Homeಕರ್ನಾಟಕನೋಡಿ ಸ್ವಾಮಿ ನಮ್ಮ ಸ್ಥಿತಿನಾ..! ನಮಗೆ ಬಂದಿರುವ ಕಷ್ಟ ಮತ್ಯಾರಿಗೂ ಬರಬೇಡಪ್ಪ

ನೋಡಿ ಸ್ವಾಮಿ ನಮ್ಮ ಸ್ಥಿತಿನಾ..! ನಮಗೆ ಬಂದಿರುವ ಕಷ್ಟ ಮತ್ಯಾರಿಗೂ ಬರಬೇಡಪ್ಪ

- Advertisement -
- Advertisement -

ಸಿಲಿಕಾನ್ ಸಿಟಿ ಬೆಂಗಳೂರು ಎಂದರೆ ಮಾಹಿತಿ, ತಂತ್ರಜ್ಞಾನದಲ್ಲಿ ಅಭಿವೃದ್ಧಿ ಹೊಂದಿದ ನಗರ. ಭಾರತದ ಅತ್ಯುತ್ತಮ ಜೀವನಯೋಗ್ಯ ನಗರಗಳಲ್ಲೊಂದು. ಹೆಚ್ಚು ಉದ್ಯೋಗ ಸೃಷ್ಟಿಸುತ್ತಿರುವ ನಗರವೂ ಹೌದು.  ಅದ್ರೆ ಇಲ್ಲಿರುವ ನಮ್ಮ ಸ್ಥಿತಿ ನೋಡಿದರೆ ಜನರು ಮುಂದಕ್ಕೆ ಹೆಜ್ಜೆ ಹಾಕಲು ಭಯಪಡುವಂತಾಗಿದೆ. ಅವರನ್ನು ನಾನೇ ಅಪೋಶನ ತೆಗೆದುಕೊಳ್ಳುವಂತಾಗಿರುವುದು ದುರಂತ.

ಅಂದ ಹಾಗೆ ನಮ್ಮ ಹೆಸರು ಪುಟ್ಪಾತ್, ಕನ್ನಡದಲ್ಲಿ ಪಾದಚಾರಿ ಮಾರ್ಗ ಎಂದು ಕರೆಯುತ್ತಾರೆ. ಪ್ರತಿ ಮುಖ್ಯ ರಸ್ತೆಯ ಪಕ್ಕದಲ್ಲಿ ನಾವಿರುತ್ತೇವೆ. ವಾಹನಗಳಿಂದ ಸುರಕ್ಷಿತವಾಗಿ ಜನ ನಮ್ಮನ್ನು ಬಳಸವಹುದಾಗಿದೆ. ಆದರೆ ನಮ್ಮ ಪರಿಸ್ಥಿತಿಯೋ ತೀರಾ ಹದಗೆಟ್ಟಿದೆ.

ಇತ್ತೀಚಿಗೆ ಅಷ್ಟೇ ಕಾಮಗಾರಿ ನಡೆಸಿದ್ದಾರೆ ಆಗಲೇ ಸಿಮೆಂಟ್ ಬ್ಲಾಕ್‍ಗಳು ಕಿತ್ತು ಹೋಗಿವೆ. ಹಾಸಿರುವ ಬಂಡೆಗಳು  ಮುರಿದು ಬಿದ್ದಿದೆ. ನಮ್ಮ ಮೇಲೆ ಬಿದ್ದಿರುವ ಮರದ ರೆಂಬೆ ಕೊಂಬೆಗಳನ್ನು ತೆರೆವುಗೊಳಿಸಿಲ್ಲ. ಕೆಲವೊಂದು ವಾರ್ಡ್‍ಗಳಲ್ಲಿ ನಾವೇ ಕಸದ ಬುಟ್ಟಿಗಳಾಗಿದ್ದೇವೆ. ಹೇಗಿದೆ ನೋಡಿ ಸ್ವಾಮಿ ನಮ್ಮ ಪರಿಸ್ಥಿತಿ. ನಮ್ಮ ಮೇಲೆ ಖುಷಿಯಿಂದ ಹೆಜ್ಜೆ ಹಾಕಬೇಕಾದವರು ಕಸದ ವಾಸನೆ ತಾಳಲಾರದೆ ಮೂಗು ಮುಚ್ಚಿಕೊಂಡು ಹೋಗುವ ದುಸ್ಥಿತಿ ಬಂದಿದೆ. ಇದಕ್ಕೆಲ್ಲಾ ಮುಕ್ತಿ ಯಾವಾಗಪ್ಪಾ…..

