Homeಸಿನಿಮಾಕ್ರೀಡೆವಿಶ್ವಕಪ್ ಕ್ರಿಕೆಟ್‍ನಲ್ಲಿ ಭಾರತದ ಹೆಜ್ಜೆಗುರುತುಗಳು

ವಿಶ್ವಕಪ್ ಕ್ರಿಕೆಟ್‍ನಲ್ಲಿ ಭಾರತದ ಹೆಜ್ಜೆಗುರುತುಗಳು

- Advertisement -
- Advertisement -

1975ರಲ್ಲಿ ವಿಶ್ವಕಪ್ ಟೂರ್ನಿ ಇಂಗ್ಲೆಂಡ್‍ನಲ್ಲಿ ಆರಂಭವಾದಾಗ ಭಾರತ ಕಳಪೆ ಪ್ರದರ್ಶನ ನೀಡಿತ್ತು. 1979ರಲ್ಲಿಯೂ ಅದೇ ಪುನರಾವರ್ತನೆಯಾಯಿತು. ನಂತರ 1983ರಲ್ಲಿ ಭಾರತ ಮೂರನೇ ಬಾರಿಗೆ ವಿಶ್ವಕಪ್ ಕ್ರಿಕೆಟ್ ಆಡಲು ಇಂಗ್ಲೆಂಡ್‍ಗೆ ತೆರಳಿದಾಗ ಇವರು ಪಿಕ್‍ನಿಕ್ ಗೆ ಹೋಗುತ್ತಿದ್ದಾರೆಂಬ ಮೂದಲಿಕೆ ಅಭಿಮಾನಿಗಳಿಂದ ಕೇಳಿಬಂದಿತ್ತು. ತಂಡಕ್ಕೆ ಸಮರ್ಥ ಕೋಚ್ ಇರಲಿಲ್ಲ. ಅನುಭವಿ ನಾಯಕನೂ ಇರಲಿಲ್ಲ. 24 ವರ್ಷದ ಯಂಗ್ ಕ್ಯಾಪ್ಟನ್ ಕಪಿಲ್ ದೇವ್ ತಂಡವನ್ನು ಮುನ್ನಡೆಸಿದ್ದರು.

ಆದರೆ ಅಚ್ಚರಿಯ ರೀತಿಯಲ್ಲಿ ಮೊದಲ ಪಂದ್ಯದಲ್ಲಿ ಎರಡು ಬಾರಿ ವಿಶ್ವಕಪ್ ಗೆದ್ದಿದ್ದ ವೆಸ್ಟ್ ಇಂಡೀಸ್ ತಂಡವನ್ನು ಭಾರತ ಮಣಿಸಿ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿತ್ತು. ಅದೇ ವಿಶ್ವಾಸಯುತ ಆಟವಾಡಿ ಫೈನಲ್ ತಲುಪಿದ ಭಾರತಕ್ಕೆ ಮತ್ತದೆ ವೆಸ್ಟ್ ಇಂಡೀಸ್ ಎದುರಾಳಿ. 60 ಓವರ್‍ಗಳ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ಗಳಿಸಿದ್ದು ಎಲ್ಲಾ ವಿಕೆಟ್ ಕಳೆದುಕೊಂಡು ಕೇವಲ 183 ರನ್. ಗೆಲುವು ಸಾಧ್ಯವಿಲ್ಲ ಎನ್ನುವ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅಂತಹ ಒತ್ತಡದಲ್ಲಿಯೂ ಮೊಹಿಂದರ್ ಅಮರನಾಥ್‍ರವರ ಆಲ್‍ರೌಂಡರ್ ಆಟ, ವಿ.ವಿ ರಿಚಡ್ರ್ಸ್ ರವರ ಅಮೋಘ ಕ್ಯಾಚ್ ಪಡೆದ ಕಪಿಲ್ ದೇವ್ ಇನ್ನಿತರ ಕುತೂಹಲಕರ ಅಂಶಗಳಿಂದ ಭಾರತ ಆ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಅನ್ನು 140 ರನ್‍ಗಳಿಗೆ ಆಲೌಟ್ ಮಾಡುವ ಮೂಲಕ 43 ರನ್ ಗಳಿಂದ ಜಯಿಸಿ ಮೊದಲ ಬಾರಿಗೆ ವಿಶ್ವಕಪ್ ಎತ್ತಿಹಿಡಿಯಿತು. ವೆಸ್ಟ್ ಇಂಡೀಸ್‍ನ ಹ್ಯಾಟ್ರಿಕ್ ಕನಸನ್ನು ನುಚ್ಚುನೂರು ಮಾಡಿತು ಮತ್ತು ವಿಶ್ವಕಪ್ ಗೆದ್ದ ಎರಡನೇ ದೇಶ ಎಂಬ ಖ್ಯಾತಿ ಪಡೆಯಿತು.

