‌ನಲ್ಲಿ ಗುತ್ತಿಗೆದಾರರೊಬ್ಬರ ಅಡಿಯಲ್ಲಿ ಕೆಲಸ ಮಾಡುತ್ತಿದ್ದರು. ಅವರ ಮಾಸಿಕ ವೇತನ 12 ಸಾವಿರ ರೂಪಾಯಿ ಆಗಿತ್ತು

ಮ್ಯಾನ್‌ಹೋಲ್‌ ಸ್ವಚ್ಚತೆ ಅಥವಾ ಅಸುರಕ್ಷಿತ ಚರಂಡಿ ಸ್ವಚ್ಛಗೊಳಿಸುವುದನ್ನು ಸುಪ್ರೀಂ ಕೋರ್ಟ್‌ ನಿಷೇಧಿಸಿದೆ.

ನೈರ್ಮಲ್ಯ ಕಾರ್ಮಿಕರ ಜೀವ ರಕ್ಷಿಸುವ ಉದ್ದೇಶದೊಂದಿಗೆ ಅಪಾಯಕಾರಿ ಚರಂಡಿ ಸ್ವಚ್ಛಗೊಳಿಸುವ ಕೆಲಸಗಳ ಮೇಲೆ ಸುಪ್ರೀಂ ಕೋರ್ಟ್ ನಿಷೇಧ ಹೇರಿದೆ. ಮ್ಯಾನುಯಲ್ ಸ್ಕ್ಯಾವೆಂಜಿಂಗ್ ಆಕ್ಟ್ 2013 ಮತ್ತು 20 ಅಕ್ಟೋಬರ್ 2023 ರ ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ, ಯಾವುದೇ ನೈರ್ಮಲ್ಯ ಕಾರ್ಮಿಕರು ಸರಿಯಾದ ಸುರಕ್ಷತಾ ಸಾಧನಗಳಿಲ್ಲದೆ ಒಳಚರಂಡಿ ಅಥವಾ ಸೆಪ್ಟಿಕ್ ಟ್ಯಾಂಕ್‌ಗೆ ಇಳಿಯುವುದು ಶಿಕ್ಷಾರ್ಹ ಅಪರಾಧವಾಗಿದೆ.

ಇದನ್ನೂ ಓದಿ : ಕೇರಳ: ವಲಸೆ ಕಾರ್ಮಿಕನನ್ನು ಥಳಿಸಿ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...