Homeಕರ್ನಾಟಕನೋಡಿ ಸ್ವಾಮಿ ನಮ್ಮ ಸ್ಥಿತಿನಾ..! ನಮಗೆ ಬಂದಿರುವ ಕಷ್ಟ ಮತ್ಯಾರಿಗೂ ಬರಬೇಡಪ್ಪ

ನೋಡಿ ಸ್ವಾಮಿ ನಮ್ಮ ಸ್ಥಿತಿನಾ..! ನಮಗೆ ಬಂದಿರುವ ಕಷ್ಟ ಮತ್ಯಾರಿಗೂ ಬರಬೇಡಪ್ಪ

- Advertisement -
- Advertisement -

ಸಿಲಿಕಾನ್ ಸಿಟಿ ಬೆಂಗಳೂರು ಎಂದರೆ ಮಾಹಿತಿ, ತಂತ್ರಜ್ಞಾನದಲ್ಲಿ ಅಭಿವೃದ್ಧಿ ಹೊಂದಿದ ನಗರ. ಭಾರತದ ಅತ್ಯುತ್ತಮ ಜೀವನಯೋಗ್ಯ ನಗರಗಳಲ್ಲೊಂದು. ಹೆಚ್ಚು ಉದ್ಯೋಗ ಸೃಷ್ಟಿಸುತ್ತಿರುವ ನಗರವೂ ಹೌದು.  ಅದ್ರೆ ಇಲ್ಲಿರುವ ನಮ್ಮ ಸ್ಥಿತಿ ನೋಡಿದರೆ ಜನರು ಮುಂದಕ್ಕೆ ಹೆಜ್ಜೆ ಹಾಕಲು ಭಯಪಡುವಂತಾಗಿದೆ. ಅವರನ್ನು ನಾನೇ ಅಪೋಶನ ತೆಗೆದುಕೊಳ್ಳುವಂತಾಗಿರುವುದು ದುರಂತ.

ಅಂದ ಹಾಗೆ ನಮ್ಮ ಹೆಸರು ಪುಟ್ಪಾತ್, ಕನ್ನಡದಲ್ಲಿ ಪಾದಚಾರಿ ಮಾರ್ಗ ಎಂದು ಕರೆಯುತ್ತಾರೆ. ಪ್ರತಿ ಮುಖ್ಯ ರಸ್ತೆಯ ಪಕ್ಕದಲ್ಲಿ ನಾವಿರುತ್ತೇವೆ. ವಾಹನಗಳಿಂದ ಸುರಕ್ಷಿತವಾಗಿ ಜನ ನಮ್ಮನ್ನು ಬಳಸವಹುದಾಗಿದೆ. ಆದರೆ ನಮ್ಮ ಪರಿಸ್ಥಿತಿಯೋ ತೀರಾ ಹದಗೆಟ್ಟಿದೆ.

ಇತ್ತೀಚಿಗೆ ಅಷ್ಟೇ ಕಾಮಗಾರಿ ನಡೆಸಿದ್ದಾರೆ ಆಗಲೇ ಸಿಮೆಂಟ್ ಬ್ಲಾಕ್‍ಗಳು ಕಿತ್ತು ಹೋಗಿವೆ. ಹಾಸಿರುವ ಬಂಡೆಗಳು  ಮುರಿದು ಬಿದ್ದಿದೆ. ನಮ್ಮ ಮೇಲೆ ಬಿದ್ದಿರುವ ಮರದ ರೆಂಬೆ ಕೊಂಬೆಗಳನ್ನು ತೆರೆವುಗೊಳಿಸಿಲ್ಲ. ಕೆಲವೊಂದು ವಾರ್ಡ್‍ಗಳಲ್ಲಿ ನಾವೇ ಕಸದ ಬುಟ್ಟಿಗಳಾಗಿದ್ದೇವೆ. ಹೇಗಿದೆ ನೋಡಿ ಸ್ವಾಮಿ ನಮ್ಮ ಪರಿಸ್ಥಿತಿ. ನಮ್ಮ ಮೇಲೆ ಖುಷಿಯಿಂದ ಹೆಜ್ಜೆ ಹಾಕಬೇಕಾದವರು ಕಸದ ವಾಸನೆ ತಾಳಲಾರದೆ ಮೂಗು ಮುಚ್ಚಿಕೊಂಡು ಹೋಗುವ ದುಸ್ಥಿತಿ ಬಂದಿದೆ. ಇದಕ್ಕೆಲ್ಲಾ ಮುಕ್ತಿ ಯಾವಾಗಪ್ಪಾ…..

