Homeಕರ್ನಾಟಕಪೌರತ್ವದ ಹಕ್ಕುಗಳಿಗಾಗಿ ಮಾರ್ಚ್ 12 ರಂದು ರಾಜ್ಯಾದ್ಯಂತ ಉಪವಾಸ ಸತ್ಯಾಗ್ರಹ : ಸಸಿಕಾಂತ್‌ ಸೆಂಥಿಲ್‌

ಪೌರತ್ವದ ಹಕ್ಕುಗಳಿಗಾಗಿ ಮಾರ್ಚ್ 12 ರಂದು ರಾಜ್ಯಾದ್ಯಂತ ಉಪವಾಸ ಸತ್ಯಾಗ್ರಹ : ಸಸಿಕಾಂತ್‌ ಸೆಂಥಿಲ್‌

ರಸ್ತೆಗಳಲ್ಲಿ, ಎಲ್ಲಿಯೂ ಯಾರಿಗೂ ತೊಂದರೆಯಾಗದಂತೆ, ಅಧಿಕಾರದಲ್ಲಿರುವವರ ಮನವೊಲಿಸುವ ಮಹತ್ವದ ಹೋರಾಟದ ಮಾದರಿಯಾಗಿ ಉಪವಾಸ ಸತ್ಯಾಗ್ರಹವನ್ನು ಮಾಡಲಾಗುತ್ತಿದೆ.

- Advertisement -
- Advertisement -

ನಾವು ಭಾರತೀಯರು–We the people of India, ಜಂಟಿ ಕ್ರಿಯಾ ಸಮಿತಿ – ಕರ್ನಾಟಕ ಹಾಗೂ ಸಂವಿಧಾನ ಉಳಿಸಿ ವೇದಿಕೆಗಳ ವತಿಯಿಂದ ಮಾರ್ಚ್ 12 ರಂದು “ಉಪ್ಪಿನ ಸತ್ಯಾಗ್ರಹ – 90” ನೆನಪು ಹಾಗೂ ಸ್ಪೂರ್ತಿಯಲ್ಲಿ ಸಂವಿಧಾನ ಹಾಗೂ ಪೌರತ್ವದ ಹಕ್ಕುಗಳನ್ನು ಉಳಿಸಿಕೊಳ್ಳಲು ರಾಜ್ಯಾದ್ಯಂತ ಉಪವಾಸ ಸತ್ಯಾಗ್ರಹ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಲು ತೀರ್ಮಾನಿಸಿದೆ.

ರಾಜ್ಯಾದ್ಯಂತ ಪ್ರತೀ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿಗಳ ಮುಂದೆ ಮತ್ತು ಬೆಂಗಳೂರಿನಲ್ಲಿ ಮಹಾತ್ಮಾ ಗಾಂಧಿ ಪ್ರತಿಮೆಯ ಬಳಿ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಯಲಿದೆ. ದೇಶದ ಜನರ ಸಾಂವಿಧಾನಿಕ ಹಕ್ಕುಗಳು, ಪೌರತ್ವದ ಹಕ್ಕುಗಳಿಗೆ ಕುತ್ತು ಬಂದಿರುವ ಹಿನ್ನೆಲೆಯಲ್ಲಿ ಈ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಐಎಎಸ್‌ ಅಧಿಕಾರಿ ಸಸಿಕಾಂತ್‌ ಸೆಂಥಿಲ್‌ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, “ಇಂದು ಆ ಸ್ವಾತಂತ್ರ್ಯ ಹಾಗೂ ಸಂವಿಧಾನಗಳಿಗೆ ಕುತ್ತು ಬಂದಿದೆ. ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗಿಯಾಗದ ಪರಂಪರೆಯುಳ್ಳವರು ದೇಶದಲ್ಲಿ ಅಧಿಕಾರ ಹಿಡಿದಿದ್ದಾರೆ. ಸ್ವಾತಂತ್ರ್ಯ ಚಳವಳಿಯಲ್ಲಿ ಧೀರೋದಾತ್ತವಾಗಿ ಸೆಣೆಸಿದ ಎಲ್ಲ ಧರ್ಮಗಳಿಗೆ ಸೇರಿದವರು, ಆದಿವಾಸಿಗಳು, ದಲಿತರು, ರೈತ ಕಾರ್ಮಿಕರು, ಮಹಿಳೆಯರು ತಾವು ಈ ದೇಶದ ಪೌರರು ಎಂದು ತಾವೇ ಓಟು ಹಾಕಿ ಗೆಲ್ಲಿಸಿದ ಸರ್ಕಾರದ ಮುಂದೆ ಸಾಬೀತು ಮಾಡಬೇಕಾದ ದುಸ್ಥಿತಿ ಬಂದು ನಿಂತಿದೆ. ಇದನ್ನು ಖಂಡಿಸಿ ದೇಶಾದ್ಯಂತ ಕಳೆದ ಮೂರು ತಿಂಗಳಿಂದ ಬೃಹತ್ ಆಂದೋಲನವು ಎದ್ದು ನಿಂತಿದೆ. ಅತ್ಯಂತ ಶಾಂತಿಯುತವಾಗಿ ನಡೆಯುತ್ತಿರುವ ಈ ಚಳವಳಿಗೆ ಭಾರತದ ಸ್ವಾತಂತ್ರ್ಯ ಸಂಗ್ರಾಮವೇ ಸ್ಫೂರ್ತಿ ಮತ್ತು ಮಾದರಿ” ಎಂದು ಹೇಳಿದ್ದಾರೆ.

