Homeಮುಖಪುಟಮುದ್ದು ಮೇಲೆ ಕೇಸು ದಾಖಲಿಸಲು ಹೋಗಿ, ಕೊನೆಗೆ ಮದುವೆಗೆ ಸಾಕ್ಷಿ ಆದೆ - ಅಮೆರಿಕಾದಿಂದ ಜಿ.ಬಿ.ರಂಗಸ್ವಾಮಿ

ಮುದ್ದು ಮೇಲೆ ಕೇಸು ದಾಖಲಿಸಲು ಹೋಗಿ, ಕೊನೆಗೆ ಮದುವೆಗೆ ಸಾಕ್ಷಿ ಆದೆ – ಅಮೆರಿಕಾದಿಂದ ಜಿ.ಬಿ.ರಂಗಸ್ವಾಮಿ

ಇದೆಲ್ಲವನ್ನೂ ಮುದ್ದು ಆಗಾಗ್ಗೆ ನೆನಪಿಸಿ ನಗುತ್ತಿದ್ದರು. ಮುದ್ದು - ಇಂದ್ರಾಣಿಯವರು  ಆದರ್ಶ ದಂಪತಿಗಳಾಗಿ ಬಾಳ್ವೆ ಮಾಡಿದರು ಅಷ್ಟೇ ಅಲ್ಲ. ಅನೇಕ ಸರಳ, ಅಂತರ್ಜಾತಿಯ ಒಲವಿನ ಮದುವೆಗಳನ್ನು ಮಾಡಿಸಿ ಅದೆಷ್ಟೋ ಯುವಜೋಡಿಗಳಿಗೆ ಆಸರೆಯಾಗಿದ್ದರು. ಆದರ್ಶವಾಗಿದ್ದರು. 

- Advertisement -
- Advertisement -

|ಜೆ.ಬಿ.ರಂಗಸ್ವಾಮಿ| ಸಿಯಾಟಲ್ US

ಮೈಸೂರಿನವರಾದ ಮುದ್ದು ಕೃಷ್ಣ ಮತ್ತು ಇಂದ್ರಾಣಿ ದಂಪತಿಗಳು ಅಪರಿಮಿತ ಜೀವನೋತ್ಸಾಹ ಹೊಂದಿದ್ದವರು. ಮೈಸೂರಿನ ರಂಗಾಯಣದ ಮೂಲಕ ರಂಗಚಟುವಟಿಕೆಗಳಿಗೆ ರಂಗದ ಹಿಂದಿದ್ದುಕೊಂಡೇ ಕೆಲಸ ಮಾಡಿದ, ಎಂದೂ ವೇದಿಕೆಯನ್ನು ಬಯಸದ ಮುದ್ದು ಕೃಷ್ಣರವರು ಸಿನಿಮಾ ರಂಗಭೂಮಿಯ ಕುರಿತು ಅಪಾರ ಒಲವಿಟ್ಟುಕೊಂಡವರು. ಸಿನಿಮಾ ವಿಶ್ಲೇಷಣೆ, ಫೋಟೊಗ್ರಫಿ, ಪ್ರವಾಸ, ವೈವಿಧ್ಯ ಊಟ ಪರಿಚಯ ಸೇರಿದಂತೆ ಹಲವು ಹವ್ಯಾಸಗಳ ಮೂಲಕ ಗಮನ ಸೆಳೆದಿದ್ದರು. ಸಾಮಾಜಿಕ ಆಗುಹೋಗುಗಳಿಗೆ ಸಕ್ರಿಯವಾಗಿ ಸ್ಪಂದಿಸುತ್ತಿದ್ದ ಈ ಜೋಡಿ ಉತ್ತರ ಪ್ರದೇಶದ ಪ್ರವಾಸದಲ್ಲಿದ್ದಾಗ ಅಪಘಾತದಿಂದ ಇಹಲೋಕ ತ್ಯಜಿಸಿದ್ದಾರೆ. ಈ ಕುರಿತು ಅವರ ಒಡನಾಡಿಗಳು ಕಂಬನಿ ಮಿಡಿದಿದ್ದು ಅವರ ಸ್ನೇಹಿತರಾದ ಜೆ.ಬಿ ರಂಗಸ್ವಾಮಿಯವರು ಅವರ ಮದುವೆಯ ತಲ್ಲಣದ ಘಟನೆಗಳನ್ನು ಹಂಚಿಕೊಳ್ಳುವ ಮೂಲಕ ಮುದ್ದು ಕೃಷ್ಣರವರನ್ನು ಸ್ಮರಿಸಿದ್ದಾರೆ.

