Homeಮುಖಪುಟಮೈಸೂರು ಪಾದಯಾತ್ರೆ ಮುಗಿದ ಬೆನ್ನಲ್ಲೇ ಬಿಜೆಪಿ ಅತೃಪ್ತರಿಂದ ಪ್ರತ್ಯೇಕ ಸಭೆ; ಬಿಎಸ್‌ವೈ ವಿರೋಧಿ ಬಣ ಸಕ್ರಿಯ

ಮೈಸೂರು ಪಾದಯಾತ್ರೆ ಮುಗಿದ ಬೆನ್ನಲ್ಲೇ ಬಿಜೆಪಿ ಅತೃಪ್ತರಿಂದ ಪ್ರತ್ಯೇಕ ಸಭೆ; ಬಿಎಸ್‌ವೈ ವಿರೋಧಿ ಬಣ ಸಕ್ರಿಯ

- Advertisement -
- Advertisement -

ಮೈಸೂರು ಅಭಿವೃದ್ಧಿ ಪ್ರಾಧಿಕಾರದಿಂದ (ಮೂಡಾ) ಮುಖ್ಯಮಂತ್ರಿ ಸಿದ್ದರಾಮಯ್ಯ ಅಕ್ರಮವಾಗಿ ನಿವೇಶನ ಪಡೆದಿದ್ದಾರೆ ಎಂದು ಆರೋಪಿಸಿ ಬಿಜೆಪಿ-ಜೆಡಿಎಸ್‌‍ ನಾಯಕರು ಪಾದಯಾತ್ರೆ ನಡೆಸಿದ ಬೆನ್ನಲ್ಲೇ, ಈ ಹೋರಾಟದಿಂದ ಅಂತರ ಕಾಯ್ದುಕೊಂಡಿದ್ದ ಬಿಜೆಪಿಯ ಹಿರಿಯ ನಾಯಕರು ಭಾನುವಾರ ರಹಸ್ಯ ಸಭೆ ನಡೆಸಿದ್ದಾರೆ.

ಬಿಎಸ್ ಯಡಿಯೂರಪ್ಪ ಕುಟುಂಬದ ವಿರುದ್ಧ ಸದಾ ವಾಗ್ದಾಳಿ ನಡೆಸುತ್ತಿರುವ ಬಸನಗೌಡ ಪಾಟೀಲ್‌ ಯತ್ನಾಳ್‌ ಹಾಗೂ ರಾಜ್ಯ ಬಿಜೆಪಿಯಿಂದ ನಿರ್ಲಕ್ಷ್ಯಕ್ಕೆ ಒಳಗಾಗಿರುವ ರಮೇಶ್‌ ಜಾರಕಿಹೊಳಿ ನೇತೃತ್ವದಲ್ಲಿ ಬೆಳಗಾವಿ ನಗರ ಖಾಸಗಿ ರೆಸಾರ್ಟ್‌ನಲ್ಲಿ ನಡೆದ ಅತೃಪ್ತರ ಗುಪ್ತ ಸಭೆಯಲ್ಲಿ ಹಿರಿಯ ನಾಯಕ ಅರವಿಂದ ಲಿಂಬಾವಳಿ ಕೂಡ ಭಾಗವಹಿಸಿದ್ದರು.

ಕಳೆದ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಸೋತ ಹಾಗೂ ಟಿಕೆಟ್ ವಂಚಿತ ಅತೃಪ್ತರನ್ನು ಒಟ್ಟುಗೂಡಿಸುವಲ್ಲಿ ಬಸನಗೌಡ ಪಾಟೀಲ್‌ ಯತ್ನಾಳ್‌ ಮತ್ತು ರಮೇಶ್‌ ಜಾರಕಿಹೊಳಿ ಯಶಸ್ವಿಯಾಗಿದ್ದಾರೆ. ಡಿ.ಕೆ. ಶಿವಕುಮಾರ್ ಜತೆಗೆ ಒಪ್ಪಂದ ಮಾಡಿಕೊಂಡಿರುವ ಬಿಎಸ್‌‍ವೈ, ಬಿ.ವೈ.ವಿಜಯೇಂದ್ರ ಹಾಗೂ ಅಶೋಕ್‌ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿರುವ ಅತೃಪ್ತರು, ಪಾದಯಾತ್ರೆಯಲ್ಲಿ ಪಾಲ್ಗೊಳ್ಳದೇ ಹಿಂದೆ ಸರಿದಿದ್ದರು. ಬೆಳಗಾವಿ ಜಿಲ್ಲೆಯ ಯಾವ ನಾಯಕರೂ ಸಹ ಬಿಜೆಪಿ ಪಾದಯಾತ್ರೆಯಲ್ಲಿ ಪಾಲ್ಗೊಂಡಿರಲಿಲ್ಲ. ಬಾಲಚಂದ್ರ ಜಾರಕಿಹೊಳಿ ಸಹ ಅಂತರ ಕಾಯ್ದುಕೊಂಡಿದ್ದಾರೆ.

