Homeಮುಖಪುಟಉತ್ತರ ಪ್ರದೇಶ: ಪ್ರಧಾನಿ ಮೋದಿ ಕ್ಷೇತ್ರದಲ್ಲಿ ಮ್ಯಾನ್‌ಹೋಲ್‌ಗೆ ಇಳಿದಿದ್ದ ಕಾರ್ಮಿಕ ಸಾವು

ಉತ್ತರ ಪ್ರದೇಶ: ಪ್ರಧಾನಿ ಮೋದಿ ಕ್ಷೇತ್ರದಲ್ಲಿ ಮ್ಯಾನ್‌ಹೋಲ್‌ಗೆ ಇಳಿದಿದ್ದ ಕಾರ್ಮಿಕ ಸಾವು

ಈ ಹಿಂದೆ ಪ್ರಧಾನಿ ಮೋದಿ ಸ್ವಚ್ಚತಾ ಕಾರ್ಮಿಕರ ಪಾದ ತೊಳೆದು ಸುದ್ದಿಯಾಗಿದ್ದ ಅದೇ ಜಾಗದಲ್ಲಿ ದುರ್ಘಟನೆ ನಡೆದಿದೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರ ತವರು ಕ್ಷೇತ್ರ ವಾರಣಾಸಿಯಲ್ಲಿ ದಲಿತ ಕಾರ್ಮಿಕರೊಬ್ಬರು ಮ್ಯಾನ್‌ ಹೋಲ್‌ ಸ್ವಚ್ಚಗೊಳಿಸುವಾಗ ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ವರದಿಗಳು ತಿಳಿಸಿವೆ.

ಈ ಹಿಂದೆ ಪ್ರಧಾನಿ ಮೋದಿ ಸ್ವಚ್ಚತಾ ಕಾರ್ಮಿಕರ ಪಾದ ತೊಳೆದು ಸುದ್ದಿಯಾಗಿದ್ದ ಅದೇ ಜಾಗದಲ್ಲಿ ದುರ್ಘಟನೆ ನಡೆದಿದೆ ಎಂದು ದಿ ಮೂಕನಾಯಕ ವರದಿ ಮಾಡಿದೆ.

ಆಘಾತಕಾರಿ ಸಂಗತಿಯೆಂದರೆ, ಉತ್ತರ ಪ್ರದೇಶದಲ್ಲಿ ಕಳೆದ ಐದು ವರ್ಷಗಳಲ್ಲಿ ಬರೋಬ್ಬರಿ 400 ನೈರ್ಮಲ್ಯ ಕಾರ್ಮಿಕರು ಮ್ಯಾನ್‌ಹೋಲ್, ಚರಂಡಿಗಳನ್ನು ಸ್ವಚ್ಚಗೊಳಿಸುವಾಗ ಪ್ರಾಣ ಕಳೆದುಕೊಂಡಿದ್ದಾರೆ. ಇದು ಉತ್ತರ ಪ್ರದೇಶದಲ್ಲಿ ಮುಂದುವರಿದಿರುವ ಭೀಕರ ಪರಿಸ್ಥಿತಿಯನ್ನು ಎತ್ತಿ ತೋರಿಸುತ್ತದೆ. ಅಂತಹ ಸಾವು ನೋವುಗಳಲ್ಲಿ ರಾಜ್ಯವು ಎರಡನೇ ಸ್ಥಾನದಲ್ಲಿದೆ ಎಂದು ವರದಿ ಹೇಳಿದೆ.

ವಾರಣಾಸಿಯ ಆದಂಪುರ ಪ್ರದೇಶದ ಭೈಸಾಪುರ ಘಾಟ್‌ನಲ್ಲಿ ಕಾರ್ಮಿಕ ಮೃತಪಟ್ಟಿದ್ದಾರೆ. ಇಬ್ಬರು ಕಾರ್ಮಿಕರು ಮ್ಯಾನ್‌ಹೋಲ್‌ಗೆ ಇಳಿದು ಸ್ವಚ್ಚಗೊಳಿಸುತ್ತಿದ್ದಾಗ ವಿಷಕಾರಿ ಅನಿಲದಿಂದ ಉಸಿರುಗಟ್ಟಿದೆ. ಇದರಿಂದ ಒಬ್ಬ ಕಾರ್ಮಿಕ ಮ್ಯಾನ್‌ಹೋಲ್ ಒಳಗಿನ ಕೊಳಚೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಮತೋರ್ವನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಆತ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ.

