Homeಕರ್ನಾಟಕಹೆಣ್ಣು ಮಕ್ಕಳ ಕೈಕಾಲು ತೆಗೆಯಲು ಸೂಚಿಸಿದ ವೀರಭದ್ರ ಶಿವಾಚಾರ್ಯ ಸ್ವಾಮಿಯನ್ನೆ ಮೊದಲು ಜೈಲಿಗೆ ಕಳಿಸಬೇಕು

ಹೆಣ್ಣು ಮಕ್ಕಳ ಕೈಕಾಲು ತೆಗೆಯಲು ಸೂಚಿಸಿದ ವೀರಭದ್ರ ಶಿವಾಚಾರ್ಯ ಸ್ವಾಮಿಯನ್ನೆ ಮೊದಲು ಜೈಲಿಗೆ ಕಳಿಸಬೇಕು

- Advertisement -
- Advertisement -

‘ಸಂಗಾತಿಯನ್ನು ಆಯ್ಕೆ ಮಾಡುವಾಗ ಮಗಳು ನಿಮ್ಮ ಮಾತು ಕೇಳದಿದ್ದರೆ ಆಕೆಯ ಕೈಯೋ ಕಾಲನ್ನೋ ಮುರಿದು ಬಿಡಿ’ ಎಂಬ ಮಾತನ್ನು ಕೊರಟಗೆರೆ ತಾಲೂಕು ಸಿದ್ಧರಬೆಟ್ಟದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ದಿವ್ಯವಾದ ಸಲಹೆಯನ್ನು ನೀಡಿದ್ದಾರೆ. ಎಂಥೆಂಥ ಮಹಾಪುರುಷರು ವೀರಶೈವರಲ್ಲಿದ್ದಾರೆ ಎಂಬುದಕ್ಕೆ ಈ ಪುಣ್ಯಾತ್ಮನ ಮಾತು ಸಾಕ್ಷಿಯಾಗಿದೆ. ಸಕಲ ಜೀವಪ್ರೇಮಿಯಾಗಿರಿ ಎಂದು ಬಸವಣ್ಣನವರು ಸಾರುತ್ತ ಬಂದಿದ್ದರೆ , ಹಾರುವರ ಪ್ರಭಾವಕ್ಕೆ ಒಳಗಾದ ವೀರಶೈವವಾದಿಗಳು ಮನುವಾದಿಗಳಿಗಿಂತಲೂ ಒಂದು ಹೆಜ್ಜೆ ಮುಂದೆ ಹೋಗಿ ಬಿಟ್ಟಿದ್ದಾರೆ. ‘ಬ್ರಾಹ್ಮಣರಿಗಿಂತಲೂ ಬ್ರಾಹ್ಮಣ್ಯ ಹೊಂದಿದ ವ್ಯಕ್ತಿ ತುಂಬಾ ಅಪಾಯಕಾರಿ’ ಎಂಬ ಮಾತು ಸತ್ಯ.

ವೈದಿಕರಿಗಿಂತಲೂ ವೈದಿಕತ್ವದ ಬಗೆಗೆ ಆಸಕ್ತಿ ಹೊಂದಿದ ನಾನು ಅವರಿಗಿಂತಲೂ ಒಂದು ಕೈ ಮಿಗಿಲು ಎಂಬ ಧೋರಣೆಗಳುಳ್ಳ ವೀರಶೈವ ಮಠಾಧೀಶರು ತಮ್ಮ ತಲೆಯಲ್ಲಿ ವೈದಿಕತ್ವದ ಕಸವನ್ನು ತುಂಬಿಕೊಂಡು ಬಗ್ಗಡಗೊಂಡಿದ್ದಾರೆ. ಹೀಗಾಗಿಯೆ ಈ ವೀರಶೈವವಾದಿ ಮಠಾಧಿಪತಿಗಳು ನಾವೂ ಹಿಂದುಗಳು ಎಂದು ಹೇಳುತ್ತ ನಡೆದಿದ್ದಾರೆ. ಬಹುತೇಕ ವೀರಶೈವ ಪೀಠದಲ್ಲಿ ಪೀಠಾಧಿಕಾರಿಯಾಗಿ ಅಮರಿಕೊಂಡಿರುವ ಮಠಾಧೀಶರಿಗೆ ಯಾವುದೆ ತಿಳುವಳಿಕೆ ಇಲ್ಲ. ಸಂಸ್ಕøತದ ಸುಳ್ಳು ಸೊಟ್ಟುಗಳ ನಾಲ್ಕಾರು ಮಂತ್ರಗಳು ಬಾಯಿಪಾಠ ಮಾಡಿಕೊಂಡು ಕಂಡ ಕಂಡದಲ್ಲಿ ತಮ್ಮ ದಡ್ಡ ಭಕ್ತರ ಮುಂದೆ ಅವನ್ನೇ ಹೇಳಿ ತಮ್ಮ ಪ್ರೌಢಿಮೆ ಮೆರೆಯುತ್ತಾರೆ. ಇಂಥವರಿಗೆ ಸಾಮಾನ್ಯ ಜ್ಞಾನವೂ ಗಗನ ಕುಸುಮ.