 

ನಮ್ಮನ್ನ ಸರಿಯಾಗಿ ನೋಡಕೊಳ್ಳಬೇಕು, ಜನರು ಸುಖಕರವಾಗಿ ನಮ್ಮನ್ನು ಬಳಸಬೇಕು ಎಂದು ನಮ್ಮನ್ನು ಬಿಬಿಎಂಪಿಗೆ ಒಪ್ಪಿಸಿದ್ದಾರೆ. ಆದರೆ, ನಮ್ಮ ಪರಿಸ್ಥಿತಿಯನ್ನು ಕಂಡರೆ ಅವರು ಏನು ಕಾರ್ಯನಿರ್ವಹಿಸುತ್ತಿದ್ದರೋ ಎಂಬ ಅನುಮಾನ ಕಾಡ್ತಿದೆ.

ವಾಹನಗಳ ಪಾರ್ಕಿಂಗ್ ಸ್ಥಳ: ಪಾದಚಾರಿಗಳಿಗೆ ಮಾರ್ಗವಾಗಬೇಕಾದ ನಾವು ವಾರ್ಡ್‍ಗಳ ಒಳಗಡೆ ಹೇಗೆ ಬೇಕೋ ಹಾಗೇ ವಾಹನಗಳನ್ನು ನಿಲ್ಲಿಸಲು ಪಾರ್ಕಿಂಗ್ ಸ್ಥಳವಾಗಿದ್ದೇವೆ. ಹಾಗಾಗಿ ಇವರ ಹಾವಳಿ ಹೆಚ್ಚಾದಾಗ ಜನರು ನಮ್ಮನ್ನು ಹೇಗೆ ಬಳಸಲು ಸಾಧ್ಯ ಹೇಳಿ.

ಉದ್ಯಮ ನಗರಿಗೆ ವಾಹನ ದಟ್ಟಣೆ ಸಾಮಾನ್ಯ ಪದ. ಅದು ಗೊತ್ತಿದ್ದು ಸಹ ಈ ದ್ವಿಚಕ್ರ ವಾಹನ ಸವಾರರು ವಾಹನ ದಟ್ಟಣೆ ಉಂಟಾದಾಗ ನಮ್ಮ ಮೇಲೆಯೇ ಸವಾರಿ ನಡೆಸ್ತಾರೆ. ಒಮ್ಮೊಮ್ಮೆ ಸವಾರಿಯಲ್ಲಿ ಅಪಘಾತಗಳು ಸಂಭವಿಸಿ ಜೀವ ಹಾನಿಯಾಗಿರುವ ಉದಾಹರಣೆಗಳು ಇವೆ. ಹಾಗಾಗಿ ಇದನ್ನು ತಪ್ಪಿಸಬೇಕು ಎಂದು ಅಲ್ಲಿಲ್ಲ ಬಿಬಿಎಂಪಿ ಸಿಸಿಟಿವಿ ಕ್ಯಾಮೆರಾಗಳನ್ನು ಹಾಕಿದ್ದಾರೆ. ಆದರೂ ಸಹ ನಮ್ಮ ಮೇಲೆ ವಾಹನಗಳನ್ನು ಓಡಿಸುತ್ತಾರೆ ಏನು ಮಾಡೋಣ.

ನಮ್ಮ ಸ್ಥಿತಿ ಹೇಗಿದೆ ಅಂದರೆ ಯಾರಾದರೂ ನಮ್ಮ ಮಾರ್ಗದಲ್ಲಿ ಸಾಗುತ್ತಾ ಮೊಬೈಲ್ ಏನಾದರೂ ನೋಡಿಕೊಂಡು ಹೋದರಂತೂ
ಮುಖ ಮೂತಿ ಕಿತ್ತುಹೋಗುವುದಂತೂ ಗ್ಯಾರಂಟಿ.