ಪರಿಸ್ಥಿತಿಯ ಗಂಭೀರತೆಯನ್ನು ಅರಿತ ವಾರಣಾಸಿ ಜಿಲ್ಲಾ ಮ್ಯಾಜಿಸ್ಟ್ರೇಟ್, ಘಟನೆಯ ಹಿಂದಿನ ಕಾರಣ ತಿಳಿಯಲು ಮತ್ತು ಭವಿಷ್ಯದಲ್ಲಿ ಇಂತಹ ದುರಂತಗಳನ್ನು ನಡೆಯದಂತೆ ತಡೆಯಲು ತಕ್ಷಣದ ತನಿಖೆಗೆ ಆದೇಶಿಸಿದ್ದಾರೆ.

ಘಟನೆ ಕುರಿತು ಮೂಕನಾಯಕ ಜೊತೆ ಮಾತನಾಡಿರುವ ಸ್ವಚ್ಚತಾ ಕಾರ್ಮಿಕ ರಾಮ್‌ಬಾಬು, “ರಾಜ್‌ಘಾಟ್‌ನ ರವಿದಾಸ್ ದೇವಸ್ಥಾನದ ಮುಂಭಾಗದಲ್ಲಿ ಚರಂಡಿ ಬ್ಲಾಕ್‌ ಆಗಿದ್ದ ಬಗ್ಗೆ ನಮಗೆ ಮಾಹಿತಿ ಬಂದಿತ್ತು. ಈ ಮಾಹಿತಿ ಮೇರೆಗೆ ಗಂಗಾ ಮಾಲಿನ್ಯ ಇಲಾಖೆ ಮಚ್ಚೋದಾರಿ ಪ್ರದೇಶದ ಘುರೆಲಾಲ್ (40 ವರ್ಷ) ಮತ್ತು ಸುನೀಲ್ ಅವರನ್ನು ಸ್ವಚ್ಛತಾ ಕಾರ್ಯಕ್ಕಾಗಿ ಭೈಸಾಸೂರ್ ಘಾಟ್‌ಗೆ ಕರೆಸಿತ್ತು. ಜೊತೆಯಾಗಿ ಬಂದ ಘುರೆಲಾಲ್ ಮತ್ತು ಸುನಿಲ್ ಮ್ಯಾನ್‌ಹೋಲ್‌ಗೆ ಇಳಿದಿದ್ದಾರೆ. ಅವರ ಮೂವರು ಸಹೋದ್ಯೋಗಿಗಳು ಮೇಲ್ಗಡೆ ಹಗ್ಗ ಹಿಡಿದು ನಿಂತಿದ್ದರು” ಎಂದು ತಿಳಿಸಿದ್ದಾರೆ.

“ಸ್ವಲ್ಪ ಸಮಯದ ಬಳಿಕ ಮ್ಯಾನ್‌ಹೋಲ್‌ನಿಂದ ಹೊರಬಂದ ಸುನೀಲ್, ಘುರೆಲಾಲ್ ಮೌನವಾಗಿದ್ದಾರೆ ಮ್ಯಾನ್‌ಹೋಲ್‌ ಒಳಗಡೆ ವಿಷಕಾರಿ ಗ್ಯಾಸ್ ಇದೆ ಎಂದು ತಿಳಿಸಿದ್ದಾರೆ. ತಕ್ಷಣ ಮೇಲ್ಗಡೆ ಇದ್ದ ಕಾರ್ಮಿಕರು ತಮ್ಮ ಮೇಲ್ವಿಚಾರಕ ಬಾಬು ಯಾದವ್ ಅವರಿಗೆ ಮಾಹಿತಿ ನೀಡಿದ್ದಾರೆ. ಅಪಾಯದ ಕುರಿತು ಅರಿತ ಬಾಬು ಯಾದವ್, ತನ್ನ ಕಾರ್ಮಿಕರಿಗೆ ಸಹಾಯ ಮಾಡುವುದರ ಬದಲಾಗಿ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಈ ವೇಳೆ ಕಾರ್ಮಿಕರು ರಾಜ್‌ಘಾಟ್‌ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಎನ್‌ಆರ್‌ಎಫ್‌ ಸಿಬ್ಬಂದಿಯನ್ನು ಕರೆಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ ಎಂದು ರಾಮ್‌ ಬಾಬು ಮಾಹಿತಿ ನೀಡಿದ್ದಾರೆ.

