Homeಸಿನಿಮಾಕ್ರೀಡೆವಿಶ್ವಕಪ್ ಕ್ರಿಕೆಟ್‍ನಲ್ಲಿ ಭಾರತದ ಹೆಜ್ಜೆಗುರುತುಗಳು

ವಿಶ್ವಕಪ್ ಕ್ರಿಕೆಟ್‍ನಲ್ಲಿ ಭಾರತದ ಹೆಜ್ಜೆಗುರುತುಗಳು

- Advertisement -
- Advertisement -

1975ರಲ್ಲಿ ವಿಶ್ವಕಪ್ ಟೂರ್ನಿ ಇಂಗ್ಲೆಂಡ್‍ನಲ್ಲಿ ಆರಂಭವಾದಾಗ ಭಾರತ ಕಳಪೆ ಪ್ರದರ್ಶನ ನೀಡಿತ್ತು. 1979ರಲ್ಲಿಯೂ ಅದೇ ಪುನರಾವರ್ತನೆಯಾಯಿತು. ನಂತರ 1983ರಲ್ಲಿ ಭಾರತ ಮೂರನೇ ಬಾರಿಗೆ ವಿಶ್ವಕಪ್ ಕ್ರಿಕೆಟ್ ಆಡಲು ಇಂಗ್ಲೆಂಡ್‍ಗೆ ತೆರಳಿದಾಗ ಇವರು ಪಿಕ್‍ನಿಕ್ ಗೆ ಹೋಗುತ್ತಿದ್ದಾರೆಂಬ ಮೂದಲಿಕೆ ಅಭಿಮಾನಿಗಳಿಂದ ಕೇಳಿಬಂದಿತ್ತು. ತಂಡಕ್ಕೆ ಸಮರ್ಥ ಕೋಚ್ ಇರಲಿಲ್ಲ. ಅನುಭವಿ ನಾಯಕನೂ ಇರಲಿಲ್ಲ. 24 ವರ್ಷದ ಯಂಗ್ ಕ್ಯಾಪ್ಟನ್ ಕಪಿಲ್ ದೇವ್ ತಂಡವನ್ನು ಮುನ್ನಡೆಸಿದ್ದರು.

ಆದರೆ ಅಚ್ಚರಿಯ ರೀತಿಯಲ್ಲಿ ಮೊದಲ ಪಂದ್ಯದಲ್ಲಿ ಎರಡು ಬಾರಿ ವಿಶ್ವಕಪ್ ಗೆದ್ದಿದ್ದ ವೆಸ್ಟ್ ಇಂಡೀಸ್ ತಂಡವನ್ನು ಭಾರತ ಮಣಿಸಿ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿತ್ತು. ಅದೇ ವಿಶ್ವಾಸಯುತ ಆಟವಾಡಿ ಫೈನಲ್ ತಲುಪಿದ ಭಾರತಕ್ಕೆ ಮತ್ತದೆ ವೆಸ್ಟ್ ಇಂಡೀಸ್ ಎದುರಾಳಿ. 60 ಓವರ್‍ಗಳ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ಗಳಿಸಿದ್ದು ಎಲ್ಲಾ ವಿಕೆಟ್ ಕಳೆದುಕೊಂಡು ಕೇವಲ 183 ರನ್. ಗೆಲುವು ಸಾಧ್ಯವಿಲ್ಲ ಎನ್ನುವ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅಂತಹ ಒತ್ತಡದಲ್ಲಿಯೂ ಮೊಹಿಂದರ್ ಅಮರನಾಥ್‍ರವರ ಆಲ್‍ರೌಂಡರ್ ಆಟ, ವಿ.ವಿ ರಿಚಡ್ರ್ಸ್ ರವರ ಅಮೋಘ ಕ್ಯಾಚ್ ಪಡೆದ ಕಪಿಲ್ ದೇವ್ ಇನ್ನಿತರ ಕುತೂಹಲಕರ ಅಂಶಗಳಿಂದ ಭಾರತ ಆ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಅನ್ನು 140 ರನ್‍ಗಳಿಗೆ ಆಲೌಟ್ ಮಾಡುವ ಮೂಲಕ 43 ರನ್ ಗಳಿಂದ ಜಯಿಸಿ ಮೊದಲ ಬಾರಿಗೆ ವಿಶ್ವಕಪ್ ಎತ್ತಿಹಿಡಿಯಿತು. ವೆಸ್ಟ್ ಇಂಡೀಸ್‍ನ ಹ್ಯಾಟ್ರಿಕ್ ಕನಸನ್ನು ನುಚ್ಚುನೂರು ಮಾಡಿತು ಮತ್ತು ವಿಶ್ವಕಪ್ ಗೆದ್ದ ಎರಡನೇ ದೇಶ ಎಂಬ ಖ್ಯಾತಿ ಪಡೆಯಿತು.