ಇನ್ನು ಯಾರಾದರೂ ಕಟ್ಟಡ ನಿರ್ಮಾಣ ಕಾರ್ಯವನ್ನು ಕೈಗೊಂಡರಂತೂ ನಾವೇ ಕಾಮಾಗಾರಿಗೆ ಬೇಕಾದ ಕಲ್ಲು, ಮರಳು, ಜಲ್ಲಿ ಸಂಗ್ರಹಿಸುವ ಗೋದಾಮುಗಳು. ಅವರಿಗೆ ಹೇಳುವವರಿಲ್ಲ ಕೇಳುವವರಿಲ್ಲ. ಜನರು ಅಷ್ಟೇ ಯಾರೂ ಪ್ರಶ್ನಿಸದೆ ನಮಗ್ಯಾಕಪ್ಪ ನಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಂಡು ಹೋಗೋಣ ಎಂದು ಮುಂದುವರೆಯುತ್ತಾರೆ.

ಬಯಲು ಶೌಚಾಲಯ: ಪಾವತಿಸಿ ನಮ್ಮನ್ನು ಬಳಸಿ ಎಂದು ದೊಡ್ಡ ದೊಡ್ಡ ಬೋರ್ಡ್‍ಗಳನ್ನು ಹಾಕಿಕೊಂಡು ಸಾರ್ವಜನಿಕ ಶೌಚಾಲಯಗಳು ಕಾರ್ಯನಿರ್ವಹಿಸುತ್ತಿರುತ್ತವೆ. ಆದರೆ, ಅದನ್ನು ಬಳಸದೇ ಎಲ್ಲಾದರೂ ಗೋಡೆ ಸಿಕ್ಕರೆ ಸಾಕು, ನನ್ನ ಮೇಲೆ ನಿಂತು ಮಜ್ಜನ ಮಾಡಿಸುವ ಪುಣ್ಯಾತ್ಮರು ಇದ್ದಾರೆ. ಆ ವಾಸನೆ ಕುಡಿದು ಅಲ್ಲಿ ಯಾರಾದರೂ ಓಡಾಡಲು ಸಾಧ್ಯವೇ ನೀವೇ ಹೇಳಿ.

ಬೀದಿ ಬದಿ ವ್ಯಾಪಾರಿಗಳು: ಹೊಟ್ಟೆ ಪಾಡಿಗಾಗಿ ಅನೇಕ ವರ್ಷಗಳಿಂದ ನನ್ನ ಮೇಲೆಯೇ ತಮ್ಮ ಕಾರ್ಯವನ್ನು ಮಾಡುತ್ತಿದ್ದಾರೆ. ಹೋಗಲಿ ಹೇಗೋ ಮಾಡಿಕೊಂಡು ಹೋಗಲಿ ಎಂದರೆ ಕೆಲವು ಜನರ ಓಡಾಡಕ್ಕೂ ತೊಂದರೆ ಮಾಡುತ್ತಿದ್ದಾರೆ. ಬಿಬಿಎಂಪಿ ಅನೇಕ ವರ್ಷಗಳಿಂದ ಬೀದಿ ವ್ಯಾಪಾರಿಗಳಿಗೆ ಮತ್ತೊಂದು ವ್ಯವಸ್ಥೆ ಮಾಡಿಕೊಟ್ಟಿದ್ದರು ಈ ಜನರಿಗೆ ಅಲ್ಲಿಗೆ ಹೋಗುವ ಮನಸ್ಸಿಲ್ಲ. ಅವರು ನನ್ನ ಮೇಲೆನೆ ವ್ಯಾಪಾರ ಮಾಡಬ್ಬೇಕು ಎಂದು ಕೂರ್ತಾರೆ. ನಂತರ ಕಸವನ್ನೆಲ್ಲಾ ಅಲ್ಲೇ ಹಾಕಿ ಹೋಗುತ್ತಾರೆ. ಅದನ್ನು ಒಮ್ಮೊಮ್ಮೆ ಬಿಬಿಎಂಪಿ ಅವರು ಕಸ ಎತ್ತುತ್ತಾರೆ ಇನ್ನೊಂದು ಸಲ ಎತ್ತುವುದಿಲ್ಲ. ಹಾಗಾಗಿ ನಮ್ಮ ಮೇಲೆ ಜನರು ಹೇಗೆ ಎಲ್ಲಾ ಕಡೆ ಸುಲಲಿತವಾಗಿ ಓಡಾಡಲು ಸಾಧ್ಯ ಹೇಳಿ.

