Homeಕರ್ನಾಟಕಶಿಕ್ಷಣ ವ್ಯವಸ್ಥೆ ಬದಲಾಗಲಿ, ನನ್ನ ಬಲಿದಾನ ಬದಲಾವಣೆಗೆ ದಾರಿದೀಪವಾಗಲಿ ಎಂದು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ

ಶಿಕ್ಷಣ ವ್ಯವಸ್ಥೆ ಬದಲಾಗಲಿ, ನನ್ನ ಬಲಿದಾನ ಬದಲಾವಣೆಗೆ ದಾರಿದೀಪವಾಗಲಿ ಎಂದು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ

ಈಗಿನ ಶಿಕ್ಷಣ ವ್ಯವಸ್ಥೆಯಲ್ಲಿ ಎಂಜಿನಿಯರಿಂಗ್‌ ಕಲಿತ ವಿದ್ಯಾರ್ಥಿ ಸೈಬರ್‌ ಸೆಂಟರ್‌ನಲ್ಲಿ ಕೆಲಸ ಮಾಡಬಹುದು ಅಷ್ಟೇ ಎಂದು ಸಾವಿಗೂ ಮುನ್ನ ಮಾಡಿದ ವಿಡಿಯೋದಲ್ಲಿ ದಾಖಲಾಗಿದೆ.

- Advertisement -
- Advertisement -

‘ಶಿಕ್ಷಣ ನೀತಿಯಿಂದ ಬೇಸತ್ತು, ಶಿಕ್ಷಣ ವ್ಯವಸ್ಥೆ ಬದಲಾಗಲಿ, ನನ್ನ ಬಲಿದಾನ ಬದಲಾವಣೆಗೆ ದಾರಿದೀಪವಾಗಲಿ’ ಎನ್ನುತ್ತಾ ಎಂಜಿನಿಯರಿಂಗ್‌ ವಿದ್ಯಾರ್ಥಿಯೊಬ್ಬ ನೇಣಿಗೆ ಶರಣಾಗಿರುವ ದುರ್ಘಟನೆ ಹಾಸನದಲ್ಲಿ ನಡೆದಿದೆ.

ಶಿಕ್ಷಣ ವ್ಯವಸ್ಥೆ ಬದಲಾಗದಿದ್ದರೆ ಸಾಧನೆ ಸಾಧ್ಯವಿಲ್ಲ ಎಂದು ಸಾಯುವ ಮುನ್ನ ವೀಡಿಯೋ ಮಾಡಿರುವ ಹೇಮಂತ್‌ ಎಂಬ ವಿದ್ಯಾರ್ಥಿ, ಮುಖ್ಯಮಂತ್ರಿಗಳು, ಶಿಕ್ಷಣ ಇಲಾಖೆ, ವಿಟಿಯು ಸೇರಿದಂತೆ ಎಲ್ಲಾ ರಾಜಕೀಯ ನಾಯಕರು ಶಿಕ್ಷಣ ಸುಧಾರಣೆಗೆ ಸಹಕರಿಸಿ ಎಂದು ಮನವಿ ಮಾಡಿದ್ದಾರೆ. ಅರಸೀಕೆರೆ ತಾಲ್ಲೂಕಿನ ಹಿರಿಯಾಳು ಗ್ರಾಮದ ನಿವಾಸಿಯಾಗಿದ್ದ ಹೇಮಂತ್‌ ಹಾಸನದ ಖಾಸಗಿ ತಾಂತ್ರಿಕ ಕಾಲೇಜೊಂದರಲ್ಲಿ ಎಂಜಿನಿಯರಿಂಗ್‌ ಪದವಿ ವ್ಯಾಸಂಗ ಮಾಡುತ್ತಿದ್ದರು.

