Homeಮುಖಪುಟಮುದ್ದು ಮೇಲೆ ಕೇಸು ದಾಖಲಿಸಲು ಹೋಗಿ, ಕೊನೆಗೆ ಮದುವೆಗೆ ಸಾಕ್ಷಿ ಆದೆ - ಅಮೆರಿಕಾದಿಂದ ಜಿ.ಬಿ.ರಂಗಸ್ವಾಮಿ

ಮುದ್ದು ಮೇಲೆ ಕೇಸು ದಾಖಲಿಸಲು ಹೋಗಿ, ಕೊನೆಗೆ ಮದುವೆಗೆ ಸಾಕ್ಷಿ ಆದೆ – ಅಮೆರಿಕಾದಿಂದ ಜಿ.ಬಿ.ರಂಗಸ್ವಾಮಿ

ಇದೆಲ್ಲವನ್ನೂ ಮುದ್ದು ಆಗಾಗ್ಗೆ ನೆನಪಿಸಿ ನಗುತ್ತಿದ್ದರು. ಮುದ್ದು - ಇಂದ್ರಾಣಿಯವರು  ಆದರ್ಶ ದಂಪತಿಗಳಾಗಿ ಬಾಳ್ವೆ ಮಾಡಿದರು ಅಷ್ಟೇ ಅಲ್ಲ. ಅನೇಕ ಸರಳ, ಅಂತರ್ಜಾತಿಯ ಒಲವಿನ ಮದುವೆಗಳನ್ನು ಮಾಡಿಸಿ ಅದೆಷ್ಟೋ ಯುವಜೋಡಿಗಳಿಗೆ ಆಸರೆಯಾಗಿದ್ದರು. ಆದರ್ಶವಾಗಿದ್ದರು. 

- Advertisement -
- Advertisement -

|ಜೆ.ಬಿ.ರಂಗಸ್ವಾಮಿ| ಸಿಯಾಟಲ್ US

ಮೈಸೂರಿನವರಾದ ಮುದ್ದು ಕೃಷ್ಣ ಮತ್ತು ಇಂದ್ರಾಣಿ ದಂಪತಿಗಳು ಅಪರಿಮಿತ ಜೀವನೋತ್ಸಾಹ ಹೊಂದಿದ್ದವರು. ಮೈಸೂರಿನ ರಂಗಾಯಣದ ಮೂಲಕ ರಂಗಚಟುವಟಿಕೆಗಳಿಗೆ ರಂಗದ ಹಿಂದಿದ್ದುಕೊಂಡೇ ಕೆಲಸ ಮಾಡಿದ, ಎಂದೂ ವೇದಿಕೆಯನ್ನು ಬಯಸದ ಮುದ್ದು ಕೃಷ್ಣರವರು ಸಿನಿಮಾ ರಂಗಭೂಮಿಯ ಕುರಿತು ಅಪಾರ ಒಲವಿಟ್ಟುಕೊಂಡವರು. ಸಿನಿಮಾ ವಿಶ್ಲೇಷಣೆ, ಫೋಟೊಗ್ರಫಿ, ಪ್ರವಾಸ, ವೈವಿಧ್ಯ ಊಟ ಪರಿಚಯ ಸೇರಿದಂತೆ ಹಲವು ಹವ್ಯಾಸಗಳ ಮೂಲಕ ಗಮನ ಸೆಳೆದಿದ್ದರು. ಸಾಮಾಜಿಕ ಆಗುಹೋಗುಗಳಿಗೆ ಸಕ್ರಿಯವಾಗಿ ಸ್ಪಂದಿಸುತ್ತಿದ್ದ ಈ ಜೋಡಿ ಉತ್ತರ ಪ್ರದೇಶದ ಪ್ರವಾಸದಲ್ಲಿದ್ದಾಗ ಅಪಘಾತದಿಂದ ಇಹಲೋಕ ತ್ಯಜಿಸಿದ್ದಾರೆ. ಈ ಕುರಿತು ಅವರ ಒಡನಾಡಿಗಳು ಕಂಬನಿ ಮಿಡಿದಿದ್ದು ಅವರ ಸ್ನೇಹಿತರಾದ ಜೆ.ಬಿ ರಂಗಸ್ವಾಮಿಯವರು ಅವರ ಮದುವೆಯ ತಲ್ಲಣದ ಘಟನೆಗಳನ್ನು ಹಂಚಿಕೊಳ್ಳುವ ಮೂಲಕ ಮುದ್ದು ಕೃಷ್ಣರವರನ್ನು ಸ್ಮರಿಸಿದ್ದಾರೆ.

