Homeಕರ್ನಾಟಕಹಲಾಲ್‌‌ ಮಾಂಸ ಮಾರಾಟ ಮಾಡಿದ ಅಂಗಡಿ ಮಾಲಿಕನಿಗೆ ಹಲ್ಲೆ: ಐವರು ಬಜರಂಗದಳದ ದುಷ್ಕರ್ಮಿಗಳು ಅರೆಸ್ಟ್‌

ಹಲಾಲ್‌‌ ಮಾಂಸ ಮಾರಾಟ ಮಾಡಿದ ಅಂಗಡಿ ಮಾಲಿಕನಿಗೆ ಹಲ್ಲೆ: ಐವರು ಬಜರಂಗದಳದ ದುಷ್ಕರ್ಮಿಗಳು ಅರೆಸ್ಟ್‌

- Advertisement -
- Advertisement -

ಶಿವಮೊಗ್ಗದ ಮಾಂಸದ ಅಂಗಡಿಯೊಂದಕ್ಕೆ ತೆರಳಿ ಹಲಾಲ್‌ ಮಾಂಸವನ್ನು ಮಾರಾಟ ಮಾಡದಂತೆ, ಅಂಗಡಿ ಮಾಲಿಕನಿಗೆ ಹಲ್ಲೆ ನಡೆಸಿದ ಐವರು ಬಜರಂಗದಳದ ಸದಸ್ಯರನ್ನು ಪೊಲೀಸರು ಬಂಧಿಸಿದ್ದಾಗಿ ವರದಿಯಾಗಿದೆ. ಬಿಜೆಪಿ ಬೆಂಬಲಿತ ಸಂಘಟನೆಯಾದ ಬಜರಂಗದಳ ಕಾರ್ಯಕರ್ತರು ಹಲಾಲ್ ಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿ ಮಾಲಿಕ ತೌಸಿಫ್ ಅವರಿ ಬೆದರಿಕೆ ಹಾಕಿ ಹಲ್ಲೆ ನಡೆಸಿದ್ದರು.

ಈ ಸಂಬಂಧ ಭದ್ರಾವತಿಯ ಹೊಸಮನೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ ಎಂದು ಶಿವಮೊಗ್ಗ ಎಸ್ಪಿ ಲಕ್ಷ್ಮೀ ಪ್ರಸಾದ್ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಐವರು ದುಷ್ಕರ್ಮಿಗಳು ಮಾಂಸದ ಅಂಗಡಿಯೊಳಗೆ ನುಗ್ಗಿ ಹಿಂದೂಗಳೇ ಇರುವ ಪ್ರದೇಶದಲ್ಲಿ ಮಾಂಸವನ್ನು ಮಾರಾಟ ಮಾಡುತ್ತಿದ್ದೀರಿ. ಹಲಾಲ್ ಮಾಂಸವನ್ನು ಮಾರಾಟ ಮಾಡದಂತೆ ಹೇಳಿದ್ದಾರೆ. ಜೊತೆಗೆ ಅವಾಚ್ಯ ಶಬ್ಧಗಳಿಂದಲೂ ಬೈದಿದ್ದರು. ಈ ವೇಳೆ ಅಂಗಡಿಯ ಮಾಲಕ ತೌಸೀಫ್ ಅವರು ಹಲಾಲ್ ಮಾಂಸ ಬೇಡ ಅಂತಿದ್ದರೆ ಬೇರೆ ಅಂಗಡಿಗೆ ತೆರಳುವಂತೆ ಕೇಳಿದ್ದರು. ಈ ವೇಳೆ ದುಷ್ಕರ್ಮಿಗಳು ಅವರ ಮೇಲೆ ಹಲ್ಲೆ ನಡೆಸಿದ್ದಾಗಿ ಆರೋಪಿಸಲಾಗಿದೆ.

ಇದನ್ನೂ ಓದಿ: ಭಾವನಾತ್ಮಕವಾಗಿ ಛಿದ್ರಗೊಳಿಸಿ ಮತ ಗಿಟ್ಟಿಸುವ ಗಿಡುಗಗಳಿವು; ಇವರು ನೈಜ ಹಿಂದುಗಳೇ ಅಲ್ಲ: ಬಿಜೆಪಿ ಬೆಂಬಲಿತ ಸಂಘಟನೆಗಳ ವಿರುದ್ದದ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ

ಇದೇ ದುಷ್ಕರ್ಮಿಗಳು ಅಲ್ಲಿನ ಜನತಾ ಹೋಟೆಲ್‌‌ಗೆ ಕೂಡಾ ನುಗ್ಗಿ ಹಲಾಲ್ ಮಾಡಿರುವ ಮಾಂಸವನ್ನು ಮಾರಾಟ ಮಾಡದಂತೆ ಕೇಳಿಕೊಂಡಿದ್ದಾರೆ. ಈ ವೇಳೆ ವಾಗ್ವಾದಕ್ಕೆ ಇಳಿದಿದ್ದ ಸಿಬ್ಬಂದಿಯ ಮೇಲೆ ದಾಳಿ ಮಾಡಿದ್ದಾರೆ ಎಂದು ಕೂಡಾ ವರದಿಯಾಗಿದೆ. ಈ ಘಟನೆಯ ಬಗ್ಗೆ ಕೂಡಾ ಎಫ್‌ಐಆರ್‌ ದಾಖಲಾಗಿದೆ ಎಂದು ಜಿಲ್ಲಾ ಎಸ್‌ಪಿ ಲಕ್ಷ್ಮಿ ಪ್ರಸಾದ್‌ ಹೇಳಿದ್ದಾರೆ.

ಎರಡೂ ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.

