Homeಸಿನಿಮಾಕ್ರೀಡೆವಿಶ್ವಕಪ್ ಕ್ರಿಕೆಟ್‍ನಲ್ಲಿ ಭಾರತದ ಹೆಜ್ಜೆಗುರುತುಗಳು

ವಿಶ್ವಕಪ್ ಕ್ರಿಕೆಟ್‍ನಲ್ಲಿ ಭಾರತದ ಹೆಜ್ಜೆಗುರುತುಗಳು

- Advertisement -
- Advertisement -

1975ರಲ್ಲಿ ವಿಶ್ವಕಪ್ ಟೂರ್ನಿ ಇಂಗ್ಲೆಂಡ್‍ನಲ್ಲಿ ಆರಂಭವಾದಾಗ ಭಾರತ ಕಳಪೆ ಪ್ರದರ್ಶನ ನೀಡಿತ್ತು. 1979ರಲ್ಲಿಯೂ ಅದೇ ಪುನರಾವರ್ತನೆಯಾಯಿತು. ನಂತರ 1983ರಲ್ಲಿ ಭಾರತ ಮೂರನೇ ಬಾರಿಗೆ ವಿಶ್ವಕಪ್ ಕ್ರಿಕೆಟ್ ಆಡಲು ಇಂಗ್ಲೆಂಡ್‍ಗೆ ತೆರಳಿದಾಗ ಇವರು ಪಿಕ್‍ನಿಕ್ ಗೆ ಹೋಗುತ್ತಿದ್ದಾರೆಂಬ ಮೂದಲಿಕೆ ಅಭಿಮಾನಿಗಳಿಂದ ಕೇಳಿಬಂದಿತ್ತು. ತಂಡಕ್ಕೆ ಸಮರ್ಥ ಕೋಚ್ ಇರಲಿಲ್ಲ. ಅನುಭವಿ ನಾಯಕನೂ ಇರಲಿಲ್ಲ. 24 ವರ್ಷದ ಯಂಗ್ ಕ್ಯಾಪ್ಟನ್ ಕಪಿಲ್ ದೇವ್ ತಂಡವನ್ನು ಮುನ್ನಡೆಸಿದ್ದರು.

ಆದರೆ ಅಚ್ಚರಿಯ ರೀತಿಯಲ್ಲಿ ಮೊದಲ ಪಂದ್ಯದಲ್ಲಿ ಎರಡು ಬಾರಿ ವಿಶ್ವಕಪ್ ಗೆದ್ದಿದ್ದ ವೆಸ್ಟ್ ಇಂಡೀಸ್ ತಂಡವನ್ನು ಭಾರತ ಮಣಿಸಿ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿತ್ತು. ಅದೇ ವಿಶ್ವಾಸಯುತ ಆಟವಾಡಿ ಫೈನಲ್ ತಲುಪಿದ ಭಾರತಕ್ಕೆ ಮತ್ತದೆ ವೆಸ್ಟ್ ಇಂಡೀಸ್ ಎದುರಾಳಿ. 60 ಓವರ್‍ಗಳ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ಗಳಿಸಿದ್ದು ಎಲ್ಲಾ ವಿಕೆಟ್ ಕಳೆದುಕೊಂಡು ಕೇವಲ 183 ರನ್. ಗೆಲುವು ಸಾಧ್ಯವಿಲ್ಲ ಎನ್ನುವ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅಂತಹ ಒತ್ತಡದಲ್ಲಿಯೂ ಮೊಹಿಂದರ್ ಅಮರನಾಥ್‍ರವರ ಆಲ್‍ರೌಂಡರ್ ಆಟ, ವಿ.ವಿ ರಿಚಡ್ರ್ಸ್ ರವರ ಅಮೋಘ ಕ್ಯಾಚ್ ಪಡೆದ ಕಪಿಲ್ ದೇವ್ ಇನ್ನಿತರ ಕುತೂಹಲಕರ ಅಂಶಗಳಿಂದ ಭಾರತ ಆ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಅನ್ನು 140 ರನ್‍ಗಳಿಗೆ ಆಲೌಟ್ ಮಾಡುವ ಮೂಲಕ 43 ರನ್ ಗಳಿಂದ ಜಯಿಸಿ ಮೊದಲ ಬಾರಿಗೆ ವಿಶ್ವಕಪ್ ಎತ್ತಿಹಿಡಿಯಿತು. ವೆಸ್ಟ್ ಇಂಡೀಸ್‍ನ ಹ್ಯಾಟ್ರಿಕ್ ಕನಸನ್ನು ನುಚ್ಚುನೂರು ಮಾಡಿತು ಮತ್ತು ವಿಶ್ವಕಪ್ ಗೆದ್ದ ಎರಡನೇ ದೇಶ ಎಂಬ ಖ್ಯಾತಿ ಪಡೆಯಿತು.