 

ನಮ್ಮನ್ನ ಸರಿಯಾಗಿ ನೋಡಕೊಳ್ಳಬೇಕು, ಜನರು ಸುಖಕರವಾಗಿ ನಮ್ಮನ್ನು ಬಳಸಬೇಕು ಎಂದು ನಮ್ಮನ್ನು ಬಿಬಿಎಂಪಿಗೆ ಒಪ್ಪಿಸಿದ್ದಾರೆ. ಆದರೆ, ನಮ್ಮ ಪರಿಸ್ಥಿತಿಯನ್ನು ಕಂಡರೆ ಅವರು ಏನು ಕಾರ್ಯನಿರ್ವಹಿಸುತ್ತಿದ್ದರೋ ಎಂಬ ಅನುಮಾನ ಕಾಡ್ತಿದೆ.

ವಾಹನಗಳ ಪಾರ್ಕಿಂಗ್ ಸ್ಥಳ: ಪಾದಚಾರಿಗಳಿಗೆ ಮಾರ್ಗವಾಗಬೇಕಾದ ನಾವು ವಾರ್ಡ್‍ಗಳ ಒಳಗಡೆ ಹೇಗೆ ಬೇಕೋ ಹಾಗೇ ವಾಹನಗಳನ್ನು ನಿಲ್ಲಿಸಲು ಪಾರ್ಕಿಂಗ್ ಸ್ಥಳವಾಗಿದ್ದೇವೆ. ಹಾಗಾಗಿ ಇವರ ಹಾವಳಿ ಹೆಚ್ಚಾದಾಗ ಜನರು ನಮ್ಮನ್ನು ಹೇಗೆ ಬಳಸಲು ಸಾಧ್ಯ ಹೇಳಿ.

ಉದ್ಯಮ ನಗರಿಗೆ ವಾಹನ ದಟ್ಟಣೆ ಸಾಮಾನ್ಯ ಪದ. ಅದು ಗೊತ್ತಿದ್ದು ಸಹ ಈ ದ್ವಿಚಕ್ರ ವಾಹನ ಸವಾರರು ವಾಹನ ದಟ್ಟಣೆ ಉಂಟಾದಾಗ ನಮ್ಮ ಮೇಲೆಯೇ ಸವಾರಿ ನಡೆಸ್ತಾರೆ. ಒಮ್ಮೊಮ್ಮೆ ಸವಾರಿಯಲ್ಲಿ ಅಪಘಾತಗಳು ಸಂಭವಿಸಿ ಜೀವ ಹಾನಿಯಾಗಿರುವ ಉದಾಹರಣೆಗಳು ಇವೆ. ಹಾಗಾಗಿ ಇದನ್ನು ತಪ್ಪಿಸಬೇಕು ಎಂದು ಅಲ್ಲಿಲ್ಲ ಬಿಬಿಎಂಪಿ ಸಿಸಿಟಿವಿ ಕ್ಯಾಮೆರಾಗಳನ್ನು ಹಾಕಿದ್ದಾರೆ. ಆದರೂ ಸಹ ನಮ್ಮ ಮೇಲೆ ವಾಹನಗಳನ್ನು ಓಡಿಸುತ್ತಾರೆ ಏನು ಮಾಡೋಣ.

