Homeಕರ್ನಾಟಕಪೌರತ್ವದ ಹಕ್ಕುಗಳಿಗಾಗಿ ಮಾರ್ಚ್ 12 ರಂದು ರಾಜ್ಯಾದ್ಯಂತ ಉಪವಾಸ ಸತ್ಯಾಗ್ರಹ : ಸಸಿಕಾಂತ್‌ ಸೆಂಥಿಲ್‌

ಪೌರತ್ವದ ಹಕ್ಕುಗಳಿಗಾಗಿ ಮಾರ್ಚ್ 12 ರಂದು ರಾಜ್ಯಾದ್ಯಂತ ಉಪವಾಸ ಸತ್ಯಾಗ್ರಹ : ಸಸಿಕಾಂತ್‌ ಸೆಂಥಿಲ್‌

ರಸ್ತೆಗಳಲ್ಲಿ, ಎಲ್ಲಿಯೂ ಯಾರಿಗೂ ತೊಂದರೆಯಾಗದಂತೆ, ಅಧಿಕಾರದಲ್ಲಿರುವವರ ಮನವೊಲಿಸುವ ಮಹತ್ವದ ಹೋರಾಟದ ಮಾದರಿಯಾಗಿ ಉಪವಾಸ ಸತ್ಯಾಗ್ರಹವನ್ನು ಮಾಡಲಾಗುತ್ತಿದೆ.

- Advertisement -
- Advertisement -

ನಾವು ಭಾರತೀಯರು–We the people of India, ಜಂಟಿ ಕ್ರಿಯಾ ಸಮಿತಿ – ಕರ್ನಾಟಕ ಹಾಗೂ ಸಂವಿಧಾನ ಉಳಿಸಿ ವೇದಿಕೆಗಳ ವತಿಯಿಂದ ಮಾರ್ಚ್ 12 ರಂದು “ಉಪ್ಪಿನ ಸತ್ಯಾಗ್ರಹ – 90” ನೆನಪು ಹಾಗೂ ಸ್ಪೂರ್ತಿಯಲ್ಲಿ ಸಂವಿಧಾನ ಹಾಗೂ ಪೌರತ್ವದ ಹಕ್ಕುಗಳನ್ನು ಉಳಿಸಿಕೊಳ್ಳಲು ರಾಜ್ಯಾದ್ಯಂತ ಉಪವಾಸ ಸತ್ಯಾಗ್ರಹ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಲು ತೀರ್ಮಾನಿಸಿದೆ.

ರಾಜ್ಯಾದ್ಯಂತ ಪ್ರತೀ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿಗಳ ಮುಂದೆ ಮತ್ತು ಬೆಂಗಳೂರಿನಲ್ಲಿ ಮಹಾತ್ಮಾ ಗಾಂಧಿ ಪ್ರತಿಮೆಯ ಬಳಿ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಯಲಿದೆ. ದೇಶದ ಜನರ ಸಾಂವಿಧಾನಿಕ ಹಕ್ಕುಗಳು, ಪೌರತ್ವದ ಹಕ್ಕುಗಳಿಗೆ ಕುತ್ತು ಬಂದಿರುವ ಹಿನ್ನೆಲೆಯಲ್ಲಿ ಈ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಐಎಎಸ್‌ ಅಧಿಕಾರಿ ಸಸಿಕಾಂತ್‌ ಸೆಂಥಿಲ್‌ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, “ಇಂದು ಆ ಸ್ವಾತಂತ್ರ್ಯ ಹಾಗೂ ಸಂವಿಧಾನಗಳಿಗೆ ಕುತ್ತು ಬಂದಿದೆ. ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗಿಯಾಗದ ಪರಂಪರೆಯುಳ್ಳವರು ದೇಶದಲ್ಲಿ ಅಧಿಕಾರ ಹಿಡಿದಿದ್ದಾರೆ. ಸ್ವಾತಂತ್ರ್ಯ ಚಳವಳಿಯಲ್ಲಿ ಧೀರೋದಾತ್ತವಾಗಿ ಸೆಣೆಸಿದ ಎಲ್ಲ ಧರ್ಮಗಳಿಗೆ ಸೇರಿದವರು, ಆದಿವಾಸಿಗಳು, ದಲಿತರು, ರೈತ ಕಾರ್ಮಿಕರು, ಮಹಿಳೆಯರು ತಾವು ಈ ದೇಶದ ಪೌರರು ಎಂದು ತಾವೇ ಓಟು ಹಾಕಿ ಗೆಲ್ಲಿಸಿದ ಸರ್ಕಾರದ ಮುಂದೆ ಸಾಬೀತು ಮಾಡಬೇಕಾದ ದುಸ್ಥಿತಿ ಬಂದು ನಿಂತಿದೆ. ಇದನ್ನು ಖಂಡಿಸಿ ದೇಶಾದ್ಯಂತ ಕಳೆದ ಮೂರು ತಿಂಗಳಿಂದ ಬೃಹತ್ ಆಂದೋಲನವು ಎದ್ದು ನಿಂತಿದೆ. ಅತ್ಯಂತ ಶಾಂತಿಯುತವಾಗಿ ನಡೆಯುತ್ತಿರುವ ಈ ಚಳವಳಿಗೆ ಭಾರತದ ಸ್ವಾತಂತ್ರ್ಯ ಸಂಗ್ರಾಮವೇ ಸ್ಫೂರ್ತಿ ಮತ್ತು ಮಾದರಿ” ಎಂದು ಹೇಳಿದ್ದಾರೆ.