ಮುದ್ದೂ ಮದುವೆ 

ಅಮೇರಿಕಾದ ಸಿಯಾಟಲ್ ನ ಛಳಿಯಲ್ಲಿ ಕಳೆದ ತಿಂಗಳು BREAKING BAD ಎಂಬ 2008 ರ ಟಿವಿ ಸೀರಿಯಲ್ ಅನ್ನು ಬಿಡದೆ ನೋಡುತ್ತಿದ್ದಾಗ ಹಲವು ಹತ್ತು ಬಾರಿ ಮುದ್ದು ( ಕೃಷ್ಣ ) ನೆನಪಾಗಿದ್ದರು. ಆ ಮೆಗಾ ಸೀರಿಯಲ್ ಎಂಬತ್ತನಾಲ್ಕು (ಗಂಟೆ) ಎಪಿಸೋಡಿನದು.

ಹತ್ತು ದಿನ ಕುಳಿತು ಬಿಡದೆ ನೋಡಿದೆ. ನಮ್ಮ ಮುದ್ದುವೂ ಹಾಗೆಯೇ. ಚಲನಚಿತ್ರೋತ್ಸವಗಳಿಗೆ ಬಂದರೆಂದರೆ ದಿನಕ್ಕೆ ಆರು ಸಿನಿಮಾಗಳನ್ನು ಆಸ್ವಾದಿಸುವ ಅಭಿಮಾನಿ. ವೀಕ್ಷಿಸುವ ಪ್ರತಿ ಚಿತ್ರದ  ಬಗ್ಗೆಯೂ  ಮೊದಲೇ ಅಧ್ಯಯನ ಮಾಡಿಕೊಂಡು ನಂತರ ನೋಡುವ ಪ್ರವೃತ್ತಿ ಅವರದು. ನಾನು  ಚಿತ್ರೋತ್ಸವಗಳಿಗೆ  ಹೋದರೆ ಅವರನ್ನು ಹುಡುಕಿಕೊಂಡು ಹೋಗುತ್ತಿದ್ದೆ. ಆಯಾ ದಿನ ನೋಡಬೇಕಾದ ಅತ್ಯುತ್ತಮ ಚಿತ್ರಗಳನ್ನು ಅವರಿಂದ ಗುರ್ತು ಹಾಕಿಸಿಕೊಳ್ಳುತ್ತಿದ್ದೆ. ಕೆಲವು ಮುಖ್ಯ ಚಿತ್ರಗಳನ್ನು ನೋಡುವಾಗ ಗಮನಿಸಬೇಕಿರುವ ಮಹತ್ವದ ಅಂಶಗಳ ಬಗ್ಗೆ ಬೆಳಕು ಚೆಲ್ಲುತ್ತಿದ್ದರು.

ಮೈಸೂರಿನಲ್ಲಿ ಸಿನಿಮಾ ಸಮಯ ಕೂಟದ ಮೂಲಕ ಅನೇಕ ಅಪರೂಪದ ಚಿತ್ರಗಳನ್ನು ಕಾಣಿಸಿದವರು ಅವರು. ಸಮುದಾಯದ ರಂಗ ಚಟುವಟಿಕೆ, ಪಕ್ಷಿವೀಕ್ಷಣೆ, ಅಂಚೆಸಂಗ್ರಹ ಹೀಗೆ ನಾನಾ ಚಟುವಟಿಕೆಗಳಲ್ಲಿದ್ದ ಅವರು ಪರಿಚಯವಾದದ್ದು ಓರ್ವ ಅಪರಾಧಿಯಾಗಿ !

ಅದು 1983.

ಹೌದು ಅವರ ಮೇಲೆ ಹುಡುಗಿಯೊಬ್ಬಳನ್ನು ಕಿಡ್ನ್ಯಾಪ್ ಮಾಡಿದ್ದಾರೆಂಬ ದೂರು ಬಂದಿತ್ತು. ಅವರು ಕೆಲಸದಲ್ಲಿದ್ದ  ಬ್ಯಾಂಕ್, ಮನೆ ಹೀಗೆ ಎಲ್ಲೆಡೆ ತಲಾಶ್ ಮಾಡುತ್ತಿದ್ದೆ.

