Homeಕರ್ನಾಟಕನೋಡಿ ಸ್ವಾಮಿ ನಮ್ಮ ಸ್ಥಿತಿನಾ..! ನಮಗೆ ಬಂದಿರುವ ಕಷ್ಟ ಮತ್ಯಾರಿಗೂ ಬರಬೇಡಪ್ಪ

ನೋಡಿ ಸ್ವಾಮಿ ನಮ್ಮ ಸ್ಥಿತಿನಾ..! ನಮಗೆ ಬಂದಿರುವ ಕಷ್ಟ ಮತ್ಯಾರಿಗೂ ಬರಬೇಡಪ್ಪ

- Advertisement -
- Advertisement -

ಸಿಲಿಕಾನ್ ಸಿಟಿ ಬೆಂಗಳೂರು ಎಂದರೆ ಮಾಹಿತಿ, ತಂತ್ರಜ್ಞಾನದಲ್ಲಿ ಅಭಿವೃದ್ಧಿ ಹೊಂದಿದ ನಗರ. ಭಾರತದ ಅತ್ಯುತ್ತಮ ಜೀವನಯೋಗ್ಯ ನಗರಗಳಲ್ಲೊಂದು. ಹೆಚ್ಚು ಉದ್ಯೋಗ ಸೃಷ್ಟಿಸುತ್ತಿರುವ ನಗರವೂ ಹೌದು.  ಅದ್ರೆ ಇಲ್ಲಿರುವ ನಮ್ಮ ಸ್ಥಿತಿ ನೋಡಿದರೆ ಜನರು ಮುಂದಕ್ಕೆ ಹೆಜ್ಜೆ ಹಾಕಲು ಭಯಪಡುವಂತಾಗಿದೆ. ಅವರನ್ನು ನಾನೇ ಅಪೋಶನ ತೆಗೆದುಕೊಳ್ಳುವಂತಾಗಿರುವುದು ದುರಂತ.

ಅಂದ ಹಾಗೆ ನಮ್ಮ ಹೆಸರು ಪುಟ್ಪಾತ್, ಕನ್ನಡದಲ್ಲಿ ಪಾದಚಾರಿ ಮಾರ್ಗ ಎಂದು ಕರೆಯುತ್ತಾರೆ. ಪ್ರತಿ ಮುಖ್ಯ ರಸ್ತೆಯ ಪಕ್ಕದಲ್ಲಿ ನಾವಿರುತ್ತೇವೆ. ವಾಹನಗಳಿಂದ ಸುರಕ್ಷಿತವಾಗಿ ಜನ ನಮ್ಮನ್ನು ಬಳಸವಹುದಾಗಿದೆ. ಆದರೆ ನಮ್ಮ ಪರಿಸ್ಥಿತಿಯೋ ತೀರಾ ಹದಗೆಟ್ಟಿದೆ.

ಇತ್ತೀಚಿಗೆ ಅಷ್ಟೇ ಕಾಮಗಾರಿ ನಡೆಸಿದ್ದಾರೆ ಆಗಲೇ ಸಿಮೆಂಟ್ ಬ್ಲಾಕ್‍ಗಳು ಕಿತ್ತು ಹೋಗಿವೆ. ಹಾಸಿರುವ ಬಂಡೆಗಳು  ಮುರಿದು ಬಿದ್ದಿದೆ. ನಮ್ಮ ಮೇಲೆ ಬಿದ್ದಿರುವ ಮರದ ರೆಂಬೆ ಕೊಂಬೆಗಳನ್ನು ತೆರೆವುಗೊಳಿಸಿಲ್ಲ. ಕೆಲವೊಂದು ವಾರ್ಡ್‍ಗಳಲ್ಲಿ ನಾವೇ ಕಸದ ಬುಟ್ಟಿಗಳಾಗಿದ್ದೇವೆ. ಹೇಗಿದೆ ನೋಡಿ ಸ್ವಾಮಿ ನಮ್ಮ ಪರಿಸ್ಥಿತಿ. ನಮ್ಮ ಮೇಲೆ ಖುಷಿಯಿಂದ ಹೆಜ್ಜೆ ಹಾಕಬೇಕಾದವರು ಕಸದ ವಾಸನೆ ತಾಳಲಾರದೆ ಮೂಗು ಮುಚ್ಚಿಕೊಂಡು ಹೋಗುವ ದುಸ್ಥಿತಿ ಬಂದಿದೆ. ಇದಕ್ಕೆಲ್ಲಾ ಮುಕ್ತಿ ಯಾವಾಗಪ್ಪಾ…..

