Homeಕರ್ನಾಟಕಹೆಣ್ಣು ಮಕ್ಕಳ ಕೈಕಾಲು ತೆಗೆಯಲು ಸೂಚಿಸಿದ ವೀರಭದ್ರ ಶಿವಾಚಾರ್ಯ ಸ್ವಾಮಿಯನ್ನೆ ಮೊದಲು ಜೈಲಿಗೆ ಕಳಿಸಬೇಕು

ಹೆಣ್ಣು ಮಕ್ಕಳ ಕೈಕಾಲು ತೆಗೆಯಲು ಸೂಚಿಸಿದ ವೀರಭದ್ರ ಶಿವಾಚಾರ್ಯ ಸ್ವಾಮಿಯನ್ನೆ ಮೊದಲು ಜೈಲಿಗೆ ಕಳಿಸಬೇಕು

- Advertisement -
- Advertisement -

‘ಸಂಗಾತಿಯನ್ನು ಆಯ್ಕೆ ಮಾಡುವಾಗ ಮಗಳು ನಿಮ್ಮ ಮಾತು ಕೇಳದಿದ್ದರೆ ಆಕೆಯ ಕೈಯೋ ಕಾಲನ್ನೋ ಮುರಿದು ಬಿಡಿ’ ಎಂಬ ಮಾತನ್ನು ಕೊರಟಗೆರೆ ತಾಲೂಕು ಸಿದ್ಧರಬೆಟ್ಟದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ದಿವ್ಯವಾದ ಸಲಹೆಯನ್ನು ನೀಡಿದ್ದಾರೆ. ಎಂಥೆಂಥ ಮಹಾಪುರುಷರು ವೀರಶೈವರಲ್ಲಿದ್ದಾರೆ ಎಂಬುದಕ್ಕೆ ಈ ಪುಣ್ಯಾತ್ಮನ ಮಾತು ಸಾಕ್ಷಿಯಾಗಿದೆ. ಸಕಲ ಜೀವಪ್ರೇಮಿಯಾಗಿರಿ ಎಂದು ಬಸವಣ್ಣನವರು ಸಾರುತ್ತ ಬಂದಿದ್ದರೆ , ಹಾರುವರ ಪ್ರಭಾವಕ್ಕೆ ಒಳಗಾದ ವೀರಶೈವವಾದಿಗಳು ಮನುವಾದಿಗಳಿಗಿಂತಲೂ ಒಂದು ಹೆಜ್ಜೆ ಮುಂದೆ ಹೋಗಿ ಬಿಟ್ಟಿದ್ದಾರೆ. ‘ಬ್ರಾಹ್ಮಣರಿಗಿಂತಲೂ ಬ್ರಾಹ್ಮಣ್ಯ ಹೊಂದಿದ ವ್ಯಕ್ತಿ ತುಂಬಾ ಅಪಾಯಕಾರಿ’ ಎಂಬ ಮಾತು ಸತ್ಯ.

ವೈದಿಕರಿಗಿಂತಲೂ ವೈದಿಕತ್ವದ ಬಗೆಗೆ ಆಸಕ್ತಿ ಹೊಂದಿದ ನಾನು ಅವರಿಗಿಂತಲೂ ಒಂದು ಕೈ ಮಿಗಿಲು ಎಂಬ ಧೋರಣೆಗಳುಳ್ಳ ವೀರಶೈವ ಮಠಾಧೀಶರು ತಮ್ಮ ತಲೆಯಲ್ಲಿ ವೈದಿಕತ್ವದ ಕಸವನ್ನು ತುಂಬಿಕೊಂಡು ಬಗ್ಗಡಗೊಂಡಿದ್ದಾರೆ. ಹೀಗಾಗಿಯೆ ಈ ವೀರಶೈವವಾದಿ ಮಠಾಧಿಪತಿಗಳು ನಾವೂ ಹಿಂದುಗಳು ಎಂದು ಹೇಳುತ್ತ ನಡೆದಿದ್ದಾರೆ. ಬಹುತೇಕ ವೀರಶೈವ ಪೀಠದಲ್ಲಿ ಪೀಠಾಧಿಕಾರಿಯಾಗಿ ಅಮರಿಕೊಂಡಿರುವ ಮಠಾಧೀಶರಿಗೆ ಯಾವುದೆ ತಿಳುವಳಿಕೆ ಇಲ್ಲ. ಸಂಸ್ಕøತದ ಸುಳ್ಳು ಸೊಟ್ಟುಗಳ ನಾಲ್ಕಾರು ಮಂತ್ರಗಳು ಬಾಯಿಪಾಠ ಮಾಡಿಕೊಂಡು ಕಂಡ ಕಂಡದಲ್ಲಿ ತಮ್ಮ ದಡ್ಡ ಭಕ್ತರ ಮುಂದೆ ಅವನ್ನೇ ಹೇಳಿ ತಮ್ಮ ಪ್ರೌಢಿಮೆ ಮೆರೆಯುತ್ತಾರೆ. ಇಂಥವರಿಗೆ ಸಾಮಾನ್ಯ ಜ್ಞಾನವೂ ಗಗನ ಕುಸುಮ.