‘ನನ್ನಪ್ಪ ಶಿಕ್ಷಕರು, ಅವರ ವಿದ್ಯಾರ್ಥಿಗಳು ದೊಡ್ಡ ಸಾಧನೆ ಮಾಡಿದ್ದಾರೆ. ಹಿಂದಿನ ಶಿಕ್ಷಣ ವ್ಯವಸ್ಥೆಯಲ್ಲಿ ಅದು ಸಾಧ್ಯವಿತ್ತು. ಆದರೆ ಈಗಿನ ಶಿಕ್ಷಣ ವ್ಯವಸ್ಥೆಯಲ್ಲಿ ಇದು ಸಾಧ್ಯವೇ ಇಲ್ಲ. ಈಗಿನ ಶಿಕ್ಷಣ ವ್ಯವಸ್ಥೆಯಲ್ಲಿ ಎಂಜಿನಿಯರಿಂಗ್‌ ಕಲಿತ ವಿದ್ಯಾರ್ಥಿ ಸೈಬರ್‌ ಸೆಂಟರ್‌ನಲ್ಲಿ ಕೆಲಸ ಮಾಡಬಹುದು ಅಷ್ಟೇ. ನನ್ನ ಸಾವು ವ್ಯರ್ಥ ಅಲ್ಲ. ಶಿಕ್ಷಣ ವ್ಯವಸ್ಥೆಯ ಸುಧಾರಣೆಗೆ ಯಾರಾದರೂ ಒಬ್ಬರ ಬಲಿದಾನ ಆಗಲೇಬೇಕಿದೆ. ನಾನು ಬದಲಾವಣೆಗೆ ಬುನಾದಿ ಹಾಕುವ ಕೆಲಸ ಮಾಡಿದ್ದೇನೆ’ ಎಂದು ವೀಡಿಯೋದಲ್ಲಿ ಮಾತನಾಡಿದ್ದಾರೆ.

ವೀಡಿಯೋದಲ್ಲಿ ಪೋಷಕರ ಬಗ್ಗೆಯೂ ಭಾವನಾತ್ಮಕವಾಗಿ ಮಾತನಾಡಿರುವ ಅವರು, ’ಅಪ್ಪ ಅಮ್ಮ ಐ ಲವ್‌ ಯೂ, ನಾನು ನಿಮ್ಮನ್ನು ಮಿಸ್‌ ಮಾಡಿಕೊಳ್ಳುತ್ತೇನೆ. ನನ್ನ ಸಾವಿನ ನಂತರ ಅಪ್ಪ ಅಮ್ಮ ಇಬ್ಬರು ಅನಾಥ ಮಕ್ಕಳನ್ನು ದತ್ತು ಪಡೆದು ಸಾಕಿ. ಆ ಇಬ್ಬರಲ್ಲಿ ನಾನು ಇರುತ್ತೇನೆ ಎಂದು ಹೇಳಿದ್ದಾರೆ. ಎಲ್ಲರೂ ಈ ವೀಡಿಯೋವನ್ನು ನೋಡಲಿ. ಈ ವೀಡಿಯೋವನ್ನು ನ್ಯೂಸ್‌ ಚಾನೆಲ್‌ನಲ್ಲಿ ಪ್ರಸಾರ ಮಾಡಿ’ ಎಂದಿದ್ದಾರೆ.

ಈ ಘಟನೆ ಕುರಿತಂತೆ ಬೇಸರ ವ್ಯಕ್ತಪಡಿಸಿರುವ ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ರಾಜ್ಯ ಸಂಚಾಲಕರಾದ ಸರೋವರ್‌ ಬೆಂಕಿಕೆರೆ, ’ ಹೇಮಂತ್‌ ಅವರ ಆತ್ಮಹತ್ಯೆ ಕರ್ನಾಟಕಕ್ಕೆ ಬಹಳ ಆಘಾತಕಾರಿಯಾದಂತಹ ಘಟನೆಯಾಗಿದೆ. ಸರ್ಕಾರಗಳು ಆತ್ಮಹತ್ಯೆ ಎಲ್ಲದಕ್ಕೂ ಪರಿಹಾರ ಅಲ್ಲ ಎಂದು ಹೇಳಿ ನುಣುಚಿಕೊಳ್ಳುವ ಪ್ರಯತ್ನ ಮಾಡಬಾರದು. ಇದು ಇಡೀ ವ್ಯವಸ್ಥೆ ತಲೆತಗ್ಗಿಸಬೇಕಾದ ಘಟನೆಯಾಗಿದೆ. ಹೇಮಂತ್‌ ಅವರ ಬಲಿದಾನವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಸರ್ಕಾರಗಳು ಉಚಿತ ಹಾಗೂ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುವತ್ತ ಗಮನಹರಿಸಬೇಕು. ಶಿಕ್ಷಣದ ನಂತರ ಯುವಜನರ ಉದ್ಯೋಗ ಮತ್ತು ಉದ್ಯೋಗ ಭದ್ರತೆಯ ಖಾತರಿಯನ್ನು ಸರ್ಕಾರ ನೀಡುವ ನಿಟ್ಟಿನಲ್ಲಿ ಆಲೋಚಿಸಬೇಕು” ಎಂದು ಒತ್ತಾಯಿಸಿದರು.