ನಂತರ 1987ರಲ್ಲಿ ಆಸ್ಟ್ರೇಲಿಯಾ ಚಾಂಪಿಯನ್ ಆಯಿತು. ಅಲ್ಲಿಂದ 2003ರವರೆಗೆ ಭಾರತ ಹೇಳಿಕೊಳ್ಳುವ ಸಾಧನೆ ಮಾಡಲಿಲ್ಲ. 2003ರಲ್ಲಿ ಸೌರವ್ ಗಂಗೂಲಿಯವರ ನೇತೃತ್ವದಲ್ಲಿ ಭಾರತ ಮತ್ತೆ ವಿಜೃಂಭಿಸಿತು. ಸಚಿನ್ ತೆಂಡೂಲ್ಕರ್‍ ರವರ ಅದ್ಭುತ ಬ್ಯಾಟಿಂಗ್ ಪ್ರದರ್ಶನದಿಂದ ಭಾರತ ಫೈನಲ್ ತಲುಪಿತ್ತು. ಆದರೆ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಎದುರು ಭಾರತ 125 ರನ್ ಗಳ ಅಂತರದಿಂದ ಮಂಡಿಯೂರಿ ರನ್ನರ್ ಅಪ್‍ಗೆ ತೃಪ್ತಿ ಪಟ್ಟುಕೊಂಡಿತ್ತು.

ನಂತರ 2007ರಲ್ಲಿ ರಾಹುಲ್ ದ್ರಾವಿಡ್ ತಂಡವನ್ನು ಮುನ್ನಡೆಸಿದ್ದರು. ಆದರೆ ಭಾರತ ಲೀಗ್ ಪಂದ್ಯದಲ್ಲಿಯೇ ಬಾಂಗ್ಲಾದೇಶದ ವಿರುದ್ಧ ಅಘಾತಕಾರಿ ಸೋಲು ಕಂಡು ಟೂರ್ನಿಯಿಂದ ಹೊರಬಿದ್ದಿತ್ತು. ಭಾರತ ತಂಡದ ವಿರುದ್ಧ ಟೀಕೆಯ ಮಳೆಯೇ ಹರಿದಿತ್ತು.

ನಂತರ 2011ರಲ್ಲಿ ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ದೋನಿಯ ಅದೃಷ್ಟ ಚೆನ್ನಾಗಿತ್ತು. ಭಾರತ ಮತ್ತು ನೆರೆಹೊರೆ ದೇಶಗಳು ವಿಶ್ವಕಪ್ ಟೂರ್ನಿಯ ಆತಿಥ್ಯ ವಹಿಸಿದ್ದವು. ಭಾರತ ತಂಡ ಪರಿಣಾಮಕಾರಿ ಪ್ರದರ್ಶನ ತೋರಿತ್ತು. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಫೈನಲ್‍ನಲ್ಲಿ ಶ್ರೀಲಂಕಾ ಎದುರು ಭಾರತ ಭರ್ಜರಿ ಜಯಗಳಿಸಿ 29 ವರ್ಷಗಳ ನಂತರ ಎರಡನೇ ಬಾರಿ ವಿಶ್ವಕಪ್‍ಗೆ ಮುತ್ತಿಟ್ಟಿತು. ಸಚಿನ್ ತೆಂಡೂಲ್ಕರ್, ಯುವರಾಜ್ ಸಿಂಗ್ ಶ್ರೇಷ್ಠ ಪ್ರದರ್ಶನ ನೀಡಿದ್ದರು. ಕಪಿಲ್ ದೇವ್ ನಂತರ ವಿಶ್ವಕಪ್ ಗೆದ್ದುಕೊಟ್ಟ ಆಟಗಾರ ಎಂಬ ದಾಖಲೆ ಧೋನಿ ಪಾಲಾಯಿತು.

2015ರ ವಿಶ್ವಕಪ್ ಅನ್ನು ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ಜಂಟಿಯಾಗಿ ಆಯೋಜಿಸಿದ್ದವು. ಭಾರತವು ತನ್ನ ಸಾಮಥ್ರ್ಯವನ್ನು ಪಣಕ್ಕೆ ಒಡ್ಡಿತ್ತು. ಆದರೆ 2003ರ ಇತಿಹಾಸ ಮರುಕಳಿಸಿತು. ಆದರೆ ಈ ಬಾರಿ ಸೆಮಿಫೈನಲ್‍ನಲ್ಲಿಯೇ ಬಲಿಷ್ಠ ಆಸ್ಟ್ರೇಲಿಯಾ ಎದುರು ಭಾರತ ಸೋಲುಂಡು ನಿರ್ಗಮಿಸಿತು.