ಜನಿತಕ್ಕೆ ತಾಯಾಗಿ ಹೆತ್ತಳು ಮಾಯೆ
ಮೋಹಕ್ಕೆ ಮಗಳಾಗಿ ಹುಟ್ಟಿದಳು ಮಾಯೆ
ಕೂಟಕ್ಕೆ ಸ್ತ್ರೀಯಾಗಿ ಕೂಡಿದಳು ಮಾಯೆ
ಇದಾವಾವ ಪರಿಯಲ್ಲಿ ಕಾಡಿತ್ತು ಮಾಯೆ
ಈ ಮಾಯೆಯ ಕಳೆವಡೆ ಎನ್ನಳವಲ್ಲ
ನೀವೇ ಬಲ್ಲಿರಿ ಕೂಡಲಸಂಗಮದೇವಾ

ಎಂದು ಬಸವಣ್ಣನವರು ತಮ್ಮ ಒಂದು ವಚನದಲ್ಲಿ ಮಹಿಳೆಯನ್ನು ಬಿಟ್ಟು ಇರಲು ಸಾಧ್ಯವೆ ಇಲ್ಲ. ಪ್ರೀತಿಯನ್ನು ಬಿಟ್ಟು ಜೀವನ ಮಾಡಲು ಯಾರಿಗಾದರೂ ಸಾಧ್ಯವೆ ? ನಮ್ಮೆಲ್ಲರ ಜನನಕ್ಕೆ ಮೂಲ ಕಾರಣ ಮಾಯೆ (ಪ್ರೀತಿ), ನಮ್ಮ ಮಗಳಾಗಿ ಜನಿಸುವವಳು ಹೆಣ್ಣೆ, ನಮ್ಮೊಂದಿಗೆ ಜೀವ ಪಥದಲ್ಲಿ ಹೆಜ್ಜೆ ಹಾಕುವವಳು ಹೆಣ್ಣೆ. ಇವಳನ್ನು ಬಿಟ್ಟು ಇರಲು ಸಾಧ್ಯವೆ ಇಲ್ಲ ಎಂದು ಹೇಳಿ ಹೆಣ್ಣನ್ನು ಗೌರವಾರ್ಹ ವ್ಯಕ್ತಿಯಾಗಿ ಕಂಡಿದ್ದಾರೆ.

ಹೆಣ್ಣು ಕೇವಲ ಭೋಗದ ವಸ್ತುವಾಗಿ ಕಂಡ ಸನಾತನ ಪರಂಪರೆಯ ಜನ ಆಕೆಯನ್ನು ಸತಿ ಸಹಗಮನಕ್ಕೆ ಹಿಂದೆ ದೂಡಿದ್ದರು. ದೇವರ ಹೆಸರಿನ ಮೇಲೆ ಆಕೆಯನ್ನು ಬಸವಿಗೆ ಬಿಟ್ಟಿದ್ದರು. ಕೆರೆಗೆ ಆಹಾರವಾಗಿಯೂ ಹೆಣ್ಣನ್ನೆ ಬಲಿಕೊಟ್ಟರು. ಹೆಣ್ಣು ಕನಿಷ್ಠ, ಗಂಡು ಶ್ರೇಷ್ಠ ಎಂಬ ಚಿಂತನೆಯೆ ಪ್ರಜಾಪ್ರಭುತ್ವ ವಿರೋಧಿ. ಬ್ರಾಹ್ಮಣಶಾಹಿ ವ್ಯವಸ್ಥೆಯಲ್ಲಿ ಇಂದಿಗೂ ಮಹಿಳೆಗೆ ಪೂಜೆಯ ಹಕ್ಕನ್ನು ನಿರಾಕರಿಸಲಾಗಿದೆ. ಮಹಿಳೆ ಮುಟ್ಟಾಗುತ್ತಾಳಾದ್ದರಿಂದ ಆಕೆ ಕೀಳು ಎಂಬುದು ಪ್ರಚಲಿತದಲ್ಲಿದೆ. ಹಲವಾರು ದೇವಸ್ಥಾನದಲ್ಲೂ ಮಹಿಳೆಯರನ್ನು ನಿರಾಕರಿಸಲಾಗಿದೆ. ಆದ್ದರಿಂದಲೆ ನಮ್ಮ ದೇಶದಲ್ಲಿ ಹೆಣ್ಣು ಭ್ರೂಣದ ಹತ್ಯೆ ನಿರಾಂತಕವಾಗಿ ನಡೆದೆ ಇದೆ.