ಒಟ್ಟಾರೆಯಾಗಿ ಬಿಬಿಎಂಪಿ ಅಧಿಕಾರಿಗಳು ಇತ್ತ ಕಡೆ ಸ್ವಲ್ಪ ಗಮನಹರಿಸಿದರೆ, ನೀವು ಪಾದಾಚಾರಿಗಳು ಎಚ್ಚೆತ್ತುಕೊಂಡು ಕಸ ಬಿಸಾಡದೇ, ಗಲೀಜು ಮಾಡದೆ ನಮ್ಮನ್ನು ಶುಚಿಯಾಗಿಟ್ಟುಕೊಂಡರೆ ಮುಂದೆ ಆಗುವ ಅನಾಹುತಗಳನ್ನು ತಪ್ಪಿಸಬಹುದು ಎಂಬುದು ನಮ್ಮ ಪಾದಚಾರಿ ಮಾರ್ಗದ ಆಶಯ.

ಬನ್ನಿ ನಮ್ಮ ಕುರಿತು ಜನಸಾಮಾನ್ಯರು ಏನು ಹೇಳಿದ್ದಾರೆ ಎಂದು ನೋಡೋಣ.

ಪಾದಚಾರಿ ಮಾರ್ಗವನ್ನು ಗಾಡಿಗಳು ಮತ್ತು ಬೀದಿ ವ್ಯಾಪಾರಿಗಳು ಆವರಿಸಿಕೊಂಡು ಜನರಿಗೆ ಓಡಾಡಲು ರಸ್ತೆ ಇಲ್ಲದಾಗಿದೆ. ಜೊತೆಗೆ ವ್ಯಾಪಾರಿಗಳು ಸುರಿಯುವ ಕಸವು ಕೊಳೆತು ಆರೋಗ್ಯ ಕೆಡುವಂತಾಗಿದೆ.
– ಸೌಮ್ಯ, ಬನಶಂಕರಿ ನಿವಾಸಿ.
=========
ವಾರ್ಡ್ ಒಳಗಿರುವ ಪಾದಚಾರಿ ಮಾರ್ಗಗಳು ಕಸದಿಂದಲೇ ರಾರಾಜಿಸಿತ್ತಿರುವೆ. ಜೊತೆಗೆ ಪಾದಚಾರಿ ಮಾರ್ಗದಲ್ಲಿರುವ ಮ್ಯಾನ್‍ಹೋಲ್‍ಗಳಿಂದ ನೀರು ಸುರಿದು ಸುರಿದು ಮೂಗು ಮುಚ್ಚಿಕೊಂಡು ಹೋಗುವ ಪರಿಸ್ಥಿತಿ ಇದೆ.
– ಮಂಜುನಾಥ್, ಶ್ರೀರಾಮಪುರ ನಿವಾಸಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಎಲೆಮರೆ-೨ ಅಂತ ಹಾಕಿದ್ದೀರಿ.

    ಎಲೆಮರೆ-೧ಹುಡುಕಿದೆ. ಇಲ್ಲ ಅಂದಿರಿ.ಏನಿದರ ಅರ್ಥ?

LEAVE A REPLY

Please enter your comment!
Please enter your name here

- Advertisment -

ಎನ್‌ಡಿಎ ಸೇರಿದರೆ ಪ್ರಧಾನಿ ಮೋದಿಯಿಂದ ಕೇರಳಕ್ಕೆ ದೊಡ್ಡ ಪ್ಯಾಕೇಜ್: ಪಿಣರಾಯಿ ವಿಜಯನ್‌ಗೆ ಆಫರ್ ಕೊಟ್ಟ ಅಠಾವಳೆ

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬಿಜೆಪಿ ನೇತೃತ್ವದ ಎನ್‌ಡಿಎ ಸೇರಬೇಕೆಂದು ಕೇಂದ್ರ ರಾಜ್ಯ ಸಚಿವ ರಾಮದಾಸ್ ಬಂಡು ಅಠಾವಳೆ ಬುಧವಾರ ಸಲಹೆ ನೀಡಿದ್ದಾರೆ. ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ...