ಅಷ್ಟರಲ್ಲಿ ಮಿತ್ರ ಆಂದೋಲನದ  ರಾಜಶೇಖರ ಕೋಟಿಯವರ ಫೋನ್ ಬಂತು. ಮುದ್ದುಕೃಷ್ಣನನ್ನು ಕಳಿಸಿಕೊಡುತ್ತೇನೆಂದು ಪ್ರಾಮಿಸ್ ಮಾಡಿದರು.

ಸಂಜೆ ವೇಳೆಗೆ ಲಿಂಗದೇವರು ಹಳೆಮನೆ ಮುಂತಾದ ನಾಲ್ಕಾರು ಗೆಳೆಯರೊಂದಿಗೆ ಆರೋಪಿ ಮುದ್ದುಕೃಷ್ಣ  ಹಾಜರಾದ . ನೋಡಿದರೆ ಪರಿಚಿತ ಆಸಾಮಿಯೇ!. ಗೋಕಾಕ್ ಚಳವಳಿಯಲ್ಲಿ ಪಾಲ್ಗೊಂಡಿದ್ದ ಮನುಷ್ಯ.

ಆಗ ಚಳುವಳಿಕೋರ. ಈಗ ಕಿಡ್ನ್ಯಾಪಿಂಗ್ ಅಪರಾಧಿ!.

ಜೊತೆಗೆ ಬಂದಿದ್ದವರನ್ನು ಹೊರ ಕಳಿಸಿ ವಿಚಾರಿಸಿದೆ.

“ನಾನು ಯಾರನ್ನೂ ಕಿಡ್ನ್ಯಾಪ್ ಮಾಡಿಲ್ಲ. ಆ ಹುಡುಗಿ ಎಲ್ಲಿದ್ದಾಳೋ ಗೊತ್ತಿಲ್ಲ. ನನ್ನ ಮೇಲೆ ಸುಳ್ಳು ಕಂಪ್ಲೇಂಟ್ ಕೊಟ್ಟಿದ್ದಾರೆ.” ಮುದ್ದುಕೃಷ್ಣನ ಮುದ್ದು ಮಾತು !

“ಈ ಕ್ಷಣ ಆ ಹುಡುಗಿನ ಒಪ್ಪಿಸಲಿಲ್ಲಾ ಅಂದ್ರೆ ಲಾಕಪ್ಪಲ್ಲಿ ಹಾಕಿ ತೀಡುತ್ತೀನಿ ಮಗನೇ.  ಕೆಲಸದಿಂದ ಡಿಸ್ಮಿಸ್ ಮಾಡ್ಸಿ ಜೀವಾವಧಿ ಜೈಲಲ್ಲಿ ಕೂರಿಸುತ್ತೇನೆ” ಅಂತ ಮಾಮೂಲಿ ಗುಟುರು ಹಾಕಿದೆ.

ಹೊರಗಿದ್ದ ಅವರ ಜೊತೆಗಾರರು ಒಳಬಂದರು. ಹಳೆಮನೆಯವರು, ಮುದ್ದುವಿನ ಪ್ರೇಮ ಪ್ರವರ ಬಿಚ್ಚಿಟ್ಟರು.

“ಹುಡುಗಿ ಸೇಫಾಗಿ ಸ್ನೇಹಿತರ ಮನೆಯಲ್ಲಿದ್ದಾಳೆ. ತಿಂಗಳ ಹಿಂದೆಯೇ ರಿಜಿಸ್ಟರ್ ಮ್ಯಾರೇಜ್ ಗೆ ಅರ್ಜಿ ನೀಡಿದ್ದಾರೆ. ಇನ್ನು ನಾಲ್ಕೈದು ದಿನಕ್ಕೆ ಮದುವೆ”. ಅಂತ ದಾಖಲಾತಿಗಳನ್ನು ತೋರಿಸಿದರು.