ಈ ಬಗ್ಗೆ ಮಾತನಾಡಿದ ಸಮಾನ ಶಿಕ್ಷಣಕ್ಕಾಗಿ ಜನಾಂದೋಲನದ ಮುಖಂಡರಾದ ಬಿ. ಶ್ರೀಪಾದ್‌ ಭಟ್‌, ’ಹೊಸ ಶಿಕ್ಷಣ ನೀತಿಯನ್ನು ತರಾತುರಿಯಲ್ಲಿ ತರುತ್ತಿರುವುದಕ್ಕೂ ಈ ಸಾವಿಗೂ ಪರೋಕ್ಷ ಸಂಬಂಧವಿದೆ. 34 ವರ್ಷಗಳ ನಂತರ ಹೊಸ ಶಿಕ್ಷಣ ನೀತಿ ಬರುತ್ತಿದೆ. ಈ ಹಿಂದೆ ಇದ್ದ ಶಿಕ್ಷಣ ನೀತಿಯಲ್ಲಿಯ ಉತ್ತಮ ಅಂಶಗಳೇನು? ಮಿತಿಗಳೇನು ಎಂಬುದನ್ನು ಅರ್ಥಮಾಡಿಕೊಂಡು, ಮಿತಿಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಸರ್ಕಾರಗಳು ಕೆಲಸ ಮಾಡಬೇಕಿತ್ತು. ಆದರೆ ಸರ್ಕಾರಗಳು ಅದರ ಬಗ್ಗೆ ಗಮನ ಕೊಡುತ್ತಿಲ್ಲ. ಶಾಲಾ-ಕಾಲೇಜುಗಳಲ್ಲಿ ಶಿಕ್ಷಕರ ನೇಮಕಾತಿ ನಡೆಯುತ್ತಿಲ್ಲ. ಹೊಸ ಶಿಕ್ಷಣ ನೀತಿಯಲ್ಲಿ ಶೇ.40 ರಷ್ಟು ಆನ್‌ ಲೈನ್‌ ಶಿಕ್ಷಣಕ್ಕೆ ಒತ್ತು ನೀಡಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಇದರಿಂದಾಗಿ ಉದ್ಯೋಗ ಸಿಗುವುದಿಲ್ಲ, ಕಾಲೇಜಿನಲ್ಲಿ ಶಿಕ್ಷಕರಿಲ್ಲ ಎಂಬುದನ್ನು ಸೇರಿದಂತೆ ಭ್ರಮನಿರಸನವಾಗಿರುತ್ತದೆ. ಹೊಸ ಶಿಕ್ಷಣ ನೀತಿಯಲ್ಲಿ ಪದವಿ ಶಿಕ್ಷಣವನ್ನು ನಾಲ್ಕು ವರ್ಷಕ್ಕೆ ಮಾಡಲಾಗಿದೆ. ಮೊದಲ ವರ್ಷಕ್ಕೂ ಪ್ರಮಾಣಪತ್ರ ಎರಡನೇ ವರ್ಷಕ್ಕೂ ಪ್ರಮಾಣ ಪತ್ರ ನೀಡಲಾಗುತ್ತದೆ ಎಂದು ತಿಳಿಸುತ್ತಿದ್ದಾರೆ. ಆದರೆ ಉದ್ಯೋಗ ಖಾತ್ರಿಯಿಲ್ಲದೇ ಯುವಜನರು ಕಂಗಾಲಾಗಲಿದ್ದಾರೆ. ಸರಿಯಾದ ಆಲೋಚನೆಯಿಲ್ಲದ, ತರಾತುರಿಯಿಂದ ತಂದಿರುವ ಹೊಸ ಶಿಕ್ಷಣ ನೀತಿಯಿಂದಾಗಿ ವಿದ್ಯಾರ್ಥಿ ಯುವಜನರಲ್ಲಿ ಆತ್ಮಹತ್ಯೆ ಪ್ರಕರಣಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ” ಎಂದು ಆಂತಕ ವ್ಯಕ್ತಪಡಿಸಿದರು.

