Homeಸಿನಿಮಾಕ್ರೀಡೆವಿಶ್ವಕಪ್ ಕ್ರಿಕೆಟ್‍ನಲ್ಲಿ ಭಾರತದ ಹೆಜ್ಜೆಗುರುತುಗಳು

ವಿಶ್ವಕಪ್ ಕ್ರಿಕೆಟ್‍ನಲ್ಲಿ ಭಾರತದ ಹೆಜ್ಜೆಗುರುತುಗಳು

- Advertisement -
- Advertisement -

1975ರಲ್ಲಿ ವಿಶ್ವಕಪ್ ಟೂರ್ನಿ ಇಂಗ್ಲೆಂಡ್‍ನಲ್ಲಿ ಆರಂಭವಾದಾಗ ಭಾರತ ಕಳಪೆ ಪ್ರದರ್ಶನ ನೀಡಿತ್ತು. 1979ರಲ್ಲಿಯೂ ಅದೇ ಪುನರಾವರ್ತನೆಯಾಯಿತು. ನಂತರ 1983ರಲ್ಲಿ ಭಾರತ ಮೂರನೇ ಬಾರಿಗೆ ವಿಶ್ವಕಪ್ ಕ್ರಿಕೆಟ್ ಆಡಲು ಇಂಗ್ಲೆಂಡ್‍ಗೆ ತೆರಳಿದಾಗ ಇವರು ಪಿಕ್‍ನಿಕ್ ಗೆ ಹೋಗುತ್ತಿದ್ದಾರೆಂಬ ಮೂದಲಿಕೆ ಅಭಿಮಾನಿಗಳಿಂದ ಕೇಳಿಬಂದಿತ್ತು. ತಂಡಕ್ಕೆ ಸಮರ್ಥ ಕೋಚ್ ಇರಲಿಲ್ಲ. ಅನುಭವಿ ನಾಯಕನೂ ಇರಲಿಲ್ಲ. 24 ವರ್ಷದ ಯಂಗ್ ಕ್ಯಾಪ್ಟನ್ ಕಪಿಲ್ ದೇವ್ ತಂಡವನ್ನು ಮುನ್ನಡೆಸಿದ್ದರು.

ಆದರೆ ಅಚ್ಚರಿಯ ರೀತಿಯಲ್ಲಿ ಮೊದಲ ಪಂದ್ಯದಲ್ಲಿ ಎರಡು ಬಾರಿ ವಿಶ್ವಕಪ್ ಗೆದ್ದಿದ್ದ ವೆಸ್ಟ್ ಇಂಡೀಸ್ ತಂಡವನ್ನು ಭಾರತ ಮಣಿಸಿ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿತ್ತು. ಅದೇ ವಿಶ್ವಾಸಯುತ ಆಟವಾಡಿ ಫೈನಲ್ ತಲುಪಿದ ಭಾರತಕ್ಕೆ ಮತ್ತದೆ ವೆಸ್ಟ್ ಇಂಡೀಸ್ ಎದುರಾಳಿ. 60 ಓವರ್‍ಗಳ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ಗಳಿಸಿದ್ದು ಎಲ್ಲಾ ವಿಕೆಟ್ ಕಳೆದುಕೊಂಡು ಕೇವಲ 183 ರನ್. ಗೆಲುವು ಸಾಧ್ಯವಿಲ್ಲ ಎನ್ನುವ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅಂತಹ ಒತ್ತಡದಲ್ಲಿಯೂ ಮೊಹಿಂದರ್ ಅಮರನಾಥ್‍ರವರ ಆಲ್‍ರೌಂಡರ್ ಆಟ, ವಿ.ವಿ ರಿಚಡ್ರ್ಸ್ ರವರ ಅಮೋಘ ಕ್ಯಾಚ್ ಪಡೆದ ಕಪಿಲ್ ದೇವ್ ಇನ್ನಿತರ ಕುತೂಹಲಕರ ಅಂಶಗಳಿಂದ ಭಾರತ ಆ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಅನ್ನು 140 ರನ್‍ಗಳಿಗೆ ಆಲೌಟ್ ಮಾಡುವ ಮೂಲಕ 43 ರನ್ ಗಳಿಂದ ಜಯಿಸಿ ಮೊದಲ ಬಾರಿಗೆ ವಿಶ್ವಕಪ್ ಎತ್ತಿಹಿಡಿಯಿತು. ವೆಸ್ಟ್ ಇಂಡೀಸ್‍ನ ಹ್ಯಾಟ್ರಿಕ್ ಕನಸನ್ನು ನುಚ್ಚುನೂರು ಮಾಡಿತು ಮತ್ತು ವಿಶ್ವಕಪ್ ಗೆದ್ದ ಎರಡನೇ ದೇಶ ಎಂಬ ಖ್ಯಾತಿ ಪಡೆಯಿತು.