ಇದೀಗ ಅತೃಪ್ತ ನಾಯಕರು ಸಭೆ ನಡೆಸಿದ್ದು, ಮಾಜಿ ಸಚಿವ ಅರವಿಂದ ಲಿಂಬಾವಳಿ, ಮಾಜಿ ಸಂಸದರಾದ ಜಿಎಂ ಸಿದ್ದೇಶ್ವರ ಹಾಗೂ ಪ್ರತಾಪ್ ಸಿಂಹ. ಮಾಜಿ ಶಾಸಕ ಕುಮಾರ್ ಬಂಗಾರಪ್ಪ, ಬಿಎಸ್‌ವೈ ಮಾಜಿ ಆಪ್ತ ಸಹಾಯಕ ಸಂತೋಷ್ ಸೇರಿದಂತೆ ಹಲವರು ಸಭೆಯಲ್ಲಿ ಭಾಗವಹಿಸಿದ್ದರು. ಮೂಡಾ ಪಾದಯಾತ್ರೆಗೆ ವಿರುದ್ಧವಾಗಿ ಕಾಂಗ್ರೆಸ್‌‍ ಸರ್ಕಾರದ ವಿರುದ್ಧ ವಾಲ್ಮೀಕಿ ಹಗರಣದ ವಿರುದ್ಧ ಹೋರಾಟ ನಡೆಸುವ ಬಗ್ಗೆ ಯೋಜನೆ ರೂಪಿಸುತ್ತಿದ್ದಾರೆ ಎನ್ನಲಾಗಿದೆ. ಬಿಎಸ್‌ವೈ ಕುಟುಂಬದ ವಿರುದ್ಧ ಯತ್ನಾಳ್‌ ನೇತೃತ್ವದಲ್ಲಿ ಮತ್ತೊಂದು ತಂಡ ಸಕ್ರಿಯವಾಗುತ್ತಿದೆ ಎನ್ನಲಾಗಿದೆ.

ಹಲವು ವರ್ಷಗಳಿಂದ ಬಿಎಸ್‌ವೈ ಕುಟುಂಬದ ವಿರುದ್ಧ ನಿರ್ದಾಕ್ಷಿಣ್ಯವಾಗಿ ಮಾತನಾಡುತ್ತಿರುವ ಯತ್ನಾಳ್ ಅವರಿಗೆ ಹಲವರು ಬಿಜೆಪಿ ನಾಯಕರು ಸಾಥ್ ಕೊಟ್ಟಿರುವುದು ಪಕ್ಷದ ಬಲಾಢ್ಯ ನಾಯಕರಿಗೆ ಈ ಗುಂಪಿನ ಕಾರ್ಯಚಟುವಟಿಕೆಗಳು ನುಂಗಲಾರದ ತುತ್ತಾಗಿದೆ. ಉತ್ತರ ಕರ್ನಾಟಕದ ಪ್ರಮುಖ ನಾಯಕರು ಮೈಸೂರು ಚಲೋ ಪಾದಯಾತ್ರೆಯಲ್ಲಿ ಭಾಗವಹಿಸಿದ್ದರೂ, ಬಹುತೇಕ ನಾಯಕರು ಯತ್ನಾಳ್‌ ಬೆನ್ನ ಹಿಂದೆ ಇರುವುದು ಸ್ಪಷ್ಟವಾಗಿದೆ.

ಲಿಂಬಾವಳಿ ಹೇಳಿದ್ದೇನು?

ಪಕ್ಷದ ಹಿರಿಯ ನಾಯಕರಲ್ಲಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಅರವಿಂದ ಲಿಂಬಾವಳಿ ಕೂಡ ಒಬ್ಬರು. ಇದೀಗ ಇವರೂ ಸಹ ಬಿಎಸ್‌ವೈ ಕುಟುಂಬದ ವಿರುದ್ಧ ಬಂಡಾಯ ಸಾರಿದ್ದು, ಅತೃಪ್ತರ ಗುಂಪು ಸೇರಿದ್ದಾರೆ.

