Homeಮುಖಪುಟಹಸಿವು, ನೋವಿನಿಂದ ಬಳಲಿದ ಬಿಟ್ಟು ಎಂಬ ಬಾಲಕ ಕೊನೆಗೂ ಮನೆ ಸೇರಿದ ಕತೆ

ಹಸಿವು, ನೋವಿನಿಂದ ಬಳಲಿದ ಬಿಟ್ಟು ಎಂಬ ಬಾಲಕ ಕೊನೆಗೂ ಮನೆ ಸೇರಿದ ಕತೆ

ಅಂತೂ ಒಬ್ಬ ಕಾರ್ಮಿಕನ ಕೆಲದಿನಗಳ ಹಸಿವು ನಿಂತಿದೆ. ಆದರೆ ಇನ್ನೂ ಹಸಿವಿನಿಂದ ಬಳಲುತ್ತಿರುವ ಕಾರ್ಮಿಕರು ಅದೆಷ್ಟು ಸಂಖ್ಯೆಯಲ್ಲಿದ್ದಾರೋ ತಿಳಿಯದು.

- Advertisement -
- Advertisement -

ಲಾಕ್‌ಡೌನ್‌ ವಿಸ್ತರಿಸಿದೆ. ಈ ಸಮಯದಲ್ಲಿ ’ಬಿಟ್ಟು’ ಎಂಬ ದೆಹಲಿಯ ವಲಸೆ ಕಾರ್ಮಿಕ ಹಸಿವಿನಿಂದ, ಬಿಸಿಲಿನಿಂದ ಒದ್ದಾಡುತ್ತಿದ್ದಾನೆ. ಆತ ದರ್ಜಿಯ ಬಳಿ ಸಹಾಯಕನಾಗಿ ಕೆಲಸ ಮಾಡುತ್ತಿದ್ದ. ಲಾಕ್‌ಡೌನ್‌ ಘೋಷಿಸಿದಾಗಿನಿಂದ ಅವನಿಗೆ ಕೆಲಸವೂ ಇಲ್ಲ, ಸಂಬಳವೂ ಇಲ್ಲ. ಈಗ ಅವನ ಬಳಿ ಹಣವಿಲ್ಲ, ಆಹಾರವಿಲ್ಲ. ಇದೇ ಸಮಯದಲ್ಲಿ ಮನೆ ಬಾಡಿಗೆ ಕಟ್ಟದ ಕಾರಣ ಆತನ ಮನೆಯ ಮಾಲೀಕರು ಮನೆಯಿಂದ ಹೊರಹಾಕಿದ್ದಾರೆ. ದೆಹಲಿಯ ಬೀದಿಗಳಲ್ಲಿ ಉಷ್ಣಾಂಶ 40° C ಆಗಿದೆ.

ಈ ಸಂದರ್ಭದಲ್ಲಿ ಆತ ಏನು ಮಾಡಬೇಕು? ಆ ಸ್ಥಿತಿಯಲ್ಲಿ ನಾವಿದ್ದರೆ ಏನು ಮಾಡುತ್ತಿದ್ದೆವೆ? ಕೊನೆಗೂ ಆತನಿಗೆ ತನ್ನ ಸಹೋದರಿಯ ಮನೆ ನೆನಪಾಯಿತು. ಅಲ್ಲಿಗೆ ಹೋಗಿಬಿಡಲು ನಿರ್ಧರಿಸಿ ಕಾಲ್ನಡಿಗೆ ಆರಂಭಿಸಿದ್ದಾನೆ. ಅಷ್ಟರಲ್ಲಿ ಅದೆಲ್ಲಿದ್ದರೋ ರಾಕ್ಷಸಿ ಸ್ವರೂಪದ ಪೊಲೀಸರು ಆತನನ್ನು ಮನಬಂದಂತೆ ಥಳಿಸಿದ್ದಾರೆ. “ಹಸಿವಾಗುತ್ತಿದೆ, ಊಟಕ್ಕಾಗಿ ಸಹೋದರಿಯ ಮನೆಗೆ ಹೋಗುತ್ತಿದ್ದೇನೆ ಬಿಟ್ಟುಬಿಡಿ” ಎಂದರೂ ಕೇಳದೆ ಪೊಲೀಸರು ಥಳಿಸಿದ್ದಾರೆ.

ಈ ಅಮಾನವೀಯ ಘಟನೆ ನವಭಾರತ್ ಟೈಮ್ಸ್ ಪತ್ರಕರ್ತ ಅನುಪ್ ಪಾಂಡೆಯ ಗಮನಕ್ಕೆ ಬಂದಿದೆ. ಅವರು ತಕ್ಷಣ ಟ್ವಿಟ್ಟರ್‌ನಲ್ಲಿ ಬಿಟ್ಟು ಅಳುತ್ತಿರುವ ವಿಡಿಯೋವನ್ನು ಟ್ವಿಟ್ಟರ್‌ನಲ್ಲಿ ಪೋಸ್ಟ್‌ ಮಾಡಿ ಸಹಾಯಕ್ಕಾಗಿ ಮನವಿ ಮಾಡಿದ್ದಾರೆ.

ಕೂಡಲೇ ಸಾವಿರಾರು ಟ್ವಿಟ್ಟರ್‌ ಬಳಕೆದಾರರು ಇದಕ್ಕೆ ಪ್ರತಿಕ್ರಿಯಿಸಿ ಸರ್ಕಾರದ ಗಮನಕ್ಕೆ ತಂದಿದ್ದಾರೆ. ಸಹಾಯಕ್ಕಾಗಿ ಮನವಿ ಸಲ್ಲಿಸಿದ್ದಾರೆ.

ತದನಂತರ ಎಚ್ಚೆತ್ತ ದೆಹಲಿ ಸರ್ಕಾರ ತನ್ನ ಶಾಸಕನನ್ನು ಕಳುಹಿಸಿ ಬಿಟ್ಟುವಿಗೆ ಸಹಾಯ ಮಾಡಲು ಸೂಚಿಸಿದೆ.  ತಿಮರ್‌ ಪುರದ ಶಾಸಕ ದಿಲೀಪ್‌ ಕೆ ಪಾಂಡೆ ಸ್ಥಳಕ್ಕೆ ಧಾವಿಸಿ ಬಿಟ್ಟುವನ್ನು ಆತನ ತಾಯಿಯ ಮನೆಗೆ ತಲುಪಿಸಿದ್ದಾರೆ. ಅಲ್ಲದೇ ಅವರಿಗೆ ದಿನಸಿ ಸೇರಿದಂತೆ ಅಗತ್ಯ ವಸ್ತುಗಳನ್ನು ಒದಗಿಸಿದ್ದಾಗಿ ಆಪ್‌ ತನ್ನ ಟ್ವಿಟ್ಟರ್‌ನಲ್ಲಿ ಪ್ರಕಟಿಸಿದೆ.

ಅಂತೂ ಒಬ್ಬ ಕಾರ್ಮಿಕನ ಕೆಲದಿನಗಳ ಹಸಿವು ನಿಂತಿದೆ. ಆದರೆ ಇನ್ನೂ ಹಸಿವಿನಿಂದ ಬಳಲುತ್ತಿರುವ ಕಾರ್ಮಿಕರು ಅದೆಷ್ಟು ಸಂಖ್ಯೆಯಲ್ಲಿದ್ದಾರೋ ತಿಳಿಯದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....