ನಂತರ 1987ರಲ್ಲಿ ಆಸ್ಟ್ರೇಲಿಯಾ ಚಾಂಪಿಯನ್ ಆಯಿತು. ಅಲ್ಲಿಂದ 2003ರವರೆಗೆ ಭಾರತ ಹೇಳಿಕೊಳ್ಳುವ ಸಾಧನೆ ಮಾಡಲಿಲ್ಲ. 2003ರಲ್ಲಿ ಸೌರವ್ ಗಂಗೂಲಿಯವರ ನೇತೃತ್ವದಲ್ಲಿ ಭಾರತ ಮತ್ತೆ ವಿಜೃಂಭಿಸಿತು. ಸಚಿನ್ ತೆಂಡೂಲ್ಕರ್‍ ರವರ ಅದ್ಭುತ ಬ್ಯಾಟಿಂಗ್ ಪ್ರದರ್ಶನದಿಂದ ಭಾರತ ಫೈನಲ್ ತಲುಪಿತ್ತು. ಆದರೆ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಎದುರು ಭಾರತ 125 ರನ್ ಗಳ ಅಂತರದಿಂದ ಮಂಡಿಯೂರಿ ರನ್ನರ್ ಅಪ್‍ಗೆ ತೃಪ್ತಿ ಪಟ್ಟುಕೊಂಡಿತ್ತು.

ನಂತರ 2007ರಲ್ಲಿ ರಾಹುಲ್ ದ್ರಾವಿಡ್ ತಂಡವನ್ನು ಮುನ್ನಡೆಸಿದ್ದರು. ಆದರೆ ಭಾರತ ಲೀಗ್ ಪಂದ್ಯದಲ್ಲಿಯೇ ಬಾಂಗ್ಲಾದೇಶದ ವಿರುದ್ಧ ಅಘಾತಕಾರಿ ಸೋಲು ಕಂಡು ಟೂರ್ನಿಯಿಂದ ಹೊರಬಿದ್ದಿತ್ತು. ಭಾರತ ತಂಡದ ವಿರುದ್ಧ ಟೀಕೆಯ ಮಳೆಯೇ ಹರಿದಿತ್ತು.

ನಂತರ 2011ರಲ್ಲಿ ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ದೋನಿಯ ಅದೃಷ್ಟ ಚೆನ್ನಾಗಿತ್ತು. ಭಾರತ ಮತ್ತು ನೆರೆಹೊರೆ ದೇಶಗಳು ವಿಶ್ವಕಪ್ ಟೂರ್ನಿಯ ಆತಿಥ್ಯ ವಹಿಸಿದ್ದವು. ಭಾರತ ತಂಡ ಪರಿಣಾಮಕಾರಿ ಪ್ರದರ್ಶನ ತೋರಿತ್ತು. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಫೈನಲ್‍ನಲ್ಲಿ ಶ್ರೀಲಂಕಾ ಎದುರು ಭಾರತ ಭರ್ಜರಿ ಜಯಗಳಿಸಿ 29 ವರ್ಷಗಳ ನಂತರ ಎರಡನೇ ಬಾರಿ ವಿಶ್ವಕಪ್‍ಗೆ ಮುತ್ತಿಟ್ಟಿತು. ಸಚಿನ್ ತೆಂಡೂಲ್ಕರ್, ಯುವರಾಜ್ ಸಿಂಗ್ ಶ್ರೇಷ್ಠ ಪ್ರದರ್ಶನ ನೀಡಿದ್ದರು. ಕಪಿಲ್ ದೇವ್ ನಂತರ ವಿಶ್ವಕಪ್ ಗೆದ್ದುಕೊಟ್ಟ ಆಟಗಾರ ಎಂಬ ದಾಖಲೆ ಧೋನಿ ಪಾಲಾಯಿತು.

2015ರ ವಿಶ್ವಕಪ್ ಅನ್ನು ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ಜಂಟಿಯಾಗಿ ಆಯೋಜಿಸಿದ್ದವು. ಭಾರತವು ತನ್ನ ಸಾಮಥ್ರ್ಯವನ್ನು ಪಣಕ್ಕೆ ಒಡ್ಡಿತ್ತು. ಆದರೆ 2003ರ ಇತಿಹಾಸ ಮರುಕಳಿಸಿತು. ಆದರೆ ಈ ಬಾರಿ ಸೆಮಿಫೈನಲ್‍ನಲ್ಲಿಯೇ ಬಲಿಷ್ಠ ಆಸ್ಟ್ರೇಲಿಯಾ ಎದುರು ಭಾರತ ಸೋಲುಂಡು ನಿರ್ಗಮಿಸಿತು.