ಜನಿತಕ್ಕೆ ತಾಯಾಗಿ ಹೆತ್ತಳು ಮಾಯೆ
ಮೋಹಕ್ಕೆ ಮಗಳಾಗಿ ಹುಟ್ಟಿದಳು ಮಾಯೆ
ಕೂಟಕ್ಕೆ ಸ್ತ್ರೀಯಾಗಿ ಕೂಡಿದಳು ಮಾಯೆ
ಇದಾವಾವ ಪರಿಯಲ್ಲಿ ಕಾಡಿತ್ತು ಮಾಯೆ
ಈ ಮಾಯೆಯ ಕಳೆವಡೆ ಎನ್ನಳವಲ್ಲ
ನೀವೇ ಬಲ್ಲಿರಿ ಕೂಡಲಸಂಗಮದೇವಾ

ಎಂದು ಬಸವಣ್ಣನವರು ತಮ್ಮ ಒಂದು ವಚನದಲ್ಲಿ ಮಹಿಳೆಯನ್ನು ಬಿಟ್ಟು ಇರಲು ಸಾಧ್ಯವೆ ಇಲ್ಲ. ಪ್ರೀತಿಯನ್ನು ಬಿಟ್ಟು ಜೀವನ ಮಾಡಲು ಯಾರಿಗಾದರೂ ಸಾಧ್ಯವೆ ? ನಮ್ಮೆಲ್ಲರ ಜನನಕ್ಕೆ ಮೂಲ ಕಾರಣ ಮಾಯೆ (ಪ್ರೀತಿ), ನಮ್ಮ ಮಗಳಾಗಿ ಜನಿಸುವವಳು ಹೆಣ್ಣೆ, ನಮ್ಮೊಂದಿಗೆ ಜೀವ ಪಥದಲ್ಲಿ ಹೆಜ್ಜೆ ಹಾಕುವವಳು ಹೆಣ್ಣೆ. ಇವಳನ್ನು ಬಿಟ್ಟು ಇರಲು ಸಾಧ್ಯವೆ ಇಲ್ಲ ಎಂದು ಹೇಳಿ ಹೆಣ್ಣನ್ನು ಗೌರವಾರ್ಹ ವ್ಯಕ್ತಿಯಾಗಿ ಕಂಡಿದ್ದಾರೆ.

ಹೆಣ್ಣು ಕೇವಲ ಭೋಗದ ವಸ್ತುವಾಗಿ ಕಂಡ ಸನಾತನ ಪರಂಪರೆಯ ಜನ ಆಕೆಯನ್ನು ಸತಿ ಸಹಗಮನಕ್ಕೆ ಹಿಂದೆ ದೂಡಿದ್ದರು. ದೇವರ ಹೆಸರಿನ ಮೇಲೆ ಆಕೆಯನ್ನು ಬಸವಿಗೆ ಬಿಟ್ಟಿದ್ದರು. ಕೆರೆಗೆ ಆಹಾರವಾಗಿಯೂ ಹೆಣ್ಣನ್ನೆ ಬಲಿಕೊಟ್ಟರು. ಹೆಣ್ಣು ಕನಿಷ್ಠ, ಗಂಡು ಶ್ರೇಷ್ಠ ಎಂಬ ಚಿಂತನೆಯೆ ಪ್ರಜಾಪ್ರಭುತ್ವ ವಿರೋಧಿ. ಬ್ರಾಹ್ಮಣಶಾಹಿ ವ್ಯವಸ್ಥೆಯಲ್ಲಿ ಇಂದಿಗೂ ಮಹಿಳೆಗೆ ಪೂಜೆಯ ಹಕ್ಕನ್ನು ನಿರಾಕರಿಸಲಾಗಿದೆ. ಮಹಿಳೆ ಮುಟ್ಟಾಗುತ್ತಾಳಾದ್ದರಿಂದ ಆಕೆ ಕೀಳು ಎಂಬುದು ಪ್ರಚಲಿತದಲ್ಲಿದೆ. ಹಲವಾರು ದೇವಸ್ಥಾನದಲ್ಲೂ ಮಹಿಳೆಯರನ್ನು ನಿರಾಕರಿಸಲಾಗಿದೆ. ಆದ್ದರಿಂದಲೆ ನಮ್ಮ ದೇಶದಲ್ಲಿ ಹೆಣ್ಣು ಭ್ರೂಣದ ಹತ್ಯೆ ನಿರಾಂತಕವಾಗಿ ನಡೆದೆ ಇದೆ.