ನಂತರ 1987ರಲ್ಲಿ ಆಸ್ಟ್ರೇಲಿಯಾ ಚಾಂಪಿಯನ್ ಆಯಿತು. ಅಲ್ಲಿಂದ 2003ರವರೆಗೆ ಭಾರತ ಹೇಳಿಕೊಳ್ಳುವ ಸಾಧನೆ ಮಾಡಲಿಲ್ಲ. 2003ರಲ್ಲಿ ಸೌರವ್ ಗಂಗೂಲಿಯವರ ನೇತೃತ್ವದಲ್ಲಿ ಭಾರತ ಮತ್ತೆ ವಿಜೃಂಭಿಸಿತು. ಸಚಿನ್ ತೆಂಡೂಲ್ಕರ್‍ ರವರ ಅದ್ಭುತ ಬ್ಯಾಟಿಂಗ್ ಪ್ರದರ್ಶನದಿಂದ ಭಾರತ ಫೈನಲ್ ತಲುಪಿತ್ತು. ಆದರೆ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಎದುರು ಭಾರತ 125 ರನ್ ಗಳ ಅಂತರದಿಂದ ಮಂಡಿಯೂರಿ ರನ್ನರ್ ಅಪ್‍ಗೆ ತೃಪ್ತಿ ಪಟ್ಟುಕೊಂಡಿತ್ತು.

ನಂತರ 2007ರಲ್ಲಿ ರಾಹುಲ್ ದ್ರಾವಿಡ್ ತಂಡವನ್ನು ಮುನ್ನಡೆಸಿದ್ದರು. ಆದರೆ ಭಾರತ ಲೀಗ್ ಪಂದ್ಯದಲ್ಲಿಯೇ ಬಾಂಗ್ಲಾದೇಶದ ವಿರುದ್ಧ ಅಘಾತಕಾರಿ ಸೋಲು ಕಂಡು ಟೂರ್ನಿಯಿಂದ ಹೊರಬಿದ್ದಿತ್ತು. ಭಾರತ ತಂಡದ ವಿರುದ್ಧ ಟೀಕೆಯ ಮಳೆಯೇ ಹರಿದಿತ್ತು.

ನಂತರ 2011ರಲ್ಲಿ ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ದೋನಿಯ ಅದೃಷ್ಟ ಚೆನ್ನಾಗಿತ್ತು. ಭಾರತ ಮತ್ತು ನೆರೆಹೊರೆ ದೇಶಗಳು ವಿಶ್ವಕಪ್ ಟೂರ್ನಿಯ ಆತಿಥ್ಯ ವಹಿಸಿದ್ದವು. ಭಾರತ ತಂಡ ಪರಿಣಾಮಕಾರಿ ಪ್ರದರ್ಶನ ತೋರಿತ್ತು. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಫೈನಲ್‍ನಲ್ಲಿ ಶ್ರೀಲಂಕಾ ಎದುರು ಭಾರತ ಭರ್ಜರಿ ಜಯಗಳಿಸಿ 29 ವರ್ಷಗಳ ನಂತರ ಎರಡನೇ ಬಾರಿ ವಿಶ್ವಕಪ್‍ಗೆ ಮುತ್ತಿಟ್ಟಿತು. ಸಚಿನ್ ತೆಂಡೂಲ್ಕರ್, ಯುವರಾಜ್ ಸಿಂಗ್ ಶ್ರೇಷ್ಠ ಪ್ರದರ್ಶನ ನೀಡಿದ್ದರು. ಕಪಿಲ್ ದೇವ್ ನಂತರ ವಿಶ್ವಕಪ್ ಗೆದ್ದುಕೊಟ್ಟ ಆಟಗಾರ ಎಂಬ ದಾಖಲೆ ಧೋನಿ ಪಾಲಾಯಿತು.

2015ರ ವಿಶ್ವಕಪ್ ಅನ್ನು ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ಜಂಟಿಯಾಗಿ ಆಯೋಜಿಸಿದ್ದವು. ಭಾರತವು ತನ್ನ ಸಾಮಥ್ರ್ಯವನ್ನು ಪಣಕ್ಕೆ ಒಡ್ಡಿತ್ತು. ಆದರೆ 2003ರ ಇತಿಹಾಸ ಮರುಕಳಿಸಿತು. ಆದರೆ ಈ ಬಾರಿ ಸೆಮಿಫೈನಲ್‍ನಲ್ಲಿಯೇ ಬಲಿಷ್ಠ ಆಸ್ಟ್ರೇಲಿಯಾ ಎದುರು ಭಾರತ ಸೋಲುಂಡು ನಿರ್ಗಮಿಸಿತು.

