Homeಕರ್ನಾಟಕನೋಡಿ ಸ್ವಾಮಿ ನಮ್ಮ ಸ್ಥಿತಿನಾ..! ನಮಗೆ ಬಂದಿರುವ ಕಷ್ಟ ಮತ್ಯಾರಿಗೂ ಬರಬೇಡಪ್ಪ

ನೋಡಿ ಸ್ವಾಮಿ ನಮ್ಮ ಸ್ಥಿತಿನಾ..! ನಮಗೆ ಬಂದಿರುವ ಕಷ್ಟ ಮತ್ಯಾರಿಗೂ ಬರಬೇಡಪ್ಪ

- Advertisement -
- Advertisement -

ಸಿಲಿಕಾನ್ ಸಿಟಿ ಬೆಂಗಳೂರು ಎಂದರೆ ಮಾಹಿತಿ, ತಂತ್ರಜ್ಞಾನದಲ್ಲಿ ಅಭಿವೃದ್ಧಿ ಹೊಂದಿದ ನಗರ. ಭಾರತದ ಅತ್ಯುತ್ತಮ ಜೀವನಯೋಗ್ಯ ನಗರಗಳಲ್ಲೊಂದು. ಹೆಚ್ಚು ಉದ್ಯೋಗ ಸೃಷ್ಟಿಸುತ್ತಿರುವ ನಗರವೂ ಹೌದು.  ಅದ್ರೆ ಇಲ್ಲಿರುವ ನಮ್ಮ ಸ್ಥಿತಿ ನೋಡಿದರೆ ಜನರು ಮುಂದಕ್ಕೆ ಹೆಜ್ಜೆ ಹಾಕಲು ಭಯಪಡುವಂತಾಗಿದೆ. ಅವರನ್ನು ನಾನೇ ಅಪೋಶನ ತೆಗೆದುಕೊಳ್ಳುವಂತಾಗಿರುವುದು ದುರಂತ.

ಅಂದ ಹಾಗೆ ನಮ್ಮ ಹೆಸರು ಪುಟ್ಪಾತ್, ಕನ್ನಡದಲ್ಲಿ ಪಾದಚಾರಿ ಮಾರ್ಗ ಎಂದು ಕರೆಯುತ್ತಾರೆ. ಪ್ರತಿ ಮುಖ್ಯ ರಸ್ತೆಯ ಪಕ್ಕದಲ್ಲಿ ನಾವಿರುತ್ತೇವೆ. ವಾಹನಗಳಿಂದ ಸುರಕ್ಷಿತವಾಗಿ ಜನ ನಮ್ಮನ್ನು ಬಳಸವಹುದಾಗಿದೆ. ಆದರೆ ನಮ್ಮ ಪರಿಸ್ಥಿತಿಯೋ ತೀರಾ ಹದಗೆಟ್ಟಿದೆ.

ಇತ್ತೀಚಿಗೆ ಅಷ್ಟೇ ಕಾಮಗಾರಿ ನಡೆಸಿದ್ದಾರೆ ಆಗಲೇ ಸಿಮೆಂಟ್ ಬ್ಲಾಕ್‍ಗಳು ಕಿತ್ತು ಹೋಗಿವೆ. ಹಾಸಿರುವ ಬಂಡೆಗಳು  ಮುರಿದು ಬಿದ್ದಿದೆ. ನಮ್ಮ ಮೇಲೆ ಬಿದ್ದಿರುವ ಮರದ ರೆಂಬೆ ಕೊಂಬೆಗಳನ್ನು ತೆರೆವುಗೊಳಿಸಿಲ್ಲ. ಕೆಲವೊಂದು ವಾರ್ಡ್‍ಗಳಲ್ಲಿ ನಾವೇ ಕಸದ ಬುಟ್ಟಿಗಳಾಗಿದ್ದೇವೆ. ಹೇಗಿದೆ ನೋಡಿ ಸ್ವಾಮಿ ನಮ್ಮ ಪರಿಸ್ಥಿತಿ. ನಮ್ಮ ಮೇಲೆ ಖುಷಿಯಿಂದ ಹೆಜ್ಜೆ ಹಾಕಬೇಕಾದವರು ಕಸದ ವಾಸನೆ ತಾಳಲಾರದೆ ಮೂಗು ಮುಚ್ಚಿಕೊಂಡು ಹೋಗುವ ದುಸ್ಥಿತಿ ಬಂದಿದೆ. ಇದಕ್ಕೆಲ್ಲಾ ಮುಕ್ತಿ ಯಾವಾಗಪ್ಪಾ…..