ಸದನದಲ್ಲೇ ನೀಲಿ ಚಿತ್ರ ನೋಡಿ ರಾಜ್ಯದ ಮಾನ ಕಳೆದವರು ಯಾವ ಪಕ್ಷದವರು? ಬಿಜೆಪಿಗೆ ಹರಿಪ್ರಸಾದ್ ತಿರುಗೇಟು

ಸದನದ ಶಿಸ್ತು, ಘನತೆ, ಗೌರವದ ಬಗ್ಗೆ ಮಾತನಾಡಲು ಬಿಜೆಪಿಯವರಿಗೆ ಕಿಂಚಿತ್ತಾದರೂ ನೈತಿಕತೆ ಇದೆಯೇ? ಎಂದು ವಿಧಾನಪರಿಷತ್ ಸದಸ್ಯ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ ಪ್ರಶ್ನಿಸಿದ್ದಾರೆ. ಗುರುವಾರ (ಜ.22) ವಿಶೇಷ ಅಧಿವೇಶನದ ವೇಳೆ...

ಆಂಧ್ರದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧ?

ಕಳೆದ ತಿಂಗಳು ಆಸ್ಟ್ರೇಲಿಯಾ ಜಾರಿಗೆ ತಂದಂತೆಯೇ, 16 ವರ್ಷದೊಳಗಿನ ಮಕ್ಕಳಿಗಾಗಿ ಸರ್ಕಾರವು ಸಾಮಾಜಿಕ ಮಾಧ್ಯಮವನ್ನು ನಿಷೇಧಿಸಲು ಯೋಜಿಸುತ್ತಿದೆ ಎಂದು ಆಂಧ್ರಪ್ರದೇಶ ಸಚಿವ ನಾರಾ ಲೋಕೇಶ್ ಬಹಿರಂಗಪಡಿಸಿದ್ದಾರೆ. ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆ...

ಜಾರ್ಖಂಡ್| ಚೈಬಾಸಾ ಎನ್‌ಕೌಂಟರ್‌; ಕುಖ್ಯಾತ ಮಾವೋವಾದಿ ನಾಯಕ ‘ಅನಲ್ ದಾ’ ಸೇರಿ 8 ನಕ್ಸಲರ ಹತ್ಯೆ

ಜಾರ್ಖಂಡ್ ಪೊಲೀಸರು ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌) ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಪ್ರಮುಖ ಯಶಸ್ಸನ್ನು ಸಾಧಿಸಿದೆ. ಚೈಬಾಸಾ ಜಿಲ್ಲೆಯಲ್ಲಿ ನಡೆದ ಭೀಕರ ಎನ್‌ಕೌಂಟರ್‌ನಲ್ಲಿ, ಭದ್ರತಾ ಪಡೆಗಳು 8 ನಕ್ಸಲರನ್ನು ಕೊಂದಿವೆ....

‘ಕರ್ನಾಟಕವನ್ನು ಎಲ್ಲಾ ರೀತಿಯಲ್ಲಿ ಕಡೆಗಣಿಸುತ್ತಿದ್ದ ಬಿಜೆಪಿ ಈಗ ರಾಜ್ಯಪಾಲರ ಮೂಲಕವೇ ಕನ್ನಡಿಗರನ್ನು ಅವಮಾನಿಸಿದೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಬಿಜೆಪಿ ಕನ್ನಡಿಗರನ್ನು ಅವಮಾನಿಸುವ ಪ್ರಕ್ರಿಯೆ ಮುಂದುವರೆದಿದೆ ಎಂದು ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.  2026 ಜನವರಿ 22ರ, ಗುರುವಾರ ಸದನದಲ್ಲಿ ನಡೆದ ಬೆಳವಣಿಗೆಗಳ ಕುರಿತು ತಮ್ಮ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಖರ್ಗೆ, ‘ಸರ್ಕಾರದ ಭಾಷಣವನ್ನು...

