Homeಕರ್ನಾಟಕಪೌರತ್ವದ ಹಕ್ಕುಗಳಿಗಾಗಿ ಮಾರ್ಚ್ 12 ರಂದು ರಾಜ್ಯಾದ್ಯಂತ ಉಪವಾಸ ಸತ್ಯಾಗ್ರಹ : ಸಸಿಕಾಂತ್‌ ಸೆಂಥಿಲ್‌

ಪೌರತ್ವದ ಹಕ್ಕುಗಳಿಗಾಗಿ ಮಾರ್ಚ್ 12 ರಂದು ರಾಜ್ಯಾದ್ಯಂತ ಉಪವಾಸ ಸತ್ಯಾಗ್ರಹ : ಸಸಿಕಾಂತ್‌ ಸೆಂಥಿಲ್‌

ರಸ್ತೆಗಳಲ್ಲಿ, ಎಲ್ಲಿಯೂ ಯಾರಿಗೂ ತೊಂದರೆಯಾಗದಂತೆ, ಅಧಿಕಾರದಲ್ಲಿರುವವರ ಮನವೊಲಿಸುವ ಮಹತ್ವದ ಹೋರಾಟದ ಮಾದರಿಯಾಗಿ ಉಪವಾಸ ಸತ್ಯಾಗ್ರಹವನ್ನು ಮಾಡಲಾಗುತ್ತಿದೆ.

- Advertisement -
- Advertisement -

ನಾವು ಭಾರತೀಯರು–We the people of India, ಜಂಟಿ ಕ್ರಿಯಾ ಸಮಿತಿ – ಕರ್ನಾಟಕ ಹಾಗೂ ಸಂವಿಧಾನ ಉಳಿಸಿ ವೇದಿಕೆಗಳ ವತಿಯಿಂದ ಮಾರ್ಚ್ 12 ರಂದು “ಉಪ್ಪಿನ ಸತ್ಯಾಗ್ರಹ – 90” ನೆನಪು ಹಾಗೂ ಸ್ಪೂರ್ತಿಯಲ್ಲಿ ಸಂವಿಧಾನ ಹಾಗೂ ಪೌರತ್ವದ ಹಕ್ಕುಗಳನ್ನು ಉಳಿಸಿಕೊಳ್ಳಲು ರಾಜ್ಯಾದ್ಯಂತ ಉಪವಾಸ ಸತ್ಯಾಗ್ರಹ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಲು ತೀರ್ಮಾನಿಸಿದೆ.

ರಾಜ್ಯಾದ್ಯಂತ ಪ್ರತೀ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿಗಳ ಮುಂದೆ ಮತ್ತು ಬೆಂಗಳೂರಿನಲ್ಲಿ ಮಹಾತ್ಮಾ ಗಾಂಧಿ ಪ್ರತಿಮೆಯ ಬಳಿ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಯಲಿದೆ. ದೇಶದ ಜನರ ಸಾಂವಿಧಾನಿಕ ಹಕ್ಕುಗಳು, ಪೌರತ್ವದ ಹಕ್ಕುಗಳಿಗೆ ಕುತ್ತು ಬಂದಿರುವ ಹಿನ್ನೆಲೆಯಲ್ಲಿ ಈ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಐಎಎಸ್‌ ಅಧಿಕಾರಿ ಸಸಿಕಾಂತ್‌ ಸೆಂಥಿಲ್‌ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, “ಇಂದು ಆ ಸ್ವಾತಂತ್ರ್ಯ ಹಾಗೂ ಸಂವಿಧಾನಗಳಿಗೆ ಕುತ್ತು ಬಂದಿದೆ. ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗಿಯಾಗದ ಪರಂಪರೆಯುಳ್ಳವರು ದೇಶದಲ್ಲಿ ಅಧಿಕಾರ ಹಿಡಿದಿದ್ದಾರೆ. ಸ್ವಾತಂತ್ರ್ಯ ಚಳವಳಿಯಲ್ಲಿ ಧೀರೋದಾತ್ತವಾಗಿ ಸೆಣೆಸಿದ ಎಲ್ಲ ಧರ್ಮಗಳಿಗೆ ಸೇರಿದವರು, ಆದಿವಾಸಿಗಳು, ದಲಿತರು, ರೈತ ಕಾರ್ಮಿಕರು, ಮಹಿಳೆಯರು ತಾವು ಈ ದೇಶದ ಪೌರರು ಎಂದು ತಾವೇ ಓಟು ಹಾಕಿ ಗೆಲ್ಲಿಸಿದ ಸರ್ಕಾರದ ಮುಂದೆ ಸಾಬೀತು ಮಾಡಬೇಕಾದ ದುಸ್ಥಿತಿ ಬಂದು ನಿಂತಿದೆ. ಇದನ್ನು ಖಂಡಿಸಿ ದೇಶಾದ್ಯಂತ ಕಳೆದ ಮೂರು ತಿಂಗಳಿಂದ ಬೃಹತ್ ಆಂದೋಲನವು ಎದ್ದು ನಿಂತಿದೆ. ಅತ್ಯಂತ ಶಾಂತಿಯುತವಾಗಿ ನಡೆಯುತ್ತಿರುವ ಈ ಚಳವಳಿಗೆ ಭಾರತದ ಸ್ವಾತಂತ್ರ್ಯ ಸಂಗ್ರಾಮವೇ ಸ್ಫೂರ್ತಿ ಮತ್ತು ಮಾದರಿ” ಎಂದು ಹೇಳಿದ್ದಾರೆ.

