Homeಕರ್ನಾಟಕನೋಡಿ ಸ್ವಾಮಿ ನಮ್ಮ ಸ್ಥಿತಿನಾ..! ನಮಗೆ ಬಂದಿರುವ ಕಷ್ಟ ಮತ್ಯಾರಿಗೂ ಬರಬೇಡಪ್ಪ

ನೋಡಿ ಸ್ವಾಮಿ ನಮ್ಮ ಸ್ಥಿತಿನಾ..! ನಮಗೆ ಬಂದಿರುವ ಕಷ್ಟ ಮತ್ಯಾರಿಗೂ ಬರಬೇಡಪ್ಪ

- Advertisement -
- Advertisement -

ಸಿಲಿಕಾನ್ ಸಿಟಿ ಬೆಂಗಳೂರು ಎಂದರೆ ಮಾಹಿತಿ, ತಂತ್ರಜ್ಞಾನದಲ್ಲಿ ಅಭಿವೃದ್ಧಿ ಹೊಂದಿದ ನಗರ. ಭಾರತದ ಅತ್ಯುತ್ತಮ ಜೀವನಯೋಗ್ಯ ನಗರಗಳಲ್ಲೊಂದು. ಹೆಚ್ಚು ಉದ್ಯೋಗ ಸೃಷ್ಟಿಸುತ್ತಿರುವ ನಗರವೂ ಹೌದು.  ಅದ್ರೆ ಇಲ್ಲಿರುವ ನಮ್ಮ ಸ್ಥಿತಿ ನೋಡಿದರೆ ಜನರು ಮುಂದಕ್ಕೆ ಹೆಜ್ಜೆ ಹಾಕಲು ಭಯಪಡುವಂತಾಗಿದೆ. ಅವರನ್ನು ನಾನೇ ಅಪೋಶನ ತೆಗೆದುಕೊಳ್ಳುವಂತಾಗಿರುವುದು ದುರಂತ.

ಅಂದ ಹಾಗೆ ನಮ್ಮ ಹೆಸರು ಪುಟ್ಪಾತ್, ಕನ್ನಡದಲ್ಲಿ ಪಾದಚಾರಿ ಮಾರ್ಗ ಎಂದು ಕರೆಯುತ್ತಾರೆ. ಪ್ರತಿ ಮುಖ್ಯ ರಸ್ತೆಯ ಪಕ್ಕದಲ್ಲಿ ನಾವಿರುತ್ತೇವೆ. ವಾಹನಗಳಿಂದ ಸುರಕ್ಷಿತವಾಗಿ ಜನ ನಮ್ಮನ್ನು ಬಳಸವಹುದಾಗಿದೆ. ಆದರೆ ನಮ್ಮ ಪರಿಸ್ಥಿತಿಯೋ ತೀರಾ ಹದಗೆಟ್ಟಿದೆ.

ಇತ್ತೀಚಿಗೆ ಅಷ್ಟೇ ಕಾಮಗಾರಿ ನಡೆಸಿದ್ದಾರೆ ಆಗಲೇ ಸಿಮೆಂಟ್ ಬ್ಲಾಕ್‍ಗಳು ಕಿತ್ತು ಹೋಗಿವೆ. ಹಾಸಿರುವ ಬಂಡೆಗಳು  ಮುರಿದು ಬಿದ್ದಿದೆ. ನಮ್ಮ ಮೇಲೆ ಬಿದ್ದಿರುವ ಮರದ ರೆಂಬೆ ಕೊಂಬೆಗಳನ್ನು ತೆರೆವುಗೊಳಿಸಿಲ್ಲ. ಕೆಲವೊಂದು ವಾರ್ಡ್‍ಗಳಲ್ಲಿ ನಾವೇ ಕಸದ ಬುಟ್ಟಿಗಳಾಗಿದ್ದೇವೆ. ಹೇಗಿದೆ ನೋಡಿ ಸ್ವಾಮಿ ನಮ್ಮ ಪರಿಸ್ಥಿತಿ. ನಮ್ಮ ಮೇಲೆ ಖುಷಿಯಿಂದ ಹೆಜ್ಜೆ ಹಾಕಬೇಕಾದವರು ಕಸದ ವಾಸನೆ ತಾಳಲಾರದೆ ಮೂಗು ಮುಚ್ಚಿಕೊಂಡು ಹೋಗುವ ದುಸ್ಥಿತಿ ಬಂದಿದೆ. ಇದಕ್ಕೆಲ್ಲಾ ಮುಕ್ತಿ ಯಾವಾಗಪ್ಪಾ…..