 

ನಮ್ಮನ್ನ ಸರಿಯಾಗಿ ನೋಡಕೊಳ್ಳಬೇಕು, ಜನರು ಸುಖಕರವಾಗಿ ನಮ್ಮನ್ನು ಬಳಸಬೇಕು ಎಂದು ನಮ್ಮನ್ನು ಬಿಬಿಎಂಪಿಗೆ ಒಪ್ಪಿಸಿದ್ದಾರೆ. ಆದರೆ, ನಮ್ಮ ಪರಿಸ್ಥಿತಿಯನ್ನು ಕಂಡರೆ ಅವರು ಏನು ಕಾರ್ಯನಿರ್ವಹಿಸುತ್ತಿದ್ದರೋ ಎಂಬ ಅನುಮಾನ ಕಾಡ್ತಿದೆ.

ವಾಹನಗಳ ಪಾರ್ಕಿಂಗ್ ಸ್ಥಳ: ಪಾದಚಾರಿಗಳಿಗೆ ಮಾರ್ಗವಾಗಬೇಕಾದ ನಾವು ವಾರ್ಡ್‍ಗಳ ಒಳಗಡೆ ಹೇಗೆ ಬೇಕೋ ಹಾಗೇ ವಾಹನಗಳನ್ನು ನಿಲ್ಲಿಸಲು ಪಾರ್ಕಿಂಗ್ ಸ್ಥಳವಾಗಿದ್ದೇವೆ. ಹಾಗಾಗಿ ಇವರ ಹಾವಳಿ ಹೆಚ್ಚಾದಾಗ ಜನರು ನಮ್ಮನ್ನು ಹೇಗೆ ಬಳಸಲು ಸಾಧ್ಯ ಹೇಳಿ.

ಉದ್ಯಮ ನಗರಿಗೆ ವಾಹನ ದಟ್ಟಣೆ ಸಾಮಾನ್ಯ ಪದ. ಅದು ಗೊತ್ತಿದ್ದು ಸಹ ಈ ದ್ವಿಚಕ್ರ ವಾಹನ ಸವಾರರು ವಾಹನ ದಟ್ಟಣೆ ಉಂಟಾದಾಗ ನಮ್ಮ ಮೇಲೆಯೇ ಸವಾರಿ ನಡೆಸ್ತಾರೆ. ಒಮ್ಮೊಮ್ಮೆ ಸವಾರಿಯಲ್ಲಿ ಅಪಘಾತಗಳು ಸಂಭವಿಸಿ ಜೀವ ಹಾನಿಯಾಗಿರುವ ಉದಾಹರಣೆಗಳು ಇವೆ. ಹಾಗಾಗಿ ಇದನ್ನು ತಪ್ಪಿಸಬೇಕು ಎಂದು ಅಲ್ಲಿಲ್ಲ ಬಿಬಿಎಂಪಿ ಸಿಸಿಟಿವಿ ಕ್ಯಾಮೆರಾಗಳನ್ನು ಹಾಕಿದ್ದಾರೆ. ಆದರೂ ಸಹ ನಮ್ಮ ಮೇಲೆ ವಾಹನಗಳನ್ನು ಓಡಿಸುತ್ತಾರೆ ಏನು ಮಾಡೋಣ.