ಮುದ್ದೂ ಮದುವೆ 

ಅಮೇರಿಕಾದ ಸಿಯಾಟಲ್ ನ ಛಳಿಯಲ್ಲಿ ಕಳೆದ ತಿಂಗಳು BREAKING BAD ಎಂಬ 2008 ರ ಟಿವಿ ಸೀರಿಯಲ್ ಅನ್ನು ಬಿಡದೆ ನೋಡುತ್ತಿದ್ದಾಗ ಹಲವು ಹತ್ತು ಬಾರಿ ಮುದ್ದು ( ಕೃಷ್ಣ ) ನೆನಪಾಗಿದ್ದರು. ಆ ಮೆಗಾ ಸೀರಿಯಲ್ ಎಂಬತ್ತನಾಲ್ಕು (ಗಂಟೆ) ಎಪಿಸೋಡಿನದು.

ಹತ್ತು ದಿನ ಕುಳಿತು ಬಿಡದೆ ನೋಡಿದೆ. ನಮ್ಮ ಮುದ್ದುವೂ ಹಾಗೆಯೇ. ಚಲನಚಿತ್ರೋತ್ಸವಗಳಿಗೆ ಬಂದರೆಂದರೆ ದಿನಕ್ಕೆ ಆರು ಸಿನಿಮಾಗಳನ್ನು ಆಸ್ವಾದಿಸುವ ಅಭಿಮಾನಿ. ವೀಕ್ಷಿಸುವ ಪ್ರತಿ ಚಿತ್ರದ  ಬಗ್ಗೆಯೂ  ಮೊದಲೇ ಅಧ್ಯಯನ ಮಾಡಿಕೊಂಡು ನಂತರ ನೋಡುವ ಪ್ರವೃತ್ತಿ ಅವರದು. ನಾನು  ಚಿತ್ರೋತ್ಸವಗಳಿಗೆ  ಹೋದರೆ ಅವರನ್ನು ಹುಡುಕಿಕೊಂಡು ಹೋಗುತ್ತಿದ್ದೆ. ಆಯಾ ದಿನ ನೋಡಬೇಕಾದ ಅತ್ಯುತ್ತಮ ಚಿತ್ರಗಳನ್ನು ಅವರಿಂದ ಗುರ್ತು ಹಾಕಿಸಿಕೊಳ್ಳುತ್ತಿದ್ದೆ. ಕೆಲವು ಮುಖ್ಯ ಚಿತ್ರಗಳನ್ನು ನೋಡುವಾಗ ಗಮನಿಸಬೇಕಿರುವ ಮಹತ್ವದ ಅಂಶಗಳ ಬಗ್ಗೆ ಬೆಳಕು ಚೆಲ್ಲುತ್ತಿದ್ದರು.

ಮೈಸೂರಿನಲ್ಲಿ ಸಿನಿಮಾ ಸಮಯ ಕೂಟದ ಮೂಲಕ ಅನೇಕ ಅಪರೂಪದ ಚಿತ್ರಗಳನ್ನು ಕಾಣಿಸಿದವರು ಅವರು. ಸಮುದಾಯದ ರಂಗ ಚಟುವಟಿಕೆ, ಪಕ್ಷಿವೀಕ್ಷಣೆ, ಅಂಚೆಸಂಗ್ರಹ ಹೀಗೆ ನಾನಾ ಚಟುವಟಿಕೆಗಳಲ್ಲಿದ್ದ ಅವರು ಪರಿಚಯವಾದದ್ದು ಓರ್ವ ಅಪರಾಧಿಯಾಗಿ !

ಅದು 1983.

ಹೌದು ಅವರ ಮೇಲೆ ಹುಡುಗಿಯೊಬ್ಬಳನ್ನು ಕಿಡ್ನ್ಯಾಪ್ ಮಾಡಿದ್ದಾರೆಂಬ ದೂರು ಬಂದಿತ್ತು. ಅವರು ಕೆಲಸದಲ್ಲಿದ್ದ  ಬ್ಯಾಂಕ್, ಮನೆ ಹೀಗೆ ಎಲ್ಲೆಡೆ ತಲಾಶ್ ಮಾಡುತ್ತಿದ್ದೆ.