“ದಂಡಿ ಸತ್ಯಾಗ್ರಹದ ನಡಿಗೆ ಆರಂಭಿಸಿದ ದಿನ, ಅದರಲ್ಲೂ ಈ ಸತ್ಯಾಗ್ರಹಕ್ಕೆ 90 ವರ್ಷಗಳು ತುಂಬುತ್ತಿರುವ ಸಂದರ್ಭದಲ್ಲಿ ರಾಜ್ಯದೆಲ್ಲೆಡೆ ಒಂದು ದಿನದ ಉಪವಾಸ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗುತ್ತಿದೆ. ಅಂದು ಬೆಳಿಗ್ಗೆ 9ರಿಂದ ಸಂಜೆ 6ವರೆಗೆ ಸತ್ಯಾಗ್ರಹಿಗಳು ಉಪವಾಸ ಸತ್ಯಾಗ್ರಹವನ್ನು ನಡೆಸುವುದಲ್ಲದೇ, ಜಿಲ್ಲಾಧಿಕಾರಿಗಳು/ತಹಸೀಲ್ದಾರ್ ಮುಖಾಂತರ ಸರ್ಕಾರಗಳಿಗೆ ಮನವಿ ಸಲ್ಲಿಸುತ್ತಿದ್ದೇವೆ” ಎಂದು ಹೇಳಿದ್ದಾರೆ.

“ರಾಜ್ಯದೆಲ್ಲೆಡೆ ಇಷ್ಟೊಂದು ಬೃಹತ್ ಪ್ರಮಾಣದಲ್ಲಿ ಉಪವಾಸ ಸತ್ಯಾಗ್ರಹವು ನಡೆಯುತ್ತಿರುವುದು ಬಹುಶಃ ಇದೇ ಮೊದಲು. ರಸ್ತೆಗಳಲ್ಲಿ, ಎಲ್ಲಿಯೂ ಯಾರಿಗೂ ತೊಂದರೆಯಾಗದಂತೆ, ಅಧಿಕಾರದಲ್ಲಿರುವವರ ಮನವೊಲಿಸುವ ಮಹತ್ವದ ಹೋರಾಟದ ಮಾದರಿಯಾಗಿ ಉಪವಾಸ ಸತ್ಯಾಗ್ರಹವನ್ನು ಮಾಡಲಾಗುತ್ತಿದೆ. ಮಹಾತ್ಮಾ ಗಾಂಧಿಯವರು ಆವಿಷ್ಕರಿಸಿದ ಸತ್ಯಾಗ್ರಹದ ಈ ಮಾದರಿಯು ಸರ್ಕಾರದ ಕಣ್ತರೆಸಲಿ ಎಂದು ಆಶಿಸುತ್ತೇವೆ. ನಮ್ಮ ಆಂದೋಲನವು ಸ್ವಾತಂತ್ರ್ಯ ಚಳವಳಿಯಲ್ಲಿ ಮಹಾತ್ಮಾ ಗಾಂಧಿಯವರು ಹಾಕಿಕೊಟ್ಟ ಪರಂಪರೆಯಂತೆಯೇ ಅಹಿಂಸಾತ್ಮಕವಾಗಿ ಇರಲಿದ್ದು, ಗುರಿ ಮುಟ್ಟುವವರೆಗೂ ನಿಲ್ಲುವುದಿಲ್ಲ ಎಂದು ನಮ್ಮೊಳಗೇ ಆತ್ಮಾನುಸಂಧಾನ ನಡೆಸಿಕೊಳ್ಳುವ ದಿನವಾಗಿಯೂ ಈ ಸತ್ಯಾಗ್ರಹವು ಇರಲಿದೆ” ಎಂದು ಸೆಂಥಿಲ್‌ ತಿಳಿಸಿದ್ದಾರೆ.