“ದಂಡಿ ಸತ್ಯಾಗ್ರಹದ ನಡಿಗೆ ಆರಂಭಿಸಿದ ದಿನ, ಅದರಲ್ಲೂ ಈ ಸತ್ಯಾಗ್ರಹಕ್ಕೆ 90 ವರ್ಷಗಳು ತುಂಬುತ್ತಿರುವ ಸಂದರ್ಭದಲ್ಲಿ ರಾಜ್ಯದೆಲ್ಲೆಡೆ ಒಂದು ದಿನದ ಉಪವಾಸ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗುತ್ತಿದೆ. ಅಂದು ಬೆಳಿಗ್ಗೆ 9ರಿಂದ ಸಂಜೆ 6ವರೆಗೆ ಸತ್ಯಾಗ್ರಹಿಗಳು ಉಪವಾಸ ಸತ್ಯಾಗ್ರಹವನ್ನು ನಡೆಸುವುದಲ್ಲದೇ, ಜಿಲ್ಲಾಧಿಕಾರಿಗಳು/ತಹಸೀಲ್ದಾರ್ ಮುಖಾಂತರ ಸರ್ಕಾರಗಳಿಗೆ ಮನವಿ ಸಲ್ಲಿಸುತ್ತಿದ್ದೇವೆ” ಎಂದು ಹೇಳಿದ್ದಾರೆ.

“ರಾಜ್ಯದೆಲ್ಲೆಡೆ ಇಷ್ಟೊಂದು ಬೃಹತ್ ಪ್ರಮಾಣದಲ್ಲಿ ಉಪವಾಸ ಸತ್ಯಾಗ್ರಹವು ನಡೆಯುತ್ತಿರುವುದು ಬಹುಶಃ ಇದೇ ಮೊದಲು. ರಸ್ತೆಗಳಲ್ಲಿ, ಎಲ್ಲಿಯೂ ಯಾರಿಗೂ ತೊಂದರೆಯಾಗದಂತೆ, ಅಧಿಕಾರದಲ್ಲಿರುವವರ ಮನವೊಲಿಸುವ ಮಹತ್ವದ ಹೋರಾಟದ ಮಾದರಿಯಾಗಿ ಉಪವಾಸ ಸತ್ಯಾಗ್ರಹವನ್ನು ಮಾಡಲಾಗುತ್ತಿದೆ. ಮಹಾತ್ಮಾ ಗಾಂಧಿಯವರು ಆವಿಷ್ಕರಿಸಿದ ಸತ್ಯಾಗ್ರಹದ ಈ ಮಾದರಿಯು ಸರ್ಕಾರದ ಕಣ್ತರೆಸಲಿ ಎಂದು ಆಶಿಸುತ್ತೇವೆ. ನಮ್ಮ ಆಂದೋಲನವು ಸ್ವಾತಂತ್ರ್ಯ ಚಳವಳಿಯಲ್ಲಿ ಮಹಾತ್ಮಾ ಗಾಂಧಿಯವರು ಹಾಕಿಕೊಟ್ಟ ಪರಂಪರೆಯಂತೆಯೇ ಅಹಿಂಸಾತ್ಮಕವಾಗಿ ಇರಲಿದ್ದು, ಗುರಿ ಮುಟ್ಟುವವರೆಗೂ ನಿಲ್ಲುವುದಿಲ್ಲ ಎಂದು ನಮ್ಮೊಳಗೇ ಆತ್ಮಾನುಸಂಧಾನ ನಡೆಸಿಕೊಳ್ಳುವ ದಿನವಾಗಿಯೂ ಈ ಸತ್ಯಾಗ್ರಹವು ಇರಲಿದೆ” ಎಂದು ಸೆಂಥಿಲ್‌ ತಿಳಿಸಿದ್ದಾರೆ.

ಮಾರ್ಚ್ 12, 1930ರಂದು ಮಹಾತ್ಮಾ ಗಾಂಧಿಯವರು ದಂಡಿ (ಉಪ್ಪಿನ) ಸತ್ಯಾಗ್ರಹವನ್ನು ಆರಂಭಿಸಿದ್ದರು. ಭಾರತವನ್ನು ಆಳುತ್ತಿದ್ದ ಬ್ರಿಟಿಷರು, ತಮ್ಮ ಆರ್ಥಿಕ ದಬ್ಬಾಳಿಕೆಯನ್ನು ಮುಂದುವರೆಸುವುದರ ಭಾಗವಾಗಿ ಉಪ್ಪಿನ ಮೇಲೆ ಕರ ವಿಧಿಸಿದ್ದರು. ಅದನ್ನು ವಿರೋಧಿಸಿ ಸತ್ಯಾಗ್ರಹಿಗಳೊಂದಿಗೆ ಮಹಾತ್ಮಾ ಗಾಂಧಿಯವರು ಉಪ್ಪು ತಯಾರಿಸಲು ಸಮುದ್ರದೆಡೆಗೆ ನಡೆಸಿದ ಪ್ರಯಾಣ ಅಂದು ಶುರುವಾಗಿತ್ತು. ಅಂತಿಮವಾಗಿ ಸತ್ಯಾಗ್ರಹಿಗಳು ಬಂಧನಕ್ಕೊಳಗಾಗಿದ್ದರು.

ಪತ್ರಿಕಾಗೋಷ್ಠಿಯಲ್ಲಿ ಯೂಸಫ್‌ ಕಣ್ಣಿ, ಡಾ.ಆಸೀಫಾ ಮತ್ತು ವಕೀಲರಾದ ವಿನಯ್‌ ಶ್ರೀನಿವಾಸನ್‌ ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...