“ದಂಡಿ ಸತ್ಯಾಗ್ರಹದ ನಡಿಗೆ ಆರಂಭಿಸಿದ ದಿನ, ಅದರಲ್ಲೂ ಈ ಸತ್ಯಾಗ್ರಹಕ್ಕೆ 90 ವರ್ಷಗಳು ತುಂಬುತ್ತಿರುವ ಸಂದರ್ಭದಲ್ಲಿ ರಾಜ್ಯದೆಲ್ಲೆಡೆ ಒಂದು ದಿನದ ಉಪವಾಸ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗುತ್ತಿದೆ. ಅಂದು ಬೆಳಿಗ್ಗೆ 9ರಿಂದ ಸಂಜೆ 6ವರೆಗೆ ಸತ್ಯಾಗ್ರಹಿಗಳು ಉಪವಾಸ ಸತ್ಯಾಗ್ರಹವನ್ನು ನಡೆಸುವುದಲ್ಲದೇ, ಜಿಲ್ಲಾಧಿಕಾರಿಗಳು/ತಹಸೀಲ್ದಾರ್ ಮುಖಾಂತರ ಸರ್ಕಾರಗಳಿಗೆ ಮನವಿ ಸಲ್ಲಿಸುತ್ತಿದ್ದೇವೆ” ಎಂದು ಹೇಳಿದ್ದಾರೆ.

“ರಾಜ್ಯದೆಲ್ಲೆಡೆ ಇಷ್ಟೊಂದು ಬೃಹತ್ ಪ್ರಮಾಣದಲ್ಲಿ ಉಪವಾಸ ಸತ್ಯಾಗ್ರಹವು ನಡೆಯುತ್ತಿರುವುದು ಬಹುಶಃ ಇದೇ ಮೊದಲು. ರಸ್ತೆಗಳಲ್ಲಿ, ಎಲ್ಲಿಯೂ ಯಾರಿಗೂ ತೊಂದರೆಯಾಗದಂತೆ, ಅಧಿಕಾರದಲ್ಲಿರುವವರ ಮನವೊಲಿಸುವ ಮಹತ್ವದ ಹೋರಾಟದ ಮಾದರಿಯಾಗಿ ಉಪವಾಸ ಸತ್ಯಾಗ್ರಹವನ್ನು ಮಾಡಲಾಗುತ್ತಿದೆ. ಮಹಾತ್ಮಾ ಗಾಂಧಿಯವರು ಆವಿಷ್ಕರಿಸಿದ ಸತ್ಯಾಗ್ರಹದ ಈ ಮಾದರಿಯು ಸರ್ಕಾರದ ಕಣ್ತರೆಸಲಿ ಎಂದು ಆಶಿಸುತ್ತೇವೆ. ನಮ್ಮ ಆಂದೋಲನವು ಸ್ವಾತಂತ್ರ್ಯ ಚಳವಳಿಯಲ್ಲಿ ಮಹಾತ್ಮಾ ಗಾಂಧಿಯವರು ಹಾಕಿಕೊಟ್ಟ ಪರಂಪರೆಯಂತೆಯೇ ಅಹಿಂಸಾತ್ಮಕವಾಗಿ ಇರಲಿದ್ದು, ಗುರಿ ಮುಟ್ಟುವವರೆಗೂ ನಿಲ್ಲುವುದಿಲ್ಲ ಎಂದು ನಮ್ಮೊಳಗೇ ಆತ್ಮಾನುಸಂಧಾನ ನಡೆಸಿಕೊಳ್ಳುವ ದಿನವಾಗಿಯೂ ಈ ಸತ್ಯಾಗ್ರಹವು ಇರಲಿದೆ” ಎಂದು ಸೆಂಥಿಲ್‌ ತಿಳಿಸಿದ್ದಾರೆ.

ಮಾರ್ಚ್ 12, 1930ರಂದು ಮಹಾತ್ಮಾ ಗಾಂಧಿಯವರು ದಂಡಿ (ಉಪ್ಪಿನ) ಸತ್ಯಾಗ್ರಹವನ್ನು ಆರಂಭಿಸಿದ್ದರು. ಭಾರತವನ್ನು ಆಳುತ್ತಿದ್ದ ಬ್ರಿಟಿಷರು, ತಮ್ಮ ಆರ್ಥಿಕ ದಬ್ಬಾಳಿಕೆಯನ್ನು ಮುಂದುವರೆಸುವುದರ ಭಾಗವಾಗಿ ಉಪ್ಪಿನ ಮೇಲೆ ಕರ ವಿಧಿಸಿದ್ದರು. ಅದನ್ನು ವಿರೋಧಿಸಿ ಸತ್ಯಾಗ್ರಹಿಗಳೊಂದಿಗೆ ಮಹಾತ್ಮಾ ಗಾಂಧಿಯವರು ಉಪ್ಪು ತಯಾರಿಸಲು ಸಮುದ್ರದೆಡೆಗೆ ನಡೆಸಿದ ಪ್ರಯಾಣ ಅಂದು ಶುರುವಾಗಿತ್ತು. ಅಂತಿಮವಾಗಿ ಸತ್ಯಾಗ್ರಹಿಗಳು ಬಂಧನಕ್ಕೊಳಗಾಗಿದ್ದರು.

ಪತ್ರಿಕಾಗೋಷ್ಠಿಯಲ್ಲಿ ಯೂಸಫ್‌ ಕಣ್ಣಿ, ಡಾ.ಆಸೀಫಾ ಮತ್ತು ವಕೀಲರಾದ ವಿನಯ್‌ ಶ್ರೀನಿವಾಸನ್‌ ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....