ಈಗ 2019ರ ವಿಶ್ವಕಪ್‍ನಲ್ಲಿ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡವಾಗಿದ್ದ ಭಾರತ, ವಿಶ್ವ ರ್ಯಾಂಕಿಂಗ್‍ನಲ್ಲಿಯೂ ಭಾರತ 2ನೇ ಸ್ಥಾನದಲ್ಲಿತ್ತು. ಉತ್ಸಾಹಿ ಆಟಗಾರ ವಿರಾಟ್ ಕೊಹ್ಲಿ ನಾಯಕತ್ವದ ಹೊಣೆ ಹೊತ್ತಿದ್ದರು. ಲೀಗ್ ಹಂತದಲ್ಲಿ ನಡೆದ 9 ಪಂದ್ಯಗಳಲ್ಲಿ ಬರೋಬ್ಬರಿ ಏಳು ಪಂದ್ಯಗಳನ್ನು ಗೆದ್ದು ಸೆಮಿಫೈನಲ್ ಪ್ರವೇಶಿಸಿದ್ದಲ್ಲದೇ ಪಾಯಿಂಟ್ ಪಟ್ಟಿಯಲ್ಲಿಯೂ ಅಗ್ರಸ್ಥಾನ ಪಡೆದಿತ್ತು. ಅತಿಹೆಚ್ಚು ಕ್ರಿಕೆಟ್ ಪ್ರೇಮಿಗಳಿರುವ ಭಾರತ ಮತ್ತು ಪಾಕಿಸ್ತಾನದ ಪಂದ್ಯ ರೋಚಕವಾಗಿ ನಡೆದು ಭಾರತ ಜಯಭೇರಿ ಮೊಳಗಿಸಿದೆ. ಮಳೆಯಿಂದ ಲೀಗ್ ಹಂತದಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆಯಬೇಕಿದ್ದ ಪಂದ್ಯ ರದ್ದಾದರೆ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಮಾತ್ರ ಭಾರತ ಸೋಲನಪ್ಪಿತ್ತು.

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆ.ಎಲ್ ರಾಹುಲ್ ಅದ್ಭುತ ಬ್ಯಾಟಿಂಗ್ ಫಾರ್ಮ್‍ನಲ್ಲಿದ್ದರೆ, ಜಸ್ಪ್ರಿತ್ ಬೂಮ್ರ, ಯಜುವೇಂದ್ರ ಚಹಾಲ್, ಮಹಮ್ಮದ್ ಶಮಿ ಬೌಲಿಂಗ್‍ನಲ್ಲಿ ಮಿಂಚುತ್ತಿದ್ದಾರು. ಮಹೇಂದ್ರ ಸಿಂಗ್ ಧೋನಿಗೆ ಇದು ಕೊನೆಯ ವಿಶ್ವಕಪ್ ಆಗಿತ್ತು. ರೋಹಿತ್ ಶರ್ಮಾ ಅತ್ಯಧಿಕ ರನ್ ಗಳಿಸಿದ ಆಟಗಾರ ಮಾತ್ರವಲ್ಲದೇ ಒಂದೇ ಟೂರ್ನಿಯಲ್ಲಿ ಐದು ಶತಕ ಸಿಡಿಸಿ ದಾಖಲೆ ಬರೆದಿದ್ದರು. ಇಂತಹ ಭಾರತ ನ್ಯೂಜಿಲೆಂಡ್ ವಿರುದ್ಧ ಗೆದ್ದು ಫೈನಲ್ ಪ್ರವೇಶಿಸುವ ತವಕದಲ್ಲಿದ್ದರೆ ಮಂಗಳವಾರದ ಪಂದ್ಯಕ್ಕೆ ಮಳೆ ಅಡ್ಡಿಯಾಗಿದೆ. ನ್ಯೂಜಿಲೆಂಡ್ 46.1 ಓವರ್‍ಗಳಲ್ಲಿ 5 ವಿಕೆಟ್ ಕಳೆದುಕೊಂಡು 211 ರನ್ ಅಷ್ಟೇ ಗಳಿಸಿದೆ. ತೀವ್ರ ಮಳೆಯಿಂದಾಗಿ ಪಂದ್ಯವನ್ನು ಬುಧವಾರ ಎಲ್ಲಿಗೆ ನಿಂತಿದೆಯೋ ಅಲ್ಲಿಂದಲೇ ಆರಂಭಿಸಿದಾಗ ಗೆಲ್ಲಲ್ಲು 240 ರನ್ ಗಳ ಸಾಧಾರಣ ಗುರಿ ಪಡೆದ ಭಾರತ ಗೆಲ್ಲಲೇ ಇಲ್ಲ. 221 ರನ್ ಗಳಿಗೆ ಆಲ್ ಔಟ್ ಆಗುವ ಮೂಲಕ 18 ರನ್ ಗಳ ಅಂತರದಿಂದ ಸೋಲೊಪ್ಪಿಕೊಂಡಿತು.

ವಿಶ್ವಕಪ್ ಗೆ ಮೂರನೇ ಬಾರಿಗೆ ಮುತ್ತಿಡುವ ಅದ್ಭುತ ಅವಕಾಶದಿಂದ ಭಾರತ ವಂಚಿತವಾಗಿದೆ. ಕ್ರೀಡಾ ಪ್ರೇಮಿಗಳಿಗೆ ಸಾಕಷ್ಟು ನಿರಾಶೆಯಾಗಿದೆ. ಮುಂದಿನ ವರ್ಷ 20-20 ವಿಶ್ವಕಪ್ ಕ್ರಿಕೆಟ್ ನಡೆಯಲಿದೆ. ಅಲ್ಲಾದರೂ ಭಾರತ ಪ್ರಶಸ್ತಿ ಗೆಲ್ಲುವುದೇ ಎಂದು ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...