 

ನಮ್ಮನ್ನ ಸರಿಯಾಗಿ ನೋಡಕೊಳ್ಳಬೇಕು, ಜನರು ಸುಖಕರವಾಗಿ ನಮ್ಮನ್ನು ಬಳಸಬೇಕು ಎಂದು ನಮ್ಮನ್ನು ಬಿಬಿಎಂಪಿಗೆ ಒಪ್ಪಿಸಿದ್ದಾರೆ. ಆದರೆ, ನಮ್ಮ ಪರಿಸ್ಥಿತಿಯನ್ನು ಕಂಡರೆ ಅವರು ಏನು ಕಾರ್ಯನಿರ್ವಹಿಸುತ್ತಿದ್ದರೋ ಎಂಬ ಅನುಮಾನ ಕಾಡ್ತಿದೆ.

ವಾಹನಗಳ ಪಾರ್ಕಿಂಗ್ ಸ್ಥಳ: ಪಾದಚಾರಿಗಳಿಗೆ ಮಾರ್ಗವಾಗಬೇಕಾದ ನಾವು ವಾರ್ಡ್‍ಗಳ ಒಳಗಡೆ ಹೇಗೆ ಬೇಕೋ ಹಾಗೇ ವಾಹನಗಳನ್ನು ನಿಲ್ಲಿಸಲು ಪಾರ್ಕಿಂಗ್ ಸ್ಥಳವಾಗಿದ್ದೇವೆ. ಹಾಗಾಗಿ ಇವರ ಹಾವಳಿ ಹೆಚ್ಚಾದಾಗ ಜನರು ನಮ್ಮನ್ನು ಹೇಗೆ ಬಳಸಲು ಸಾಧ್ಯ ಹೇಳಿ.

ಉದ್ಯಮ ನಗರಿಗೆ ವಾಹನ ದಟ್ಟಣೆ ಸಾಮಾನ್ಯ ಪದ. ಅದು ಗೊತ್ತಿದ್ದು ಸಹ ಈ ದ್ವಿಚಕ್ರ ವಾಹನ ಸವಾರರು ವಾಹನ ದಟ್ಟಣೆ ಉಂಟಾದಾಗ ನಮ್ಮ ಮೇಲೆಯೇ ಸವಾರಿ ನಡೆಸ್ತಾರೆ. ಒಮ್ಮೊಮ್ಮೆ ಸವಾರಿಯಲ್ಲಿ ಅಪಘಾತಗಳು ಸಂಭವಿಸಿ ಜೀವ ಹಾನಿಯಾಗಿರುವ ಉದಾಹರಣೆಗಳು ಇವೆ. ಹಾಗಾಗಿ ಇದನ್ನು ತಪ್ಪಿಸಬೇಕು ಎಂದು ಅಲ್ಲಿಲ್ಲ ಬಿಬಿಎಂಪಿ ಸಿಸಿಟಿವಿ ಕ್ಯಾಮೆರಾಗಳನ್ನು ಹಾಕಿದ್ದಾರೆ. ಆದರೂ ಸಹ ನಮ್ಮ ಮೇಲೆ ವಾಹನಗಳನ್ನು ಓಡಿಸುತ್ತಾರೆ ಏನು ಮಾಡೋಣ.