ಮಾರ್ಚ್ 12, 1930ರಂದು ಮಹಾತ್ಮಾ ಗಾಂಧಿಯವರು ದಂಡಿ (ಉಪ್ಪಿನ) ಸತ್ಯಾಗ್ರಹವನ್ನು ಆರಂಭಿಸಿದ್ದರು. ಭಾರತವನ್ನು ಆಳುತ್ತಿದ್ದ ಬ್ರಿಟಿಷರು, ತಮ್ಮ ಆರ್ಥಿಕ ದಬ್ಬಾಳಿಕೆಯನ್ನು ಮುಂದುವರೆಸುವುದರ ಭಾಗವಾಗಿ ಉಪ್ಪಿನ ಮೇಲೆ ಕರ ವಿಧಿಸಿದ್ದರು. ಅದನ್ನು ವಿರೋಧಿಸಿ ಸತ್ಯಾಗ್ರಹಿಗಳೊಂದಿಗೆ ಮಹಾತ್ಮಾ ಗಾಂಧಿಯವರು ಉಪ್ಪು ತಯಾರಿಸಲು ಸಮುದ್ರದೆಡೆಗೆ ನಡೆಸಿದ ಪ್ರಯಾಣ ಅಂದು ಶುರುವಾಗಿತ್ತು. ಅಂತಿಮವಾಗಿ ಸತ್ಯಾಗ್ರಹಿಗಳು ಬಂಧನಕ್ಕೊಳಗಾಗಿದ್ದರು.

ಪತ್ರಿಕಾಗೋಷ್ಠಿಯಲ್ಲಿ ಯೂಸಫ್‌ ಕಣ್ಣಿ, ಡಾ.ಆಸೀಫಾ ಮತ್ತು ವಕೀಲರಾದ ವಿನಯ್‌ ಶ್ರೀನಿವಾಸನ್‌ ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪ್ರಧಾನಿ ಮೋದಿಯವರ ವಿದೇಶಾಂಗ ನೀತಿಯ ಸಾರ ಮತ್ತು ಶೈಲಿ ಎರಡಕ್ಕೂ ರಾಷ್ಟ್ರವು ಭಾರಿ ಬೆಲೆ ತೆರುತ್ತಿದೆ’: ಕಾಂಗ್ರೆಸ್

ನವದೆಹಲಿ: ಇರಾನ್ ಮೇಲೆ ನಡೆದ ಯುದ್ಧಕ್ಕೆ ಸರ್ಕಾರದ ಪ್ರತಿಕ್ರಿಯೆಯು ಭಾರತದ ಮೌಲ್ಯಗಳು, ತತ್ವಗಳು ಮತ್ತು ಹಿತಾಸಕ್ತಿಗಳಿಗೆ ಮಾಡಿದ ದ್ರೋಹವಾಗಿದೆ ಎಂದು ಕಾಂಗ್ರೆಸ್ ಭಾನುವಾರ ಹೇಳಿದೆ, ಪ್ರಧಾನಿ ನರೇಂದ್ರ ಮೋದಿಯವರ ವಿದೇಶಾಂಗ ನೀತಿಯ ಸಾರ...

ಬಂಗಾಳ ಎಸ್‌ಐಆರ್| ಮುಸ್ಲಿಂ ಬಹುಸಂಖ್ಯಾತ ಮುರ್ಷಿದಾಬಾದ್-ಮಾಲ್ಡಾದಲ್ಲಿ ಅತ್ಯಧಿಕ ಮತದಾರರ ಪರಿಶೀಲನೆ ಬಾಕಿ

ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಚುನಾವಣಾ ಆಯೋಗ ಪ್ರಕಟಿಸಿದ ಅಂತಿಮ ಮತದಾರರ ಪಟ್ಟಿಯ ಪ್ರಕಾರ, ಪಶ್ಚಿಮ ಬಂಗಾಳದ ಮುಸ್ಲಿಂ ಪ್ರಾಬಲ್ಯದ ಮುರ್ಷಿದಾಬಾದ್ ಮತ್ತು ಮಾಲ್ಡಾ ಜಿಲ್ಲೆಗಳಲ್ಲಿ ದಾಖಲೆಗಳ ಪರಿಶೀಲನೆಗೆ...