ನಮ್ಮ ಸ್ಥಿತಿ ಹೇಗಿದೆ ಅಂದರೆ ಯಾರಾದರೂ ನಮ್ಮ ಮಾರ್ಗದಲ್ಲಿ ಸಾಗುತ್ತಾ ಮೊಬೈಲ್ ಏನಾದರೂ ನೋಡಿಕೊಂಡು ಹೋದರಂತೂ
ಮುಖ ಮೂತಿ ಕಿತ್ತುಹೋಗುವುದಂತೂ ಗ್ಯಾರಂಟಿ.

ಇನ್ನು ಯಾರಾದರೂ ಕಟ್ಟಡ ನಿರ್ಮಾಣ ಕಾರ್ಯವನ್ನು ಕೈಗೊಂಡರಂತೂ ನಾವೇ ಕಾಮಾಗಾರಿಗೆ ಬೇಕಾದ ಕಲ್ಲು, ಮರಳು, ಜಲ್ಲಿ ಸಂಗ್ರಹಿಸುವ ಗೋದಾಮುಗಳು. ಅವರಿಗೆ ಹೇಳುವವರಿಲ್ಲ ಕೇಳುವವರಿಲ್ಲ. ಜನರು ಅಷ್ಟೇ ಯಾರೂ ಪ್ರಶ್ನಿಸದೆ ನಮಗ್ಯಾಕಪ್ಪ ನಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಂಡು ಹೋಗೋಣ ಎಂದು ಮುಂದುವರೆಯುತ್ತಾರೆ.

ಬಯಲು ಶೌಚಾಲಯ: ಪಾವತಿಸಿ ನಮ್ಮನ್ನು ಬಳಸಿ ಎಂದು ದೊಡ್ಡ ದೊಡ್ಡ ಬೋರ್ಡ್‍ಗಳನ್ನು ಹಾಕಿಕೊಂಡು ಸಾರ್ವಜನಿಕ ಶೌಚಾಲಯಗಳು ಕಾರ್ಯನಿರ್ವಹಿಸುತ್ತಿರುತ್ತವೆ. ಆದರೆ, ಅದನ್ನು ಬಳಸದೇ ಎಲ್ಲಾದರೂ ಗೋಡೆ ಸಿಕ್ಕರೆ ಸಾಕು, ನನ್ನ ಮೇಲೆ ನಿಂತು ಮಜ್ಜನ ಮಾಡಿಸುವ ಪುಣ್ಯಾತ್ಮರು ಇದ್ದಾರೆ. ಆ ವಾಸನೆ ಕುಡಿದು ಅಲ್ಲಿ ಯಾರಾದರೂ ಓಡಾಡಲು ಸಾಧ್ಯವೇ ನೀವೇ ಹೇಳಿ.

ಬೀದಿ ಬದಿ ವ್ಯಾಪಾರಿಗಳು: ಹೊಟ್ಟೆ ಪಾಡಿಗಾಗಿ ಅನೇಕ ವರ್ಷಗಳಿಂದ ನನ್ನ ಮೇಲೆಯೇ ತಮ್ಮ ಕಾರ್ಯವನ್ನು ಮಾಡುತ್ತಿದ್ದಾರೆ. ಹೋಗಲಿ ಹೇಗೋ ಮಾಡಿಕೊಂಡು ಹೋಗಲಿ ಎಂದರೆ ಕೆಲವು ಜನರ ಓಡಾಡಕ್ಕೂ ತೊಂದರೆ ಮಾಡುತ್ತಿದ್ದಾರೆ. ಬಿಬಿಎಂಪಿ ಅನೇಕ ವರ್ಷಗಳಿಂದ ಬೀದಿ ವ್ಯಾಪಾರಿಗಳಿಗೆ ಮತ್ತೊಂದು ವ್ಯವಸ್ಥೆ ಮಾಡಿಕೊಟ್ಟಿದ್ದರು ಈ ಜನರಿಗೆ ಅಲ್ಲಿಗೆ ಹೋಗುವ ಮನಸ್ಸಿಲ್ಲ. ಅವರು ನನ್ನ ಮೇಲೆನೆ ವ್ಯಾಪಾರ ಮಾಡಬ್ಬೇಕು ಎಂದು ಕೂರ್ತಾರೆ. ನಂತರ ಕಸವನ್ನೆಲ್ಲಾ ಅಲ್ಲೇ ಹಾಕಿ ಹೋಗುತ್ತಾರೆ. ಅದನ್ನು ಒಮ್ಮೊಮ್ಮೆ ಬಿಬಿಎಂಪಿ ಅವರು ಕಸ ಎತ್ತುತ್ತಾರೆ ಇನ್ನೊಂದು ಸಲ ಎತ್ತುವುದಿಲ್ಲ. ಹಾಗಾಗಿ ನಮ್ಮ ಮೇಲೆ ಜನರು ಹೇಗೆ ಎಲ್ಲಾ ಕಡೆ ಸುಲಲಿತವಾಗಿ ಓಡಾಡಲು ಸಾಧ್ಯ ಹೇಳಿ.

