Homeಕರ್ನಾಟಕಕರ್ನಾಟಕದ ಕರಾವಳಿ ಸೇರಿದಂತೆ ಕೇರಳದಲ್ಲಿ ಸರಳ 'ಈದ್-ಉಲ್-ಫಿತ್ರ್' ಆಚರಣೆ

ಕರ್ನಾಟಕದ ಕರಾವಳಿ ಸೇರಿದಂತೆ ಕೇರಳದಲ್ಲಿ ಸರಳ ‘ಈದ್-ಉಲ್-ಫಿತ್ರ್’ ಆಚರಣೆ

ದೇಶದ ಇತರೆಡೆ ನಾಳೆ ಈದ್-ಉಲ್-ಫಿತ್ರ್ ಆಚರಿಸಲಾಗುತ್ತದೆ.

- Advertisement -
- Advertisement -

ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಕೇರಳ ಹಾಗೂ ಜಮ್ಮುಕಾಶ್ಮೀರದಲ್ಲಿ ಇಂದು ವಿಶ್ವಾಸಿಗಳು ಈದ್-ಉಲ್-ಫಿತ್ರ್ (ರಂಝಾನ್) ಹಬ್ಬವನ್ನು ಸರಳವಾಗಿ ಆಚರಿಸಿದರು. ಕೊರೊನಾ ಲಾಕ್ ಡೌನ್ ಇರುವುದರಿಂದ ಹಬ್ಬದ ಪ್ರಾರ್ಥನೆಗಳನ್ನು ಮನೆಯಲ್ಲೇ ಮಾಡಲಾಯಿತು.

ಮಸೀದಿಗಳು ಕೊರೊನಾ ಲಾಕ್ ಡೌನ್ ಪ್ರಯುಕ್ತ ಇಂದು ಕೂಡಾ ಮುಚ್ಚಲ್ಪಟ್ಟಿದ್ದವು. ಸರ್ಕಾರದ ನಿರ್ದೇಶನದಂತೆ ಧರ್ಮಗುರುಗಳು ಹಬ್ಬವನ್ನು ಸರಳವಾಗಿ, ಮನೆಯಲ್ಲಿದ್ದೇ ಆಚರಿಸುವಂತೆ ಕರೆ ನೀಡಿದ್ದರು. ಕರ್ನಾಟಕದ ಮಂಗಳೂರು, ಉಡುಪಿ, ಕೇರಳ ಹಾಗೂ ಜಮ್ಮು ಕಾಶ್ಮೀರದಲ್ಲಿ ಇಂದು ಹಬ್ಬ ಆಚರಿಸಲಾಗುತ್ತಿದ್ದು. ದೇಶದ ಇತರೆಡೆ ನಾಳೆ ಹಬ್ಬವನ್ನು ಆಚರಿಸಲಾಗುತ್ತದೆ.

ಈದ್-ಉಲ್-ಫಿತ್ರ್
ಹಬ್ಬದ ದಿನ ಖಾಲಿಯಾಗಿರುವ ಮಂಗಳೂರಿನ ಈದ್ಗಾ ಮಸೀದಿ.
ಕೇರಳ ಕೊಚ್ಚಿಯಲ್ಲಿ ಮಸೀದಿಯನ್ನು ಹಬ್ಬದ ದಿನವೂ ಮುಚ್ಚಲಾಗಿದೆ.

ಇಸ್ಲಾಮಿಕ್ ತಿಂಗಳ ರಂಝಾನ್ ಮುಸ್ಲಿಮರಿಗೆ ಬಹುಮುಖ್ಯ ತಿಂಗಳಾಗಿದ್ದು, ಈ ತಿಂಗಳಲ್ಲಿ ಮೂವತ್ತು ದಿನ ಉಪವಾಸವಿದ್ದು ಆಧ್ಯಾತ್ಮಿಕತೆಯಲ್ಲಿ ತೊಡಗಿರುತ್ತಾರೆ. ಮೂವತ್ತು ದಿನದ ನಂತರ ಶವ್ವಾಲ್ ತಿಂಗಳ ಒಂದನೇ ಚಂದ್ರ ಕಂಡ ದಿನ ಈದ್-ಉಲ್-ಫಿತ್ರ್ ಆಚರಿಸುತ್ತಾರೆ.

ಈದ್-ಉಲ್-ಫಿತ್ರ್
ಹಬ್ಬದ ನಮಾಜ್ ಅನ್ನು ಮನೆಯಲ್ಲೇ ಮಾಡಲಾಯಿತು.

ಈ ದಿನದಂದು ತನ್ನ ಖರ್ಚು ವೆಚ್ಚಗಳನ್ನು ಕಳೆದು ನಂತರವೂ ಸಂಪತ್ತು ಉಳಿದಿದ್ದರೆ ಖಡ್ಡಾಯವಾಗಿ ಬಡವರಿಗೆ ನಿರ್ದಿಷ್ಟ ಪ್ರಮಾಣದಲ್ಲಿ ಆಹಾರವನ್ನು ನೀಡಬೇಕಾಗುತ್ತದೆ. ಈ ಮೂಲಕ ಈ ಹಬ್ಬದ ಆಚರಣೆ ಪ್ರಾರಂಭಿಸಿ, ಮಸೀದಿ ಅಥವಾ ಈದ್ಗಾಗಳಿಗೆ ತೆರಳಿ ‘ಈದ್ ನಮಾಝ್’ ಮಾಡಲಾಗುತ್ತದೆ. ನಂತರ ಪರಸ್ಪರ ಆಲಿಂಗಿಸಿ, ಕ್ಷೇಮ ವಿಚಾರ ವಿನಿಮಯ ಮಾಡುತ್ತಾರೆ.

ಈದ್-ಉಲ್-ಫಿತ್ರ್
ಕಾಶ್ಮೀರ ಮಸೀದಿ ಹಬ್ಬದ ದಿನವೂ ಮುಚ್ಚಲಾಗಿದೆ.

ಮನಸ್ತಾಪ ಇದ್ದವರೊಂದಿಗೆ ಕ್ಷಮೆ ಕೇಳಿ ಅವರೊಂದಿಗಿನ ಮನಸ್ತಾಪವನ್ನು ಕೊನೆಗಾಣಿಸುತ್ತಾರೆ. ತಮ್ಮ ಅಗಲಿದ ಹಿರಿಯರ ಖಬರಸ್ಥಾನ ಸಂದರ್ಶಿಸುವುದು, ಸೂಫೀ ಸಂತರ ಸಮಾಧಿಗಳಿಗೆ ಭೇಟಿ ನೀಡಿ ಅಲ್ಲಿ ಪ್ರಾರ್ಥಿಸುವುದು ಸೇರಿದಂತೆ ನೆರೆಮನೆ, ಸಂಬಂಧಿಕರ ಮನೆಗೆ ಸೌಹಾರ್ದ ಭೇಟಿ ನೀಡುತ್ತಾ ಹಬ್ಬವನ್ನು ಆಚರಿಸಲಾಗುತ್ತದೆ.


ಓದಿ:  ಬಾಲಕಿ ಜ್ಯೋತಿ 1200 ಕಿ.ಮಿ. ಕ್ರಮಿಸಿದ್ದು ಭಾರತೀಯರ ಸುಂದರವಾದ ಸಾಧನೆಯೆಂದ ಇವಾಂಕ ಟ್ರಂಪ್: ಹಲವರ ಆಕ್ರೋಶ


 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...