Homeಸಿನಿಮಾಕ್ರೀಡೆವಿಶ್ವಕಪ್ ಕ್ರಿಕೆಟ್‍ನಲ್ಲಿ ಭಾರತದ ಹೆಜ್ಜೆಗುರುತುಗಳು

ವಿಶ್ವಕಪ್ ಕ್ರಿಕೆಟ್‍ನಲ್ಲಿ ಭಾರತದ ಹೆಜ್ಜೆಗುರುತುಗಳು

- Advertisement -
- Advertisement -

1975ರಲ್ಲಿ ವಿಶ್ವಕಪ್ ಟೂರ್ನಿ ಇಂಗ್ಲೆಂಡ್‍ನಲ್ಲಿ ಆರಂಭವಾದಾಗ ಭಾರತ ಕಳಪೆ ಪ್ರದರ್ಶನ ನೀಡಿತ್ತು. 1979ರಲ್ಲಿಯೂ ಅದೇ ಪುನರಾವರ್ತನೆಯಾಯಿತು. ನಂತರ 1983ರಲ್ಲಿ ಭಾರತ ಮೂರನೇ ಬಾರಿಗೆ ವಿಶ್ವಕಪ್ ಕ್ರಿಕೆಟ್ ಆಡಲು ಇಂಗ್ಲೆಂಡ್‍ಗೆ ತೆರಳಿದಾಗ ಇವರು ಪಿಕ್‍ನಿಕ್ ಗೆ ಹೋಗುತ್ತಿದ್ದಾರೆಂಬ ಮೂದಲಿಕೆ ಅಭಿಮಾನಿಗಳಿಂದ ಕೇಳಿಬಂದಿತ್ತು. ತಂಡಕ್ಕೆ ಸಮರ್ಥ ಕೋಚ್ ಇರಲಿಲ್ಲ. ಅನುಭವಿ ನಾಯಕನೂ ಇರಲಿಲ್ಲ. 24 ವರ್ಷದ ಯಂಗ್ ಕ್ಯಾಪ್ಟನ್ ಕಪಿಲ್ ದೇವ್ ತಂಡವನ್ನು ಮುನ್ನಡೆಸಿದ್ದರು.

ಆದರೆ ಅಚ್ಚರಿಯ ರೀತಿಯಲ್ಲಿ ಮೊದಲ ಪಂದ್ಯದಲ್ಲಿ ಎರಡು ಬಾರಿ ವಿಶ್ವಕಪ್ ಗೆದ್ದಿದ್ದ ವೆಸ್ಟ್ ಇಂಡೀಸ್ ತಂಡವನ್ನು ಭಾರತ ಮಣಿಸಿ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿತ್ತು. ಅದೇ ವಿಶ್ವಾಸಯುತ ಆಟವಾಡಿ ಫೈನಲ್ ತಲುಪಿದ ಭಾರತಕ್ಕೆ ಮತ್ತದೆ ವೆಸ್ಟ್ ಇಂಡೀಸ್ ಎದುರಾಳಿ. 60 ಓವರ್‍ಗಳ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ಗಳಿಸಿದ್ದು ಎಲ್ಲಾ ವಿಕೆಟ್ ಕಳೆದುಕೊಂಡು ಕೇವಲ 183 ರನ್. ಗೆಲುವು ಸಾಧ್ಯವಿಲ್ಲ ಎನ್ನುವ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅಂತಹ ಒತ್ತಡದಲ್ಲಿಯೂ ಮೊಹಿಂದರ್ ಅಮರನಾಥ್‍ರವರ ಆಲ್‍ರೌಂಡರ್ ಆಟ, ವಿ.ವಿ ರಿಚಡ್ರ್ಸ್ ರವರ ಅಮೋಘ ಕ್ಯಾಚ್ ಪಡೆದ ಕಪಿಲ್ ದೇವ್ ಇನ್ನಿತರ ಕುತೂಹಲಕರ ಅಂಶಗಳಿಂದ ಭಾರತ ಆ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಅನ್ನು 140 ರನ್‍ಗಳಿಗೆ ಆಲೌಟ್ ಮಾಡುವ ಮೂಲಕ 43 ರನ್ ಗಳಿಂದ ಜಯಿಸಿ ಮೊದಲ ಬಾರಿಗೆ ವಿಶ್ವಕಪ್ ಎತ್ತಿಹಿಡಿಯಿತು. ವೆಸ್ಟ್ ಇಂಡೀಸ್‍ನ ಹ್ಯಾಟ್ರಿಕ್ ಕನಸನ್ನು ನುಚ್ಚುನೂರು ಮಾಡಿತು ಮತ್ತು ವಿಶ್ವಕಪ್ ಗೆದ್ದ ಎರಡನೇ ದೇಶ ಎಂಬ ಖ್ಯಾತಿ ಪಡೆಯಿತು.

