Homeಕರ್ನಾಟಕಹಲಾಲ್‌‌ ಮಾಂಸ ಮಾರಾಟ ಮಾಡಿದ ಅಂಗಡಿ ಮಾಲಿಕನಿಗೆ ಹಲ್ಲೆ: ಐವರು ಬಜರಂಗದಳದ ದುಷ್ಕರ್ಮಿಗಳು ಅರೆಸ್ಟ್‌

ಹಲಾಲ್‌‌ ಮಾಂಸ ಮಾರಾಟ ಮಾಡಿದ ಅಂಗಡಿ ಮಾಲಿಕನಿಗೆ ಹಲ್ಲೆ: ಐವರು ಬಜರಂಗದಳದ ದುಷ್ಕರ್ಮಿಗಳು ಅರೆಸ್ಟ್‌

- Advertisement -
- Advertisement -

ಶಿವಮೊಗ್ಗದ ಮಾಂಸದ ಅಂಗಡಿಯೊಂದಕ್ಕೆ ತೆರಳಿ ಹಲಾಲ್‌ ಮಾಂಸವನ್ನು ಮಾರಾಟ ಮಾಡದಂತೆ, ಅಂಗಡಿ ಮಾಲಿಕನಿಗೆ ಹಲ್ಲೆ ನಡೆಸಿದ ಐವರು ಬಜರಂಗದಳದ ಸದಸ್ಯರನ್ನು ಪೊಲೀಸರು ಬಂಧಿಸಿದ್ದಾಗಿ ವರದಿಯಾಗಿದೆ. ಬಿಜೆಪಿ ಬೆಂಬಲಿತ ಸಂಘಟನೆಯಾದ ಬಜರಂಗದಳ ಕಾರ್ಯಕರ್ತರು ಹಲಾಲ್ ಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿ ಮಾಲಿಕ ತೌಸಿಫ್ ಅವರಿ ಬೆದರಿಕೆ ಹಾಕಿ ಹಲ್ಲೆ ನಡೆಸಿದ್ದರು.

ಈ ಸಂಬಂಧ ಭದ್ರಾವತಿಯ ಹೊಸಮನೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ ಎಂದು ಶಿವಮೊಗ್ಗ ಎಸ್ಪಿ ಲಕ್ಷ್ಮೀ ಪ್ರಸಾದ್ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಐವರು ದುಷ್ಕರ್ಮಿಗಳು ಮಾಂಸದ ಅಂಗಡಿಯೊಳಗೆ ನುಗ್ಗಿ ಹಿಂದೂಗಳೇ ಇರುವ ಪ್ರದೇಶದಲ್ಲಿ ಮಾಂಸವನ್ನು ಮಾರಾಟ ಮಾಡುತ್ತಿದ್ದೀರಿ. ಹಲಾಲ್ ಮಾಂಸವನ್ನು ಮಾರಾಟ ಮಾಡದಂತೆ ಹೇಳಿದ್ದಾರೆ. ಜೊತೆಗೆ ಅವಾಚ್ಯ ಶಬ್ಧಗಳಿಂದಲೂ ಬೈದಿದ್ದರು. ಈ ವೇಳೆ ಅಂಗಡಿಯ ಮಾಲಕ ತೌಸೀಫ್ ಅವರು ಹಲಾಲ್ ಮಾಂಸ ಬೇಡ ಅಂತಿದ್ದರೆ ಬೇರೆ ಅಂಗಡಿಗೆ ತೆರಳುವಂತೆ ಕೇಳಿದ್ದರು. ಈ ವೇಳೆ ದುಷ್ಕರ್ಮಿಗಳು ಅವರ ಮೇಲೆ ಹಲ್ಲೆ ನಡೆಸಿದ್ದಾಗಿ ಆರೋಪಿಸಲಾಗಿದೆ.

ಇದನ್ನೂ ಓದಿ: ಭಾವನಾತ್ಮಕವಾಗಿ ಛಿದ್ರಗೊಳಿಸಿ ಮತ ಗಿಟ್ಟಿಸುವ ಗಿಡುಗಗಳಿವು; ಇವರು ನೈಜ ಹಿಂದುಗಳೇ ಅಲ್ಲ: ಬಿಜೆಪಿ ಬೆಂಬಲಿತ ಸಂಘಟನೆಗಳ ವಿರುದ್ದದ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ

ಇದೇ ದುಷ್ಕರ್ಮಿಗಳು ಅಲ್ಲಿನ ಜನತಾ ಹೋಟೆಲ್‌‌ಗೆ ಕೂಡಾ ನುಗ್ಗಿ ಹಲಾಲ್ ಮಾಡಿರುವ ಮಾಂಸವನ್ನು ಮಾರಾಟ ಮಾಡದಂತೆ ಕೇಳಿಕೊಂಡಿದ್ದಾರೆ. ಈ ವೇಳೆ ವಾಗ್ವಾದಕ್ಕೆ ಇಳಿದಿದ್ದ ಸಿಬ್ಬಂದಿಯ ಮೇಲೆ ದಾಳಿ ಮಾಡಿದ್ದಾರೆ ಎಂದು ಕೂಡಾ ವರದಿಯಾಗಿದೆ. ಈ ಘಟನೆಯ ಬಗ್ಗೆ ಕೂಡಾ ಎಫ್‌ಐಆರ್‌ ದಾಖಲಾಗಿದೆ ಎಂದು ಜಿಲ್ಲಾ ಎಸ್‌ಪಿ ಲಕ್ಷ್ಮಿ ಪ್ರಸಾದ್‌ ಹೇಳಿದ್ದಾರೆ.

ಎರಡೂ ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.