ಈಗ 2019ರ ವಿಶ್ವಕಪ್‍ನಲ್ಲಿ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡವಾಗಿದ್ದ ಭಾರತ, ವಿಶ್ವ ರ್ಯಾಂಕಿಂಗ್‍ನಲ್ಲಿಯೂ ಭಾರತ 2ನೇ ಸ್ಥಾನದಲ್ಲಿತ್ತು. ಉತ್ಸಾಹಿ ಆಟಗಾರ ವಿರಾಟ್ ಕೊಹ್ಲಿ ನಾಯಕತ್ವದ ಹೊಣೆ ಹೊತ್ತಿದ್ದರು. ಲೀಗ್ ಹಂತದಲ್ಲಿ ನಡೆದ 9 ಪಂದ್ಯಗಳಲ್ಲಿ ಬರೋಬ್ಬರಿ ಏಳು ಪಂದ್ಯಗಳನ್ನು ಗೆದ್ದು ಸೆಮಿಫೈನಲ್ ಪ್ರವೇಶಿಸಿದ್ದಲ್ಲದೇ ಪಾಯಿಂಟ್ ಪಟ್ಟಿಯಲ್ಲಿಯೂ ಅಗ್ರಸ್ಥಾನ ಪಡೆದಿತ್ತು. ಅತಿಹೆಚ್ಚು ಕ್ರಿಕೆಟ್ ಪ್ರೇಮಿಗಳಿರುವ ಭಾರತ ಮತ್ತು ಪಾಕಿಸ್ತಾನದ ಪಂದ್ಯ ರೋಚಕವಾಗಿ ನಡೆದು ಭಾರತ ಜಯಭೇರಿ ಮೊಳಗಿಸಿದೆ. ಮಳೆಯಿಂದ ಲೀಗ್ ಹಂತದಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆಯಬೇಕಿದ್ದ ಪಂದ್ಯ ರದ್ದಾದರೆ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಮಾತ್ರ ಭಾರತ ಸೋಲನಪ್ಪಿತ್ತು.

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆ.ಎಲ್ ರಾಹುಲ್ ಅದ್ಭುತ ಬ್ಯಾಟಿಂಗ್ ಫಾರ್ಮ್‍ನಲ್ಲಿದ್ದರೆ, ಜಸ್ಪ್ರಿತ್ ಬೂಮ್ರ, ಯಜುವೇಂದ್ರ ಚಹಾಲ್, ಮಹಮ್ಮದ್ ಶಮಿ ಬೌಲಿಂಗ್‍ನಲ್ಲಿ ಮಿಂಚುತ್ತಿದ್ದಾರು. ಮಹೇಂದ್ರ ಸಿಂಗ್ ಧೋನಿಗೆ ಇದು ಕೊನೆಯ ವಿಶ್ವಕಪ್ ಆಗಿತ್ತು. ರೋಹಿತ್ ಶರ್ಮಾ ಅತ್ಯಧಿಕ ರನ್ ಗಳಿಸಿದ ಆಟಗಾರ ಮಾತ್ರವಲ್ಲದೇ ಒಂದೇ ಟೂರ್ನಿಯಲ್ಲಿ ಐದು ಶತಕ ಸಿಡಿಸಿ ದಾಖಲೆ ಬರೆದಿದ್ದರು. ಇಂತಹ ಭಾರತ ನ್ಯೂಜಿಲೆಂಡ್ ವಿರುದ್ಧ ಗೆದ್ದು ಫೈನಲ್ ಪ್ರವೇಶಿಸುವ ತವಕದಲ್ಲಿದ್ದರೆ ಮಂಗಳವಾರದ ಪಂದ್ಯಕ್ಕೆ ಮಳೆ ಅಡ್ಡಿಯಾಗಿದೆ. ನ್ಯೂಜಿಲೆಂಡ್ 46.1 ಓವರ್‍ಗಳಲ್ಲಿ 5 ವಿಕೆಟ್ ಕಳೆದುಕೊಂಡು 211 ರನ್ ಅಷ್ಟೇ ಗಳಿಸಿದೆ. ತೀವ್ರ ಮಳೆಯಿಂದಾಗಿ ಪಂದ್ಯವನ್ನು ಬುಧವಾರ ಎಲ್ಲಿಗೆ ನಿಂತಿದೆಯೋ ಅಲ್ಲಿಂದಲೇ ಆರಂಭಿಸಿದಾಗ ಗೆಲ್ಲಲ್ಲು 240 ರನ್ ಗಳ ಸಾಧಾರಣ ಗುರಿ ಪಡೆದ ಭಾರತ ಗೆಲ್ಲಲೇ ಇಲ್ಲ. 221 ರನ್ ಗಳಿಗೆ ಆಲ್ ಔಟ್ ಆಗುವ ಮೂಲಕ 18 ರನ್ ಗಳ ಅಂತರದಿಂದ ಸೋಲೊಪ್ಪಿಕೊಂಡಿತು.

ವಿಶ್ವಕಪ್ ಗೆ ಮೂರನೇ ಬಾರಿಗೆ ಮುತ್ತಿಡುವ ಅದ್ಭುತ ಅವಕಾಶದಿಂದ ಭಾರತ ವಂಚಿತವಾಗಿದೆ. ಕ್ರೀಡಾ ಪ್ರೇಮಿಗಳಿಗೆ ಸಾಕಷ್ಟು ನಿರಾಶೆಯಾಗಿದೆ. ಮುಂದಿನ ವರ್ಷ 20-20 ವಿಶ್ವಕಪ್ ಕ್ರಿಕೆಟ್ ನಡೆಯಲಿದೆ. ಅಲ್ಲಾದರೂ ಭಾರತ ಪ್ರಶಸ್ತಿ ಗೆಲ್ಲುವುದೇ ಎಂದು ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...