Homeಕರ್ನಾಟಕಕರ್ನಾಟಕದ ಕರಾವಳಿ ಸೇರಿದಂತೆ ಕೇರಳದಲ್ಲಿ ಸರಳ 'ಈದ್-ಉಲ್-ಫಿತ್ರ್' ಆಚರಣೆ

ಕರ್ನಾಟಕದ ಕರಾವಳಿ ಸೇರಿದಂತೆ ಕೇರಳದಲ್ಲಿ ಸರಳ ‘ಈದ್-ಉಲ್-ಫಿತ್ರ್’ ಆಚರಣೆ

ದೇಶದ ಇತರೆಡೆ ನಾಳೆ ಈದ್-ಉಲ್-ಫಿತ್ರ್ ಆಚರಿಸಲಾಗುತ್ತದೆ.

- Advertisement -
- Advertisement -

ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಕೇರಳ ಹಾಗೂ ಜಮ್ಮುಕಾಶ್ಮೀರದಲ್ಲಿ ಇಂದು ವಿಶ್ವಾಸಿಗಳು ಈದ್-ಉಲ್-ಫಿತ್ರ್ (ರಂಝಾನ್) ಹಬ್ಬವನ್ನು ಸರಳವಾಗಿ ಆಚರಿಸಿದರು. ಕೊರೊನಾ ಲಾಕ್ ಡೌನ್ ಇರುವುದರಿಂದ ಹಬ್ಬದ ಪ್ರಾರ್ಥನೆಗಳನ್ನು ಮನೆಯಲ್ಲೇ ಮಾಡಲಾಯಿತು.

ಮಸೀದಿಗಳು ಕೊರೊನಾ ಲಾಕ್ ಡೌನ್ ಪ್ರಯುಕ್ತ ಇಂದು ಕೂಡಾ ಮುಚ್ಚಲ್ಪಟ್ಟಿದ್ದವು. ಸರ್ಕಾರದ ನಿರ್ದೇಶನದಂತೆ ಧರ್ಮಗುರುಗಳು ಹಬ್ಬವನ್ನು ಸರಳವಾಗಿ, ಮನೆಯಲ್ಲಿದ್ದೇ ಆಚರಿಸುವಂತೆ ಕರೆ ನೀಡಿದ್ದರು. ಕರ್ನಾಟಕದ ಮಂಗಳೂರು, ಉಡುಪಿ, ಕೇರಳ ಹಾಗೂ ಜಮ್ಮು ಕಾಶ್ಮೀರದಲ್ಲಿ ಇಂದು ಹಬ್ಬ ಆಚರಿಸಲಾಗುತ್ತಿದ್ದು. ದೇಶದ ಇತರೆಡೆ ನಾಳೆ ಹಬ್ಬವನ್ನು ಆಚರಿಸಲಾಗುತ್ತದೆ.

ಈದ್-ಉಲ್-ಫಿತ್ರ್
ಹಬ್ಬದ ದಿನ ಖಾಲಿಯಾಗಿರುವ ಮಂಗಳೂರಿನ ಈದ್ಗಾ ಮಸೀದಿ.
ಕೇರಳ ಕೊಚ್ಚಿಯಲ್ಲಿ ಮಸೀದಿಯನ್ನು ಹಬ್ಬದ ದಿನವೂ ಮುಚ್ಚಲಾಗಿದೆ.

ಇಸ್ಲಾಮಿಕ್ ತಿಂಗಳ ರಂಝಾನ್ ಮುಸ್ಲಿಮರಿಗೆ ಬಹುಮುಖ್ಯ ತಿಂಗಳಾಗಿದ್ದು, ಈ ತಿಂಗಳಲ್ಲಿ ಮೂವತ್ತು ದಿನ ಉಪವಾಸವಿದ್ದು ಆಧ್ಯಾತ್ಮಿಕತೆಯಲ್ಲಿ ತೊಡಗಿರುತ್ತಾರೆ. ಮೂವತ್ತು ದಿನದ ನಂತರ ಶವ್ವಾಲ್ ತಿಂಗಳ ಒಂದನೇ ಚಂದ್ರ ಕಂಡ ದಿನ ಈದ್-ಉಲ್-ಫಿತ್ರ್ ಆಚರಿಸುತ್ತಾರೆ.

ಈದ್-ಉಲ್-ಫಿತ್ರ್
ಹಬ್ಬದ ನಮಾಜ್ ಅನ್ನು ಮನೆಯಲ್ಲೇ ಮಾಡಲಾಯಿತು.

ಈ ದಿನದಂದು ತನ್ನ ಖರ್ಚು ವೆಚ್ಚಗಳನ್ನು ಕಳೆದು ನಂತರವೂ ಸಂಪತ್ತು ಉಳಿದಿದ್ದರೆ ಖಡ್ಡಾಯವಾಗಿ ಬಡವರಿಗೆ ನಿರ್ದಿಷ್ಟ ಪ್ರಮಾಣದಲ್ಲಿ ಆಹಾರವನ್ನು ನೀಡಬೇಕಾಗುತ್ತದೆ. ಈ ಮೂಲಕ ಈ ಹಬ್ಬದ ಆಚರಣೆ ಪ್ರಾರಂಭಿಸಿ, ಮಸೀದಿ ಅಥವಾ ಈದ್ಗಾಗಳಿಗೆ ತೆರಳಿ ‘ಈದ್ ನಮಾಝ್’ ಮಾಡಲಾಗುತ್ತದೆ. ನಂತರ ಪರಸ್ಪರ ಆಲಿಂಗಿಸಿ, ಕ್ಷೇಮ ವಿಚಾರ ವಿನಿಮಯ ಮಾಡುತ್ತಾರೆ.

ಈದ್-ಉಲ್-ಫಿತ್ರ್
ಕಾಶ್ಮೀರ ಮಸೀದಿ ಹಬ್ಬದ ದಿನವೂ ಮುಚ್ಚಲಾಗಿದೆ.

ಮನಸ್ತಾಪ ಇದ್ದವರೊಂದಿಗೆ ಕ್ಷಮೆ ಕೇಳಿ ಅವರೊಂದಿಗಿನ ಮನಸ್ತಾಪವನ್ನು ಕೊನೆಗಾಣಿಸುತ್ತಾರೆ. ತಮ್ಮ ಅಗಲಿದ ಹಿರಿಯರ ಖಬರಸ್ಥಾನ ಸಂದರ್ಶಿಸುವುದು, ಸೂಫೀ ಸಂತರ ಸಮಾಧಿಗಳಿಗೆ ಭೇಟಿ ನೀಡಿ ಅಲ್ಲಿ ಪ್ರಾರ್ಥಿಸುವುದು ಸೇರಿದಂತೆ ನೆರೆಮನೆ, ಸಂಬಂಧಿಕರ ಮನೆಗೆ ಸೌಹಾರ್ದ ಭೇಟಿ ನೀಡುತ್ತಾ ಹಬ್ಬವನ್ನು ಆಚರಿಸಲಾಗುತ್ತದೆ.


ಓದಿ:  ಬಾಲಕಿ ಜ್ಯೋತಿ 1200 ಕಿ.ಮಿ. ಕ್ರಮಿಸಿದ್ದು ಭಾರತೀಯರ ಸುಂದರವಾದ ಸಾಧನೆಯೆಂದ ಇವಾಂಕ ಟ್ರಂಪ್: ಹಲವರ ಆಕ್ರೋಶ


 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...