Homeಕರ್ನಾಟಕಹೆಣ್ಣು ಮಕ್ಕಳ ಕೈಕಾಲು ತೆಗೆಯಲು ಸೂಚಿಸಿದ ವೀರಭದ್ರ ಶಿವಾಚಾರ್ಯ ಸ್ವಾಮಿಯನ್ನೆ ಮೊದಲು ಜೈಲಿಗೆ ಕಳಿಸಬೇಕು

ಹೆಣ್ಣು ಮಕ್ಕಳ ಕೈಕಾಲು ತೆಗೆಯಲು ಸೂಚಿಸಿದ ವೀರಭದ್ರ ಶಿವಾಚಾರ್ಯ ಸ್ವಾಮಿಯನ್ನೆ ಮೊದಲು ಜೈಲಿಗೆ ಕಳಿಸಬೇಕು

- Advertisement -
- Advertisement -

‘ಸಂಗಾತಿಯನ್ನು ಆಯ್ಕೆ ಮಾಡುವಾಗ ಮಗಳು ನಿಮ್ಮ ಮಾತು ಕೇಳದಿದ್ದರೆ ಆಕೆಯ ಕೈಯೋ ಕಾಲನ್ನೋ ಮುರಿದು ಬಿಡಿ’ ಎಂಬ ಮಾತನ್ನು ಕೊರಟಗೆರೆ ತಾಲೂಕು ಸಿದ್ಧರಬೆಟ್ಟದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ದಿವ್ಯವಾದ ಸಲಹೆಯನ್ನು ನೀಡಿದ್ದಾರೆ. ಎಂಥೆಂಥ ಮಹಾಪುರುಷರು ವೀರಶೈವರಲ್ಲಿದ್ದಾರೆ ಎಂಬುದಕ್ಕೆ ಈ ಪುಣ್ಯಾತ್ಮನ ಮಾತು ಸಾಕ್ಷಿಯಾಗಿದೆ. ಸಕಲ ಜೀವಪ್ರೇಮಿಯಾಗಿರಿ ಎಂದು ಬಸವಣ್ಣನವರು ಸಾರುತ್ತ ಬಂದಿದ್ದರೆ , ಹಾರುವರ ಪ್ರಭಾವಕ್ಕೆ ಒಳಗಾದ ವೀರಶೈವವಾದಿಗಳು ಮನುವಾದಿಗಳಿಗಿಂತಲೂ ಒಂದು ಹೆಜ್ಜೆ ಮುಂದೆ ಹೋಗಿ ಬಿಟ್ಟಿದ್ದಾರೆ. ‘ಬ್ರಾಹ್ಮಣರಿಗಿಂತಲೂ ಬ್ರಾಹ್ಮಣ್ಯ ಹೊಂದಿದ ವ್ಯಕ್ತಿ ತುಂಬಾ ಅಪಾಯಕಾರಿ’ ಎಂಬ ಮಾತು ಸತ್ಯ.

ವೈದಿಕರಿಗಿಂತಲೂ ವೈದಿಕತ್ವದ ಬಗೆಗೆ ಆಸಕ್ತಿ ಹೊಂದಿದ ನಾನು ಅವರಿಗಿಂತಲೂ ಒಂದು ಕೈ ಮಿಗಿಲು ಎಂಬ ಧೋರಣೆಗಳುಳ್ಳ ವೀರಶೈವ ಮಠಾಧೀಶರು ತಮ್ಮ ತಲೆಯಲ್ಲಿ ವೈದಿಕತ್ವದ ಕಸವನ್ನು ತುಂಬಿಕೊಂಡು ಬಗ್ಗಡಗೊಂಡಿದ್ದಾರೆ. ಹೀಗಾಗಿಯೆ ಈ ವೀರಶೈವವಾದಿ ಮಠಾಧಿಪತಿಗಳು ನಾವೂ ಹಿಂದುಗಳು ಎಂದು ಹೇಳುತ್ತ ನಡೆದಿದ್ದಾರೆ. ಬಹುತೇಕ ವೀರಶೈವ ಪೀಠದಲ್ಲಿ ಪೀಠಾಧಿಕಾರಿಯಾಗಿ ಅಮರಿಕೊಂಡಿರುವ ಮಠಾಧೀಶರಿಗೆ ಯಾವುದೆ ತಿಳುವಳಿಕೆ ಇಲ್ಲ. ಸಂಸ್ಕøತದ ಸುಳ್ಳು ಸೊಟ್ಟುಗಳ ನಾಲ್ಕಾರು ಮಂತ್ರಗಳು ಬಾಯಿಪಾಠ ಮಾಡಿಕೊಂಡು ಕಂಡ ಕಂಡದಲ್ಲಿ ತಮ್ಮ ದಡ್ಡ ಭಕ್ತರ ಮುಂದೆ ಅವನ್ನೇ ಹೇಳಿ ತಮ್ಮ ಪ್ರೌಢಿಮೆ ಮೆರೆಯುತ್ತಾರೆ. ಇಂಥವರಿಗೆ ಸಾಮಾನ್ಯ ಜ್ಞಾನವೂ ಗಗನ ಕುಸುಮ.