ಅಷ್ಟರಲ್ಲಿ ಮಿತ್ರ ಆಂದೋಲನದ  ರಾಜಶೇಖರ ಕೋಟಿಯವರ ಫೋನ್ ಬಂತು. ಮುದ್ದುಕೃಷ್ಣನನ್ನು ಕಳಿಸಿಕೊಡುತ್ತೇನೆಂದು ಪ್ರಾಮಿಸ್ ಮಾಡಿದರು.

ಸಂಜೆ ವೇಳೆಗೆ ಲಿಂಗದೇವರು ಹಳೆಮನೆ ಮುಂತಾದ ನಾಲ್ಕಾರು ಗೆಳೆಯರೊಂದಿಗೆ ಆರೋಪಿ ಮುದ್ದುಕೃಷ್ಣ  ಹಾಜರಾದ . ನೋಡಿದರೆ ಪರಿಚಿತ ಆಸಾಮಿಯೇ!. ಗೋಕಾಕ್ ಚಳವಳಿಯಲ್ಲಿ ಪಾಲ್ಗೊಂಡಿದ್ದ ಮನುಷ್ಯ.

ಆಗ ಚಳುವಳಿಕೋರ. ಈಗ ಕಿಡ್ನ್ಯಾಪಿಂಗ್ ಅಪರಾಧಿ!.

ಜೊತೆಗೆ ಬಂದಿದ್ದವರನ್ನು ಹೊರ ಕಳಿಸಿ ವಿಚಾರಿಸಿದೆ.

“ನಾನು ಯಾರನ್ನೂ ಕಿಡ್ನ್ಯಾಪ್ ಮಾಡಿಲ್ಲ. ಆ ಹುಡುಗಿ ಎಲ್ಲಿದ್ದಾಳೋ ಗೊತ್ತಿಲ್ಲ. ನನ್ನ ಮೇಲೆ ಸುಳ್ಳು ಕಂಪ್ಲೇಂಟ್ ಕೊಟ್ಟಿದ್ದಾರೆ.” ಮುದ್ದುಕೃಷ್ಣನ ಮುದ್ದು ಮಾತು !

“ಈ ಕ್ಷಣ ಆ ಹುಡುಗಿನ ಒಪ್ಪಿಸಲಿಲ್ಲಾ ಅಂದ್ರೆ ಲಾಕಪ್ಪಲ್ಲಿ ಹಾಕಿ ತೀಡುತ್ತೀನಿ ಮಗನೇ.  ಕೆಲಸದಿಂದ ಡಿಸ್ಮಿಸ್ ಮಾಡ್ಸಿ ಜೀವಾವಧಿ ಜೈಲಲ್ಲಿ ಕೂರಿಸುತ್ತೇನೆ” ಅಂತ ಮಾಮೂಲಿ ಗುಟುರು ಹಾಕಿದೆ.

ಹೊರಗಿದ್ದ ಅವರ ಜೊತೆಗಾರರು ಒಳಬಂದರು. ಹಳೆಮನೆಯವರು, ಮುದ್ದುವಿನ ಪ್ರೇಮ ಪ್ರವರ ಬಿಚ್ಚಿಟ್ಟರು.

“ಹುಡುಗಿ ಸೇಫಾಗಿ ಸ್ನೇಹಿತರ ಮನೆಯಲ್ಲಿದ್ದಾಳೆ. ತಿಂಗಳ ಹಿಂದೆಯೇ ರಿಜಿಸ್ಟರ್ ಮ್ಯಾರೇಜ್ ಗೆ ಅರ್ಜಿ ನೀಡಿದ್ದಾರೆ. ಇನ್ನು ನಾಲ್ಕೈದು ದಿನಕ್ಕೆ ಮದುವೆ”. ಅಂತ ದಾಖಲಾತಿಗಳನ್ನು ತೋರಿಸಿದರು.