ಎನ್‌ಡಿಆರ್‌ಎಫ್‌ ಸಿಬ್ಬಂದಿ ಘುರೆಲಾಲ್ ಅವರನ್ನು ಮೇಲೆತ್ತಿ ತಕ್ಷಣ ಶಿವಪ್ರಸಾದ್ ಗುಪ್ತಾ ವಿಭಾಗೀಯ ಆಸ್ಪತ್ರೆಗೆ ಸಾಗಿಸಿದ್ದಾರೆ. ಅಲ್ಲಿ ವೈದ್ಯರು ಘುರೆಲಾಲ್ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಸುಮಾರು 15 ವರ್ಷಗಳಿಂದ ಚರಂಡಿ ಸ್ವಚ್ಛತಾ ಕಾರ್ಯದಲ್ಲಿ ನಿರತರಾಗಿದ್ದ ಘುರೆಲಾಲ್ ಅವರು, ಗೋಲಾ ಘಾಟ್‌ನಲ್ಲಿರುವ ಒಳಚರಂಡಿ ಪಂಪಿಂಗ್ ಸ್ಟೇಷನ್‌ನಲ್ಲಿ ಗುತ್ತಿಗೆದಾರರೊಬ್ಬರ ಅಡಿಯಲ್ಲಿ ಕೆಲಸ ಮಾಡುತ್ತಿದ್ದರು. ಅವರ ಮಾಸಿಕ ವೇತನ 12 ಸಾವಿರ ರೂಪಾಯಿ ಆಗಿತ್ತು

ಮ್ಯಾನ್‌ಹೋಲ್‌ ಸ್ವಚ್ಚತೆ ಅಥವಾ ಅಸುರಕ್ಷಿತ ಚರಂಡಿ ಸ್ವಚ್ಛಗೊಳಿಸುವುದನ್ನು ಸುಪ್ರೀಂ ಕೋರ್ಟ್‌ ನಿಷೇಧಿಸಿದೆ.

ನೈರ್ಮಲ್ಯ ಕಾರ್ಮಿಕರ ಜೀವ ರಕ್ಷಿಸುವ ಉದ್ದೇಶದೊಂದಿಗೆ ಅಪಾಯಕಾರಿ ಚರಂಡಿ ಸ್ವಚ್ಛಗೊಳಿಸುವ ಕೆಲಸಗಳ ಮೇಲೆ ಸುಪ್ರೀಂ ಕೋರ್ಟ್ ನಿಷೇಧ ಹೇರಿದೆ. ಮ್ಯಾನುಯಲ್ ಸ್ಕ್ಯಾವೆಂಜಿಂಗ್ ಆಕ್ಟ್ 2013 ಮತ್ತು 20 ಅಕ್ಟೋಬರ್ 2023 ರ ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ, ಯಾವುದೇ ನೈರ್ಮಲ್ಯ ಕಾರ್ಮಿಕರು ಸರಿಯಾದ ಸುರಕ್ಷತಾ ಸಾಧನಗಳಿಲ್ಲದೆ ಒಳಚರಂಡಿ ಅಥವಾ ಸೆಪ್ಟಿಕ್ ಟ್ಯಾಂಕ್‌ಗೆ ಇಳಿಯುವುದು ಶಿಕ್ಷಾರ್ಹ ಅಪರಾಧವಾಗಿದೆ.

ಇದನ್ನೂ ಓದಿ : ಕೇರಳ: ವಲಸೆ ಕಾರ್ಮಿಕನನ್ನು ಥಳಿಸಿ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...