“ನಿಮ್ಮ ಪುರಾಣ ಎಲ್ಲಾ ಪಕ್ಕಕ್ಕಿಡ್ರೀ. ಇನ್ನು ಅರ್ಧ ಗಂಟೆಯೊಳಗೆ ಆ ಹುಡುಗಿ ಇಲ್ಲಿರಬೇಕು. ಇಲ್ಲಾಂದ್ರೆ ನಾನು ಕೇಸು ರಿಜಿಸ್ಟರ್ ಮಾಡೋದೇ. ಆಮೇಲೆ ಯಾರೇನು ತಿಪ್ಪರಲಾಗ ಹೊಡೆದರೂ ಏನೂ ಮಾಡೋದಿಕ್ಕೆ ಆಗೋದಿಲ್ಲ. ಕಿಡ್ನ್ಯಾಪ್ ಮಾಡಿಲ್ಲ ಅಂತ ಆ ಹುಡುಗೀನೇ  ಇಲ್ಲಿ ಬಂದು ಹೇಳಬೇಕು.” ನಿಷ್ಠುರವಾಗಿ ಹೇಳಿದೆ.

“ಹುಡುಗಿಗೆ  ಇಪ್ಪತ್ತೈದು ವರ್ಷ, ಮೇಜರ್ ಆಗಿದ್ದಾಳೆ. ಅವಳ ಬರ್ತ್ ಸರ್ಟಿಫಿಕೇಟ್ ಇದೆ. ಸಬ್ ರಿಜಿಸ್ಟ್ರಾರ್ ಆಫೀಸಿನಲ್ಲಿ ಅರ್ಜಿ ಕೊಟ್ಟಿದ್ದಾರೆ. ಯಾವುದೇ ವಿಷಯ ಮುಚ್ಚಿಟ್ಟಿಲ್ಲ. ಮದುವೆ ಬಗ್ಗೆ ತಕರಾರಿದ್ದರೆ ಅಲ್ಲಿ ಅರ್ಜಿ ಕೊಡಬೇಕಲ್ಲವೇ?. ಇದು ಸುಳ್ಳು ಕಂಪ್ಲೇಂಟ್ ಸಾರ್. . . .  ”

ಅವರ ವಾದವನ್ನು ತಡೆದು , “ನಿಮ್ಮ ಯಾವ ಮಾತೂ ಈಗ ಬೇಡಿ. ಹುಡುಗೀನೇ‌ ಬಂದು ಹೇಳಿಕೆ ಕೊಡಲಿ. ಆಮೇಲೆ ನೋಡೋಣ” ಎಂದೆ.

ಅಷ್ಟರಲ್ಲಿ ದೂರು ಕೊಟ್ಟಿದ್ದ ಹುಡುಗಿಯ  ಕಡೆಯವರು ನಜರ್ ಬಾದ್  ಸ್ಟೇಷನ್ ಮುಂದೆ ಜಮಾಯಿಸಿದ್ದರು. ಆಗಿನ ಶಾಸಕ ಅಜೀಜ್ ಸೇಠ್ ಮೊದಲ್ಗೊಂಡು ಅನೇಕರ ಫೋನ್ ಬಂದಿತ್ತು.

ಹುಡುಗಿ ಕಡೆಯ ಕೆಲವರು ಮುದ್ದುಕೃಷ್ಣನ ಮೇಲೆ ಉಗ್ರ ಕ್ರಮ ಜರುಗಿಸಬೇಕೆಂದು ವರಾತ ಶುರು ಮಾಡಿದ್ದರು.

ರಾತ್ರಿ ಎಂಟು ಗಂಟೆಯ ವೇಳೆಗೆ ಹುಡುಗಿಯನ್ನು ಕರೆತಂದರು. ಅವಳ ಕಡೆಯವರೆಲ್ಲಾ ಠಾಣೆಯ ತುಂಬಾ ತುಂಬಿಕೊಂಡರು.

ಓಪನ್ ಎನ್ ಕ್ವಯರಿ ಮಾಡಲಾದೀತೇ?. ಎಲ್ಲರನ್ನೂ ಹೊರಕಳಿಸಿ ಕಂಪ್ಲೇಂಟ್ ಕೊಟ್ಟವರ ಕಡೆಯ ನಾಲ್ಕಾರು ಜನ ಹಿರಿಯರು ಮತ್ತು ಹುಡುಗನ ಪರ ಒಂದಿಬ್ಬರನ್ನು ಇರಿಸಿಕೊಂಡೆ. ವಿಚಾರಣೆ ಶುರುವಾಯಿತು.