ನಮ್ಮ ಸ್ಥಿತಿ ಹೇಗಿದೆ ಅಂದರೆ ಯಾರಾದರೂ ನಮ್ಮ ಮಾರ್ಗದಲ್ಲಿ ಸಾಗುತ್ತಾ ಮೊಬೈಲ್ ಏನಾದರೂ ನೋಡಿಕೊಂಡು ಹೋದರಂತೂ
ಮುಖ ಮೂತಿ ಕಿತ್ತುಹೋಗುವುದಂತೂ ಗ್ಯಾರಂಟಿ.

ಇನ್ನು ಯಾರಾದರೂ ಕಟ್ಟಡ ನಿರ್ಮಾಣ ಕಾರ್ಯವನ್ನು ಕೈಗೊಂಡರಂತೂ ನಾವೇ ಕಾಮಾಗಾರಿಗೆ ಬೇಕಾದ ಕಲ್ಲು, ಮರಳು, ಜಲ್ಲಿ ಸಂಗ್ರಹಿಸುವ ಗೋದಾಮುಗಳು. ಅವರಿಗೆ ಹೇಳುವವರಿಲ್ಲ ಕೇಳುವವರಿಲ್ಲ. ಜನರು ಅಷ್ಟೇ ಯಾರೂ ಪ್ರಶ್ನಿಸದೆ ನಮಗ್ಯಾಕಪ್ಪ ನಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಂಡು ಹೋಗೋಣ ಎಂದು ಮುಂದುವರೆಯುತ್ತಾರೆ.

ಬಯಲು ಶೌಚಾಲಯ: ಪಾವತಿಸಿ ನಮ್ಮನ್ನು ಬಳಸಿ ಎಂದು ದೊಡ್ಡ ದೊಡ್ಡ ಬೋರ್ಡ್‍ಗಳನ್ನು ಹಾಕಿಕೊಂಡು ಸಾರ್ವಜನಿಕ ಶೌಚಾಲಯಗಳು ಕಾರ್ಯನಿರ್ವಹಿಸುತ್ತಿರುತ್ತವೆ. ಆದರೆ, ಅದನ್ನು ಬಳಸದೇ ಎಲ್ಲಾದರೂ ಗೋಡೆ ಸಿಕ್ಕರೆ ಸಾಕು, ನನ್ನ ಮೇಲೆ ನಿಂತು ಮಜ್ಜನ ಮಾಡಿಸುವ ಪುಣ್ಯಾತ್ಮರು ಇದ್ದಾರೆ. ಆ ವಾಸನೆ ಕುಡಿದು ಅಲ್ಲಿ ಯಾರಾದರೂ ಓಡಾಡಲು ಸಾಧ್ಯವೇ ನೀವೇ ಹೇಳಿ.

ಬೀದಿ ಬದಿ ವ್ಯಾಪಾರಿಗಳು: ಹೊಟ್ಟೆ ಪಾಡಿಗಾಗಿ ಅನೇಕ ವರ್ಷಗಳಿಂದ ನನ್ನ ಮೇಲೆಯೇ ತಮ್ಮ ಕಾರ್ಯವನ್ನು ಮಾಡುತ್ತಿದ್ದಾರೆ. ಹೋಗಲಿ ಹೇಗೋ ಮಾಡಿಕೊಂಡು ಹೋಗಲಿ ಎಂದರೆ ಕೆಲವು ಜನರ ಓಡಾಡಕ್ಕೂ ತೊಂದರೆ ಮಾಡುತ್ತಿದ್ದಾರೆ. ಬಿಬಿಎಂಪಿ ಅನೇಕ ವರ್ಷಗಳಿಂದ ಬೀದಿ ವ್ಯಾಪಾರಿಗಳಿಗೆ ಮತ್ತೊಂದು ವ್ಯವಸ್ಥೆ ಮಾಡಿಕೊಟ್ಟಿದ್ದರು ಈ ಜನರಿಗೆ ಅಲ್ಲಿಗೆ ಹೋಗುವ ಮನಸ್ಸಿಲ್ಲ. ಅವರು ನನ್ನ ಮೇಲೆನೆ ವ್ಯಾಪಾರ ಮಾಡಬ್ಬೇಕು ಎಂದು ಕೂರ್ತಾರೆ. ನಂತರ ಕಸವನ್ನೆಲ್ಲಾ ಅಲ್ಲೇ ಹಾಕಿ ಹೋಗುತ್ತಾರೆ. ಅದನ್ನು ಒಮ್ಮೊಮ್ಮೆ ಬಿಬಿಎಂಪಿ ಅವರು ಕಸ ಎತ್ತುತ್ತಾರೆ ಇನ್ನೊಂದು ಸಲ ಎತ್ತುವುದಿಲ್ಲ. ಹಾಗಾಗಿ ನಮ್ಮ ಮೇಲೆ ಜನರು ಹೇಗೆ ಎಲ್ಲಾ ಕಡೆ ಸುಲಲಿತವಾಗಿ ಓಡಾಡಲು ಸಾಧ್ಯ ಹೇಳಿ.