ಜನಿತಕ್ಕೆ ತಾಯಾಗಿ ಹೆತ್ತಳು ಮಾಯೆ
ಮೋಹಕ್ಕೆ ಮಗಳಾಗಿ ಹುಟ್ಟಿದಳು ಮಾಯೆ
ಕೂಟಕ್ಕೆ ಸ್ತ್ರೀಯಾಗಿ ಕೂಡಿದಳು ಮಾಯೆ
ಇದಾವಾವ ಪರಿಯಲ್ಲಿ ಕಾಡಿತ್ತು ಮಾಯೆ
ಈ ಮಾಯೆಯ ಕಳೆವಡೆ ಎನ್ನಳವಲ್ಲ
ನೀವೇ ಬಲ್ಲಿರಿ ಕೂಡಲಸಂಗಮದೇವಾ

ಎಂದು ಬಸವಣ್ಣನವರು ತಮ್ಮ ಒಂದು ವಚನದಲ್ಲಿ ಮಹಿಳೆಯನ್ನು ಬಿಟ್ಟು ಇರಲು ಸಾಧ್ಯವೆ ಇಲ್ಲ. ಪ್ರೀತಿಯನ್ನು ಬಿಟ್ಟು ಜೀವನ ಮಾಡಲು ಯಾರಿಗಾದರೂ ಸಾಧ್ಯವೆ ? ನಮ್ಮೆಲ್ಲರ ಜನನಕ್ಕೆ ಮೂಲ ಕಾರಣ ಮಾಯೆ (ಪ್ರೀತಿ), ನಮ್ಮ ಮಗಳಾಗಿ ಜನಿಸುವವಳು ಹೆಣ್ಣೆ, ನಮ್ಮೊಂದಿಗೆ ಜೀವ ಪಥದಲ್ಲಿ ಹೆಜ್ಜೆ ಹಾಕುವವಳು ಹೆಣ್ಣೆ. ಇವಳನ್ನು ಬಿಟ್ಟು ಇರಲು ಸಾಧ್ಯವೆ ಇಲ್ಲ ಎಂದು ಹೇಳಿ ಹೆಣ್ಣನ್ನು ಗೌರವಾರ್ಹ ವ್ಯಕ್ತಿಯಾಗಿ ಕಂಡಿದ್ದಾರೆ.

ಹೆಣ್ಣು ಕೇವಲ ಭೋಗದ ವಸ್ತುವಾಗಿ ಕಂಡ ಸನಾತನ ಪರಂಪರೆಯ ಜನ ಆಕೆಯನ್ನು ಸತಿ ಸಹಗಮನಕ್ಕೆ ಹಿಂದೆ ದೂಡಿದ್ದರು. ದೇವರ ಹೆಸರಿನ ಮೇಲೆ ಆಕೆಯನ್ನು ಬಸವಿಗೆ ಬಿಟ್ಟಿದ್ದರು. ಕೆರೆಗೆ ಆಹಾರವಾಗಿಯೂ ಹೆಣ್ಣನ್ನೆ ಬಲಿಕೊಟ್ಟರು. ಹೆಣ್ಣು ಕನಿಷ್ಠ, ಗಂಡು ಶ್ರೇಷ್ಠ ಎಂಬ ಚಿಂತನೆಯೆ ಪ್ರಜಾಪ್ರಭುತ್ವ ವಿರೋಧಿ. ಬ್ರಾಹ್ಮಣಶಾಹಿ ವ್ಯವಸ್ಥೆಯಲ್ಲಿ ಇಂದಿಗೂ ಮಹಿಳೆಗೆ ಪೂಜೆಯ ಹಕ್ಕನ್ನು ನಿರಾಕರಿಸಲಾಗಿದೆ. ಮಹಿಳೆ ಮುಟ್ಟಾಗುತ್ತಾಳಾದ್ದರಿಂದ ಆಕೆ ಕೀಳು ಎಂಬುದು ಪ್ರಚಲಿತದಲ್ಲಿದೆ. ಹಲವಾರು ದೇವಸ್ಥಾನದಲ್ಲೂ ಮಹಿಳೆಯರನ್ನು ನಿರಾಕರಿಸಲಾಗಿದೆ. ಆದ್ದರಿಂದಲೆ ನಮ್ಮ ದೇಶದಲ್ಲಿ ಹೆಣ್ಣು ಭ್ರೂಣದ ಹತ್ಯೆ ನಿರಾಂತಕವಾಗಿ ನಡೆದೆ ಇದೆ.