ಸಭೆ ನಂತರ ಮಾಧ್ಯಮಗಳ ಜೊತೆಗೆ ಮಾತನಾಡಿದ ಲಿಂಬಾವಳಿ, “ಇದು ಅತೃಪ್ತರ ಅಥವಾ ಭಿನ್ನಮತಿಯರ ಸಭೆ ಅಲ್ಲ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ನಾವು ಹೀನಾಯವಾಗಿ ಸೋತಿದ್ದೇವೆ. ಲೋಕಸಭೆ ಚುನಾವಣೆಯಲ್ಲಿ ನಿರೀಕ್ಷಿಸಿದಷ್ಟು ಆಗದಿದ್ದರೂ ಸ್ವಲ್ಪ ಮಟ್ಟಿಗೆ ಸುಧಾರಣೆ ಆಗಿದೆ. ಬಿಜೆಪಿ ಪಕ್ಷದ ಬಲವರ್ಧನೆ ದೃಷ್ಟಿಯಿಂದ ಪಕ್ಷದಲ್ಲಿನ ದೋಷಗಳನ್ನು ಸರಿಪಡಿಸಿಕೊಂಡು ಪಕ್ಷ ಬಲಪಡಿಸಲು ಸಭೆಯಲ್ಲಿ ಚರ್ಚಿಸಲಾಗಿದೆ” ಎಂದು ಹೇಳಿದರು.

“ಮುಖ್ಯವಾಗಿ ವಾಲ್ಮೀಕಿ ನಿಗಮದ ಹಣ ದುರುಪಯೋಗ ಮತ್ತು ಎಸ್​ಸಿಪಿ, ಟಿಎಸ್​ಪಿ ಮೀಸಲಿಟ್ಟಿರುವ ಹಣವನ್ನು ತಮ್ಮ ಗ್ಯಾರಂಟಿಗಳಿಗೆ ಬಳಸಿರುವ ಬಗ್ಗೆಯೂ ಸುದೀರ್ಘ ಹೋರಾಟ ಕೈಗೆತ್ತಿಕೊಳ್ಳಲು ಇಂದಿನ ಸಭೆಯಲ್ಲಿ ಚರ್ಚಿಸಿದ್ದೇವೆ. ಈ ಎಲ್ಲ ಸಂಗತಿಗಳನ್ನು ಹೈಕಮಾಂಡ್ ಮತ್ತು ರಾಷ್ಟ್ರೀಯ ನಾಯಕತ್ವಕ್ಕೆ ತಿಳಿಸುತ್ತೇವೆ. ಮುಡಾ ಹಗರಣದ ಪಾದಯಾತ್ರೆ ರೀತಿಯಲ್ಲಿ ಇನ್ನು ಹೆಚ್ಚು ಪ್ರಭಾವಿಯಾಗಿ ಕೂಡಲಸಂಗಮದಿಂದ ಬಳ್ಳಾರಿವರೆಗೂ ಪಾದಯಾತ್ರೆ ನಡೆಸುವ ಬಗ್ಗೆ ಸಭೆಯಲ್ಲಿ ಚರ್ಚಿಸಿದ್ದೇವೆ. ಅಂತಿಮ ಸಲಹೆಗಳು ಸಂಜೆ ವೇಳೆಗೆ ಸಿದ್ಧವಾಗಬಹುದು” ಎಂದು ತಿಳಿಸಿದರು.

ಹೈಕಮಾಂಡ್ ಗಮನಕ್ಕೆ ತಂದು ಸಭೆ ಮಾಡುತ್ತಿದ್ದೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ನಾನು ಪಕ್ಷದ ಹಿರಿಯ ನಾಯಕ, ಹಾಗಾಗಿ ಪಕ್ಷದ ಪದ್ದತಿ ಗೊತ್ತಿದೆ. ಆ ಪದ್ಧತಿ ಅನುಸಾರ ಸಭೆ ಮಾಡುತ್ತಿದ್ದೇವೆ. ಸಭೆಯಲ್ಲಿ 12 ಜನ ಸೇರಿದ್ದೇವೆ” ಎಂದರು.

ಇದನ್ನೂ ಓದಿ; ಕೊಚ್ಚಿಹೋದ ತುಂಗಭದ್ರಾ ಅಣೆಕಟ್ಟು ಕ್ರೆಸ್ಟ್ ಗೇಟ್; ಡಿಸಿಎಂ ಡಿಕೆ ಶಿವಕುಮಾರ್ ಪರಿಶೀಲನೆ, ನದಿ ಪಾತ್ರದಲ್ಲಿ ಕಟ್ಟೆಚ್ಚರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...