ತಮ್ಮಿಬ್ಬರ ಸ್ನೇಹ ಪ್ರೇಮ ತಿಳಿಸಿದ ಹುಡುಗಿ ತಾನಾಗಿ ಸ್ವತಃ ಮನೆಯಿಂದ ಹೋಗಿದ್ದೇನೆ. ಯಾರೂ ಬಲವಂತವಾಗಿ ಕರೆದೊಯ್ದಿಲ್ಲ. ತಾನೇ  ತನ್ನ ಆಪ್ತರ ಮನೆಯಲ್ಲಿ ಉಳಿದುಕೊಂಡಿದ್ದೇನೆ.‌ ಮದುವೆಯಾಗುವ ತನಕ ಅಲ್ಲಿಯೇ ಇರುತ್ತೇನೆಂದು ಹೇಳಿಕೆ ಕೊಟ್ಟಳು.

“ಅವಳಿಗೆ ಏನೂ ಗೊತ್ತಾಗೋದಿಲ್ಲ. ಅವನು ಹುಟ್ಟು ಪೋಲಿ. ಮಂಕುಬೂದಿ ಎರಚಿ ಕರೆದುಕೊಂಡು ಹೋಗಿದ್ದಾನೆ. ಅವಳು ಮೈನರ್ ಬೇರೆ. ನಮ್ಮ ವಶದಿಂದ ಕಿಡ್ನ್ಯಾಪ್ ಆಗಿದ್ದಾಳೆ. ನಮ್ಮ ಜೊತೆಗೆ ಕಳಿಸಿಕೊಡಿ”. ಹುಡುಗಿ ಕಡೆಯವರು ಪಟ್ಟು ಹಿಡಿದರು. ಏನು ಸಮಾಧಾನ ಹೇಳಿದರೂ ಕೇಳುವ ಸ್ಥಿತಿಯಲ್ಲಿ ಅವರಿರಲಿಲ್ಲ.

“ಹುಡುಗ ಒಳ್ಳೆಯ ಕೆಲಸದಲ್ಲಿದ್ದಾನೆ. ಕಪ್ಪಗಿದ್ರೂ ಲಕ್ಷಣವಾಗಿದ್ದಾನೆ. ಚೆನ್ನಾಗಿ ನೋಡಿಕೊಳ್ತಾನೆ ಬಿಡ್ರೀ. ಅವರಿಬ್ಬರೂ ಪ್ರೀತಿಸಿ  ಮದುವೆಯಾಗ್ತಿದ್ದಾರೆ. ನೀವೇ ಮುಂದೆ ನಿಂತು ಆಶೀರ್ವಾದ ಮಾಡಿ ಒಳ್ಳೆಯದಾಗುತ್ತೆ.” ಇತ್ಯಾದಿ ಹೇಳಿದೆ.

ಕಿಡ್ನ್ಯಾಪ್ ಮಾಡಿದೋನನ್ನು ಒದ್ದು ಲಾಕಪ್ಪಿನಲ್ಲಿ ಹಾಕ್ತೀನಿ ಅಂತ ಭರವಸೆ ಕೊಟ್ಟಿದ್ದ ಸಬ್ ಇನ್ಸ್ ಪೆಕ್ಟರ್ ‌ಈಗ ಪ್ಲೇಟ್ ತಿರುಗಿಸಿ , ಅಪರಾಧಿಗೇ ಸಪೋರ್ಟ್ ಮಾಡ್ತಿದ್ದಾನೆ !. ಹುಡುಗಿ ಕಡೆಯವರು ಕನಲಿ ಹೋದರು.

“ಯಾವ ಸೀಮೆ  ಪ್ರೀತಿ ಮಾಡಿದ್ದಾರೆ ಸಾರ್. ಮೂರು ದಿನವೂ ಬಾಳ್ಮೆ ಮಾಡದೆ ಮೂರಾಬಟ್ಟೆಯಾಗಿರೋರನ್ನು ದಿನವೂ ನೋಡ್ತಿದ್ದೇವೆ. ಇವರು ಬರಕತ್ತಾಗೋದಿಲ್ಲ. ಇಬ್ಬರನ್ನೂ ಬೇರೆ ಮಾಡಿಸಿಕೊಡಿ.”