ಭೋಜಶಾಲಾ-ಕಮಾಲ್ ಮೌಲಾ ಮಸೀದಿ ವಿವಾದ : ವಸಂತ ಪಂಚಮಿ ಪೂಜೆ, ಜುಮಾ ನಮಾಜ್ ಶಾಂತಿಯುತವಾಗಿ ನಡೆಸಲು ಸುಪ್ರೀಂ ಆದೇಶ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಭೋಜ ಶಾಲಾ-ಕಮಾಲ್ ಮೌಲಾ ಸಂಕೀರ್ಣದಲ್ಲಿ ವಸಂತ ಪಂಚಮಿ ಪೂಜೆ ಮತ್ತು ಶುಕ್ರವಾರದ ಜುಮಾ ನಮಾಝ್ ಎರಡನ್ನೂ ಶಾಂತಿಯುತವಾಗಿ ನಡೆಸುವಂತೆ ನೋಡಿಕೊಳ್ಳಲು ಸುಪ್ರೀಂ ಕೋರ್ಟ್ ಗುರುವಾರ (ಜ.22) ನಿರ್ದೇಶನಗಳನ್ನು ನೀಡಿದೆ. ಭೋಜ...

ಜಮ್ಮು-ಕಾಶ್ಮೀರ| 200 ಅಡಿ ಆಳದ ಕಂದಕಕ್ಕೆ ಉರುಳಿದ ವಾಹನ; 10 ಜನ ಸೇನಾ ಸಿಬ್ಬಂದಿ ಸಾವು

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾ ಪ್ರದೇಶದಲ್ಲಿ 200 ಅಡಿ ಆಳದ ಕಂದಕಕ್ಕೆ ವಾಹನ ಉರುಳಿ 10 ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ಒಟ್ಟು 17 ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಸೇನಾ...

ಉತ್ತರ ಪ್ರದೇಶ ಮರ್ಯಾದೆಗೇಡು ಹತ್ಯೆ; ಅಂತರ್ಧರ್ಮೀಯ ಜೋಡಿಯನ್ನು ಕೊಂದ ಯುವತಿ ಸಹೋದರರು

ಉತ್ತರ ಪ್ರದೇಶದ ಮೊರಾದಾಬಾದ್‌ನ ಕಾಡಿನಲ್ಲಿ ಅಂತರ್ಧರ್ಮೀಯ ಜೋಡಿಯ ಶವ ಪತ್ತೆಯಾಗಿದ್ದು, ಪ್ರಾಥಮಿಕ ತನಿಖೆಯಲ್ಲಿ ಆಕೆಯ ಸಹೋದರರು ಮರ್ಯಾದೆಗೇಡು ಹತ್ಯೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಯುವತಿಯನ್ನು 19 ವರ್ಷದ ಕಾಜಲ್ ಎಂದು ಗುರುತಿಸಲಾಗಿದ್ದು, ಮೃತ...

ತೀವ್ರ ವಿರೋಧದ ನಂತರ ಇಸ್ಲಾಮೋಫೋಬಿಕ್ ಹೇಳಿಕೆ ಹಿಂಪಡೆದು, ಕ್ಷಮೆಯಾಚಿಸಿದ ಕೇರಳದ ಸಿಪಿಐ(ಎಂ) ಸಚಿವ ಸಾಜಿ ಚೆರಿಯನ್

ಇತ್ತೀಚಿನ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಮುಸ್ಲಿಂ ವಿಜೇತರ ಬಗ್ಗೆ ತಮ್ಮ ಇಸ್ಲಾಮೋಫೋಬಿಕ್ ಹೇಳಿಕೆಗಳನ್ನು ನೀಡಿದ್ದ ಸಿಪಿಐ(ಎಂ) ಹಿರಿಯ ನಾಯಕ ಮತ್ತು ಕೇರಳ ಸಚಿವ ಸಾಜಿ ಚೆರಿಯನ್ ಬುಧವಾರ ತಮ್ಮ ಹೇಳಿಕೆಯನ್ನು  ಹಿಂತೆಗೆದುಕೊಂಡಿದ್ದಾರೆ. ಪಕ್ಷ,...

ರಾಜ್ಯಪಾಲರಿಂದ ಸಂವಿಧಾನದ ವಿಧಿಗಳ ಉಲ್ಲಂಘನೆ; ಜನಪ್ರತಿನಿಧಿಗಳ ಸಭೆಯನ್ನು ಅವಮಾನಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

"ವರ್ಷದ ಮೊದಲ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘಿಸಿದ್ದಾರೆ. ಅವರ ಈ ನಡೆ ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ. ಇದನ್ನು ನಾವು ಖಂಡಿಸುತ್ತೇವೆ. ಈ...