ಒಟ್ಟಾರೆಯಾಗಿ ಬಿಬಿಎಂಪಿ ಅಧಿಕಾರಿಗಳು ಇತ್ತ ಕಡೆ ಸ್ವಲ್ಪ ಗಮನಹರಿಸಿದರೆ, ನೀವು ಪಾದಾಚಾರಿಗಳು ಎಚ್ಚೆತ್ತುಕೊಂಡು ಕಸ ಬಿಸಾಡದೇ, ಗಲೀಜು ಮಾಡದೆ ನಮ್ಮನ್ನು ಶುಚಿಯಾಗಿಟ್ಟುಕೊಂಡರೆ ಮುಂದೆ ಆಗುವ ಅನಾಹುತಗಳನ್ನು ತಪ್ಪಿಸಬಹುದು ಎಂಬುದು ನಮ್ಮ ಪಾದಚಾರಿ ಮಾರ್ಗದ ಆಶಯ.

ಬನ್ನಿ ನಮ್ಮ ಕುರಿತು ಜನಸಾಮಾನ್ಯರು ಏನು ಹೇಳಿದ್ದಾರೆ ಎಂದು ನೋಡೋಣ.

ಪಾದಚಾರಿ ಮಾರ್ಗವನ್ನು ಗಾಡಿಗಳು ಮತ್ತು ಬೀದಿ ವ್ಯಾಪಾರಿಗಳು ಆವರಿಸಿಕೊಂಡು ಜನರಿಗೆ ಓಡಾಡಲು ರಸ್ತೆ ಇಲ್ಲದಾಗಿದೆ. ಜೊತೆಗೆ ವ್ಯಾಪಾರಿಗಳು ಸುರಿಯುವ ಕಸವು ಕೊಳೆತು ಆರೋಗ್ಯ ಕೆಡುವಂತಾಗಿದೆ.
– ಸೌಮ್ಯ, ಬನಶಂಕರಿ ನಿವಾಸಿ.
=========
ವಾರ್ಡ್ ಒಳಗಿರುವ ಪಾದಚಾರಿ ಮಾರ್ಗಗಳು ಕಸದಿಂದಲೇ ರಾರಾಜಿಸಿತ್ತಿರುವೆ. ಜೊತೆಗೆ ಪಾದಚಾರಿ ಮಾರ್ಗದಲ್ಲಿರುವ ಮ್ಯಾನ್‍ಹೋಲ್‍ಗಳಿಂದ ನೀರು ಸುರಿದು ಸುರಿದು ಮೂಗು ಮುಚ್ಚಿಕೊಂಡು ಹೋಗುವ ಪರಿಸ್ಥಿತಿ ಇದೆ.
– ಮಂಜುನಾಥ್, ಶ್ರೀರಾಮಪುರ ನಿವಾಸಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಎಲೆಮರೆ-೨ ಅಂತ ಹಾಕಿದ್ದೀರಿ.

    ಎಲೆಮರೆ-೧ಹುಡುಕಿದೆ. ಇಲ್ಲ ಅಂದಿರಿ.ಏನಿದರ ಅರ್ಥ?

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...