Homeಕರ್ನಾಟಕದೇಶದ ಇತಿಹಾಸದಲ್ಲೇ ವಿಪಕ್ಷ ನಾಯಕನಿಲ್ಲದೆ ನಡೆದ ಅಧಿವೇಶನ: ಕುಖ್ಯಾತಿ ಪಡೆದ ಬಿಜೆಪಿ

ದೇಶದ ಇತಿಹಾಸದಲ್ಲೇ ವಿಪಕ್ಷ ನಾಯಕನಿಲ್ಲದೆ ನಡೆದ ಅಧಿವೇಶನ: ಕುಖ್ಯಾತಿ ಪಡೆದ ಬಿಜೆಪಿ

- Advertisement -
- Advertisement -

ದೇಶದ ಇತಿಹಾಸದಲ್ಲೇ ವಿರೋಧ ಪಕ್ಷದ ನಾಯಕನಿಲ್ಲದೇ ಜಂಟಿ ಅಧಿವೇಶನವೊಂದು ಇಂದು ಮುಕ್ತಾಯವಾಗುತ್ತಿದೆ. ಈ ಕೆಟ್ಟ ಇತಿಹಾಸ ಬರೆದಿರುವುದು ರಾಜ್ಯ ಬಿಜೆಪಿಯಾಗಿದೆ. ಈ ಬಗ್ಗೆ ಆಡಳಿತ ಪಕ್ಷ ಎಷ್ಟೇ ಟೀಕೆ ಮಾಡಿದರೂ ಈವರೆಗೂ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಬಿಜೆಪಿಗೆ ಸಾಧ್ಯವಾಗಿಲಿಲ್ಲ.

ಚುನಾವಣಾ ಫಲಿತಾಂಶ ಬಂದಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದ ಗದ್ದುಗೆ ಏರಿತು. ಕ್ಯಾಬಿನೆಟ್ ರಚನೆ ಕೂಡ ಆಯಿತು. ಚುನಾವಣೆ ವೇಳೆ ಘೋಷಣೆ ಮಾಡಿದ್ದ ಗ್ಯಾರಂಟಿ ಯೋಜನೆಗಳನ್ನು ಕೂಡ ಜಾರಿ ಮಾಡುತ್ತಿದೆ. ಆದರೆ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡುವಲ್ಲಿ ಬಿಜೆಪಿ ಮಾತ್ರ ಹಿಂದೆಬಿದ್ದಿದೆ. ಸರ್ಕಾರ ರಚನೆಯಾದ ಬಳಿಕ ವಿಪಕ್ಷ ನಾಯಕನನ್ನು ಆಯ್ಕೆ ಮಾಡುವುದು ವಾಡಿಕೆ ಇದೆ. ಆದರೆ ಬಿಜೆಪಿ ಮಾತ್ರ ಸಾಕಷ್ಟು ವಿಳಂಬ ಮಾಡಿದೆ.

”ವಿಧಾನಸಭಾ ಕಲಾಪ ಆರಂಭವಾಗುವುದಕ್ಕೆ ಮುನ್ನ, ನಾಯಕನ ಆಯ್ಕೆಗೆ ವರಿಷ್ಠರು ಸೂಚನೆ ನೀಡುವ ಸಾಧ್ಯತೆ ಇದೆ” ಎಂದು ಬಿಜೆಪಿ ನಾಯಕರು ಹೇಳುತ್ತಿದ್ದರು. ಪಕ್ಷದ ರಾಷ್ಟ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌. ಯಡಿಯೂರಪ್ಪ ಅವರು ದೆಹಲಿಗೆ ತೆರಳಿ ಪಕ್ಷದ ವರಿಷ್ಠರ ಸಮಾಲೋಚನೆ ನಡೆಸಿದ್ದರು. ಯಡಿಯೂರಪ್ಪ ಮತ್ತು ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಬೆಂಗಳೂರಿಗೆ ಬಂದು ಶಾಸಕಾಂಗ ಪಕ್ಷದ ಸಭೆಯಲ್ಲಿ ನಾಯಕನ ಆಯ್ಕೆ ಮಾಡುತ್ತಾರೆ ಎಂದು ಹೇಳಲಾಗಿತ್ತು. ಆದರೆ ಈ ವರೆಗೂ ನಾಯಕನ ಆಯ್ಕೆ ಮಾಡಲು ಬಿಜೆಪಿಗೆ ಸಾಧ್ಯವಾಗಲೇ ಇಲ್ಲ.

ಬಿಜೆಪಿ ಹೈಕಮಾಂಡ್​ ವಿರೋಧ ಪಕ್ಷ ನಾಯಕನ ಆಯ್ಕೆ ಮಾಡಲು ವೀಕ್ಷಕರನ್ನು ನೇಮಿಸಿತ್ತು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ನಾಯಕನ ಆಯ್ಕೆ ಮಾಡಲು ಕೇಂದ್ರೀಯ ವೀಕ್ಷಕರಾಗಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಅವರನ್ನು ನೇಮಿಸಿದ್ದರು. ಆದರೂ ಕೂಡ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಎದುರಿಸುವ ಸಮರ್ಥ ವಿರೋಧಪಕ್ಷದ ನಾಯಕನನ್ನು ಆಯ್ಕೆ ಮಾಡುವಲ್ಲಿ ಬಿಜೆಪಿ ನಾಯಕರು ಸೋತಿದ್ದಾರೆ.

ವಿಧಾನಸಭೆಯ ಜಂಟಿ ಅಧಿವೇಶನಕ್ಕೆ ಇಂದು ಕೊನೆಯ ದಿನವಾಗಿದ್ದು, ಈವರೆಗೂ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡದ ಬಿಜೆಪಿ ಸಾಕಷ್ಟು ಮುಜುಗರ ಅನುಭವಿಸಿದೆ. ಮತ್ತೊಂದೆಡೆ, ಬಿಜೆಪಿಯು ಜೆಡಿಎಸ್‌ನೊಂದಿಗೆ ಕೈಜೋಡಿಸಿ ಕುಮಾರಸ್ವಾಮಿ ಅವರನ್ನು ವಿಪಕ್ಷ ನಾಯಕನನ್ನಾಗಿ ನೇಮಿಸಲಾಗುತ್ತದೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಅದೇ ಕಾರಣಕ್ಕೆ ಬಿಜಿಪಿಯು ವಿಪಕ್ಷನಾಯಕ ಆಯ್ಕೆಗೆ ವಿಳಂಭ ಮಾಡಿದೆ ಎನ್ನುವ ಮಾತುಗಳು ರಾಜಕೀಯ ಪಡಸಾಲೆಯಿಂದ ಕೇಳಬಂದಿದೆ.

ಇದನ್ನೂ ಓದಿ: ವಿಪಕ್ಷ ನಾಯಕನನ್ನು ನೇಮಿಸದಿರುವುದು ಪ್ರಜಾಪ್ರಭುತ್ವಕ್ಕೆ ಅವಮಾನ: ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...