ನಂತರ 1987ರಲ್ಲಿ ಆಸ್ಟ್ರೇಲಿಯಾ ಚಾಂಪಿಯನ್ ಆಯಿತು. ಅಲ್ಲಿಂದ 2003ರವರೆಗೆ ಭಾರತ ಹೇಳಿಕೊಳ್ಳುವ ಸಾಧನೆ ಮಾಡಲಿಲ್ಲ. 2003ರಲ್ಲಿ ಸೌರವ್ ಗಂಗೂಲಿಯವರ ನೇತೃತ್ವದಲ್ಲಿ ಭಾರತ ಮತ್ತೆ ವಿಜೃಂಭಿಸಿತು. ಸಚಿನ್ ತೆಂಡೂಲ್ಕರ್‍ ರವರ ಅದ್ಭುತ ಬ್ಯಾಟಿಂಗ್ ಪ್ರದರ್ಶನದಿಂದ ಭಾರತ ಫೈನಲ್ ತಲುಪಿತ್ತು. ಆದರೆ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಎದುರು ಭಾರತ 125 ರನ್ ಗಳ ಅಂತರದಿಂದ ಮಂಡಿಯೂರಿ ರನ್ನರ್ ಅಪ್‍ಗೆ ತೃಪ್ತಿ ಪಟ್ಟುಕೊಂಡಿತ್ತು.

ನಂತರ 2007ರಲ್ಲಿ ರಾಹುಲ್ ದ್ರಾವಿಡ್ ತಂಡವನ್ನು ಮುನ್ನಡೆಸಿದ್ದರು. ಆದರೆ ಭಾರತ ಲೀಗ್ ಪಂದ್ಯದಲ್ಲಿಯೇ ಬಾಂಗ್ಲಾದೇಶದ ವಿರುದ್ಧ ಅಘಾತಕಾರಿ ಸೋಲು ಕಂಡು ಟೂರ್ನಿಯಿಂದ ಹೊರಬಿದ್ದಿತ್ತು. ಭಾರತ ತಂಡದ ವಿರುದ್ಧ ಟೀಕೆಯ ಮಳೆಯೇ ಹರಿದಿತ್ತು.

ನಂತರ 2011ರಲ್ಲಿ ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ದೋನಿಯ ಅದೃಷ್ಟ ಚೆನ್ನಾಗಿತ್ತು. ಭಾರತ ಮತ್ತು ನೆರೆಹೊರೆ ದೇಶಗಳು ವಿಶ್ವಕಪ್ ಟೂರ್ನಿಯ ಆತಿಥ್ಯ ವಹಿಸಿದ್ದವು. ಭಾರತ ತಂಡ ಪರಿಣಾಮಕಾರಿ ಪ್ರದರ್ಶನ ತೋರಿತ್ತು. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಫೈನಲ್‍ನಲ್ಲಿ ಶ್ರೀಲಂಕಾ ಎದುರು ಭಾರತ ಭರ್ಜರಿ ಜಯಗಳಿಸಿ 29 ವರ್ಷಗಳ ನಂತರ ಎರಡನೇ ಬಾರಿ ವಿಶ್ವಕಪ್‍ಗೆ ಮುತ್ತಿಟ್ಟಿತು. ಸಚಿನ್ ತೆಂಡೂಲ್ಕರ್, ಯುವರಾಜ್ ಸಿಂಗ್ ಶ್ರೇಷ್ಠ ಪ್ರದರ್ಶನ ನೀಡಿದ್ದರು. ಕಪಿಲ್ ದೇವ್ ನಂತರ ವಿಶ್ವಕಪ್ ಗೆದ್ದುಕೊಟ್ಟ ಆಟಗಾರ ಎಂಬ ದಾಖಲೆ ಧೋನಿ ಪಾಲಾಯಿತು.

2015ರ ವಿಶ್ವಕಪ್ ಅನ್ನು ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ಜಂಟಿಯಾಗಿ ಆಯೋಜಿಸಿದ್ದವು. ಭಾರತವು ತನ್ನ ಸಾಮಥ್ರ್ಯವನ್ನು ಪಣಕ್ಕೆ ಒಡ್ಡಿತ್ತು. ಆದರೆ 2003ರ ಇತಿಹಾಸ ಮರುಕಳಿಸಿತು. ಆದರೆ ಈ ಬಾರಿ ಸೆಮಿಫೈನಲ್‍ನಲ್ಲಿಯೇ ಬಲಿಷ್ಠ ಆಸ್ಟ್ರೇಲಿಯಾ ಎದುರು ಭಾರತ ಸೋಲುಂಡು ನಿರ್ಗಮಿಸಿತು.