 

ನಮ್ಮನ್ನ ಸರಿಯಾಗಿ ನೋಡಕೊಳ್ಳಬೇಕು, ಜನರು ಸುಖಕರವಾಗಿ ನಮ್ಮನ್ನು ಬಳಸಬೇಕು ಎಂದು ನಮ್ಮನ್ನು ಬಿಬಿಎಂಪಿಗೆ ಒಪ್ಪಿಸಿದ್ದಾರೆ. ಆದರೆ, ನಮ್ಮ ಪರಿಸ್ಥಿತಿಯನ್ನು ಕಂಡರೆ ಅವರು ಏನು ಕಾರ್ಯನಿರ್ವಹಿಸುತ್ತಿದ್ದರೋ ಎಂಬ ಅನುಮಾನ ಕಾಡ್ತಿದೆ.

ವಾಹನಗಳ ಪಾರ್ಕಿಂಗ್ ಸ್ಥಳ: ಪಾದಚಾರಿಗಳಿಗೆ ಮಾರ್ಗವಾಗಬೇಕಾದ ನಾವು ವಾರ್ಡ್‍ಗಳ ಒಳಗಡೆ ಹೇಗೆ ಬೇಕೋ ಹಾಗೇ ವಾಹನಗಳನ್ನು ನಿಲ್ಲಿಸಲು ಪಾರ್ಕಿಂಗ್ ಸ್ಥಳವಾಗಿದ್ದೇವೆ. ಹಾಗಾಗಿ ಇವರ ಹಾವಳಿ ಹೆಚ್ಚಾದಾಗ ಜನರು ನಮ್ಮನ್ನು ಹೇಗೆ ಬಳಸಲು ಸಾಧ್ಯ ಹೇಳಿ.

ಉದ್ಯಮ ನಗರಿಗೆ ವಾಹನ ದಟ್ಟಣೆ ಸಾಮಾನ್ಯ ಪದ. ಅದು ಗೊತ್ತಿದ್ದು ಸಹ ಈ ದ್ವಿಚಕ್ರ ವಾಹನ ಸವಾರರು ವಾಹನ ದಟ್ಟಣೆ ಉಂಟಾದಾಗ ನಮ್ಮ ಮೇಲೆಯೇ ಸವಾರಿ ನಡೆಸ್ತಾರೆ. ಒಮ್ಮೊಮ್ಮೆ ಸವಾರಿಯಲ್ಲಿ ಅಪಘಾತಗಳು ಸಂಭವಿಸಿ ಜೀವ ಹಾನಿಯಾಗಿರುವ ಉದಾಹರಣೆಗಳು ಇವೆ. ಹಾಗಾಗಿ ಇದನ್ನು ತಪ್ಪಿಸಬೇಕು ಎಂದು ಅಲ್ಲಿಲ್ಲ ಬಿಬಿಎಂಪಿ ಸಿಸಿಟಿವಿ ಕ್ಯಾಮೆರಾಗಳನ್ನು ಹಾಕಿದ್ದಾರೆ. ಆದರೂ ಸಹ ನಮ್ಮ ಮೇಲೆ ವಾಹನಗಳನ್ನು ಓಡಿಸುತ್ತಾರೆ ಏನು ಮಾಡೋಣ.

