ಭಾರತ್ ಜೋಡೋ ಯಾತ್ರೆಯ ವರ್ಷಾಚರಣೆ ನಿಮಿತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರಣಿ ಟ್ವೀಟ್ ಮಾಡಿದ್ದು, ಭಾರತವನ್ನು ಉಳಿಸಲು ಎರಡನೇ ಸ್ವಾತಂತ್ರ್ಯ ಹೋರಾಟ ನಡೆಸಬೇಕಾಗಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಡೆಸಿದ್ದ, ಭಾರತ್ ಜೋಡೋ ಯಾತ್ರೆ ಒಂದನೇ ವಾರ್ಷಿಕೋತ್ಸವದ ಅಂಗವಾಗಿ ಎಕ್ಸ್ ನಲ್ಲಿ ಸರಣಿ ಪೋಸ್ಟ್ಗಳನ್ನು ಮಾಡಿರುವ ಅವರು, ”ದೇಶ ಉಳಿಸುವ ಕರೆಗೆ ನಾವೆಲ್ಲಾ ಓಗೊಡಬೆಕಾಗಿದೆ” ಎಂದಿದ್ದಾರೆ.
ಇದು ನಾವೆಲ್ಲ ಕೈಕಟ್ಟಿ ತೆಪ್ಪಗೆ ಕೂರುವ ಕಾಲ ಅಲ್ಲ. ದೇಶ ಉಳಿಸುವ ಕರೆಗೆ ನಾವೆಲ್ಲರೂ ಓಗೊಡಬೇಕಾಗಿದೆ. ದೇಶದ ಏಕತೆ,ಸಮಗ್ರತೆಯನ್ನು ಉಳಿಸಲು, ದೇಶದ ಸಂಪತ್ತಿನ ಲೂಟಿಯನ್ನು ತಡೆಯಲು, ಸಂವಿಧಾನದ ಗೌರವವನ್ನು ಕಾಪಾಡಲು, ನಮ್ಮ ಹಿರಿಯರು ತ್ಯಾಗ-ಬಲಿದಾನಗಳ ಮೂಲಕ ಕಟ್ಟಿದ ಭಾರತವನ್ನು ಉಳಿಸಲು ಎರಡನೇ ಸ್ವಾತಂತ್ರ್ಯ ಹೋರಾಟ ನಡೆಸಬೇಕಾಗಿದೆ.
ಈ… pic.twitter.com/0acZKvuV1G— Siddaramaiah (@siddaramaiah) September 7, 2023
”ಇದು ನಾವೆಲ್ಲ ಕೈಕಟ್ಟಿ ತೆಪ್ಪಗೆ ಕೂರುವ ಕಾಲ ಅಲ್ಲ. ದೇಶ ಉಳಿಸುವ ಕರೆಗೆ ನಾವೆಲ್ಲರೂ ಓಗೊಡಬೇಕಾಗಿದೆ. ದೇಶದ ಎಕತೆ, ಸಮಗ್ರತಿಯನ್ನು ಉಳಿಸಲು, ದೇಶದ ಸಂಪತ್ತಿನ ಲೂಟಿಯನ್ನು ತಡೆಯಲು, ಸಂವಿಧಾನದ ಗೌರವವನ್ನು ಕಾಪಾಡಲು ನಮ್ಮ ಹಿರಿಯರು ತ್ಯಾಗ ಬಲಿದಾನಗಳ ಮೂಲಕ ಕಟ್ಟಿದ ಭಾರತವನ್ನು ಉಳಿಸಲು ಎರಡನೇ ಸ್ವಾತಂತ್ರ್ಯ ಹೋರಾಟ ನಡೆಸಬೇಕಾಗಿದೆ” ಎಂದು ಹೇಳಿದ್ದಾರೆ.
”ಈ ಹೋರಾಟಕ್ಕೆ, ಮಹಾತ್ಮ ಗಾಂಧೀಜಿ, ಬಾಬಾ ಸಾಹೇಬ್ ಅಂಬೇಡ್ಕರ್, ಪಂಡಿತ ಜವಾಹರಲಾಲ ನೆಹರೂ ಮೌಲಾನ ಅಬುಲ್ ಕಲಮ್ ಆಜಾದ್, ವಲ್ಲಭಭಾಯಿ ಪಟೇಲ್, ಇಂದಿರಾಗಾಂಧಿ, ರಾಜೀವ್ ಗಾಂಧಿ ಸೇರಿದಂತೆ ಹಿರಿಯ ಚೇತನಗಳು ನಡೆಸಿದ ಹೋರಾಟ ಸ್ಫೂರ್ತಿಯಾಗಬೇಕು” ಎಂದು ಅವರು ಹೇಳಿದ್ದಾರೆ.
”ಬನ್ನಿ ರಾಹುಲ್ ಗಾಂಧಿಯವರ ನಾಯಕತ್ವದಲ್ಲಿ ಮುನ್ನಡೆಯೋಣ, ಕೈಗೆ ಕೈ ಜೋಡಿಸಿ ಹೋರಾಟಕ್ಕೆ ಬಲ ತುಂಬೋಣ ಒಡೆಯುವವರನ್ನು ಹಿಮ್ಮೆಟ್ಟಿಸಿ ಕಟ್ಟುವ ಕಾಯಕದಲ್ಲಿ ತೊಡಗಿಸೋಣ ನವಕರ್ನಾಟಕವನ್ನೊಳಗೊಂಡ ನವಭಾರತವನ್ನು ನಿರ್ಮಿಸೋಣ” ಎಂದು ಅವರು ಕರೆ ನೀಡಿದ್ದಾರೆ.
ಇದನ್ನೂ ಓದಿ: ಜಾತಿ ದೌರ್ಜನ್ಯ ಪ್ರಕರಣ: 120 ದಿನ ಕಳೆದರೂ ಆರೋಪ ಪಟ್ಟಿ ಏಕೆ ದಾಖಲಿಸಿಲ್ಲ?; ಅಧಿಕಾರಿಗಳಿಗೆ ಸಿಎಂ ತರಾಟೆ