ಕೊರೊನಾದಿಂದಾಗಿ ಎದುರಾಗಿರುವ ಬಡತನ, ಆರ್ಥಿಕ ಸಂಕಷ್ಟ ಹಾಗೂ ಇತರ ಸಮಸ್ಯೆಯಿಂದಾಗಿ ರಾಜ್ಯದಲ್ಲಿ 850 ಜನರು ಆತ್ಮಹತ್ಯೆ ಮಾಡಿಕೊಂಡ ಮತ್ತು ಆತ್ಮಹತ್ಯೆಗೆ ಪ್ರಯತ್ನಿಸಿದ ಪ್ರಕರಣಗಳು ವರದಿಯಾಗಿವೆ. ಕೊರೊನಾ ನಂತರದಲ್ಲಿ ವಿದ್ಯಾರ್ಥಿಗಳು ಸೇರಿದಂತೆ ಯುವ ತಲೆಮಾರಿನವರ ಆತ್ಮಹತ್ಯೆ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿರುವುದು ಎಲ್ಲರಲ್ಲಿಯೂ ಆತಂಕ ಸೃಷ್ಟಿಸಿದೆ. ಇದಕ್ಕೆ ಕಾರಣವೇನೆಂದು ಅಧ್ಯಯನ ನಡೆಸಿ ಹೆಚ್ಚುತ್ತಿರುವ ಆತ್ಮಹತ್ಯೆ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೆಲಸ ಮಾಡಬೇಕಿದ್ದ ಸರ್ಕಾರಗಳು ತಮ್ಮ ಕುರ್ಚಿಗಳನ್ನು ಭದ್ರಗೊಳಿಸಿಕೊಳ್ಳುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿರುವುದು ಬೇಸರದ ಸಂಗತಿ. ಸರ್ಕಾರಗಳು ಈಗಲಾದರೂ ಎಚ್ಚೆತ್ತುಕೊಳ್ಳಲಿ.

ಜೀವ ಅಮೂಲ್ಯವಾಗಿದ್ದು, ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ಯಾವುದೆ ಮಾನಸಿಕ ಸಮಸ್ಯೆಗಳಿಗೆ ವೈದ್ಯರನ್ನು ಸಂಪರ್ಕಿಸಿ.

ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ
ಆರೋಗ್ಯ ಸಹಾಯವಾಣಿ 104.


ಇದನ್ನೂ ಓದಿ: ಬಡತನ ಮತ್ತು ಆರ್ಥಿಕ ಸಂಕಷ್ಟ: ಒಂದು ವರ್ಷದೊಳಗೆ ರಾಜ್ಯದಲ್ಲಿ 850 ಆತ್ಮಹತ್ಯೆ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಶಿಕ್ಷಣ ವ್ಯವಸ್ಥೆ ಬದಲಾವಣೆ ಆಗಬೇಕಾಗಿರುವುದು ನಿಜ. ಆದರೆ ಇದಕ್ಕೆ ಆತ್ಮಹತ್ಯೆ ಪರಿಹಾರವಲ್ಲ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...