“ನೋಡ್ರೀ, ಇಬ್ಬರೂ ಪ್ರೀತಿಸಿದ್ದು, ಹುಡುಗ ಮದುವೆಯಾಗೋದಿಲ್ಲ ಅಂತ ಠಲಾಯಿಸುತ್ತಿದ್ದಾನೆ ಅಂದರೆ ಆಗ ಬೇರೆಯಾಗಿ ಅಂತ ಬುದ್ದಿ  ಹೇಳಬಹುದು. ಆದರೆ ಇಲ್ಲಿ ಕಾನೂನು ಪ್ರಕಾರ ಮದುವೆಯಾಗೋದಿಕ್ಕೆ ಅರ್ಜಿ ಕೊಟ್ಟಿದ್ದಾರೆ. ಈಗ ಏನೂ ಮಾಡೋದಿಕ್ಕೆ ಬರೋದಿಲ್ಲ. ”

ಕಂಪ್ಲೇಂಟ್ ಕೊಟ್ಟರೆ ನೀವೇ ಅವರಿಗೆ ಸಪೋರ್ಟ್ ಮಾಡ್ತಿದ್ದೀರಲ್ಲಾ ಸಾರ್ ? ಅವಳನ್ನ ನಮ್ಜೊತೆ ಯಾಕೆ ಕಳಿಸಿಕೊಡೋದಿಲ್ಲ ?” ಅಂತ ಕಾರ್ಪೊರೇಟರ್ ಸಮೇತ ಮುಗಿಬಿದ್ದರು.

“ಇಪ್ಪತ್ತೈದು ಆಗೋತನಕ ಮದುವೆ ಮಾಡಿಲ್ಲ ಅಂದರೆ ನಿಮಗೆ ಮದುವೆ ಮಾಡೋದಿಕ್ಕೆ ಯೋಗ್ತಿ ಇಲ್ಲ ಅಂತ. (ಆಗೆಲ್ಲ 20-22 ವರ್ಷದೊಳಗೆ ಹುಡುಗಿಯರ ಮದುವೆ ಮಾಡುತ್ತಿದ್ದರು. ) ಟೈಮ್ ಬಾರಾಗಿದೆ (bar). ಹುಡುಗಿ ವಿದ್ಯಾವಂತೆ ತನಗೆ ಬೇಕಾದ ಹುಡುಗನನ್ನು ಆಯ್ಕೆ ಮಾಡಿಕೊಂಡಿದ್ದಾಳೆ. ತಾನಾಗಿ ಸ್ವಯಿಚ್ಚೆಯಿಂದ ಮನೆಯಿಂದ ಹೋಗಿದ್ದಾಳೆ. ನಾವೇನೂ ಮಾಡೋದಿಕ್ಕೆ ಆಗೋದಿಲ್ಲ. ಕಾನೂನೇ ಅವರ ಪರ ಇದೆ.

“ಇಲ್ಲೀ ತನಕ ನೀವೂ ಹಠ ಮಾಡಿದಿರಿ, ಸರಿ. ಈಗ ಕೈ ಮೀರಿಹೋಗಿದೆ. ನಿಮ್ಮ ಹುಡುಗಿ ಸರಿಯಾಗಿ ಬಾಳಲಿ ಅಂತಿದ್ರೆ ಆಶೀರ್ವಾದ ಮಾಡಿ. ಇಲ್ಲಾಂದ್ರೆ ಸುಮ್ಮನೆ ಇದ್ದುಬಿಡಿ. ನೀವೀಗ ಕೋರ್ಟಿಗೆ ಹೋದ್ರೂ ಉಪಯೋಗ ಆಗೊಲ್ಲ. ” ಅಂತ ತೀರ್ಮಾನ ಹೇಳಿದೆ.

ಅಲ್ಲಿಗೆ ಎಲ್ಲರೂ ಮೌನವಾದರು.

ಇನ್ನು ಹುಡುಗಿಯನ್ನೀಗ ಯಾರ ಸುಫರ್ದಿನಲ್ಲಿ ಕಳಿಸಿಕೊಡಬೇಕು?. ಸಮಸ್ಯೆ ಎದುರಾಯಿತು.

ಹುಡುಗನ ಜೊತೆಗಂತೂ ಕಳಿಸುವಂತಿರಲಿಲ್ಲ. ಇಬ್ಬರು ಹಿರಿಯ ಗೃಹಸ್ಥರನ್ನು ಕರೆಸಿ ಅವರ ಸುಫರ್ದಿನಲ್ಲಿ ಮದುವೆ ತನಕ ಹುಡುಗಿ ಇರತಕ್ಕದ್ದೆಂದು ಮುಚ್ಚಳಿಕೆ ಬರೆಸಿಕೊಂಡೆವು. ಹುಡುಗಿ ಯಾರ ಮನೆಯಲ್ಲಿ ಉಳಿದುಕೊಳ್ಳುತ್ತಾಳೆಂದು ಯಾರಿಗೂ ಗೊತ್ತಾಗಲಿಲ್ಲ.