‘ಪ್ರಜಾಪ್ರಭುತ್ವ ಜಗತ್ತಿನ ನಾಯಕರು, ಸಾರ್ವಭೌಮ ರಾಷ್ಟ್ರದ ನಾಯಕನನ್ನು ಹತ್ಯೆ ಮಾಡಿದ್ದು ಹೇಯ ಕೃತ್ಯ’: ಖಮೇನಿ ಹತ್ಯೆಗೆ ಪ್ರಿಯಾಂಕ ಗಾಂಧಿ ಖಂಡನೆ

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಭಾನುವಾರ ತೀವ್ರವಾಗಿ ಖಂಡಿಸಿದ್ದಾರೆ. "ಪ್ರಜಾಪ್ರಭುತ್ವ ಜಗತ್ತಿನ ನಾಯಕರು ಎಂದು ಕರೆಯಲ್ಪಡುವವರು" ಸಾರ್ವಭೌಮ ರಾಷ್ಟ್ರದ ನಾಯಕತ್ವವನ್ನು ಗುರಿಯಾಗಿಸಿಕೊಂಡು...

ದುಬೈ-ಅಬುಧಾಬಿ ಮೇಲೆ ದಾಳಿ; ಇರಾನ್‌ಗೆ ಯುಎಇ ಎಚ್ಚರಿಕೆ

ಇರಾನ್ ತನ್ನ ನೆರೆಹೊರೆಯವರನ್ನು ಗುರಿಯಾಗಿಸಿಕೊಳ್ಳಬಾರದು ಎಂದು ಯುಎಇ ಅಧ್ಯಕ್ಷರ ರಾಜತಾಂತ್ರಿಕ ಸಲಹೆಗಾರ ಅನ್ವರ್ ಗರ್ಗಶ್ ಎಚ್ಚರಿಕೆ ನೀಡಿದ್ದಾರೆ. "ಗಲ್ಫ್ ರಾಷ್ಟ್ರಗಳ ವಿರುದ್ಧ ಇರಾನ್ ಆಕ್ರಮಣವು ತಪ್ಪು ಲೆಕ್ಕಾಚಾರವಾಗಿದೆ. ಇದೇ ಬೆಳವಣಿಗೆ ನಿರ್ಣಾಯಕ ಹಂತದಲ್ಲಿ ಇರಾನ್...

ಇರಾನ್‌ ಹಂಗಾಮಿ ಸರ್ವೋಚ್ಚ ನಾಯಕರಾಗಿ ಅಯಾತೊಲ್ಲ ಅಲಿರೆಝಾ ಅರಾಫಿ ನೇಮಕ

ಅಮೆರಿಕ-ಇಸ್ರೇಲ್ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾದ ಹಿನ್ನೆಲೆ, ಹಿರಿಯ ಧರ್ಮಗುರು ಅಯತೊಲ್ಲಾ ಅಲಿರೆಝಾ ಅರಾಫಿ ಅವರು ಇರಾನ್‌ನ ಹಂಗಾಮಿ ಸರ್ವೋಚ್ಚ ನಾಯಕರಾಗಿ ಆಯ್ಕೆ ಮಾಡಲಾಗಿದೆ ಎಂದು ಸರ್ಕಾರಿ-ಸಂಯೋಜಿತ...

ಖಮೇನಿ ಹತ್ಯೆ ವಿರೋಧಿಸಿ ಬೃಹತ್ ಪ್ರತಿಭಟನೆ; ಶ್ರೀನಗರದಲ್ಲಿ ಇಂಟರ್‌ನೆಟ್ ಸ್ತಬ್ಧ

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯನ್ನು ವಿರೋಧಿಸಿ ಕಾಶ್ಮೀರದಾದ್ಯಂತ ಬೃಹತ್ ಪ್ರತಿಭಟನೆಗಳು ಭುಗಿಲೆದ್ದಿವೆ. ಶ್ರೀನಗರದಲ್ಲಿರುವ ವಿಶ್ವಸಂಸ್ಥೆಯ ಮಿಲಿಟರಿ ವೀಕ್ಷಕರ ಗುಂಪು (UNMOGIP) ಪ್ರಧಾನ ಕಚೇರಿಯ ಮುಂದೆ ದೊಡ್ಡ ಜನಸಮೂಹ ಜಮಾಯಿಸಿತ್ತು....