“ನಿಮ್ಮ ಪುರಾಣ ಎಲ್ಲಾ ಪಕ್ಕಕ್ಕಿಡ್ರೀ. ಇನ್ನು ಅರ್ಧ ಗಂಟೆಯೊಳಗೆ ಆ ಹುಡುಗಿ ಇಲ್ಲಿರಬೇಕು. ಇಲ್ಲಾಂದ್ರೆ ನಾನು ಕೇಸು ರಿಜಿಸ್ಟರ್ ಮಾಡೋದೇ. ಆಮೇಲೆ ಯಾರೇನು ತಿಪ್ಪರಲಾಗ ಹೊಡೆದರೂ ಏನೂ ಮಾಡೋದಿಕ್ಕೆ ಆಗೋದಿಲ್ಲ. ಕಿಡ್ನ್ಯಾಪ್ ಮಾಡಿಲ್ಲ ಅಂತ ಆ ಹುಡುಗೀನೇ  ಇಲ್ಲಿ ಬಂದು ಹೇಳಬೇಕು.” ನಿಷ್ಠುರವಾಗಿ ಹೇಳಿದೆ.

“ಹುಡುಗಿಗೆ  ಇಪ್ಪತ್ತೈದು ವರ್ಷ, ಮೇಜರ್ ಆಗಿದ್ದಾಳೆ. ಅವಳ ಬರ್ತ್ ಸರ್ಟಿಫಿಕೇಟ್ ಇದೆ. ಸಬ್ ರಿಜಿಸ್ಟ್ರಾರ್ ಆಫೀಸಿನಲ್ಲಿ ಅರ್ಜಿ ಕೊಟ್ಟಿದ್ದಾರೆ. ಯಾವುದೇ ವಿಷಯ ಮುಚ್ಚಿಟ್ಟಿಲ್ಲ. ಮದುವೆ ಬಗ್ಗೆ ತಕರಾರಿದ್ದರೆ ಅಲ್ಲಿ ಅರ್ಜಿ ಕೊಡಬೇಕಲ್ಲವೇ?. ಇದು ಸುಳ್ಳು ಕಂಪ್ಲೇಂಟ್ ಸಾರ್. . . .  ”

ಅವರ ವಾದವನ್ನು ತಡೆದು , “ನಿಮ್ಮ ಯಾವ ಮಾತೂ ಈಗ ಬೇಡಿ. ಹುಡುಗೀನೇ‌ ಬಂದು ಹೇಳಿಕೆ ಕೊಡಲಿ. ಆಮೇಲೆ ನೋಡೋಣ” ಎಂದೆ.

ಅಷ್ಟರಲ್ಲಿ ದೂರು ಕೊಟ್ಟಿದ್ದ ಹುಡುಗಿಯ  ಕಡೆಯವರು ನಜರ್ ಬಾದ್  ಸ್ಟೇಷನ್ ಮುಂದೆ ಜಮಾಯಿಸಿದ್ದರು. ಆಗಿನ ಶಾಸಕ ಅಜೀಜ್ ಸೇಠ್ ಮೊದಲ್ಗೊಂಡು ಅನೇಕರ ಫೋನ್ ಬಂದಿತ್ತು.

ಹುಡುಗಿ ಕಡೆಯ ಕೆಲವರು ಮುದ್ದುಕೃಷ್ಣನ ಮೇಲೆ ಉಗ್ರ ಕ್ರಮ ಜರುಗಿಸಬೇಕೆಂದು ವರಾತ ಶುರು ಮಾಡಿದ್ದರು.

ರಾತ್ರಿ ಎಂಟು ಗಂಟೆಯ ವೇಳೆಗೆ ಹುಡುಗಿಯನ್ನು ಕರೆತಂದರು. ಅವಳ ಕಡೆಯವರೆಲ್ಲಾ ಠಾಣೆಯ ತುಂಬಾ ತುಂಬಿಕೊಂಡರು.

ಓಪನ್ ಎನ್ ಕ್ವಯರಿ ಮಾಡಲಾದೀತೇ?. ಎಲ್ಲರನ್ನೂ ಹೊರಕಳಿಸಿ ಕಂಪ್ಲೇಂಟ್ ಕೊಟ್ಟವರ ಕಡೆಯ ನಾಲ್ಕಾರು ಜನ ಹಿರಿಯರು ಮತ್ತು ಹುಡುಗನ ಪರ ಒಂದಿಬ್ಬರನ್ನು ಇರಿಸಿಕೊಂಡೆ. ವಿಚಾರಣೆ ಶುರುವಾಯಿತು.