ಈಗ 2019ರ ವಿಶ್ವಕಪ್‍ನಲ್ಲಿ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡವಾಗಿದ್ದ ಭಾರತ, ವಿಶ್ವ ರ್ಯಾಂಕಿಂಗ್‍ನಲ್ಲಿಯೂ ಭಾರತ 2ನೇ ಸ್ಥಾನದಲ್ಲಿತ್ತು. ಉತ್ಸಾಹಿ ಆಟಗಾರ ವಿರಾಟ್ ಕೊಹ್ಲಿ ನಾಯಕತ್ವದ ಹೊಣೆ ಹೊತ್ತಿದ್ದರು. ಲೀಗ್ ಹಂತದಲ್ಲಿ ನಡೆದ 9 ಪಂದ್ಯಗಳಲ್ಲಿ ಬರೋಬ್ಬರಿ ಏಳು ಪಂದ್ಯಗಳನ್ನು ಗೆದ್ದು ಸೆಮಿಫೈನಲ್ ಪ್ರವೇಶಿಸಿದ್ದಲ್ಲದೇ ಪಾಯಿಂಟ್ ಪಟ್ಟಿಯಲ್ಲಿಯೂ ಅಗ್ರಸ್ಥಾನ ಪಡೆದಿತ್ತು. ಅತಿಹೆಚ್ಚು ಕ್ರಿಕೆಟ್ ಪ್ರೇಮಿಗಳಿರುವ ಭಾರತ ಮತ್ತು ಪಾಕಿಸ್ತಾನದ ಪಂದ್ಯ ರೋಚಕವಾಗಿ ನಡೆದು ಭಾರತ ಜಯಭೇರಿ ಮೊಳಗಿಸಿದೆ. ಮಳೆಯಿಂದ ಲೀಗ್ ಹಂತದಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆಯಬೇಕಿದ್ದ ಪಂದ್ಯ ರದ್ದಾದರೆ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಮಾತ್ರ ಭಾರತ ಸೋಲನಪ್ಪಿತ್ತು.

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆ.ಎಲ್ ರಾಹುಲ್ ಅದ್ಭುತ ಬ್ಯಾಟಿಂಗ್ ಫಾರ್ಮ್‍ನಲ್ಲಿದ್ದರೆ, ಜಸ್ಪ್ರಿತ್ ಬೂಮ್ರ, ಯಜುವೇಂದ್ರ ಚಹಾಲ್, ಮಹಮ್ಮದ್ ಶಮಿ ಬೌಲಿಂಗ್‍ನಲ್ಲಿ ಮಿಂಚುತ್ತಿದ್ದಾರು. ಮಹೇಂದ್ರ ಸಿಂಗ್ ಧೋನಿಗೆ ಇದು ಕೊನೆಯ ವಿಶ್ವಕಪ್ ಆಗಿತ್ತು. ರೋಹಿತ್ ಶರ್ಮಾ ಅತ್ಯಧಿಕ ರನ್ ಗಳಿಸಿದ ಆಟಗಾರ ಮಾತ್ರವಲ್ಲದೇ ಒಂದೇ ಟೂರ್ನಿಯಲ್ಲಿ ಐದು ಶತಕ ಸಿಡಿಸಿ ದಾಖಲೆ ಬರೆದಿದ್ದರು. ಇಂತಹ ಭಾರತ ನ್ಯೂಜಿಲೆಂಡ್ ವಿರುದ್ಧ ಗೆದ್ದು ಫೈನಲ್ ಪ್ರವೇಶಿಸುವ ತವಕದಲ್ಲಿದ್ದರೆ ಮಂಗಳವಾರದ ಪಂದ್ಯಕ್ಕೆ ಮಳೆ ಅಡ್ಡಿಯಾಗಿದೆ. ನ್ಯೂಜಿಲೆಂಡ್ 46.1 ಓವರ್‍ಗಳಲ್ಲಿ 5 ವಿಕೆಟ್ ಕಳೆದುಕೊಂಡು 211 ರನ್ ಅಷ್ಟೇ ಗಳಿಸಿದೆ. ತೀವ್ರ ಮಳೆಯಿಂದಾಗಿ ಪಂದ್ಯವನ್ನು ಬುಧವಾರ ಎಲ್ಲಿಗೆ ನಿಂತಿದೆಯೋ ಅಲ್ಲಿಂದಲೇ ಆರಂಭಿಸಿದಾಗ ಗೆಲ್ಲಲ್ಲು 240 ರನ್ ಗಳ ಸಾಧಾರಣ ಗುರಿ ಪಡೆದ ಭಾರತ ಗೆಲ್ಲಲೇ ಇಲ್ಲ. 221 ರನ್ ಗಳಿಗೆ ಆಲ್ ಔಟ್ ಆಗುವ ಮೂಲಕ 18 ರನ್ ಗಳ ಅಂತರದಿಂದ ಸೋಲೊಪ್ಪಿಕೊಂಡಿತು.

ವಿಶ್ವಕಪ್ ಗೆ ಮೂರನೇ ಬಾರಿಗೆ ಮುತ್ತಿಡುವ ಅದ್ಭುತ ಅವಕಾಶದಿಂದ ಭಾರತ ವಂಚಿತವಾಗಿದೆ. ಕ್ರೀಡಾ ಪ್ರೇಮಿಗಳಿಗೆ ಸಾಕಷ್ಟು ನಿರಾಶೆಯಾಗಿದೆ. ಮುಂದಿನ ವರ್ಷ 20-20 ವಿಶ್ವಕಪ್ ಕ್ರಿಕೆಟ್ ನಡೆಯಲಿದೆ. ಅಲ್ಲಾದರೂ ಭಾರತ ಪ್ರಶಸ್ತಿ ಗೆಲ್ಲುವುದೇ ಎಂದು ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...