ಅಮೆರಿಕಾ-ಇಸ್ರೇಲ್ ‘ಪುಂಡ ರಾಷ್ಟ್ರಗಳು’; ಇರಾನ್ ಮೇಲಿನ ದಾಳಿ ಖಂಡಿಸಿದ ಕೇರಳ ಸಿಎಂ; ಅನಿವಾಸಿ ಭಾರತೀಯರ ಆತಂಕ ಪರಿಹರಿಸಲು ಕೇಂದ್ರಕ್ಕೆ ಮನವಿ

ತಿರುವನಂತಪುರಂ: ಇಸ್ರೇಲ್ ಮತ್ತು ಅಮೆರಿಕ ಇರಾನ್ ಮೇಲೆ ನಡೆಸುತ್ತಿರುವ ದಾಳಿಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತೀವ್ರವಾಗಿ ಖಂಡಿಸಿದ್ದಾರೆ ಮತ್ತು ಗಲ್ಫ್ ರಾಷ್ಟ್ರಗಳಲ್ಲಿರುವ ಹಲವಾರು ಅನಿವಾಸಿ ಭಾರತೀಯರ ಆತಂಕವನ್ನು ಪರಿಹರಿಸಲು ಕೇಂದ್ರವು ತಕ್ಷಣ...

ಅಮೆರಿಕ-ಇಸ್ರೇಲಿ ಮಿಲಿಟರಿ ದಾಳಿಯಲ್ಲಿ ‘ಇರಾನ್‌ ಸಶಸ್ತ್ರ ಪಡೆಗಳ ಮುಖ್ಯಸ್ಥ ಅಬ್ದುಲ್ರಹೀಮ್ ಮೌಸಾವಿ ಹತ್ಯೆ; ಇರಾನ್ ಮಾಧ್ಯಮಗಳ ವರದಿ 

ಟೆಹ್ರಾನ್: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ನಡೆಸಿದ ದಾಳಿಯಲ್ಲಿ ಇರಾನ್ ಸಶಸ್ತ್ರ ಪಡೆಗಳ ಮುಖ್ಯಸ್ಥ ಅಬ್ದುಲ್ರಹೀಮ್ ಮೌಸಾವಿ ಸಾವನ್ನಪ್ಪಿದ್ದಾರೆ ಎಂದು ದೇಶದ ಸರ್ಕಾರಿ ಸ್ವಾಮ್ಯದ ಐಆರ್‌ಐಬಿ ಟಿವಿ ಭಾನುವಾರ ವರದಿ ಮಾಡಿದೆ. ಟೆಹ್ರಾನ್ ಮೇಲಿನ ದಾಳಿಯಲ್ಲಿ...

ಕರಾಚಿ| ಖಮೇನಿ ಹತ್ಯೆ ಖಂಡಿಸಿ ಪ್ರತಿಭಟನೆ ವೇಳೆ ಘರ್ಷಣೆ : ಕನಿಷ್ಠ 9 ಸಾವು

ಪಾಕಿಸ್ತಾನದ ಕರಾಚಿಯಲ್ಲಿರುವ ಅಮೆರಿಕ ದೂತಾವಾಸದ ಬಳಿ ಭಾನುವಾರ (ಮಾ.1) ಇರಾನ್ ಪರ ಪ್ರತಿಭಟನಾಕಾರರು ಮತ್ತು ಭದ್ರತಾ ಸಿಬ್ಬಂದಿಯ ನಡುವೆ ಘರ್ಷಣೆ ಉಂಟಾಗಿ ಕನಿಷ್ಠ ಒಂಭತ್ತು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. "ನಾವು ಕನಿಷ್ಠ ಎಂಟು...

ಇರಾನ್-ಇಸ್ರೇಲ್ ಯುದ್ಧ: ಭಾರತ ತಕ್ಷಣದ ಆರ್ಥಿಕ ಸವಾಲುಗಳನ್ನು ಎದುರಿಸುವ ಸಾಧ್ಯತೆಯಿದೆ; ವರದಿ

ಫೆಬ್ರವರಿ 28, 2026 ರಂದು ಇರಾನ್ ಮೇಲೆ ಅಮೆರಿಕ-ಇಸ್ರೇಲ್ ಮುಷ್ಕರದ ನಂತರ ಇರಾನ್-ಇಸ್ರೇಲ್ ಸಂಘರ್ಷದಲ್ಲಿ ತೀವ್ರ ಏರಿಕೆಯು ಪಶ್ಚಿಮ ಏಷ್ಯಾದಲ್ಲಿ ಭೌಗೋಳಿಕ ರಾಜಕೀಯ ಅಪಾಯಗಳನ್ನು ತೀವ್ರಗೊಳಿಸಿದೆ ಮತ್ತು ಜಾಗತಿಕ ಇಂಧನ ಮಾರುಕಟ್ಟೆಗಳಿಗೆ ತಕ್ಷಣದ...