Homeಕರ್ನಾಟಕಕರ್ನಾಟಕದ ಕರಾವಳಿ ಸೇರಿದಂತೆ ಕೇರಳದಲ್ಲಿ ಸರಳ 'ಈದ್-ಉಲ್-ಫಿತ್ರ್' ಆಚರಣೆ

ಕರ್ನಾಟಕದ ಕರಾವಳಿ ಸೇರಿದಂತೆ ಕೇರಳದಲ್ಲಿ ಸರಳ ‘ಈದ್-ಉಲ್-ಫಿತ್ರ್’ ಆಚರಣೆ

ದೇಶದ ಇತರೆಡೆ ನಾಳೆ ಈದ್-ಉಲ್-ಫಿತ್ರ್ ಆಚರಿಸಲಾಗುತ್ತದೆ.

- Advertisement -
- Advertisement -

ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಕೇರಳ ಹಾಗೂ ಜಮ್ಮುಕಾಶ್ಮೀರದಲ್ಲಿ ಇಂದು ವಿಶ್ವಾಸಿಗಳು ಈದ್-ಉಲ್-ಫಿತ್ರ್ (ರಂಝಾನ್) ಹಬ್ಬವನ್ನು ಸರಳವಾಗಿ ಆಚರಿಸಿದರು. ಕೊರೊನಾ ಲಾಕ್ ಡೌನ್ ಇರುವುದರಿಂದ ಹಬ್ಬದ ಪ್ರಾರ್ಥನೆಗಳನ್ನು ಮನೆಯಲ್ಲೇ ಮಾಡಲಾಯಿತು.

ಮಸೀದಿಗಳು ಕೊರೊನಾ ಲಾಕ್ ಡೌನ್ ಪ್ರಯುಕ್ತ ಇಂದು ಕೂಡಾ ಮುಚ್ಚಲ್ಪಟ್ಟಿದ್ದವು. ಸರ್ಕಾರದ ನಿರ್ದೇಶನದಂತೆ ಧರ್ಮಗುರುಗಳು ಹಬ್ಬವನ್ನು ಸರಳವಾಗಿ, ಮನೆಯಲ್ಲಿದ್ದೇ ಆಚರಿಸುವಂತೆ ಕರೆ ನೀಡಿದ್ದರು. ಕರ್ನಾಟಕದ ಮಂಗಳೂರು, ಉಡುಪಿ, ಕೇರಳ ಹಾಗೂ ಜಮ್ಮು ಕಾಶ್ಮೀರದಲ್ಲಿ ಇಂದು ಹಬ್ಬ ಆಚರಿಸಲಾಗುತ್ತಿದ್ದು. ದೇಶದ ಇತರೆಡೆ ನಾಳೆ ಹಬ್ಬವನ್ನು ಆಚರಿಸಲಾಗುತ್ತದೆ.

ಈದ್-ಉಲ್-ಫಿತ್ರ್
ಹಬ್ಬದ ದಿನ ಖಾಲಿಯಾಗಿರುವ ಮಂಗಳೂರಿನ ಈದ್ಗಾ ಮಸೀದಿ.
ಕೇರಳ ಕೊಚ್ಚಿಯಲ್ಲಿ ಮಸೀದಿಯನ್ನು ಹಬ್ಬದ ದಿನವೂ ಮುಚ್ಚಲಾಗಿದೆ.

ಇಸ್ಲಾಮಿಕ್ ತಿಂಗಳ ರಂಝಾನ್ ಮುಸ್ಲಿಮರಿಗೆ ಬಹುಮುಖ್ಯ ತಿಂಗಳಾಗಿದ್ದು, ಈ ತಿಂಗಳಲ್ಲಿ ಮೂವತ್ತು ದಿನ ಉಪವಾಸವಿದ್ದು ಆಧ್ಯಾತ್ಮಿಕತೆಯಲ್ಲಿ ತೊಡಗಿರುತ್ತಾರೆ. ಮೂವತ್ತು ದಿನದ ನಂತರ ಶವ್ವಾಲ್ ತಿಂಗಳ ಒಂದನೇ ಚಂದ್ರ ಕಂಡ ದಿನ ಈದ್-ಉಲ್-ಫಿತ್ರ್ ಆಚರಿಸುತ್ತಾರೆ.

ಈದ್-ಉಲ್-ಫಿತ್ರ್
ಹಬ್ಬದ ನಮಾಜ್ ಅನ್ನು ಮನೆಯಲ್ಲೇ ಮಾಡಲಾಯಿತು.

ಈ ದಿನದಂದು ತನ್ನ ಖರ್ಚು ವೆಚ್ಚಗಳನ್ನು ಕಳೆದು ನಂತರವೂ ಸಂಪತ್ತು ಉಳಿದಿದ್ದರೆ ಖಡ್ಡಾಯವಾಗಿ ಬಡವರಿಗೆ ನಿರ್ದಿಷ್ಟ ಪ್ರಮಾಣದಲ್ಲಿ ಆಹಾರವನ್ನು ನೀಡಬೇಕಾಗುತ್ತದೆ. ಈ ಮೂಲಕ ಈ ಹಬ್ಬದ ಆಚರಣೆ ಪ್ರಾರಂಭಿಸಿ, ಮಸೀದಿ ಅಥವಾ ಈದ್ಗಾಗಳಿಗೆ ತೆರಳಿ ‘ಈದ್ ನಮಾಝ್’ ಮಾಡಲಾಗುತ್ತದೆ. ನಂತರ ಪರಸ್ಪರ ಆಲಿಂಗಿಸಿ, ಕ್ಷೇಮ ವಿಚಾರ ವಿನಿಮಯ ಮಾಡುತ್ತಾರೆ.

ಈದ್-ಉಲ್-ಫಿತ್ರ್
ಕಾಶ್ಮೀರ ಮಸೀದಿ ಹಬ್ಬದ ದಿನವೂ ಮುಚ್ಚಲಾಗಿದೆ.

ಮನಸ್ತಾಪ ಇದ್ದವರೊಂದಿಗೆ ಕ್ಷಮೆ ಕೇಳಿ ಅವರೊಂದಿಗಿನ ಮನಸ್ತಾಪವನ್ನು ಕೊನೆಗಾಣಿಸುತ್ತಾರೆ. ತಮ್ಮ ಅಗಲಿದ ಹಿರಿಯರ ಖಬರಸ್ಥಾನ ಸಂದರ್ಶಿಸುವುದು, ಸೂಫೀ ಸಂತರ ಸಮಾಧಿಗಳಿಗೆ ಭೇಟಿ ನೀಡಿ ಅಲ್ಲಿ ಪ್ರಾರ್ಥಿಸುವುದು ಸೇರಿದಂತೆ ನೆರೆಮನೆ, ಸಂಬಂಧಿಕರ ಮನೆಗೆ ಸೌಹಾರ್ದ ಭೇಟಿ ನೀಡುತ್ತಾ ಹಬ್ಬವನ್ನು ಆಚರಿಸಲಾಗುತ್ತದೆ.


ಓದಿ:  ಬಾಲಕಿ ಜ್ಯೋತಿ 1200 ಕಿ.ಮಿ. ಕ್ರಮಿಸಿದ್ದು ಭಾರತೀಯರ ಸುಂದರವಾದ ಸಾಧನೆಯೆಂದ ಇವಾಂಕ ಟ್ರಂಪ್: ಹಲವರ ಆಕ್ರೋಶ


 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಂದೆಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...