ನಮ್ಮ ಸ್ಥಿತಿ ಹೇಗಿದೆ ಅಂದರೆ ಯಾರಾದರೂ ನಮ್ಮ ಮಾರ್ಗದಲ್ಲಿ ಸಾಗುತ್ತಾ ಮೊಬೈಲ್ ಏನಾದರೂ ನೋಡಿಕೊಂಡು ಹೋದರಂತೂ
ಮುಖ ಮೂತಿ ಕಿತ್ತುಹೋಗುವುದಂತೂ ಗ್ಯಾರಂಟಿ.

ಇನ್ನು ಯಾರಾದರೂ ಕಟ್ಟಡ ನಿರ್ಮಾಣ ಕಾರ್ಯವನ್ನು ಕೈಗೊಂಡರಂತೂ ನಾವೇ ಕಾಮಾಗಾರಿಗೆ ಬೇಕಾದ ಕಲ್ಲು, ಮರಳು, ಜಲ್ಲಿ ಸಂಗ್ರಹಿಸುವ ಗೋದಾಮುಗಳು. ಅವರಿಗೆ ಹೇಳುವವರಿಲ್ಲ ಕೇಳುವವರಿಲ್ಲ. ಜನರು ಅಷ್ಟೇ ಯಾರೂ ಪ್ರಶ್ನಿಸದೆ ನಮಗ್ಯಾಕಪ್ಪ ನಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಂಡು ಹೋಗೋಣ ಎಂದು ಮುಂದುವರೆಯುತ್ತಾರೆ.

ಬಯಲು ಶೌಚಾಲಯ: ಪಾವತಿಸಿ ನಮ್ಮನ್ನು ಬಳಸಿ ಎಂದು ದೊಡ್ಡ ದೊಡ್ಡ ಬೋರ್ಡ್‍ಗಳನ್ನು ಹಾಕಿಕೊಂಡು ಸಾರ್ವಜನಿಕ ಶೌಚಾಲಯಗಳು ಕಾರ್ಯನಿರ್ವಹಿಸುತ್ತಿರುತ್ತವೆ. ಆದರೆ, ಅದನ್ನು ಬಳಸದೇ ಎಲ್ಲಾದರೂ ಗೋಡೆ ಸಿಕ್ಕರೆ ಸಾಕು, ನನ್ನ ಮೇಲೆ ನಿಂತು ಮಜ್ಜನ ಮಾಡಿಸುವ ಪುಣ್ಯಾತ್ಮರು ಇದ್ದಾರೆ. ಆ ವಾಸನೆ ಕುಡಿದು ಅಲ್ಲಿ ಯಾರಾದರೂ ಓಡಾಡಲು ಸಾಧ್ಯವೇ ನೀವೇ ಹೇಳಿ.

ಬೀದಿ ಬದಿ ವ್ಯಾಪಾರಿಗಳು: ಹೊಟ್ಟೆ ಪಾಡಿಗಾಗಿ ಅನೇಕ ವರ್ಷಗಳಿಂದ ನನ್ನ ಮೇಲೆಯೇ ತಮ್ಮ ಕಾರ್ಯವನ್ನು ಮಾಡುತ್ತಿದ್ದಾರೆ. ಹೋಗಲಿ ಹೇಗೋ ಮಾಡಿಕೊಂಡು ಹೋಗಲಿ ಎಂದರೆ ಕೆಲವು ಜನರ ಓಡಾಡಕ್ಕೂ ತೊಂದರೆ ಮಾಡುತ್ತಿದ್ದಾರೆ. ಬಿಬಿಎಂಪಿ ಅನೇಕ ವರ್ಷಗಳಿಂದ ಬೀದಿ ವ್ಯಾಪಾರಿಗಳಿಗೆ ಮತ್ತೊಂದು ವ್ಯವಸ್ಥೆ ಮಾಡಿಕೊಟ್ಟಿದ್ದರು ಈ ಜನರಿಗೆ ಅಲ್ಲಿಗೆ ಹೋಗುವ ಮನಸ್ಸಿಲ್ಲ. ಅವರು ನನ್ನ ಮೇಲೆನೆ ವ್ಯಾಪಾರ ಮಾಡಬ್ಬೇಕು ಎಂದು ಕೂರ್ತಾರೆ. ನಂತರ ಕಸವನ್ನೆಲ್ಲಾ ಅಲ್ಲೇ ಹಾಕಿ ಹೋಗುತ್ತಾರೆ. ಅದನ್ನು ಒಮ್ಮೊಮ್ಮೆ ಬಿಬಿಎಂಪಿ ಅವರು ಕಸ ಎತ್ತುತ್ತಾರೆ ಇನ್ನೊಂದು ಸಲ ಎತ್ತುವುದಿಲ್ಲ. ಹಾಗಾಗಿ ನಮ್ಮ ಮೇಲೆ ಜನರು ಹೇಗೆ ಎಲ್ಲಾ ಕಡೆ ಸುಲಲಿತವಾಗಿ ಓಡಾಡಲು ಸಾಧ್ಯ ಹೇಳಿ.