ಕೊರಟಗೆರೆಯ ಈ ಮಠಾಧೀಶನ ತಲೆಯಲ್ಲಿರುವುದು ವೈದಿಕ ಮಿದುಳು. ವೈದಿಕ ಮಿದುಳು ಸಹಜವಾಗಿಯೆ ಅಸಮತೋಲನವಾಗಿರುತ್ತದೆ. ಅದಕ್ಕೆ ಯೋಚಿಸುವ ಶಕ್ತಿ ಇರೋದಿಲ್ಲ. ತಾನಷ್ಟೇ ಶ್ರೇಷ್ಠ ಉಳಿದವರು ಕನಿಷ್ಠ ಎಂಬ ಭ್ರಮೆ ಹೊತ್ತುಕೊಂಡಿರುತ್ತದೆ. ಮಹಿಳೆ ಅಂದರೆ ಅದೊಂದು ಉಪಯೋಗಿಸಿ ಬಿಸಾಡುವ ವಸ್ತು ಮಾತ್ರವಾಗಿರುತ್ತದೆ. ಆದ್ದರಿಂದಲೆ ಹೆಣ್ಣು ನಿಮ್ಮ ಮಾತು ಕೇಳದೆ ಹೋದರೆ ಅವಳ ಕೈಯನ್ನೋ- ಕಾಲನ್ನೋ ಕತ್ತರಿಸಿ ಎಂದು ಈ ಪುಣ್ಯಾತ್ಮ ಗುರು ತನ್ನ ಭಕ್ತರಿಗೆ ಅಪ್ಪಣೆ ಕೊಡಿಸಿದ್ದಾನೆ. ಮೊದಲೆ ತಿಳುವಳಿಕೆಯ ಕೊರತೆಯಿಂದ ಮೂರಾಬಟ್ಟೆಯಾದ ಭಕ್ತರೆಂಬ ತಲೆ ಹಿಡುಕರಿಗೆ ಗುರುವಿನ(?) ಈ ಮಾತುಗಳು ಅತ್ಯಂತ ಪ್ರೇರಕ ಅನಿಸುತ್ತವೆ. ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ ಎಂದು ಹಾಡುತ್ತ ಗುರುವಿನ ಮಾತಿನ ಮಾರ್ಗದಲ್ಲಿ ನಡೆಯುತ್ತ ಹೋದರೆ ಒಂದೊಂದು ಕುಟುಂಬವೂ ತಮ್ಮ ಮನೆಯಲ್ಲಿಯೆ ಸ್ಮಶಾನವನ್ನು ನಿರ್ಮಿಸಿಕೊಳ್ಳಬೇಕಾಗುತ್ತದೆ.

ಅರಿವಿಲ್ಲದೆ ನಿಮ್ಮ ಮನೆಯ ಹೆಣ್ಣು ಮಗು ಜಾರುತ್ತಿದ್ದರೆ ಆಕೆಗೆ ವಿವೇಕ ನೀಡಿ, ಸಂಯಮದಿಂದ ವರ್ತಿಸುವಂತೆ ತಿಳಿ ಹೇಳಬೇಕು. ಸಾಂಸಾರಿಕ ಜೀವನವೆಂಬದು ಸಂತಸದ ಮಾರ್ಗವಾಗಬೇಕಾದರೆ ಸತಿಪತಿಗಳೊಂದಾಗಿ ನಡೆದಾಗಲೆ ಹಿತವಾಗಬಲ್ಲುದು ಎಂಬುದನ್ನು ಅವರಿಗೆ ಮನದಷ್ಟು ಮಾಡಿಸಬೇಕು. ತಮ್ಮ ಹಾಗೂ ಆ ಹುಡುಗನ ಕುಟುಂಬದ ರೀತಿ ರಿವಾಜುಗಳು ಹೊಂದಿಕೆಯಾಗಬಲ್ಲವೆ ? ಎಂಬುದನ್ನು ಇಣುಕಿ ನೋಡಲು ಹಚ್ಚಬೇಕು.

ಇಂಥ ಮನ ಬದಲಾವಣೆಯ ಚಿಂತನೆಯನ್ನು ಬಿಟ್ಟು, ಆ ಹೆಣ್ಣು ಮಗುವಿನ ಕಾಲೋ ಕೈಯೋ ತೆಗೆಯಿರಿ. ಅವಳನ್ನು ಶಾಶ್ವತ ಅಂಗವೈಕಲ್ಯಕ್ಕೆ ದೂಡಿ ಎಂಬ ವಿವೇಕರಹಿತ ವೀರಭದ್ರಶಿವಾಚಾರ್ಯನನ್ನು ಯಾವುದೆ ಮುಲಾಜು ಇಲ್ಲದೆ ಜೈಲಿಗೆ ಅಟ್ಟಬೇಕು. ಹಿಂಸೆಯನ್ನು ಪ್ರಚೋದಿಸುವ ಇಂಥ ಮಠಾಧೀಶ ಇದ್ದರೆಷ್ಟು? ಬಿಟ್ಟರೆಷ್ಟು! ಇನ್ನಾದರೂ ವೀರಶೈವ ವಾದಿಗಳು ಇಂಥ ಅಯೋಗ್ಯ ಮಠಾಧೀಶರ ಬೆನ್ನುಬಿದ್ದು ತಮ್ಮನ್ನು ತಾವು ಹಾಳು ಮಾಡಿಕೊಳ್ಳದೆ, ತಮ್ಮ ಬದುಕನ್ನು ಶರಣರ ವಚನಗಳ ಹಿನ್ನೆಲೆಯಲ್ಲಿ ಕಟ್ಟಿಕೊಳ್ಳಬೇಕಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...