ಬಿಜೆಪಿ ಬೆಂಬಲಿತ ಸಂಘಟನೆಗಳು ಯುಗಾದಿ ಆಚರಣೆಯ ಸಂದರ್ಭದಲ್ಲಿ ಹಲಾಲ್ ಮಾಂಸ ಉತ್ಪನ್ನಗಳನ್ನು ಬಹಿಷ್ಕರಿಸುವಂತೆ ಕರೆ ನೀಡಿತ್ತು. ಇದಕ್ಕೆ ರಾಜ್ಯದ ಬಿಜೆಪಿ ಸರ್ಕಾರ ಬಹಿರಂಗವಾಗಿ ಬೆಂಬಲ ಕೂಡಾ ನೀಡುತ್ತಿದೆ.

ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿ, “ಹಲಾಲ್ ಉತ್ಪನ್ನಗಳ ಬಹಿಷ್ಕಾರಕ್ಕೆ ಕರೆ ನೀಡಿದ್ದು, ಹೈಕೋರ್ಟಿನ ಹಿಜಾಬ್ ರೋಡ್ ತೀರ್ಪಿನ ವಿರುದ್ಧ ಮುಸ್ಲಿಂ ಸಮುದಾಯದ ಪ್ರತಿಭಟನೆಯ ಪರಿಣಾಮವಾಗಿದೆ” ಎಂದು ಹೇಳಿ ಸಾಮರಸ್ಯ ಕೆಡಿಸುತ್ತಿರುವ ದುಷ್ಕರ್ಮಿಗಳನ್ನು ಸಮರ್ಥಿಸಿಕೊಂಡಿದ್ದಾರೆ.

“ಹಿಜಾಬ್ ವಿಷಯದಲ್ಲಿ ಇತ್ತೀಚಿನ ಹೈಕೋರ್ಟ್ ತೀರ್ಪನ್ನು ಪ್ರತಿಭಟಿಸಲು ಒಂದು ನಿರ್ದಿಷ್ಟ ಸಮುದಾಯದ ನಿರ್ಧಾರವು ಅಂತಹ ಪ್ರತಿಕ್ರಿಯೆಗಳಿಗೆ ಕಾರಣವಾಗಿದೆ. ಅದು ಶೀಘ್ರದಲ್ಲೇ ತಣ್ಣಗಾಗಲಿ ಎಂದು ನಾನು ಬಯಸುತ್ತೇನೆ” ಎಂದು ಜ್ಞಾನೇಂದ್ರ ಹೇಳಿದ್ದಾರೆ.

ಇದನ್ನೂ ಓದಿ: ಭುಗಿಲೆದ್ದ ಆರ್ಥಿಕ ಬಿಕ್ಕಟ್ಟು; ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಜಾರಿ

ಬಿಜೆಪಿ ಕಾರ್ಯಾಧ್ಯಕ್ಷ ಸಿ.ಟಿ.ರವಿ ಕೂಡ ಹಲಾಲ್ ಮಾಂಸವನ್ನು ನಿಷೇಧಿಸುವಂತೆ ಕೋರಿದ್ದು, ಇದನ್ನು ಮುಸ್ಲಿಂ ಸಮುದಾಯದವರು ನಡೆಸುತ್ತಿರುವ ಆರ್ಥಿಕ ಜಿಹಾದ್ ಎಂದು ನಾಲಗೆ ಹರಿಯಬಿಟ್ಟಿದ್ದಾರೆ.

‘ಗಂಭೀರ ಆಕ್ಷೇಪ’ಗಳನ್ನು ಪರಿಶೀಲಿಸುತ್ತೇನೆ: ಸಿಎಂ ಬೊಮ್ಮಾಯಿ

ರಾಜ್ಯದಲ್ಲಿ ಬಿಜೆಪಿ ಬೆಂಬಲಿತ ಗುಂಪುಗಳು ಹಲಾಲ್ ಮಾಂಸ ಉತ್ಪನ್ನಗಳ ಬಹಿಷ್ಕಾರಕ್ಕೆ ಕರೆ ನೀಡಿದ ನಂತರ, ಮುಖ್ಯಮಂತ್ರಿ ಬೊಮ್ಮಾಯಿ ಹಲಾಲ್ ಮಾಂಸದ ವಿರುದ್ಧ ‘ಗಂಭೀರ ಆಕ್ಷೇಪಣೆ’ ವ್ಯಕ್ತವಾದ ಕಾರಣ ಈ ಬಗ್ಗೆ ತನಿಖೆ ನಡೆಸುವುದಾಗಿ ಬುಧವಾರ ಹೇಳಿದ್ದರು.

ಈ ವಿಷಯವನ್ನು ಸಮಗ್ರವಾಗಿ ಅಧ್ಯಯನ ಮಾಡಬೇಕಿದೆ ಎಂದು ಹೇಳಿದ್ದ ಬೊಮ್ಮಾಯಿ, “ಇದು ಈ ಹಿಂದಿನಿಂದಲೂ ನಡೆಯುತ್ತಿರುವ ಅಭ್ಯಾಸವಾಗಿತ್ತು. ಈಗ, ಗಂಭೀರ ಆಕ್ಷೇಪಣೆಗಳು ಹುಟ್ಟಿಕೊಂಡಿವೆ. ನಾವು ಅದನ್ನು ಪರಿಶೀಲಿಸುತ್ತೇವೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಇದನ್ನೂ ಓದಿ: ಉಗಾದಿ ವರ್‍ಸತೊಡಕು: ದಲಿತರಿಗೆ ‘ಜಟ್ಕಾ ಕಟ್‌’ ಮಾಂಸ ಸಿಗುವುದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...