ಕೊರಟಗೆರೆಯ ಈ ಮಠಾಧೀಶನ ತಲೆಯಲ್ಲಿರುವುದು ವೈದಿಕ ಮಿದುಳು. ವೈದಿಕ ಮಿದುಳು ಸಹಜವಾಗಿಯೆ ಅಸಮತೋಲನವಾಗಿರುತ್ತದೆ. ಅದಕ್ಕೆ ಯೋಚಿಸುವ ಶಕ್ತಿ ಇರೋದಿಲ್ಲ. ತಾನಷ್ಟೇ ಶ್ರೇಷ್ಠ ಉಳಿದವರು ಕನಿಷ್ಠ ಎಂಬ ಭ್ರಮೆ ಹೊತ್ತುಕೊಂಡಿರುತ್ತದೆ. ಮಹಿಳೆ ಅಂದರೆ ಅದೊಂದು ಉಪಯೋಗಿಸಿ ಬಿಸಾಡುವ ವಸ್ತು ಮಾತ್ರವಾಗಿರುತ್ತದೆ. ಆದ್ದರಿಂದಲೆ ಹೆಣ್ಣು ನಿಮ್ಮ ಮಾತು ಕೇಳದೆ ಹೋದರೆ ಅವಳ ಕೈಯನ್ನೋ- ಕಾಲನ್ನೋ ಕತ್ತರಿಸಿ ಎಂದು ಈ ಪುಣ್ಯಾತ್ಮ ಗುರು ತನ್ನ ಭಕ್ತರಿಗೆ ಅಪ್ಪಣೆ ಕೊಡಿಸಿದ್ದಾನೆ. ಮೊದಲೆ ತಿಳುವಳಿಕೆಯ ಕೊರತೆಯಿಂದ ಮೂರಾಬಟ್ಟೆಯಾದ ಭಕ್ತರೆಂಬ ತಲೆ ಹಿಡುಕರಿಗೆ ಗುರುವಿನ(?) ಈ ಮಾತುಗಳು ಅತ್ಯಂತ ಪ್ರೇರಕ ಅನಿಸುತ್ತವೆ. ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ ಎಂದು ಹಾಡುತ್ತ ಗುರುವಿನ ಮಾತಿನ ಮಾರ್ಗದಲ್ಲಿ ನಡೆಯುತ್ತ ಹೋದರೆ ಒಂದೊಂದು ಕುಟುಂಬವೂ ತಮ್ಮ ಮನೆಯಲ್ಲಿಯೆ ಸ್ಮಶಾನವನ್ನು ನಿರ್ಮಿಸಿಕೊಳ್ಳಬೇಕಾಗುತ್ತದೆ.

ಅರಿವಿಲ್ಲದೆ ನಿಮ್ಮ ಮನೆಯ ಹೆಣ್ಣು ಮಗು ಜಾರುತ್ತಿದ್ದರೆ ಆಕೆಗೆ ವಿವೇಕ ನೀಡಿ, ಸಂಯಮದಿಂದ ವರ್ತಿಸುವಂತೆ ತಿಳಿ ಹೇಳಬೇಕು. ಸಾಂಸಾರಿಕ ಜೀವನವೆಂಬದು ಸಂತಸದ ಮಾರ್ಗವಾಗಬೇಕಾದರೆ ಸತಿಪತಿಗಳೊಂದಾಗಿ ನಡೆದಾಗಲೆ ಹಿತವಾಗಬಲ್ಲುದು ಎಂಬುದನ್ನು ಅವರಿಗೆ ಮನದಷ್ಟು ಮಾಡಿಸಬೇಕು. ತಮ್ಮ ಹಾಗೂ ಆ ಹುಡುಗನ ಕುಟುಂಬದ ರೀತಿ ರಿವಾಜುಗಳು ಹೊಂದಿಕೆಯಾಗಬಲ್ಲವೆ ? ಎಂಬುದನ್ನು ಇಣುಕಿ ನೋಡಲು ಹಚ್ಚಬೇಕು.

ಇಂಥ ಮನ ಬದಲಾವಣೆಯ ಚಿಂತನೆಯನ್ನು ಬಿಟ್ಟು, ಆ ಹೆಣ್ಣು ಮಗುವಿನ ಕಾಲೋ ಕೈಯೋ ತೆಗೆಯಿರಿ. ಅವಳನ್ನು ಶಾಶ್ವತ ಅಂಗವೈಕಲ್ಯಕ್ಕೆ ದೂಡಿ ಎಂಬ ವಿವೇಕರಹಿತ ವೀರಭದ್ರಶಿವಾಚಾರ್ಯನನ್ನು ಯಾವುದೆ ಮುಲಾಜು ಇಲ್ಲದೆ ಜೈಲಿಗೆ ಅಟ್ಟಬೇಕು. ಹಿಂಸೆಯನ್ನು ಪ್ರಚೋದಿಸುವ ಇಂಥ ಮಠಾಧೀಶ ಇದ್ದರೆಷ್ಟು? ಬಿಟ್ಟರೆಷ್ಟು! ಇನ್ನಾದರೂ ವೀರಶೈವ ವಾದಿಗಳು ಇಂಥ ಅಯೋಗ್ಯ ಮಠಾಧೀಶರ ಬೆನ್ನುಬಿದ್ದು ತಮ್ಮನ್ನು ತಾವು ಹಾಳು ಮಾಡಿಕೊಳ್ಳದೆ, ತಮ್ಮ ಬದುಕನ್ನು ಶರಣರ ವಚನಗಳ ಹಿನ್ನೆಲೆಯಲ್ಲಿ ಕಟ್ಟಿಕೊಳ್ಳಬೇಕಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...