ತಮ್ಮಿಬ್ಬರ ಸ್ನೇಹ ಪ್ರೇಮ ತಿಳಿಸಿದ ಹುಡುಗಿ ತಾನಾಗಿ ಸ್ವತಃ ಮನೆಯಿಂದ ಹೋಗಿದ್ದೇನೆ. ಯಾರೂ ಬಲವಂತವಾಗಿ ಕರೆದೊಯ್ದಿಲ್ಲ. ತಾನೇ  ತನ್ನ ಆಪ್ತರ ಮನೆಯಲ್ಲಿ ಉಳಿದುಕೊಂಡಿದ್ದೇನೆ.‌ ಮದುವೆಯಾಗುವ ತನಕ ಅಲ್ಲಿಯೇ ಇರುತ್ತೇನೆಂದು ಹೇಳಿಕೆ ಕೊಟ್ಟಳು.

“ಅವಳಿಗೆ ಏನೂ ಗೊತ್ತಾಗೋದಿಲ್ಲ. ಅವನು ಹುಟ್ಟು ಪೋಲಿ. ಮಂಕುಬೂದಿ ಎರಚಿ ಕರೆದುಕೊಂಡು ಹೋಗಿದ್ದಾನೆ. ಅವಳು ಮೈನರ್ ಬೇರೆ. ನಮ್ಮ ವಶದಿಂದ ಕಿಡ್ನ್ಯಾಪ್ ಆಗಿದ್ದಾಳೆ. ನಮ್ಮ ಜೊತೆಗೆ ಕಳಿಸಿಕೊಡಿ”. ಹುಡುಗಿ ಕಡೆಯವರು ಪಟ್ಟು ಹಿಡಿದರು. ಏನು ಸಮಾಧಾನ ಹೇಳಿದರೂ ಕೇಳುವ ಸ್ಥಿತಿಯಲ್ಲಿ ಅವರಿರಲಿಲ್ಲ.

“ಹುಡುಗ ಒಳ್ಳೆಯ ಕೆಲಸದಲ್ಲಿದ್ದಾನೆ. ಕಪ್ಪಗಿದ್ರೂ ಲಕ್ಷಣವಾಗಿದ್ದಾನೆ. ಚೆನ್ನಾಗಿ ನೋಡಿಕೊಳ್ತಾನೆ ಬಿಡ್ರೀ. ಅವರಿಬ್ಬರೂ ಪ್ರೀತಿಸಿ  ಮದುವೆಯಾಗ್ತಿದ್ದಾರೆ. ನೀವೇ ಮುಂದೆ ನಿಂತು ಆಶೀರ್ವಾದ ಮಾಡಿ ಒಳ್ಳೆಯದಾಗುತ್ತೆ.” ಇತ್ಯಾದಿ ಹೇಳಿದೆ.

ಕಿಡ್ನ್ಯಾಪ್ ಮಾಡಿದೋನನ್ನು ಒದ್ದು ಲಾಕಪ್ಪಿನಲ್ಲಿ ಹಾಕ್ತೀನಿ ಅಂತ ಭರವಸೆ ಕೊಟ್ಟಿದ್ದ ಸಬ್ ಇನ್ಸ್ ಪೆಕ್ಟರ್ ‌ಈಗ ಪ್ಲೇಟ್ ತಿರುಗಿಸಿ , ಅಪರಾಧಿಗೇ ಸಪೋರ್ಟ್ ಮಾಡ್ತಿದ್ದಾನೆ !. ಹುಡುಗಿ ಕಡೆಯವರು ಕನಲಿ ಹೋದರು.

“ಯಾವ ಸೀಮೆ  ಪ್ರೀತಿ ಮಾಡಿದ್ದಾರೆ ಸಾರ್. ಮೂರು ದಿನವೂ ಬಾಳ್ಮೆ ಮಾಡದೆ ಮೂರಾಬಟ್ಟೆಯಾಗಿರೋರನ್ನು ದಿನವೂ ನೋಡ್ತಿದ್ದೇವೆ. ಇವರು ಬರಕತ್ತಾಗೋದಿಲ್ಲ. ಇಬ್ಬರನ್ನೂ ಬೇರೆ ಮಾಡಿಸಿಕೊಡಿ.”