ನಂತರ 1987ರಲ್ಲಿ ಆಸ್ಟ್ರೇಲಿಯಾ ಚಾಂಪಿಯನ್ ಆಯಿತು. ಅಲ್ಲಿಂದ 2003ರವರೆಗೆ ಭಾರತ ಹೇಳಿಕೊಳ್ಳುವ ಸಾಧನೆ ಮಾಡಲಿಲ್ಲ. 2003ರಲ್ಲಿ ಸೌರವ್ ಗಂಗೂಲಿಯವರ ನೇತೃತ್ವದಲ್ಲಿ ಭಾರತ ಮತ್ತೆ ವಿಜೃಂಭಿಸಿತು. ಸಚಿನ್ ತೆಂಡೂಲ್ಕರ್‍ ರವರ ಅದ್ಭುತ ಬ್ಯಾಟಿಂಗ್ ಪ್ರದರ್ಶನದಿಂದ ಭಾರತ ಫೈನಲ್ ತಲುಪಿತ್ತು. ಆದರೆ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಎದುರು ಭಾರತ 125 ರನ್ ಗಳ ಅಂತರದಿಂದ ಮಂಡಿಯೂರಿ ರನ್ನರ್ ಅಪ್‍ಗೆ ತೃಪ್ತಿ ಪಟ್ಟುಕೊಂಡಿತ್ತು.

ನಂತರ 2007ರಲ್ಲಿ ರಾಹುಲ್ ದ್ರಾವಿಡ್ ತಂಡವನ್ನು ಮುನ್ನಡೆಸಿದ್ದರು. ಆದರೆ ಭಾರತ ಲೀಗ್ ಪಂದ್ಯದಲ್ಲಿಯೇ ಬಾಂಗ್ಲಾದೇಶದ ವಿರುದ್ಧ ಅಘಾತಕಾರಿ ಸೋಲು ಕಂಡು ಟೂರ್ನಿಯಿಂದ ಹೊರಬಿದ್ದಿತ್ತು. ಭಾರತ ತಂಡದ ವಿರುದ್ಧ ಟೀಕೆಯ ಮಳೆಯೇ ಹರಿದಿತ್ತು.

ನಂತರ 2011ರಲ್ಲಿ ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ದೋನಿಯ ಅದೃಷ್ಟ ಚೆನ್ನಾಗಿತ್ತು. ಭಾರತ ಮತ್ತು ನೆರೆಹೊರೆ ದೇಶಗಳು ವಿಶ್ವಕಪ್ ಟೂರ್ನಿಯ ಆತಿಥ್ಯ ವಹಿಸಿದ್ದವು. ಭಾರತ ತಂಡ ಪರಿಣಾಮಕಾರಿ ಪ್ರದರ್ಶನ ತೋರಿತ್ತು. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಫೈನಲ್‍ನಲ್ಲಿ ಶ್ರೀಲಂಕಾ ಎದುರು ಭಾರತ ಭರ್ಜರಿ ಜಯಗಳಿಸಿ 29 ವರ್ಷಗಳ ನಂತರ ಎರಡನೇ ಬಾರಿ ವಿಶ್ವಕಪ್‍ಗೆ ಮುತ್ತಿಟ್ಟಿತು. ಸಚಿನ್ ತೆಂಡೂಲ್ಕರ್, ಯುವರಾಜ್ ಸಿಂಗ್ ಶ್ರೇಷ್ಠ ಪ್ರದರ್ಶನ ನೀಡಿದ್ದರು. ಕಪಿಲ್ ದೇವ್ ನಂತರ ವಿಶ್ವಕಪ್ ಗೆದ್ದುಕೊಟ್ಟ ಆಟಗಾರ ಎಂಬ ದಾಖಲೆ ಧೋನಿ ಪಾಲಾಯಿತು.

2015ರ ವಿಶ್ವಕಪ್ ಅನ್ನು ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ಜಂಟಿಯಾಗಿ ಆಯೋಜಿಸಿದ್ದವು. ಭಾರತವು ತನ್ನ ಸಾಮಥ್ರ್ಯವನ್ನು ಪಣಕ್ಕೆ ಒಡ್ಡಿತ್ತು. ಆದರೆ 2003ರ ಇತಿಹಾಸ ಮರುಕಳಿಸಿತು. ಆದರೆ ಈ ಬಾರಿ ಸೆಮಿಫೈನಲ್‍ನಲ್ಲಿಯೇ ಬಲಿಷ್ಠ ಆಸ್ಟ್ರೇಲಿಯಾ ಎದುರು ಭಾರತ ಸೋಲುಂಡು ನಿರ್ಗಮಿಸಿತು.