ನಮ್ಮ ಸ್ಥಿತಿ ಹೇಗಿದೆ ಅಂದರೆ ಯಾರಾದರೂ ನಮ್ಮ ಮಾರ್ಗದಲ್ಲಿ ಸಾಗುತ್ತಾ ಮೊಬೈಲ್ ಏನಾದರೂ ನೋಡಿಕೊಂಡು ಹೋದರಂತೂ
ಮುಖ ಮೂತಿ ಕಿತ್ತುಹೋಗುವುದಂತೂ ಗ್ಯಾರಂಟಿ.

ಇನ್ನು ಯಾರಾದರೂ ಕಟ್ಟಡ ನಿರ್ಮಾಣ ಕಾರ್ಯವನ್ನು ಕೈಗೊಂಡರಂತೂ ನಾವೇ ಕಾಮಾಗಾರಿಗೆ ಬೇಕಾದ ಕಲ್ಲು, ಮರಳು, ಜಲ್ಲಿ ಸಂಗ್ರಹಿಸುವ ಗೋದಾಮುಗಳು. ಅವರಿಗೆ ಹೇಳುವವರಿಲ್ಲ ಕೇಳುವವರಿಲ್ಲ. ಜನರು ಅಷ್ಟೇ ಯಾರೂ ಪ್ರಶ್ನಿಸದೆ ನಮಗ್ಯಾಕಪ್ಪ ನಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಂಡು ಹೋಗೋಣ ಎಂದು ಮುಂದುವರೆಯುತ್ತಾರೆ.

ಬಯಲು ಶೌಚಾಲಯ: ಪಾವತಿಸಿ ನಮ್ಮನ್ನು ಬಳಸಿ ಎಂದು ದೊಡ್ಡ ದೊಡ್ಡ ಬೋರ್ಡ್‍ಗಳನ್ನು ಹಾಕಿಕೊಂಡು ಸಾರ್ವಜನಿಕ ಶೌಚಾಲಯಗಳು ಕಾರ್ಯನಿರ್ವಹಿಸುತ್ತಿರುತ್ತವೆ. ಆದರೆ, ಅದನ್ನು ಬಳಸದೇ ಎಲ್ಲಾದರೂ ಗೋಡೆ ಸಿಕ್ಕರೆ ಸಾಕು, ನನ್ನ ಮೇಲೆ ನಿಂತು ಮಜ್ಜನ ಮಾಡಿಸುವ ಪುಣ್ಯಾತ್ಮರು ಇದ್ದಾರೆ. ಆ ವಾಸನೆ ಕುಡಿದು ಅಲ್ಲಿ ಯಾರಾದರೂ ಓಡಾಡಲು ಸಾಧ್ಯವೇ ನೀವೇ ಹೇಳಿ.

ಬೀದಿ ಬದಿ ವ್ಯಾಪಾರಿಗಳು: ಹೊಟ್ಟೆ ಪಾಡಿಗಾಗಿ ಅನೇಕ ವರ್ಷಗಳಿಂದ ನನ್ನ ಮೇಲೆಯೇ ತಮ್ಮ ಕಾರ್ಯವನ್ನು ಮಾಡುತ್ತಿದ್ದಾರೆ. ಹೋಗಲಿ ಹೇಗೋ ಮಾಡಿಕೊಂಡು ಹೋಗಲಿ ಎಂದರೆ ಕೆಲವು ಜನರ ಓಡಾಡಕ್ಕೂ ತೊಂದರೆ ಮಾಡುತ್ತಿದ್ದಾರೆ. ಬಿಬಿಎಂಪಿ ಅನೇಕ ವರ್ಷಗಳಿಂದ ಬೀದಿ ವ್ಯಾಪಾರಿಗಳಿಗೆ ಮತ್ತೊಂದು ವ್ಯವಸ್ಥೆ ಮಾಡಿಕೊಟ್ಟಿದ್ದರು ಈ ಜನರಿಗೆ ಅಲ್ಲಿಗೆ ಹೋಗುವ ಮನಸ್ಸಿಲ್ಲ. ಅವರು ನನ್ನ ಮೇಲೆನೆ ವ್ಯಾಪಾರ ಮಾಡಬ್ಬೇಕು ಎಂದು ಕೂರ್ತಾರೆ. ನಂತರ ಕಸವನ್ನೆಲ್ಲಾ ಅಲ್ಲೇ ಹಾಕಿ ಹೋಗುತ್ತಾರೆ. ಅದನ್ನು ಒಮ್ಮೊಮ್ಮೆ ಬಿಬಿಎಂಪಿ ಅವರು ಕಸ ಎತ್ತುತ್ತಾರೆ ಇನ್ನೊಂದು ಸಲ ಎತ್ತುವುದಿಲ್ಲ. ಹಾಗಾಗಿ ನಮ್ಮ ಮೇಲೆ ಜನರು ಹೇಗೆ ಎಲ್ಲಾ ಕಡೆ ಸುಲಲಿತವಾಗಿ ಓಡಾಡಲು ಸಾಧ್ಯ ಹೇಳಿ.