“ನೋಡ್ರೀ, ಇಬ್ಬರೂ ಪ್ರೀತಿಸಿದ್ದು, ಹುಡುಗ ಮದುವೆಯಾಗೋದಿಲ್ಲ ಅಂತ ಠಲಾಯಿಸುತ್ತಿದ್ದಾನೆ ಅಂದರೆ ಆಗ ಬೇರೆಯಾಗಿ ಅಂತ ಬುದ್ದಿ  ಹೇಳಬಹುದು. ಆದರೆ ಇಲ್ಲಿ ಕಾನೂನು ಪ್ರಕಾರ ಮದುವೆಯಾಗೋದಿಕ್ಕೆ ಅರ್ಜಿ ಕೊಟ್ಟಿದ್ದಾರೆ. ಈಗ ಏನೂ ಮಾಡೋದಿಕ್ಕೆ ಬರೋದಿಲ್ಲ. ”

ಕಂಪ್ಲೇಂಟ್ ಕೊಟ್ಟರೆ ನೀವೇ ಅವರಿಗೆ ಸಪೋರ್ಟ್ ಮಾಡ್ತಿದ್ದೀರಲ್ಲಾ ಸಾರ್ ? ಅವಳನ್ನ ನಮ್ಜೊತೆ ಯಾಕೆ ಕಳಿಸಿಕೊಡೋದಿಲ್ಲ ?” ಅಂತ ಕಾರ್ಪೊರೇಟರ್ ಸಮೇತ ಮುಗಿಬಿದ್ದರು.

“ಇಪ್ಪತ್ತೈದು ಆಗೋತನಕ ಮದುವೆ ಮಾಡಿಲ್ಲ ಅಂದರೆ ನಿಮಗೆ ಮದುವೆ ಮಾಡೋದಿಕ್ಕೆ ಯೋಗ್ತಿ ಇಲ್ಲ ಅಂತ. (ಆಗೆಲ್ಲ 20-22 ವರ್ಷದೊಳಗೆ ಹುಡುಗಿಯರ ಮದುವೆ ಮಾಡುತ್ತಿದ್ದರು. ) ಟೈಮ್ ಬಾರಾಗಿದೆ (bar). ಹುಡುಗಿ ವಿದ್ಯಾವಂತೆ ತನಗೆ ಬೇಕಾದ ಹುಡುಗನನ್ನು ಆಯ್ಕೆ ಮಾಡಿಕೊಂಡಿದ್ದಾಳೆ. ತಾನಾಗಿ ಸ್ವಯಿಚ್ಚೆಯಿಂದ ಮನೆಯಿಂದ ಹೋಗಿದ್ದಾಳೆ. ನಾವೇನೂ ಮಾಡೋದಿಕ್ಕೆ ಆಗೋದಿಲ್ಲ. ಕಾನೂನೇ ಅವರ ಪರ ಇದೆ.

“ಇಲ್ಲೀ ತನಕ ನೀವೂ ಹಠ ಮಾಡಿದಿರಿ, ಸರಿ. ಈಗ ಕೈ ಮೀರಿಹೋಗಿದೆ. ನಿಮ್ಮ ಹುಡುಗಿ ಸರಿಯಾಗಿ ಬಾಳಲಿ ಅಂತಿದ್ರೆ ಆಶೀರ್ವಾದ ಮಾಡಿ. ಇಲ್ಲಾಂದ್ರೆ ಸುಮ್ಮನೆ ಇದ್ದುಬಿಡಿ. ನೀವೀಗ ಕೋರ್ಟಿಗೆ ಹೋದ್ರೂ ಉಪಯೋಗ ಆಗೊಲ್ಲ. ” ಅಂತ ತೀರ್ಮಾನ ಹೇಳಿದೆ.

ಅಲ್ಲಿಗೆ ಎಲ್ಲರೂ ಮೌನವಾದರು.

ಇನ್ನು ಹುಡುಗಿಯನ್ನೀಗ ಯಾರ ಸುಫರ್ದಿನಲ್ಲಿ ಕಳಿಸಿಕೊಡಬೇಕು?. ಸಮಸ್ಯೆ ಎದುರಾಯಿತು.

ಹುಡುಗನ ಜೊತೆಗಂತೂ ಕಳಿಸುವಂತಿರಲಿಲ್ಲ. ಇಬ್ಬರು ಹಿರಿಯ ಗೃಹಸ್ಥರನ್ನು ಕರೆಸಿ ಅವರ ಸುಫರ್ದಿನಲ್ಲಿ ಮದುವೆ ತನಕ ಹುಡುಗಿ ಇರತಕ್ಕದ್ದೆಂದು ಮುಚ್ಚಳಿಕೆ ಬರೆಸಿಕೊಂಡೆವು. ಹುಡುಗಿ ಯಾರ ಮನೆಯಲ್ಲಿ ಉಳಿದುಕೊಳ್ಳುತ್ತಾಳೆಂದು ಯಾರಿಗೂ ಗೊತ್ತಾಗಲಿಲ್ಲ.