ಒಟ್ಟಾರೆಯಾಗಿ ಬಿಬಿಎಂಪಿ ಅಧಿಕಾರಿಗಳು ಇತ್ತ ಕಡೆ ಸ್ವಲ್ಪ ಗಮನಹರಿಸಿದರೆ, ನೀವು ಪಾದಾಚಾರಿಗಳು ಎಚ್ಚೆತ್ತುಕೊಂಡು ಕಸ ಬಿಸಾಡದೇ, ಗಲೀಜು ಮಾಡದೆ ನಮ್ಮನ್ನು ಶುಚಿಯಾಗಿಟ್ಟುಕೊಂಡರೆ ಮುಂದೆ ಆಗುವ ಅನಾಹುತಗಳನ್ನು ತಪ್ಪಿಸಬಹುದು ಎಂಬುದು ನಮ್ಮ ಪಾದಚಾರಿ ಮಾರ್ಗದ ಆಶಯ.

ಬನ್ನಿ ನಮ್ಮ ಕುರಿತು ಜನಸಾಮಾನ್ಯರು ಏನು ಹೇಳಿದ್ದಾರೆ ಎಂದು ನೋಡೋಣ.

ಪಾದಚಾರಿ ಮಾರ್ಗವನ್ನು ಗಾಡಿಗಳು ಮತ್ತು ಬೀದಿ ವ್ಯಾಪಾರಿಗಳು ಆವರಿಸಿಕೊಂಡು ಜನರಿಗೆ ಓಡಾಡಲು ರಸ್ತೆ ಇಲ್ಲದಾಗಿದೆ. ಜೊತೆಗೆ ವ್ಯಾಪಾರಿಗಳು ಸುರಿಯುವ ಕಸವು ಕೊಳೆತು ಆರೋಗ್ಯ ಕೆಡುವಂತಾಗಿದೆ.
– ಸೌಮ್ಯ, ಬನಶಂಕರಿ ನಿವಾಸಿ.
=========
ವಾರ್ಡ್ ಒಳಗಿರುವ ಪಾದಚಾರಿ ಮಾರ್ಗಗಳು ಕಸದಿಂದಲೇ ರಾರಾಜಿಸಿತ್ತಿರುವೆ. ಜೊತೆಗೆ ಪಾದಚಾರಿ ಮಾರ್ಗದಲ್ಲಿರುವ ಮ್ಯಾನ್‍ಹೋಲ್‍ಗಳಿಂದ ನೀರು ಸುರಿದು ಸುರಿದು ಮೂಗು ಮುಚ್ಚಿಕೊಂಡು ಹೋಗುವ ಪರಿಸ್ಥಿತಿ ಇದೆ.
– ಮಂಜುನಾಥ್, ಶ್ರೀರಾಮಪುರ ನಿವಾಸಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಎಲೆಮರೆ-೨ ಅಂತ ಹಾಕಿದ್ದೀರಿ.

    ಎಲೆಮರೆ-೧ಹುಡುಕಿದೆ. ಇಲ್ಲ ಅಂದಿರಿ.ಏನಿದರ ಅರ್ಥ?

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...