ಕೊರಟಗೆರೆಯ ಈ ಮಠಾಧೀಶನ ತಲೆಯಲ್ಲಿರುವುದು ವೈದಿಕ ಮಿದುಳು. ವೈದಿಕ ಮಿದುಳು ಸಹಜವಾಗಿಯೆ ಅಸಮತೋಲನವಾಗಿರುತ್ತದೆ. ಅದಕ್ಕೆ ಯೋಚಿಸುವ ಶಕ್ತಿ ಇರೋದಿಲ್ಲ. ತಾನಷ್ಟೇ ಶ್ರೇಷ್ಠ ಉಳಿದವರು ಕನಿಷ್ಠ ಎಂಬ ಭ್ರಮೆ ಹೊತ್ತುಕೊಂಡಿರುತ್ತದೆ. ಮಹಿಳೆ ಅಂದರೆ ಅದೊಂದು ಉಪಯೋಗಿಸಿ ಬಿಸಾಡುವ ವಸ್ತು ಮಾತ್ರವಾಗಿರುತ್ತದೆ. ಆದ್ದರಿಂದಲೆ ಹೆಣ್ಣು ನಿಮ್ಮ ಮಾತು ಕೇಳದೆ ಹೋದರೆ ಅವಳ ಕೈಯನ್ನೋ- ಕಾಲನ್ನೋ ಕತ್ತರಿಸಿ ಎಂದು ಈ ಪುಣ್ಯಾತ್ಮ ಗುರು ತನ್ನ ಭಕ್ತರಿಗೆ ಅಪ್ಪಣೆ ಕೊಡಿಸಿದ್ದಾನೆ. ಮೊದಲೆ ತಿಳುವಳಿಕೆಯ ಕೊರತೆಯಿಂದ ಮೂರಾಬಟ್ಟೆಯಾದ ಭಕ್ತರೆಂಬ ತಲೆ ಹಿಡುಕರಿಗೆ ಗುರುವಿನ(?) ಈ ಮಾತುಗಳು ಅತ್ಯಂತ ಪ್ರೇರಕ ಅನಿಸುತ್ತವೆ. ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ ಎಂದು ಹಾಡುತ್ತ ಗುರುವಿನ ಮಾತಿನ ಮಾರ್ಗದಲ್ಲಿ ನಡೆಯುತ್ತ ಹೋದರೆ ಒಂದೊಂದು ಕುಟುಂಬವೂ ತಮ್ಮ ಮನೆಯಲ್ಲಿಯೆ ಸ್ಮಶಾನವನ್ನು ನಿರ್ಮಿಸಿಕೊಳ್ಳಬೇಕಾಗುತ್ತದೆ.

ಅರಿವಿಲ್ಲದೆ ನಿಮ್ಮ ಮನೆಯ ಹೆಣ್ಣು ಮಗು ಜಾರುತ್ತಿದ್ದರೆ ಆಕೆಗೆ ವಿವೇಕ ನೀಡಿ, ಸಂಯಮದಿಂದ ವರ್ತಿಸುವಂತೆ ತಿಳಿ ಹೇಳಬೇಕು. ಸಾಂಸಾರಿಕ ಜೀವನವೆಂಬದು ಸಂತಸದ ಮಾರ್ಗವಾಗಬೇಕಾದರೆ ಸತಿಪತಿಗಳೊಂದಾಗಿ ನಡೆದಾಗಲೆ ಹಿತವಾಗಬಲ್ಲುದು ಎಂಬುದನ್ನು ಅವರಿಗೆ ಮನದಷ್ಟು ಮಾಡಿಸಬೇಕು. ತಮ್ಮ ಹಾಗೂ ಆ ಹುಡುಗನ ಕುಟುಂಬದ ರೀತಿ ರಿವಾಜುಗಳು ಹೊಂದಿಕೆಯಾಗಬಲ್ಲವೆ ? ಎಂಬುದನ್ನು ಇಣುಕಿ ನೋಡಲು ಹಚ್ಚಬೇಕು.

ಇಂಥ ಮನ ಬದಲಾವಣೆಯ ಚಿಂತನೆಯನ್ನು ಬಿಟ್ಟು, ಆ ಹೆಣ್ಣು ಮಗುವಿನ ಕಾಲೋ ಕೈಯೋ ತೆಗೆಯಿರಿ. ಅವಳನ್ನು ಶಾಶ್ವತ ಅಂಗವೈಕಲ್ಯಕ್ಕೆ ದೂಡಿ ಎಂಬ ವಿವೇಕರಹಿತ ವೀರಭದ್ರಶಿವಾಚಾರ್ಯನನ್ನು ಯಾವುದೆ ಮುಲಾಜು ಇಲ್ಲದೆ ಜೈಲಿಗೆ ಅಟ್ಟಬೇಕು. ಹಿಂಸೆಯನ್ನು ಪ್ರಚೋದಿಸುವ ಇಂಥ ಮಠಾಧೀಶ ಇದ್ದರೆಷ್ಟು? ಬಿಟ್ಟರೆಷ್ಟು! ಇನ್ನಾದರೂ ವೀರಶೈವ ವಾದಿಗಳು ಇಂಥ ಅಯೋಗ್ಯ ಮಠಾಧೀಶರ ಬೆನ್ನುಬಿದ್ದು ತಮ್ಮನ್ನು ತಾವು ಹಾಳು ಮಾಡಿಕೊಳ್ಳದೆ, ತಮ್ಮ ಬದುಕನ್ನು ಶರಣರ ವಚನಗಳ ಹಿನ್ನೆಲೆಯಲ್ಲಿ ಕಟ್ಟಿಕೊಳ್ಳಬೇಕಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...