ಬಿಜೆಪಿ ಬೆಂಬಲಿತ ಸಂಘಟನೆಗಳು ಯುಗಾದಿ ಆಚರಣೆಯ ಸಂದರ್ಭದಲ್ಲಿ ಹಲಾಲ್ ಮಾಂಸ ಉತ್ಪನ್ನಗಳನ್ನು ಬಹಿಷ್ಕರಿಸುವಂತೆ ಕರೆ ನೀಡಿತ್ತು. ಇದಕ್ಕೆ ರಾಜ್ಯದ ಬಿಜೆಪಿ ಸರ್ಕಾರ ಬಹಿರಂಗವಾಗಿ ಬೆಂಬಲ ಕೂಡಾ ನೀಡುತ್ತಿದೆ.

ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿ, “ಹಲಾಲ್ ಉತ್ಪನ್ನಗಳ ಬಹಿಷ್ಕಾರಕ್ಕೆ ಕರೆ ನೀಡಿದ್ದು, ಹೈಕೋರ್ಟಿನ ಹಿಜಾಬ್ ರೋಡ್ ತೀರ್ಪಿನ ವಿರುದ್ಧ ಮುಸ್ಲಿಂ ಸಮುದಾಯದ ಪ್ರತಿಭಟನೆಯ ಪರಿಣಾಮವಾಗಿದೆ” ಎಂದು ಹೇಳಿ ಸಾಮರಸ್ಯ ಕೆಡಿಸುತ್ತಿರುವ ದುಷ್ಕರ್ಮಿಗಳನ್ನು ಸಮರ್ಥಿಸಿಕೊಂಡಿದ್ದಾರೆ.

“ಹಿಜಾಬ್ ವಿಷಯದಲ್ಲಿ ಇತ್ತೀಚಿನ ಹೈಕೋರ್ಟ್ ತೀರ್ಪನ್ನು ಪ್ರತಿಭಟಿಸಲು ಒಂದು ನಿರ್ದಿಷ್ಟ ಸಮುದಾಯದ ನಿರ್ಧಾರವು ಅಂತಹ ಪ್ರತಿಕ್ರಿಯೆಗಳಿಗೆ ಕಾರಣವಾಗಿದೆ. ಅದು ಶೀಘ್ರದಲ್ಲೇ ತಣ್ಣಗಾಗಲಿ ಎಂದು ನಾನು ಬಯಸುತ್ತೇನೆ” ಎಂದು ಜ್ಞಾನೇಂದ್ರ ಹೇಳಿದ್ದಾರೆ.

ಇದನ್ನೂ ಓದಿ: ಭುಗಿಲೆದ್ದ ಆರ್ಥಿಕ ಬಿಕ್ಕಟ್ಟು; ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಜಾರಿ

ಬಿಜೆಪಿ ಕಾರ್ಯಾಧ್ಯಕ್ಷ ಸಿ.ಟಿ.ರವಿ ಕೂಡ ಹಲಾಲ್ ಮಾಂಸವನ್ನು ನಿಷೇಧಿಸುವಂತೆ ಕೋರಿದ್ದು, ಇದನ್ನು ಮುಸ್ಲಿಂ ಸಮುದಾಯದವರು ನಡೆಸುತ್ತಿರುವ ಆರ್ಥಿಕ ಜಿಹಾದ್ ಎಂದು ನಾಲಗೆ ಹರಿಯಬಿಟ್ಟಿದ್ದಾರೆ.

‘ಗಂಭೀರ ಆಕ್ಷೇಪ’ಗಳನ್ನು ಪರಿಶೀಲಿಸುತ್ತೇನೆ: ಸಿಎಂ ಬೊಮ್ಮಾಯಿ

ರಾಜ್ಯದಲ್ಲಿ ಬಿಜೆಪಿ ಬೆಂಬಲಿತ ಗುಂಪುಗಳು ಹಲಾಲ್ ಮಾಂಸ ಉತ್ಪನ್ನಗಳ ಬಹಿಷ್ಕಾರಕ್ಕೆ ಕರೆ ನೀಡಿದ ನಂತರ, ಮುಖ್ಯಮಂತ್ರಿ ಬೊಮ್ಮಾಯಿ ಹಲಾಲ್ ಮಾಂಸದ ವಿರುದ್ಧ ‘ಗಂಭೀರ ಆಕ್ಷೇಪಣೆ’ ವ್ಯಕ್ತವಾದ ಕಾರಣ ಈ ಬಗ್ಗೆ ತನಿಖೆ ನಡೆಸುವುದಾಗಿ ಬುಧವಾರ ಹೇಳಿದ್ದರು.

ಈ ವಿಷಯವನ್ನು ಸಮಗ್ರವಾಗಿ ಅಧ್ಯಯನ ಮಾಡಬೇಕಿದೆ ಎಂದು ಹೇಳಿದ್ದ ಬೊಮ್ಮಾಯಿ, “ಇದು ಈ ಹಿಂದಿನಿಂದಲೂ ನಡೆಯುತ್ತಿರುವ ಅಭ್ಯಾಸವಾಗಿತ್ತು. ಈಗ, ಗಂಭೀರ ಆಕ್ಷೇಪಣೆಗಳು ಹುಟ್ಟಿಕೊಂಡಿವೆ. ನಾವು ಅದನ್ನು ಪರಿಶೀಲಿಸುತ್ತೇವೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಇದನ್ನೂ ಓದಿ: ಉಗಾದಿ ವರ್‍ಸತೊಡಕು: ದಲಿತರಿಗೆ ‘ಜಟ್ಕಾ ಕಟ್‌’ ಮಾಂಸ ಸಿಗುವುದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...