ಇವೆಲ್ಲವೂ ನಡೆಯುವ ವೇಳೆಗೆ ಹುಡುಗಿ ಕಡೆಯವರು, ಮರ್ಡರ್ ಮಾಡ್ತೀವಿ ಎಂದೆಲ್ಲಾ ಕೂಗಾಡಿದ್ದರಿಂದ, ಅವರ ಬಳಿಯೂ ಮುಚ್ಚಳಿಕೆ ಬರೆಸಿಕೊಂಡೆವು.
“ನೀವು ಮರ್ಡರ್ ಮಾಡೋದಿರಲಿ. ಹುಡುಗ ಹುಡ್ಗಿ ತಾವೇ ಏನಾದ್ರೂ ಮಾಡಿಕೊಂಡ್ರೂ ನೀವೇ ಅದಕ್ಕೆ  ಜವಾಬ್ದಾರಿ. ಹುಷಾರ್ !” ಎಂದು ಹೆದರಿಸಿ ಕಳಿಸಿದೆವು.

ಇಷ್ಟಾಗುವ ವೇಳೆಗೆ ರಾತ್ರಿ ಎರಡು ಗಂಟೆಯಾಗಿತ್ತು. ಹುಡುಗನಿಗೂ ಬೇರೆ ಅಜ್ಞಾತ ಸ್ಥಳದಲ್ಲಿ ಇರುವಂತೆ ವ್ಯವಸ್ಥೆಯಾಯಿತು.

ಪೊಲೀಸ್ ಬಂದೋಬಸ್ತ್ ನಲ್ಲಿ ಸಬ್ ರಿಜಿಸ್ಟ್ರಾರ್ ಕಛೇರಿಯಲ್ಲಿ ಮದುವೆ ನಡೆಯಿತು. ಬಹುಶಃ ನಾನೂ ಸಾಕ್ಷಿ ಸಹಿ ಹಾಕಿದೆನೆಂಬ ನೆನಪು.

“ನೋಡ್ರೀ ಮುದ್ದೂ. ಎಲ್ಲರೂ ನಿಮಗಾಗಿ ರಿಸ್ಕ್ ತಗೊಂಡು ಮದುವೆ ಮಾಡಿಸಿದ್ದಾರೆ. ಲವ್ ಮ್ಯಾರೇಜ್ ಅಂದರೆ ಯಾರಿಗೂ ನಂಬಿಕೆ ಇಲ್ಲ.  ಹುಡುಗೀನ ನೀವು ಸರಿಯಾಗಿ ಬಾಳಿಸಬೇಕು. ಇಲ್ಲಾಂದ್ರೆ ಗ್ರಾಚಾರ ಬಿಡಿಸ್ತೀವಿ” ಅಂದೆ. ಇದು ಅವರ ಮದುವೆಗೆ ಕೊಟ್ಟ ರೋಫ್ ದಾರಿಕೆ ಉಡುಗೊರೆ !.

ಇದೆಲ್ಲವನ್ನೂ ಮುದ್ದು ಆಗಾಗ್ಗೆ ನೆನಪಿಸಿ ನಗುತ್ತಿದ್ದರು. ಮುದ್ದು – ಇಂದ್ರಾಣಿಯವರು  ಆದರ್ಶ ದಂಪತಿಗಳಾಗಿ ಬಾಳ್ವೆ ಮಾಡಿದರು ಅಷ್ಟೇ ಅಲ್ಲ. ಅನೇಕ ಸರಳ, ಅಂತರ್ಜಾತಿಯ ಒಲವಿನ ಮದುವೆಗಳನ್ನು ಮಾಡಿಸಿ ಅದೆಷ್ಟೋ ಯುವಜೋಡಿಗಳಿಗೆ ಆಸರೆಯಾಗಿದ್ದರು. ಆದರ್ಶವಾಗಿದ್ದರು.

ಅವರಿಗೆ ಇಂತಹ ವಿದ್ರಾವಕ ಕೊನೆ ಬರಬಾರದಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...