ಈಗ 2019ರ ವಿಶ್ವಕಪ್‍ನಲ್ಲಿ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡವಾಗಿದ್ದ ಭಾರತ, ವಿಶ್ವ ರ್ಯಾಂಕಿಂಗ್‍ನಲ್ಲಿಯೂ ಭಾರತ 2ನೇ ಸ್ಥಾನದಲ್ಲಿತ್ತು. ಉತ್ಸಾಹಿ ಆಟಗಾರ ವಿರಾಟ್ ಕೊಹ್ಲಿ ನಾಯಕತ್ವದ ಹೊಣೆ ಹೊತ್ತಿದ್ದರು. ಲೀಗ್ ಹಂತದಲ್ಲಿ ನಡೆದ 9 ಪಂದ್ಯಗಳಲ್ಲಿ ಬರೋಬ್ಬರಿ ಏಳು ಪಂದ್ಯಗಳನ್ನು ಗೆದ್ದು ಸೆಮಿಫೈನಲ್ ಪ್ರವೇಶಿಸಿದ್ದಲ್ಲದೇ ಪಾಯಿಂಟ್ ಪಟ್ಟಿಯಲ್ಲಿಯೂ ಅಗ್ರಸ್ಥಾನ ಪಡೆದಿತ್ತು. ಅತಿಹೆಚ್ಚು ಕ್ರಿಕೆಟ್ ಪ್ರೇಮಿಗಳಿರುವ ಭಾರತ ಮತ್ತು ಪಾಕಿಸ್ತಾನದ ಪಂದ್ಯ ರೋಚಕವಾಗಿ ನಡೆದು ಭಾರತ ಜಯಭೇರಿ ಮೊಳಗಿಸಿದೆ. ಮಳೆಯಿಂದ ಲೀಗ್ ಹಂತದಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆಯಬೇಕಿದ್ದ ಪಂದ್ಯ ರದ್ದಾದರೆ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಮಾತ್ರ ಭಾರತ ಸೋಲನಪ್ಪಿತ್ತು.

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆ.ಎಲ್ ರಾಹುಲ್ ಅದ್ಭುತ ಬ್ಯಾಟಿಂಗ್ ಫಾರ್ಮ್‍ನಲ್ಲಿದ್ದರೆ, ಜಸ್ಪ್ರಿತ್ ಬೂಮ್ರ, ಯಜುವೇಂದ್ರ ಚಹಾಲ್, ಮಹಮ್ಮದ್ ಶಮಿ ಬೌಲಿಂಗ್‍ನಲ್ಲಿ ಮಿಂಚುತ್ತಿದ್ದಾರು. ಮಹೇಂದ್ರ ಸಿಂಗ್ ಧೋನಿಗೆ ಇದು ಕೊನೆಯ ವಿಶ್ವಕಪ್ ಆಗಿತ್ತು. ರೋಹಿತ್ ಶರ್ಮಾ ಅತ್ಯಧಿಕ ರನ್ ಗಳಿಸಿದ ಆಟಗಾರ ಮಾತ್ರವಲ್ಲದೇ ಒಂದೇ ಟೂರ್ನಿಯಲ್ಲಿ ಐದು ಶತಕ ಸಿಡಿಸಿ ದಾಖಲೆ ಬರೆದಿದ್ದರು. ಇಂತಹ ಭಾರತ ನ್ಯೂಜಿಲೆಂಡ್ ವಿರುದ್ಧ ಗೆದ್ದು ಫೈನಲ್ ಪ್ರವೇಶಿಸುವ ತವಕದಲ್ಲಿದ್ದರೆ ಮಂಗಳವಾರದ ಪಂದ್ಯಕ್ಕೆ ಮಳೆ ಅಡ್ಡಿಯಾಗಿದೆ. ನ್ಯೂಜಿಲೆಂಡ್ 46.1 ಓವರ್‍ಗಳಲ್ಲಿ 5 ವಿಕೆಟ್ ಕಳೆದುಕೊಂಡು 211 ರನ್ ಅಷ್ಟೇ ಗಳಿಸಿದೆ. ತೀವ್ರ ಮಳೆಯಿಂದಾಗಿ ಪಂದ್ಯವನ್ನು ಬುಧವಾರ ಎಲ್ಲಿಗೆ ನಿಂತಿದೆಯೋ ಅಲ್ಲಿಂದಲೇ ಆರಂಭಿಸಿದಾಗ ಗೆಲ್ಲಲ್ಲು 240 ರನ್ ಗಳ ಸಾಧಾರಣ ಗುರಿ ಪಡೆದ ಭಾರತ ಗೆಲ್ಲಲೇ ಇಲ್ಲ. 221 ರನ್ ಗಳಿಗೆ ಆಲ್ ಔಟ್ ಆಗುವ ಮೂಲಕ 18 ರನ್ ಗಳ ಅಂತರದಿಂದ ಸೋಲೊಪ್ಪಿಕೊಂಡಿತು.

ವಿಶ್ವಕಪ್ ಗೆ ಮೂರನೇ ಬಾರಿಗೆ ಮುತ್ತಿಡುವ ಅದ್ಭುತ ಅವಕಾಶದಿಂದ ಭಾರತ ವಂಚಿತವಾಗಿದೆ. ಕ್ರೀಡಾ ಪ್ರೇಮಿಗಳಿಗೆ ಸಾಕಷ್ಟು ನಿರಾಶೆಯಾಗಿದೆ. ಮುಂದಿನ ವರ್ಷ 20-20 ವಿಶ್ವಕಪ್ ಕ್ರಿಕೆಟ್ ನಡೆಯಲಿದೆ. ಅಲ್ಲಾದರೂ ಭಾರತ ಪ್ರಶಸ್ತಿ ಗೆಲ್ಲುವುದೇ ಎಂದು ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...