ಇವೆಲ್ಲವೂ ನಡೆಯುವ ವೇಳೆಗೆ ಹುಡುಗಿ ಕಡೆಯವರು, ಮರ್ಡರ್ ಮಾಡ್ತೀವಿ ಎಂದೆಲ್ಲಾ ಕೂಗಾಡಿದ್ದರಿಂದ, ಅವರ ಬಳಿಯೂ ಮುಚ್ಚಳಿಕೆ ಬರೆಸಿಕೊಂಡೆವು.
“ನೀವು ಮರ್ಡರ್ ಮಾಡೋದಿರಲಿ. ಹುಡುಗ ಹುಡ್ಗಿ ತಾವೇ ಏನಾದ್ರೂ ಮಾಡಿಕೊಂಡ್ರೂ ನೀವೇ ಅದಕ್ಕೆ  ಜವಾಬ್ದಾರಿ. ಹುಷಾರ್ !” ಎಂದು ಹೆದರಿಸಿ ಕಳಿಸಿದೆವು.

ಇಷ್ಟಾಗುವ ವೇಳೆಗೆ ರಾತ್ರಿ ಎರಡು ಗಂಟೆಯಾಗಿತ್ತು. ಹುಡುಗನಿಗೂ ಬೇರೆ ಅಜ್ಞಾತ ಸ್ಥಳದಲ್ಲಿ ಇರುವಂತೆ ವ್ಯವಸ್ಥೆಯಾಯಿತು.

ಪೊಲೀಸ್ ಬಂದೋಬಸ್ತ್ ನಲ್ಲಿ ಸಬ್ ರಿಜಿಸ್ಟ್ರಾರ್ ಕಛೇರಿಯಲ್ಲಿ ಮದುವೆ ನಡೆಯಿತು. ಬಹುಶಃ ನಾನೂ ಸಾಕ್ಷಿ ಸಹಿ ಹಾಕಿದೆನೆಂಬ ನೆನಪು.

“ನೋಡ್ರೀ ಮುದ್ದೂ. ಎಲ್ಲರೂ ನಿಮಗಾಗಿ ರಿಸ್ಕ್ ತಗೊಂಡು ಮದುವೆ ಮಾಡಿಸಿದ್ದಾರೆ. ಲವ್ ಮ್ಯಾರೇಜ್ ಅಂದರೆ ಯಾರಿಗೂ ನಂಬಿಕೆ ಇಲ್ಲ.  ಹುಡುಗೀನ ನೀವು ಸರಿಯಾಗಿ ಬಾಳಿಸಬೇಕು. ಇಲ್ಲಾಂದ್ರೆ ಗ್ರಾಚಾರ ಬಿಡಿಸ್ತೀವಿ” ಅಂದೆ. ಇದು ಅವರ ಮದುವೆಗೆ ಕೊಟ್ಟ ರೋಫ್ ದಾರಿಕೆ ಉಡುಗೊರೆ !.

ಇದೆಲ್ಲವನ್ನೂ ಮುದ್ದು ಆಗಾಗ್ಗೆ ನೆನಪಿಸಿ ನಗುತ್ತಿದ್ದರು. ಮುದ್ದು – ಇಂದ್ರಾಣಿಯವರು  ಆದರ್ಶ ದಂಪತಿಗಳಾಗಿ ಬಾಳ್ವೆ ಮಾಡಿದರು ಅಷ್ಟೇ ಅಲ್ಲ. ಅನೇಕ ಸರಳ, ಅಂತರ್ಜಾತಿಯ ಒಲವಿನ ಮದುವೆಗಳನ್ನು ಮಾಡಿಸಿ ಅದೆಷ್ಟೋ ಯುವಜೋಡಿಗಳಿಗೆ ಆಸರೆಯಾಗಿದ್ದರು. ಆದರ್ಶವಾಗಿದ್ದರು.

ಅವರಿಗೆ ಇಂತಹ ವಿದ್ರಾವಕ ಕೊನೆ ಬರಬಾರದಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...