ಈಗ 2019ರ ವಿಶ್ವಕಪ್‍ನಲ್ಲಿ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡವಾಗಿದ್ದ ಭಾರತ, ವಿಶ್ವ ರ್ಯಾಂಕಿಂಗ್‍ನಲ್ಲಿಯೂ ಭಾರತ 2ನೇ ಸ್ಥಾನದಲ್ಲಿತ್ತು. ಉತ್ಸಾಹಿ ಆಟಗಾರ ವಿರಾಟ್ ಕೊಹ್ಲಿ ನಾಯಕತ್ವದ ಹೊಣೆ ಹೊತ್ತಿದ್ದರು. ಲೀಗ್ ಹಂತದಲ್ಲಿ ನಡೆದ 9 ಪಂದ್ಯಗಳಲ್ಲಿ ಬರೋಬ್ಬರಿ ಏಳು ಪಂದ್ಯಗಳನ್ನು ಗೆದ್ದು ಸೆಮಿಫೈನಲ್ ಪ್ರವೇಶಿಸಿದ್ದಲ್ಲದೇ ಪಾಯಿಂಟ್ ಪಟ್ಟಿಯಲ್ಲಿಯೂ ಅಗ್ರಸ್ಥಾನ ಪಡೆದಿತ್ತು. ಅತಿಹೆಚ್ಚು ಕ್ರಿಕೆಟ್ ಪ್ರೇಮಿಗಳಿರುವ ಭಾರತ ಮತ್ತು ಪಾಕಿಸ್ತಾನದ ಪಂದ್ಯ ರೋಚಕವಾಗಿ ನಡೆದು ಭಾರತ ಜಯಭೇರಿ ಮೊಳಗಿಸಿದೆ. ಮಳೆಯಿಂದ ಲೀಗ್ ಹಂತದಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆಯಬೇಕಿದ್ದ ಪಂದ್ಯ ರದ್ದಾದರೆ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಮಾತ್ರ ಭಾರತ ಸೋಲನಪ್ಪಿತ್ತು.

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆ.ಎಲ್ ರಾಹುಲ್ ಅದ್ಭುತ ಬ್ಯಾಟಿಂಗ್ ಫಾರ್ಮ್‍ನಲ್ಲಿದ್ದರೆ, ಜಸ್ಪ್ರಿತ್ ಬೂಮ್ರ, ಯಜುವೇಂದ್ರ ಚಹಾಲ್, ಮಹಮ್ಮದ್ ಶಮಿ ಬೌಲಿಂಗ್‍ನಲ್ಲಿ ಮಿಂಚುತ್ತಿದ್ದಾರು. ಮಹೇಂದ್ರ ಸಿಂಗ್ ಧೋನಿಗೆ ಇದು ಕೊನೆಯ ವಿಶ್ವಕಪ್ ಆಗಿತ್ತು. ರೋಹಿತ್ ಶರ್ಮಾ ಅತ್ಯಧಿಕ ರನ್ ಗಳಿಸಿದ ಆಟಗಾರ ಮಾತ್ರವಲ್ಲದೇ ಒಂದೇ ಟೂರ್ನಿಯಲ್ಲಿ ಐದು ಶತಕ ಸಿಡಿಸಿ ದಾಖಲೆ ಬರೆದಿದ್ದರು. ಇಂತಹ ಭಾರತ ನ್ಯೂಜಿಲೆಂಡ್ ವಿರುದ್ಧ ಗೆದ್ದು ಫೈನಲ್ ಪ್ರವೇಶಿಸುವ ತವಕದಲ್ಲಿದ್ದರೆ ಮಂಗಳವಾರದ ಪಂದ್ಯಕ್ಕೆ ಮಳೆ ಅಡ್ಡಿಯಾಗಿದೆ. ನ್ಯೂಜಿಲೆಂಡ್ 46.1 ಓವರ್‍ಗಳಲ್ಲಿ 5 ವಿಕೆಟ್ ಕಳೆದುಕೊಂಡು 211 ರನ್ ಅಷ್ಟೇ ಗಳಿಸಿದೆ. ತೀವ್ರ ಮಳೆಯಿಂದಾಗಿ ಪಂದ್ಯವನ್ನು ಬುಧವಾರ ಎಲ್ಲಿಗೆ ನಿಂತಿದೆಯೋ ಅಲ್ಲಿಂದಲೇ ಆರಂಭಿಸಿದಾಗ ಗೆಲ್ಲಲ್ಲು 240 ರನ್ ಗಳ ಸಾಧಾರಣ ಗುರಿ ಪಡೆದ ಭಾರತ ಗೆಲ್ಲಲೇ ಇಲ್ಲ. 221 ರನ್ ಗಳಿಗೆ ಆಲ್ ಔಟ್ ಆಗುವ ಮೂಲಕ 18 ರನ್ ಗಳ ಅಂತರದಿಂದ ಸೋಲೊಪ್ಪಿಕೊಂಡಿತು.

ವಿಶ್ವಕಪ್ ಗೆ ಮೂರನೇ ಬಾರಿಗೆ ಮುತ್ತಿಡುವ ಅದ್ಭುತ ಅವಕಾಶದಿಂದ ಭಾರತ ವಂಚಿತವಾಗಿದೆ. ಕ್ರೀಡಾ ಪ್ರೇಮಿಗಳಿಗೆ ಸಾಕಷ್ಟು ನಿರಾಶೆಯಾಗಿದೆ. ಮುಂದಿನ ವರ್ಷ 20-20 ವಿಶ್ವಕಪ್ ಕ್ರಿಕೆಟ್ ನಡೆಯಲಿದೆ. ಅಲ್ಲಾದರೂ ಭಾರತ ಪ್ರಶಸ್ತಿ ಗೆಲ್ಲುವುದೇ ಎಂದು ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...