ಒಟ್ಟಾರೆಯಾಗಿ ಬಿಬಿಎಂಪಿ ಅಧಿಕಾರಿಗಳು ಇತ್ತ ಕಡೆ ಸ್ವಲ್ಪ ಗಮನಹರಿಸಿದರೆ, ನೀವು ಪಾದಾಚಾರಿಗಳು ಎಚ್ಚೆತ್ತುಕೊಂಡು ಕಸ ಬಿಸಾಡದೇ, ಗಲೀಜು ಮಾಡದೆ ನಮ್ಮನ್ನು ಶುಚಿಯಾಗಿಟ್ಟುಕೊಂಡರೆ ಮುಂದೆ ಆಗುವ ಅನಾಹುತಗಳನ್ನು ತಪ್ಪಿಸಬಹುದು ಎಂಬುದು ನಮ್ಮ ಪಾದಚಾರಿ ಮಾರ್ಗದ ಆಶಯ.

ಬನ್ನಿ ನಮ್ಮ ಕುರಿತು ಜನಸಾಮಾನ್ಯರು ಏನು ಹೇಳಿದ್ದಾರೆ ಎಂದು ನೋಡೋಣ.

ಪಾದಚಾರಿ ಮಾರ್ಗವನ್ನು ಗಾಡಿಗಳು ಮತ್ತು ಬೀದಿ ವ್ಯಾಪಾರಿಗಳು ಆವರಿಸಿಕೊಂಡು ಜನರಿಗೆ ಓಡಾಡಲು ರಸ್ತೆ ಇಲ್ಲದಾಗಿದೆ. ಜೊತೆಗೆ ವ್ಯಾಪಾರಿಗಳು ಸುರಿಯುವ ಕಸವು ಕೊಳೆತು ಆರೋಗ್ಯ ಕೆಡುವಂತಾಗಿದೆ.
– ಸೌಮ್ಯ, ಬನಶಂಕರಿ ನಿವಾಸಿ.
=========
ವಾರ್ಡ್ ಒಳಗಿರುವ ಪಾದಚಾರಿ ಮಾರ್ಗಗಳು ಕಸದಿಂದಲೇ ರಾರಾಜಿಸಿತ್ತಿರುವೆ. ಜೊತೆಗೆ ಪಾದಚಾರಿ ಮಾರ್ಗದಲ್ಲಿರುವ ಮ್ಯಾನ್‍ಹೋಲ್‍ಗಳಿಂದ ನೀರು ಸುರಿದು ಸುರಿದು ಮೂಗು ಮುಚ್ಚಿಕೊಂಡು ಹೋಗುವ ಪರಿಸ್ಥಿತಿ ಇದೆ.
– ಮಂಜುನಾಥ್, ಶ್ರೀರಾಮಪುರ ನಿವಾಸಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಎಲೆಮರೆ-೨ ಅಂತ ಹಾಕಿದ್ದೀರಿ.

    ಎಲೆಮರೆ-೧ಹುಡುಕಿದೆ. ಇಲ್ಲ ಅಂದಿರಿ.ಏನಿದರ ಅರ್ಥ?

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...