ಒಟ್ಟಾರೆಯಾಗಿ ಬಿಬಿಎಂಪಿ ಅಧಿಕಾರಿಗಳು ಇತ್ತ ಕಡೆ ಸ್ವಲ್ಪ ಗಮನಹರಿಸಿದರೆ, ನೀವು ಪಾದಾಚಾರಿಗಳು ಎಚ್ಚೆತ್ತುಕೊಂಡು ಕಸ ಬಿಸಾಡದೇ, ಗಲೀಜು ಮಾಡದೆ ನಮ್ಮನ್ನು ಶುಚಿಯಾಗಿಟ್ಟುಕೊಂಡರೆ ಮುಂದೆ ಆಗುವ ಅನಾಹುತಗಳನ್ನು ತಪ್ಪಿಸಬಹುದು ಎಂಬುದು ನಮ್ಮ ಪಾದಚಾರಿ ಮಾರ್ಗದ ಆಶಯ.

ಬನ್ನಿ ನಮ್ಮ ಕುರಿತು ಜನಸಾಮಾನ್ಯರು ಏನು ಹೇಳಿದ್ದಾರೆ ಎಂದು ನೋಡೋಣ.

ಪಾದಚಾರಿ ಮಾರ್ಗವನ್ನು ಗಾಡಿಗಳು ಮತ್ತು ಬೀದಿ ವ್ಯಾಪಾರಿಗಳು ಆವರಿಸಿಕೊಂಡು ಜನರಿಗೆ ಓಡಾಡಲು ರಸ್ತೆ ಇಲ್ಲದಾಗಿದೆ. ಜೊತೆಗೆ ವ್ಯಾಪಾರಿಗಳು ಸುರಿಯುವ ಕಸವು ಕೊಳೆತು ಆರೋಗ್ಯ ಕೆಡುವಂತಾಗಿದೆ.
– ಸೌಮ್ಯ, ಬನಶಂಕರಿ ನಿವಾಸಿ.
=========
ವಾರ್ಡ್ ಒಳಗಿರುವ ಪಾದಚಾರಿ ಮಾರ್ಗಗಳು ಕಸದಿಂದಲೇ ರಾರಾಜಿಸಿತ್ತಿರುವೆ. ಜೊತೆಗೆ ಪಾದಚಾರಿ ಮಾರ್ಗದಲ್ಲಿರುವ ಮ್ಯಾನ್‍ಹೋಲ್‍ಗಳಿಂದ ನೀರು ಸುರಿದು ಸುರಿದು ಮೂಗು ಮುಚ್ಚಿಕೊಂಡು ಹೋಗುವ ಪರಿಸ್ಥಿತಿ ಇದೆ.
– ಮಂಜುನಾಥ್, ಶ್ರೀರಾಮಪುರ ನಿವಾಸಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಎಲೆಮರೆ-೨ ಅಂತ ಹಾಕಿದ್ದೀರಿ.

    ಎಲೆಮರೆ-೧ಹುಡುಕಿದೆ. ಇಲ್ಲ ಅಂದಿರಿ.ಏನಿದರ ಅರ್ಥ?

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...