Homeಕರ್ನಾಟಕಕರ್ನಾಟಕದ ಕರಾವಳಿ ಸೇರಿದಂತೆ ಕೇರಳದಲ್ಲಿ ಸರಳ 'ಈದ್-ಉಲ್-ಫಿತ್ರ್' ಆಚರಣೆ

ಕರ್ನಾಟಕದ ಕರಾವಳಿ ಸೇರಿದಂತೆ ಕೇರಳದಲ್ಲಿ ಸರಳ ‘ಈದ್-ಉಲ್-ಫಿತ್ರ್’ ಆಚರಣೆ

ದೇಶದ ಇತರೆಡೆ ನಾಳೆ ಈದ್-ಉಲ್-ಫಿತ್ರ್ ಆಚರಿಸಲಾಗುತ್ತದೆ.

- Advertisement -
- Advertisement -

ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಕೇರಳ ಹಾಗೂ ಜಮ್ಮುಕಾಶ್ಮೀರದಲ್ಲಿ ಇಂದು ವಿಶ್ವಾಸಿಗಳು ಈದ್-ಉಲ್-ಫಿತ್ರ್ (ರಂಝಾನ್) ಹಬ್ಬವನ್ನು ಸರಳವಾಗಿ ಆಚರಿಸಿದರು. ಕೊರೊನಾ ಲಾಕ್ ಡೌನ್ ಇರುವುದರಿಂದ ಹಬ್ಬದ ಪ್ರಾರ್ಥನೆಗಳನ್ನು ಮನೆಯಲ್ಲೇ ಮಾಡಲಾಯಿತು.

ಮಸೀದಿಗಳು ಕೊರೊನಾ ಲಾಕ್ ಡೌನ್ ಪ್ರಯುಕ್ತ ಇಂದು ಕೂಡಾ ಮುಚ್ಚಲ್ಪಟ್ಟಿದ್ದವು. ಸರ್ಕಾರದ ನಿರ್ದೇಶನದಂತೆ ಧರ್ಮಗುರುಗಳು ಹಬ್ಬವನ್ನು ಸರಳವಾಗಿ, ಮನೆಯಲ್ಲಿದ್ದೇ ಆಚರಿಸುವಂತೆ ಕರೆ ನೀಡಿದ್ದರು. ಕರ್ನಾಟಕದ ಮಂಗಳೂರು, ಉಡುಪಿ, ಕೇರಳ ಹಾಗೂ ಜಮ್ಮು ಕಾಶ್ಮೀರದಲ್ಲಿ ಇಂದು ಹಬ್ಬ ಆಚರಿಸಲಾಗುತ್ತಿದ್ದು. ದೇಶದ ಇತರೆಡೆ ನಾಳೆ ಹಬ್ಬವನ್ನು ಆಚರಿಸಲಾಗುತ್ತದೆ.

ಈದ್-ಉಲ್-ಫಿತ್ರ್
ಹಬ್ಬದ ದಿನ ಖಾಲಿಯಾಗಿರುವ ಮಂಗಳೂರಿನ ಈದ್ಗಾ ಮಸೀದಿ.
ಕೇರಳ ಕೊಚ್ಚಿಯಲ್ಲಿ ಮಸೀದಿಯನ್ನು ಹಬ್ಬದ ದಿನವೂ ಮುಚ್ಚಲಾಗಿದೆ.

ಇಸ್ಲಾಮಿಕ್ ತಿಂಗಳ ರಂಝಾನ್ ಮುಸ್ಲಿಮರಿಗೆ ಬಹುಮುಖ್ಯ ತಿಂಗಳಾಗಿದ್ದು, ಈ ತಿಂಗಳಲ್ಲಿ ಮೂವತ್ತು ದಿನ ಉಪವಾಸವಿದ್ದು ಆಧ್ಯಾತ್ಮಿಕತೆಯಲ್ಲಿ ತೊಡಗಿರುತ್ತಾರೆ. ಮೂವತ್ತು ದಿನದ ನಂತರ ಶವ್ವಾಲ್ ತಿಂಗಳ ಒಂದನೇ ಚಂದ್ರ ಕಂಡ ದಿನ ಈದ್-ಉಲ್-ಫಿತ್ರ್ ಆಚರಿಸುತ್ತಾರೆ.

ಈದ್-ಉಲ್-ಫಿತ್ರ್
ಹಬ್ಬದ ನಮಾಜ್ ಅನ್ನು ಮನೆಯಲ್ಲೇ ಮಾಡಲಾಯಿತು.

ಈ ದಿನದಂದು ತನ್ನ ಖರ್ಚು ವೆಚ್ಚಗಳನ್ನು ಕಳೆದು ನಂತರವೂ ಸಂಪತ್ತು ಉಳಿದಿದ್ದರೆ ಖಡ್ಡಾಯವಾಗಿ ಬಡವರಿಗೆ ನಿರ್ದಿಷ್ಟ ಪ್ರಮಾಣದಲ್ಲಿ ಆಹಾರವನ್ನು ನೀಡಬೇಕಾಗುತ್ತದೆ. ಈ ಮೂಲಕ ಈ ಹಬ್ಬದ ಆಚರಣೆ ಪ್ರಾರಂಭಿಸಿ, ಮಸೀದಿ ಅಥವಾ ಈದ್ಗಾಗಳಿಗೆ ತೆರಳಿ ‘ಈದ್ ನಮಾಝ್’ ಮಾಡಲಾಗುತ್ತದೆ. ನಂತರ ಪರಸ್ಪರ ಆಲಿಂಗಿಸಿ, ಕ್ಷೇಮ ವಿಚಾರ ವಿನಿಮಯ ಮಾಡುತ್ತಾರೆ.

ಈದ್-ಉಲ್-ಫಿತ್ರ್
ಕಾಶ್ಮೀರ ಮಸೀದಿ ಹಬ್ಬದ ದಿನವೂ ಮುಚ್ಚಲಾಗಿದೆ.

ಮನಸ್ತಾಪ ಇದ್ದವರೊಂದಿಗೆ ಕ್ಷಮೆ ಕೇಳಿ ಅವರೊಂದಿಗಿನ ಮನಸ್ತಾಪವನ್ನು ಕೊನೆಗಾಣಿಸುತ್ತಾರೆ. ತಮ್ಮ ಅಗಲಿದ ಹಿರಿಯರ ಖಬರಸ್ಥಾನ ಸಂದರ್ಶಿಸುವುದು, ಸೂಫೀ ಸಂತರ ಸಮಾಧಿಗಳಿಗೆ ಭೇಟಿ ನೀಡಿ ಅಲ್ಲಿ ಪ್ರಾರ್ಥಿಸುವುದು ಸೇರಿದಂತೆ ನೆರೆಮನೆ, ಸಂಬಂಧಿಕರ ಮನೆಗೆ ಸೌಹಾರ್ದ ಭೇಟಿ ನೀಡುತ್ತಾ ಹಬ್ಬವನ್ನು ಆಚರಿಸಲಾಗುತ್ತದೆ.


ಓದಿ:  ಬಾಲಕಿ ಜ್ಯೋತಿ 1200 ಕಿ.ಮಿ. ಕ್ರಮಿಸಿದ್ದು ಭಾರತೀಯರ ಸುಂದರವಾದ ಸಾಧನೆಯೆಂದ ಇವಾಂಕ ಟ್ರಂಪ್: ಹಲವರ ಆಕ್ರೋಶ


 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...